Homeಮುಖಪುಟಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

ಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

- Advertisement -
- Advertisement -

ಕೆಲ ದಿನಗಳ ಹಿಂದಷ್ಟೇ ಭಾರಿ ಸದ್ದು ಮಾಡಿದ್ದ ಮೀಸಲಾತಿ ಹೋರಾಟ ಈಗ ನಡೆಯುತ್ತಿರುವ ಕಲಾಪದಲ್ಲಿ ಪ್ರಸ್ತಾಪವೇ ಆಗುತ್ತಿಲ್ಲ. ಭಾರಿ ಹವಾ ಮಾಡಿದ ಪಂಚಮಸಾಲಿ ಹೋರಾಟವೂ ಸಿ.ಡಿ ಗದ್ದಲದಲ್ಲಿ ಗಾಯಬ್ ಆಗಿದೆ. ಈ ನಡುವೆ, ಲಿಂಗಾಯತ ಧರ್ಮದಲ್ಲಿ ಈ ವೀರಶೈವರದೇನು ಕೆಲಸ, ಅವರು ಲಿಂಗಾಯತ ಧರ್ಮದ 100 ಉಪಪಂಗಡಗಳಲ್ಲಿ ಒಂದು ಅಷ್ಟೇ ಎಂದು ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ್ ಜಾಮದಾರ್ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗಿನ ದೂರವಾಣಿ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ನಾನುಗೌರಿ: ಇತ್ತೀಚೆಗೆ ಸುದ್ದಿಯಾದ ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಸುದ್ದಿಯೇ ಆಗಲಿಲ್ಲ. ಈ ಕುರಿತು ನಿಮ್ಮ ಅಭಿಪ್ರಾಯ?

ಜಾಮದಾರ್: ರೀ ಅದೊಂದು ಹೋರಾಟವಾ? ಅಮಾಯಕ ಪಂಚಮಸಾಲಿಗಳನ್ನು ದಿಕ್ಕು ತಪ್ಪಿಸಿದ ಮತ್ತು ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಂಡ ಹೋರಾಟವಾಗಿದೆ.

ನಾನುಗೌರಿ: ಅಂದರೆ ಪಂಚಮಸಾಲಿಗಳು 2ಎ ಮೀಸಲಾತಿಗೆ ಅರ್ಹರೇ ಅಲ್ಲ ಎಂಬುದು ನಿಮ್ಮ ಅಭಿಪ್ರಾಯವೇ?

ಜಾಮದಾರ್: ಎಲ್ಲ ಸಮುದಾಯಗಳಿಗೂ ತಮ್ಮ ಪಾಲಿನ ಮೀಸಲಾತಿ ಕೇಳುವ ಹಕ್ಕಿದೆ. ಆದರೆ ಇದನ್ನು ಯಡಿಯೂರಪ್ಪ ಆಗಲಿ, ಸಿಸಿ ಪಾಟೀಲ್, ನಿರಾಣಿ ಅವರಾಗಲಿ ಏಕ್‌ಧಂ ನಿರ್ಣಯ ಮಾಡಲು ಆಗಲ್ಲ. ಅದಕ್ಕೆ ಒಂದು ಪ್ರೊಸೆಸ್ ಅಂತಾ ಇದೆ. ಈ ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ.

ನಾನುಗೌರಿ.ಕಾಂ: 3-ಬಿಯಿಂದ 2ಎ ಗೆ ಸೇರಲು ಅವರ ಪ್ರತಿಭಟನೆ ನಡೆಯಿತು. ಈ ಕುರಿತು ನಿಮ್ಮ ಅಭಿಪ್ರಾಯ ಏನು?

ಜಾಮದಾರ್: ಲಿಂಗಾಯತ ಧರ್ಮದಲ್ಲಿ 100 ಉಪ ಪಂಗಡಗಳಿವೆ. 3-ಬಿಯಲ್ಲಿ ಉಲ್ಲೇಖ ಆಗಿರುವುದು ಕೇವಲ 23 ಲಿಂಗಾಯತ ಉಪ ಪಂಗಡಗಳಷ್ಟೆ. ಉಳಿದ 77 ಉಪ ಪಂಗಡಗಳ ಬಗ್ಗೆ ಯಾರೂ ಯೊಚಿಸುತ್ತಿಲ್ಲ. ಕೆಲವು ರಾಜಕಾರಣಿಗಳ ಪುಸಲಾವಣೆಯೊಂದಿಗೆ ಕಾವಿ ತೊಟ್ಟವರು ಪಂಚಮಸಾಲಿ ಸಮಯದಾಯದ ದಿಕ್ಕು ತಪ್ಪಿಸಲು ನೋಡಿದರು. ಅದರ ಭಾಗವೇ ಈ ಹೋರಾಟ. ಈ ಹೋರಾಟ ಲಿಂಗಾಯತರಿಗೆ ಒಂದು ಕಪ್ಪು ಚುಕ್ಕೆ.

ನಾನುಗೌರಿ: ಇದರ ಹಿಂದೆ ಒಂದು ದೊಡ್ಡ ಶಕ್ತಿಯೇ ಇದೆಯಲ್ಲವಾ?

ಜಾಮದಾರ್: ಎಲ್ಲ ಪಂಚಮಸಾಲಿಗಳಲ್ಲ. ಆದರೆ ಅವರನ್ನು ಪ್ರತಿನಿಧಿಸುತ್ತೇವೆ ಎನ್ನುವ ಸ್ವಾಮಿಗಳು, ರಾಜಕಾರಣಿಗಳ ಒಂದು ಗುಂಪಿದೆ. ಬೇಡ ಜಂಗಮರ ಹೆಸರಲ್ಲಿ ಬೇಡರ ಮೀಸಲಾತಿ ಕದಿಯುವ ಗುಂಪಿದೆ ಮತ್ತು ವೀರಶೈವ-ಲಿಂಗಾಯತ ಎನ್ನುವ ತಳಬುಡವಿಲ್ಲದ ಗುಂಪೂ ಇದೆ. ಈ ಮೂರೂ ಗುಂಪುಗಳು ಅಖಂಡ ಲಿಂಗಾಯತ ಧರ್ಮವನ್ನು ಒಡೆದು ಹಾಕುತ್ತಿವೆ.

ನಾನುಗೌರಿ: ನೀವು ವೀರಶೈವ-ಲಿಂಗಾಯತ ಎಂಬ ತಳಬುಡವಿಲ್ಲದ ಗುಂಪು ಎಂದಿರಿ. ಈಗ ಅದೇ ಹೆಸರಲ್ಲಿ ಒಂದು ನಿಗಮ ಆಗಿದೆಯಲ್ಲ?

ಜಾಮದಾರ್: ವೀರಶೈವ-ಲಿಂಗಾಯತ ಅಂದರೆ ಯಾರ‍್ರಿ ಇವರು? ವೀರಶೈವರೂ ಅಲ್ಲ, ಈ ಕಡೆ ಲಿಂಗಾಯತರೂ ಅಲ್ಲ. ಲಿಂಗಾಯತ ಧರ್ಮಧ ನೂರು ಉಪ ಪಂಗಡಗಳಲ್ಲಿ ಅದೂ ಒಂದು ಅಷ್ಟೇ. ಈ ಹೆಸರಲ್ಲಿ ಒಂದು ಸರ್ವಶ್ರೇಷ್ಠ ಧರ್ಮವಾದ ಲಿಂಗಾಯತ ಧರ್ಮವನ್ನು ಇವರೆಲ್ಲ ನಾಶ ಮಾಡಲು ಹೊರಟಿದ್ದಾರೆ. ನಾವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮಾಡಿದಾಗ, ನೀವೆಲ್ಲ ಧರ್ಮ ಒಡೆಯುತ್ತಿದ್ದೀರಾ ಎಂದರು. ಈಗ ಅವರು ಮಾಡುತ್ತಿರುವುದೇನು? ಕೆಲವು ಸ್ವ ಹಿತಾಸಕ್ತಿ ಗುಂಪುಗಳು ಪುಡಿಗಾಸಿಗಾಗಿ ಧರ್ಮ ಒಡೆಯುತ್ತಿವೆ. ಇದರ ಹಿಂದೆ ಒಂದು ವ್ಯವಸ್ಥಿತ ಲಾಭಕರ ಸ್ವ ಹಿತಾಸಕ್ತಿಯ ಗುಂಪು ಇವೆ.

ನಾನುಗೌರಿ: ಈ ನಿಗಮಕ್ಕೆ 500 ಕೋಟೊ ರೂ ಕೊಟ್ಟಿದ್ದಾರಲ್ಲ?

ಜಾಮದಾರ್: ಅಲ್ರೀ ಇನ್ನೂ ಆ ನಿಗಮ ಅಧಿಕೃತವಾಗಿ ಚಾಲನೆಗೇ ಬಂದಿಲ್ಲ. ಅದಕ್ಕೆ 500 ಅಲ್ಲ, 100 ಕೋಟಿ ಅಲ್ಲ, 10 ಕೋಟಿ ರೂ ಕೂಡ ಸಿಗಲ್ಲ. ಇದೆಲ್ಲ ಒಂದು ಹುಚ್ಚಾಟ ಮತ್ತು ಪಾಲಿಟಿಕಲ್ ಗೇಮ್ ಅಷ್ಟೇ.

ನಾನುಗೌರಿ: ಅಂದರೆ ಈ ಹೋರಾಟಕ್ಕೆ ಭದ್ರ ಬುನಾದಿಯೇ ಇಲ್ಲ ಎನ್ನುತ್ತೀರಾ?

ಜಾಮದಾರ್: ಈ ಕುರಿತು ಅಂತಿಮ ತೀರ್ಮಾನ ಕೊಡಲಾರೆ, ಆದರೆ ಖಾವಿ ಧರಿಸಿ ಮೀಸಲಾತಿ ಕೇಳಿದ ಕೂಡಲೇ ಅದು ಸಿಗಲ್ಲ. ಅದಕ್ಕೆ ಪ್ರೊಸೆಸ್ ಇದೆ. ಯಡಿಯೂರಪ್ಪ ಅಂತಲ್ಲ, ಯಾರೇ ಸಿಎಂ ಆಗಿದ್ದರೂ ಆ ಪ್ರಕ್ರಿಯೆಯ ಮೂಲಕವೇ ಹೋಗಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಸಾಂವಿಧಾನಿಕ ಮಾನ್ಯತೆ ತಡೆದ ಬಿಜೆಪಿ-ಆರ್‌ಎಸ್‌ಎಸ್ ಇಂತಹ ದುಸ್ಸಾಹಸ ಮಾಡುತ್ತಿವೆ. ಈ ವಿಷಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲ ಒಂದೇ ಬಿಡಿ.

ನಾನುಗೌರಿ: ಪಂಚಮಸಾಲಿಗಳಿಗೆ 2-ಎ ಸ್ಥಾನಮಾನ ಸಿಕ್ಕಿತು ಅಂದುಕೊಳ್ಳೋಣ. ಆಗ ಏನಾಗಬಹುದು?

ಜಾಮದಾರ್: ಈಗ ಕೇಂದ್ರ ಸರ್ಕಾರ ಕಳೆದ ವರ್ಷ ಜಾರಿ ಮಾಡಿದ 10 ಪರ್ಸೆಂಟ್ ಮೀಸಲಾತಿಯಲ್ಲಿ ಪಂಚಮಸಾಲಿಗಳು, ಬೇಡ ಜಂಗಮರು, ಬಣಜಿಗರು ಕೂಡ ಬರುತ್ತಾರೆ. 2-ಎ ಮತ್ತು 10 ಪರ್ಸೆಂಟ್ ಎರಡನ್ನೂ ಪಡೆಯಲಾಗಲ್ಲ. ಈ ಕಾನೂನು ಬಗ್ಗೆ ತಿಳಿಯದೇ ಏನೇನೋ ಹೋರಾಟ ಮಾಡುತ್ತಿದ್ದಾರೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್

(ಈ ಸಂದರ್ಶನದಲ್ಲಿ ತಪ್ಪು ಗ್ರಹಿಕೆಯಿಂದಾಗಿ ಖಾವಿ ಧರಿಸಿದವರ ಪುಡಿಗಾಸಿನ ಹೋರಾಟ ಎಂದು ಬಂದಿತ್ತು. ಅದಕ್ಕಾಗಿ ವಿಷಾಧಿಸುತ್ತೇವೆ)


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಾಮದಾರರದು ತಪ್ಪು ಅಭಿಪ್ರಾಯ..
    ಈ ಹಿಂದೆ ಬೇಡಜಂಗಮರೆಂಬ ಪಂಗಡ ಲಿಂಗಾಯತ ಪಂಥದಲ್ಲಿ ಬರುವುದು ಎಂದಿದ್ದರು.
    ಜಂಗಮ, ಜಾತಿ ಪಟ್ಟಿಯಲ್ಲಿ ಏಕಿಲ್ಲ ಎಂಬುದನ್ನು ಜಾಮದಾರ ವಿವರಿಸಲಿ.
    ಮೀಸಲಾತಿ ಇರುವುದು ಜಾತಿಗೇ ಹೊರತು ಮತ, ಧರ್ಮಕ್ಕಲ್ಲ ಎನ್ನುವ ಸಾಮಾನ್ಯ ಅರಿವೂ ಜಾಮದಾರರಿಗಿಲ್ಲ.
    ಬಣಜಿಗ, 2A ದಲ್ಲಿ ಶೈಕ್ಷಣಿಕ ಮೀಸಲಾತಿ ಮತ್ತು ಕೇಂದ್ರ OBC ಯಲ್ಲಿ ಬರುತ್ತದೆ ಎನ್ನುವ ಸತ್ಯವನ್ನೂ ಮುಚ್ಚಿಡುತ್ತಾರೆ. ಮೀಸಲಾತಿ ವಂಚಿಸಿ ವೀರಶೈವ ಅಥವಾ ಲಿಂಗಾಯತರನ್ನು ಶೋಷಿಸುವುದೇ ಧರ್ಮವಾಗಬಾರದು..!!

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...