Homeಕರ್ನಾಟಕಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ..' ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

ಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ..’ ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

- Advertisement -
- Advertisement -

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯ ವಿಚಾರ ಸಂಕಿರಣ ಏರ್ಪಡಿಸಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ವಿವಿ ಮುಂದೆ ಪ್ರತಿಭಟನೆ ನಡೆಸಿತು.

ಸ್ವರ್ಣ ರಶ್ಮಿ ಟ್ರಸ್ಟ್, ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯದ ಬಸವ ಮಂಟಪದಲ್ಲಿ ಕಾರ್ಯಕ್ರಮವ ಆಯೋಜಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ, ರಾಷ್ಟ್ರಕವಿ ಕುವೆಂಪು ಅವರ ಆದರ್ಶಗಳು ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಚೈತನ್ಯಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

“ಭಗವದ್ಗೀತೆ ಎನ್ನುವುದೇ ಒಂದು ಅಪ್ರಸ್ತುತ ಹಾಗೂ ಹಳೆಯ ವಿಚಾರ, ಶತಶತಮಾನಗಳಿಂದ ವರ್ಣಾಶ್ರಮವನ್ನು ಪಾಲಿಸಿಕೊಂಡು ಬಂದಿರುವ ಸಿದ್ಧಾಂತ. ಈಗ, ದೇಶದಲ್ಲಿ ಸಂವಿಧಾನ ಜಾರಿಯಲ್ಲಿದೆ. ಗಂಭೀರ ಅಪರಾಧವೊಂದನ್ನು ಮಾಡುವುದಕ್ಕೆ ಉರಿದುಂಬಿಸುವ ಜೊತೆಗೆ ವರ್ಣಾಶ್ರಮವನ್ನು ಸಮರ್ಥನೆ ಮಾಡಿಕೊಳ್ಳುವುದೇ ಭಗದ್ಗೀತೆಯ ಒಟ್ಟು ಸಾರಾಂಶ. ಆದ್ದರಿಂದ, ವಿಶ್ವವಿದ್ಯಾಲಯದ ಒಳಗೆ ಈ ಕುರಿತ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ. ಏಕೆಂದರೆ, ಇಲ್ಲಿ ಬೇರೆಬೇರೆ ಜಾತಿ ಮತ್ತು ಧರ್ಮದ ಮಕ್ಕಳು ಓದುತ್ತಿದ್ದಾರೆ. ನಾಳೆ ಬೇರೆಯವರು ಬಂದು ಕುರಾನ್-ಬೈಬಲ್ ನಲ್ಲಿ ಒಳ್ಳೆಯ ಅಂಶಗಳಿವೆ ಎಂದು ಕೇಳಿದರೆ ವಿವಿ ಏನು ಮಾಡುತ್ತದೆ” ಎಂದು ಪ್ರಶ್ನಿಸಿದರು.

ನಾಳಿನ ಕಾರ್ಯಕ್ರಮವನ್ನು ಬರಗೂರು ರಾಮಚಂದ್ರಪ್ಪ ಬಹಿಷ್ಕರಿಸಲಿ

“ಉಪ ಕುಲಪತಿಗಳು ಮೂಲಭೂತವಾದಿತನವನ್ನು ಮೈಗೂಡಿಸಿಕೊಂಡಿದ್ದಾರೆ. ನಾಳೆ ವಿವಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟು ವರ್ಷ ನಾಡು ಕಟ್ಟುವ ಕೆಲಸ ಮಾಡಿರುವ ಬರಗೂರು ರಾಮಚಂದ್ರಪ್ಪ ಅವರು, ಇಂತಹ ಕೋಮುವಾದಿ, ಜಾತಿವಾದಿ ಹಾಗೂ ಮೂಲಭೂತವಾದಿಯಾಗಿರುವ ವಿಸಿ ಶರತ್ ಅನಂತ್‌ಮೂರ್ತಿ ಅವರ ಜೊತೆಗೆ ವೇದಿಕೆ ಹಂಚಿಕೊಳ್ಳಬಾರದು. ಅವರು ಕಾರ್ಯಕ್ರಮಕ್ಕೆ ಬರಬಾರದು ಎಂದು ನಾನು ಮನವಿ ಮಾಡುತ್ತಿದ್ದೇನೆ” ಎಂದರು.

“ಕರ್ನಾಟಕ ಸರ್ಕಾರ ವಿಸಿ ಶರತ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಏಕೆಂದರೆ, ನನ್ನದು ‘ಮಾನವ ಜಾತಿ’ ಎಂದು ಕುವೆಂಪು ಹೇಳಿದ್ದರು. ಯಾವುದೇ ಧರ್ಮಗ್ರಂಥ ಪೂಜನೀಯ ಆಗಬಾರದು ಎಂದು ಹೇಳಿದ್ದರು. ಅವರ ಹೆಸರಿನ ವಿಶ್ವವಿದ್ಯಾಲಯದೊಳಗೆ ಸನಾತನಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ ನಡೆಯಬಾರದಿತ್ತು. ಅಂಬೇಡ್ಕರ್ ಮತ್ತು ಕುವೆಂಪು ಅವರೂ ಸಹ ಸನಾತನ ಧರ್ಮವನ್ನು ವಿರೋಧಿದ್ದರು. ಇಷ್ಟೆಲ್ಲಾ ಇರುವಾಗ ಆರ್‌ಎಸ್‌ಎಸ್‌ ವಿಚಾರವನ್ನು ಮುನ್ನೆಲೆಗೆ ತರುವುದು ಸರಿಯಲ್ಲ. ವಿಶ್ವವಿದ್ಯಾಲಯದ ಯಾವುದೇ ವಿದ್ವಾಂಸರಿಲ್ಲದೇ, ಕದ್ದುಮುಚ್ಚಿ ಕಾರ್ಯಕ್ರಮ ಮಾಡುತ್ತಿರುವುದು ಯಾಕೆ? ವಿವಿ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಿ ಕಾರ್ಯಕ್ರಮ ಮಾಡುವ ಮೂಲಕ ಉಪ ಕುಲಪತಿಗಳು ಕುವೆಂಪು ಆಶಯಗಳಿಗೆ ವಿರುದ್ಧವಾಗಿ ನಿತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...