Homeಕರ್ನಾಟಕಉತ್ತರ ಕನ್ನಡದ ‘ಅನರ್ಹ’ ರಾಜಕಾರಣ: ಜಿಲ್ಲಾ ಕೇಂದ್ರಕ್ಕಾಗಿ ಶಿರಸಿ, ಯಲ್ಲಾಪುರ ಕಿತ್ತಾಟ...

ಉತ್ತರ ಕನ್ನಡದ ‘ಅನರ್ಹ’ ರಾಜಕಾರಣ: ಜಿಲ್ಲಾ ಕೇಂದ್ರಕ್ಕಾಗಿ ಶಿರಸಿ, ಯಲ್ಲಾಪುರ ಕಿತ್ತಾಟ…

- Advertisement -
- Advertisement -

ಉತ್ತರ ಕನ್ನಡದ ಘಟ್ಟದ ಮೇಲಿನ ಖಾಲಿಬರಡು ರಾಜಕಾರಣ ಅದ್ಯಾಕೋ ಅನರ್ಹ-ಅಯೋಗ್ಯ ಶಾಸಕ ಶಿವರಾಮ್ ಹೆಬ್ಬಾರ್ ಸುತ್ತಲೆ ಗಿರಗಿಟ್ಲೆ ಹೊಡೆಯುತ್ತಿದೆ. ಯಲ್ಲಾಪುರ ಉಪಚುನಾವಣೆಗೆ ರಂಗ ತಾಲೀಮು, ಬನವಾಸಿ ಅಪಹರಿಸಲು ಸಿಎಂ ಯಡ್ಡಿ ಕುಟುಂಬ ಕರಾಮತ್ತು ಮಾಡುತ್ತಿದ್ದರೂ ಹೆಬ್ಬಾರ್ ಉದಾಸೀನದಿಂದ ಇದ್ದಾರೆ. ಶಿರಸಿ ಜಿಲ್ಲೆ ರಚನೆ ಹೋರಾಟ ದಿಕ್ಕೆಡಿಸಲು ಹೆಬ್ಬಾರ್ ಹಿಕಮತ್ತು ನೇಡಸಿದ್ದನೆಂಬ ಭಾವನೆ ಜನರಲ್ಲಿದೆ. ಮತ್ತು ಹೆಬ್ಬಾರ್‌ಗೆ ಬಿಜೆಪಿ ಟಿಕೆಟ್ ಸಿಗದಂತೆ ಅಡ್ಡಗಾಲು ಹಾಕುವ ಮಾಜಿ ಶಾಸಕ ವಿ.ಎಸ್.ಪಾಟೀಲ್‍ಗೆ ಪುಟಗೋಸಿ ನಿಗಮದ ಕಾರು ಇನಾಮಾಗಿ ದಕ್ಕಿರುವುದು ಇಡೀ ಉತ್ತರಕನ್ನಡದಲ್ಲಿ ಬಿಸಿ ಬಿಸಿ ಚರ್ಚೆ ಹುಟುಹಾಕಿದೆ..

ಬನವಾಸಿಗೆ ಅವಿನಾ ಸಂಭಂದ ಶಿರಸಿಗಿದೆ. ಈ ಕನ್ನಡದ ಮೊದಲ ರಾಜಧಾನಿ ಜತೆ ಘಟ್ಟದ ಮೇಲಿನವರಿಗಷ್ಟೇ ಅಲ್ಲ ಉತ್ತರ ಕನ್ನಡದ ಕರಾವಳಿ ಭಾಗಕ್ಕೂ ಭಾವನಾತ್ಮಕ ನಂಟು ಅಂಟಿಕೊಂಡಿದೆ. ಇಂತ ಬನವಾಸಿಯನ್ನು ಯಡ್ಡಿ ಮತ್ತವರ ಮಗ ಶಿವಮೊಗ್ಗದ ಸಂಸದ ರಾಘವೇಂದ್ರ ತಮ್ಮ ರಾಜಕೀಯ ಫಾಯ್ದೆಗಾಗಿ ಅಪಹರಿಸಲು ಹವಣಿಸುತ್ತಿದ್ದಾರೆಂದು ಇಡೀ ಜಿಲ್ಲೆ ಕೆಂಡವಾಗಿದೆ. ಆದರೆ ಮೊನ್ನೆ ಮೊನ್ನೆಯವರೆಗೂ ಈ ಬನವಾಸಿ ಸೀಮೆಯ ಶಾಸಕನಾಗಿದ್ದ ಅನರ್ಹ ಹೆಬ್ಬಾರ್ ಇದೆಲ್ಲಾ ಕಂಡು ಕಾಣದಂತಿದ್ದಾನೆ. ಜನರು ಬನವಾಸಿಗಾಗಿ ಬೀದಿಗಿಳಿದು ಬೊಬ್ಬೆ ಹೊಡೆದಾಗ ಬೆಚ್ಚಿಬಿದ್ದ ಹೆಬ್ಬಾರ್ ಅಂಥ ಪ್ರಯತ್ನವೇ ನಡೆದಿಲ್ಲ ಎಂದು ಸುಳ್ಳು ಸಬೂಬು ಹೇಳುತ್ತಿದ್ದಾನೆ. ಯಡ್ಡಿಯ ಕೆಂಗಣ್ಣಿಗೆ ತುತ್ತಾಗುವ ಭಯದಿಂದ ಹೆಬ್ಬಾರ್ ಬಯಲಾಟ ಆಡುತ್ತಿದ್ದಾನೆಂಬುದು ಯಲ್ಲಾಪುರ-ಶಿರಸಿ ಏರಿಯಾದಲ್ಲಿ ಎಲ್ಲರಿಗೂ ಗೊತ್ತಾಗಿದೆ.

ಘಟ್ಟದ ಮೇಲಿನ ಆರೇಳು ತಾಲ್ಲೂಕು ಉತ್ತರ ಕನ್ನಡದಿಂದ ಬೇರ್ಪಡಿಸಿ ಹೊಸ ಶಿರಸಿ ಜಿಲ್ಲೆ ರಚಿಸಬೇಕೆಂದು ಕೂಗೆದ್ದಿದೆ. ಶಿರಸಿಯೇ ಜಿಲ್ಲಾ ಕೇಂದ್ರವಾಗಲು ಸೂಕ್ತ ಸ್ಥಳವೆಂಬುದು ಜನಾಭಿಪ್ರಾಯ. ವಾಣಿಜ್ಯ, ರಾಜಕೀಯ, ಜಿಲ್ಲಾಮಟ್ಟದ ಹಲವು ಕಛೇರಿ, ಕಾಲೇಜು, ಅರಣ್ಯ -ತೋಟಗಾರಿಕೆಯಂತಹ ಮಹತ್ವದಿಂದ ಶಿರಸಿ ಜಿಲ್ಲಾ ಕೇಂದ್ರವಾಗಲಿ ಎಂದೆಲ್ಲರೂ ಇದುವರೆಗೆ ಹೇಳುತ್ತಿದ್ದರು. ಆದರೆ ಸ್ಪಿಕರ್ ಕಾಗೇರಿಯಂತಹ ಸಿನಿಯರ್ ಶಾಸಕರಿಂದ ಹಿಡಿದು ತ್ರಿಶಂಕು ಜೂನಿಯರ್ ಶಾಸಕ ಹೆಬ್ಬಾರ್‍ವರೆಗಿನ ಘಟ್ಟದ ಮೇಲಿನ ಜನಪ್ರತಿನಿಧಿಗಳ್ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಲಿಲ.್ಲ ಮೂವತ್ತು ವರ್ಷದಿಂದ ಆಯಾಕಟ್ಟಿನ ಅಧಿಕಾರ ಅನುಭವಿಸಿದ ತಲೆ ಮಾಸಿದ ದೇಶಪಾಂಡೆಯೂ ಇತ್ತ ತಲೆಹಾಕಲಿಲ್ಲ. ಎಂಪಿ ಎಮ್ಮೆಲ್ಲೆ ಮಿನಿಸ್ಟರ್‍ಗಳ ರಾಜಕೀಯ ಹೇತ್ಲಾಂಡಿತನದಿಂದ ಶಿರಸಿ ಜಿಲ್ಲೆ ರಚನೆ ಆಗುತ್ತಿಲ್ಲ.

ಬಿಜೆಪಿ ಸರ್ಕಾರ ಸ್ಥಾಪನೆಗೆ “ತ್ಯಾಗ” ಮಾಡಿರುವ ಮಂತ್ರಿಗಿರಿ ಬೋಗಾಭಿಲಾಷಿ ಹೆಬ್ಬಾರ್ ಮನಸ್ಸು ಮಾಡಿದರೆ ಶಿರಸಿ ಜಿಲ್ಲೆ ಸ್ಥಾಪನೆಗೆ ಚಾಲನೆ ನೀಡಬಹುದೆಂದು ಜನರಾಡಿಕೊಳ್ಳುತ್ತಿದ್ದಾರೆ. ಯಡ್ಡಿ ಆಸ್ಥಾನದಲ್ಲಿ ಹೆಬ್ಬಾರ್ ಮಾತಿಗೆ ವಜನಿದೆ: ತನ್ನನ್ನು ಸಿಎಂ ಮಾಡಿದ ಅನರ್ಹ ಗ್ಯಾಂಗಿನ ಮುಂಚೂಣಿ ಸದಸ್ಯ ಹೆಬ್ಬಾರ್ ಎಂಬ “ಗೌರವ” ಯಡ್ಡಿಗಿದೆ. ಬಳ್ಳಾರಿಯ ಆನಂದ್‍ಸಿಂಗ್ ಮನದಿಚ್ಛೆಯಂತೆ ವಿಜಯನಗರ ಜಿಲ್ಲೆ ರಚನೆಗೆ ರಡಿಯಾಗಿರುವ ಯಡ್ಡಿ ಏಕಾಏಕಿ ಹೆಬ್ಬಾರ್ ಬೇಡಿಕೆ ತಿರಸ್ಕರಿಸಲು ಹೇಗೆ ಸಾಧ್ಯ? ಅವಕಾಶವಿದ್ದರೂ ಹೆಬ್ಬಾರ್‍ಗೆ ಇಚ್ಛಾಶಕ್ತಿ ಇಲ್ಲ ಎಂದು ಜನ ಹೇಳುತ್ತಿದ್ದಾರೆ.

ಹೆಬ್ಬಾರ್ ತನ್ನ ಯಲ್ಲಾಪುರ ಕ್ಷೇತ್ರ ಒಳಗೊಂಡ ಶಿರಸಿ ಜಿಲ್ಲೆ ರಚನೆಗೆ ಪ್ರಯತ್ನಿಸುವುದಿರಲಿ, ಜಿಲ್ಲಾ ರಚನಾ ಹೋರಾಟವನ್ನೇ ಹಾಳುಮಾಡುವ ಕುತಂತ್ರ ನಡೆಸಿದ್ದಾನೆ. ಶಿರಸಿ ಜಿಲ್ಲಾ ಕೇಂದ್ರ ಆಗೋದು ಬೇಡ; ಯಲ್ಲಾಪುರ ಜಿಲ್ಲಾ ಕೇಂದ್ರಕ್ಕೆ ಸೂಕ್ತವೆಂಬ ಹೊಸ ವರಾತ ಈಚೆಗೆ ಶುರುವಾಗಿದ್ದೇ ಹೆಬ್ಬಾರ್ ಕಿತಾಪತಿಯಿಂದ ಎಂದು ಘಟ್ಟದ ಮೇಲಿನವರ ಅಭಿಪ್ರಾಯ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉದುರಿಸುವ ದೂರಾಲೋಚನೆ ಹೆಬ್ಬಾರ್‍ದು. ಹಾಗೊಮ್ಮೆ ಯಲ್ಲಾಪುರ ಜಿಲ್ಲಾ ರಾಜಧಾನಿಯಾದರೆ ಆ ಕ್ರೆಡಿಟ್ ತನಗೆ ಬರುತ್ತದೆ. ಈ ವಿವಾದದಲ್ಲಿ ಜಿಲ್ಲಾ ರಚನೆ ನೆನೆಗುದಿಗೆ ಬಿದ್ದರೆ ಅಖಂಡ ಉತ್ತರಕನ್ನಡದ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಕಾರುಬಾರು ನೆಡೆಸಬಹುದೆಂಬ ಲೆಕ್ಕಾಚಾರ ಹೆಬ್ಬಾರ್‍ದು. ಅಧಿಕಾರದ ತೆವಲಿಗೆ ಬಿದ್ದಿರುವ ಹೆಬ್ಬಾರ್‍ಗೆ ಹೊಸಜಿಲ್ಲೆ, ಹಳೆಜಿಲ್ಲೆ, ಕ್ಷೇತ್ರ, ಬನವಾಸಿ ಹೀಗೆ ಜನರ ಬೇಕು ಬೇಡುಗಳೆಲ್ಲವು ಜುಜುಬಿಯೇ..

ಅದೆಷ್ಟೇ ಅಡ್ಡ ಸರ್ಕಸ್ ಮಾಡಿದರೂ ಹೆಬ್ಬಾರ್‌ಗೆ ನಿದ್ದೆ ಬೀಳುತ್ತಿಲ್ಲ. ಅತ್ತ ಸುಪ್ರೀಂ ಕೋರ್ಟ್‍ನಲ್ಲಿ ಅನರ್ಹತೆ ವಿಚಾರಣೆ ನಡೆಯುತ್ತಿದೆ. ಇತ್ತ ಉಪಚುನಾವಣೆ ಎದೆಮೆಲೆ ಬಂದು ಕೂತಿದೆ. ಬಿಜೆಪಿ ಟಿಕೆಟ್ ತರಲು ತೊಂದರೆ ಕೊಡುವ ಸ್ಥಳೀಯ ಮಾಜಿ ಶಾಸಕ ವಿ.ಎಸ್.ಪಾಟೀಲ್‍ಗೆ ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷತೆ ಯಡ್ಡಿಯಿಂದ ಕೊಡಿಸಿ ಪಳಗಿಸಲು ಹೆಬ್ಬಾಳ್ ಪ್ರಯತ್ನಿಸುತ್ತಿದ್ದಾನೆ. ಸುಪ್ರೀಮ್ ತನ್ನ ಅನರ್ಹತೆ ಪಕ್ಕಾ ಮಾಡಿದರೆ ತನ್ನ ಮಗ ಅಥವಾ ಹೆಂಡತಿಗೆ ಬಿಜೆಪಿ ಕ್ಯಾಂಡಿಡೇಟ್ ಮಾಡುವ ಆಸೆ ಹೆಬ್ಬಾರ್‍ಗೆ. ತನ್ನ ಎ ಪ್ಲಾನ್‍ಗಷ್ಟೇ ಅಲ್ಲ ಪ್ಲಾನ್ ಬಿಗೂ ಪಾಟೀಲ್ ಅಪಸ್ವರ ಎತ್ತಬಾರದೆಂದು ಹೆಬ್ಬಾರ್ ಒತ್ತಾಯಿಸುತ್ತಿದ್ದಾನೆ.

ಆದರೆ ಪಾಟೀಲ್ ಅರ್ಧ ಪಳಗಿದ್ದಾರಷ್ಟೆ. ಸಾರಿಗೆ ನಿಗಮದ ಅಧ್ಯಕ್ಷತೆ ವಹಿಸಿಕೊಂಡ ಕ್ಷಣವೇ “ನಾನು ಬಿಜೆಪಿ ಸರ್ಕಾರಕ್ಕಾಗಿ ತ್ಯಾಗ ಮಾಡಿದ ಹೆಬ್ಬಾರ್‍ಗೆ ಕ್ಷೇತ್ರ ತ್ಯಾಗ ಮಾಡಿದ್ದೆನೆ..,. ಆದರೆ ಹೆಬ್ಬಾರ್ ಹೊರತಾಗಿ ಬೇರ್ಯಾರಾದರು ಬಿಜೆಪಿ ಕೇಳಿದರೆ, ನನ್ನ ಕ್ಲೇಮು ಇದ್ದೇ ಇದೆ” ಎಂದು ಹೆಬ್ಬಾರ್ ಪರಿವಾರಕ್ಕೆ ಶಾಕ್ ಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರ ಇದ್ದಾಗ ಒಲ್ಲದ ಮನಸ್ಸಿನಿಂದ ಇದೆ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷನಾಗಿದ್ದ ಹೆಬ್ಬಾರ್ ವಿದ್ರೋಹ ನಿಲ್ಲಿಸಿರಲಿಲ್ಲ. ಅಂಥದ್ದೇ ಪರಿಸ್ಥಿತಿ ಈಗ ಬಿಜೆಪಿಯಲ್ಲಿ ನಿರ್ಮಾಣವಾಗಿದೆ. ಪಾಟೀಲ್ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷನಾಗಿದ್ದರೂ ಯಲ್ಲಾಪುರ ಬೈ ಇಲೆಕ್ಷನ್‍ನಲ್ಲಿ ಸ್ಪರ್ಧಿಸುವ ಉಮೇದು ಬಿಟ್ಟಿಲ್ಲ. ಆಕಸ್ಮಾತ್ ಹೆಬ್ಬಾರ್ ಮಗ ಅಥವಾ ಹೆಂಡತಿಯಾದರೆ ಪಾಟೀಲ್ ಕಾಂಗ್ರೆಸ್ ಕ್ಯಾಂಡಿಡೇಟಾಗೋದು ಖಾತ್ರಿ. ಕಾಂಗ್ರೆಸ್ ಕಿಂಗ್‍ಗಳ ಜೊತೆ ಪಾಟೀಲ್ ರಹಸ್ಯ ಸಂಪರ್ಕ ಚಲೋ ಇಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...