Homeಕರ್ನಾಟಕಉತ್ತರ ಕನ್ನಡದ ‘ಅನರ್ಹ’ ರಾಜಕಾರಣ: ಜಿಲ್ಲಾ ಕೇಂದ್ರಕ್ಕಾಗಿ ಶಿರಸಿ, ಯಲ್ಲಾಪುರ ಕಿತ್ತಾಟ...

ಉತ್ತರ ಕನ್ನಡದ ‘ಅನರ್ಹ’ ರಾಜಕಾರಣ: ಜಿಲ್ಲಾ ಕೇಂದ್ರಕ್ಕಾಗಿ ಶಿರಸಿ, ಯಲ್ಲಾಪುರ ಕಿತ್ತಾಟ…

- Advertisement -
- Advertisement -

ಉತ್ತರ ಕನ್ನಡದ ಘಟ್ಟದ ಮೇಲಿನ ಖಾಲಿಬರಡು ರಾಜಕಾರಣ ಅದ್ಯಾಕೋ ಅನರ್ಹ-ಅಯೋಗ್ಯ ಶಾಸಕ ಶಿವರಾಮ್ ಹೆಬ್ಬಾರ್ ಸುತ್ತಲೆ ಗಿರಗಿಟ್ಲೆ ಹೊಡೆಯುತ್ತಿದೆ. ಯಲ್ಲಾಪುರ ಉಪಚುನಾವಣೆಗೆ ರಂಗ ತಾಲೀಮು, ಬನವಾಸಿ ಅಪಹರಿಸಲು ಸಿಎಂ ಯಡ್ಡಿ ಕುಟುಂಬ ಕರಾಮತ್ತು ಮಾಡುತ್ತಿದ್ದರೂ ಹೆಬ್ಬಾರ್ ಉದಾಸೀನದಿಂದ ಇದ್ದಾರೆ. ಶಿರಸಿ ಜಿಲ್ಲೆ ರಚನೆ ಹೋರಾಟ ದಿಕ್ಕೆಡಿಸಲು ಹೆಬ್ಬಾರ್ ಹಿಕಮತ್ತು ನೇಡಸಿದ್ದನೆಂಬ ಭಾವನೆ ಜನರಲ್ಲಿದೆ. ಮತ್ತು ಹೆಬ್ಬಾರ್‌ಗೆ ಬಿಜೆಪಿ ಟಿಕೆಟ್ ಸಿಗದಂತೆ ಅಡ್ಡಗಾಲು ಹಾಕುವ ಮಾಜಿ ಶಾಸಕ ವಿ.ಎಸ್.ಪಾಟೀಲ್‍ಗೆ ಪುಟಗೋಸಿ ನಿಗಮದ ಕಾರು ಇನಾಮಾಗಿ ದಕ್ಕಿರುವುದು ಇಡೀ ಉತ್ತರಕನ್ನಡದಲ್ಲಿ ಬಿಸಿ ಬಿಸಿ ಚರ್ಚೆ ಹುಟುಹಾಕಿದೆ..

ಬನವಾಸಿಗೆ ಅವಿನಾ ಸಂಭಂದ ಶಿರಸಿಗಿದೆ. ಈ ಕನ್ನಡದ ಮೊದಲ ರಾಜಧಾನಿ ಜತೆ ಘಟ್ಟದ ಮೇಲಿನವರಿಗಷ್ಟೇ ಅಲ್ಲ ಉತ್ತರ ಕನ್ನಡದ ಕರಾವಳಿ ಭಾಗಕ್ಕೂ ಭಾವನಾತ್ಮಕ ನಂಟು ಅಂಟಿಕೊಂಡಿದೆ. ಇಂತ ಬನವಾಸಿಯನ್ನು ಯಡ್ಡಿ ಮತ್ತವರ ಮಗ ಶಿವಮೊಗ್ಗದ ಸಂಸದ ರಾಘವೇಂದ್ರ ತಮ್ಮ ರಾಜಕೀಯ ಫಾಯ್ದೆಗಾಗಿ ಅಪಹರಿಸಲು ಹವಣಿಸುತ್ತಿದ್ದಾರೆಂದು ಇಡೀ ಜಿಲ್ಲೆ ಕೆಂಡವಾಗಿದೆ. ಆದರೆ ಮೊನ್ನೆ ಮೊನ್ನೆಯವರೆಗೂ ಈ ಬನವಾಸಿ ಸೀಮೆಯ ಶಾಸಕನಾಗಿದ್ದ ಅನರ್ಹ ಹೆಬ್ಬಾರ್ ಇದೆಲ್ಲಾ ಕಂಡು ಕಾಣದಂತಿದ್ದಾನೆ. ಜನರು ಬನವಾಸಿಗಾಗಿ ಬೀದಿಗಿಳಿದು ಬೊಬ್ಬೆ ಹೊಡೆದಾಗ ಬೆಚ್ಚಿಬಿದ್ದ ಹೆಬ್ಬಾರ್ ಅಂಥ ಪ್ರಯತ್ನವೇ ನಡೆದಿಲ್ಲ ಎಂದು ಸುಳ್ಳು ಸಬೂಬು ಹೇಳುತ್ತಿದ್ದಾನೆ. ಯಡ್ಡಿಯ ಕೆಂಗಣ್ಣಿಗೆ ತುತ್ತಾಗುವ ಭಯದಿಂದ ಹೆಬ್ಬಾರ್ ಬಯಲಾಟ ಆಡುತ್ತಿದ್ದಾನೆಂಬುದು ಯಲ್ಲಾಪುರ-ಶಿರಸಿ ಏರಿಯಾದಲ್ಲಿ ಎಲ್ಲರಿಗೂ ಗೊತ್ತಾಗಿದೆ.

ಘಟ್ಟದ ಮೇಲಿನ ಆರೇಳು ತಾಲ್ಲೂಕು ಉತ್ತರ ಕನ್ನಡದಿಂದ ಬೇರ್ಪಡಿಸಿ ಹೊಸ ಶಿರಸಿ ಜಿಲ್ಲೆ ರಚಿಸಬೇಕೆಂದು ಕೂಗೆದ್ದಿದೆ. ಶಿರಸಿಯೇ ಜಿಲ್ಲಾ ಕೇಂದ್ರವಾಗಲು ಸೂಕ್ತ ಸ್ಥಳವೆಂಬುದು ಜನಾಭಿಪ್ರಾಯ. ವಾಣಿಜ್ಯ, ರಾಜಕೀಯ, ಜಿಲ್ಲಾಮಟ್ಟದ ಹಲವು ಕಛೇರಿ, ಕಾಲೇಜು, ಅರಣ್ಯ -ತೋಟಗಾರಿಕೆಯಂತಹ ಮಹತ್ವದಿಂದ ಶಿರಸಿ ಜಿಲ್ಲಾ ಕೇಂದ್ರವಾಗಲಿ ಎಂದೆಲ್ಲರೂ ಇದುವರೆಗೆ ಹೇಳುತ್ತಿದ್ದರು. ಆದರೆ ಸ್ಪಿಕರ್ ಕಾಗೇರಿಯಂತಹ ಸಿನಿಯರ್ ಶಾಸಕರಿಂದ ಹಿಡಿದು ತ್ರಿಶಂಕು ಜೂನಿಯರ್ ಶಾಸಕ ಹೆಬ್ಬಾರ್‍ವರೆಗಿನ ಘಟ್ಟದ ಮೇಲಿನ ಜನಪ್ರತಿನಿಧಿಗಳ್ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಲಿಲ.್ಲ ಮೂವತ್ತು ವರ್ಷದಿಂದ ಆಯಾಕಟ್ಟಿನ ಅಧಿಕಾರ ಅನುಭವಿಸಿದ ತಲೆ ಮಾಸಿದ ದೇಶಪಾಂಡೆಯೂ ಇತ್ತ ತಲೆಹಾಕಲಿಲ್ಲ. ಎಂಪಿ ಎಮ್ಮೆಲ್ಲೆ ಮಿನಿಸ್ಟರ್‍ಗಳ ರಾಜಕೀಯ ಹೇತ್ಲಾಂಡಿತನದಿಂದ ಶಿರಸಿ ಜಿಲ್ಲೆ ರಚನೆ ಆಗುತ್ತಿಲ್ಲ.

ಬಿಜೆಪಿ ಸರ್ಕಾರ ಸ್ಥಾಪನೆಗೆ “ತ್ಯಾಗ” ಮಾಡಿರುವ ಮಂತ್ರಿಗಿರಿ ಬೋಗಾಭಿಲಾಷಿ ಹೆಬ್ಬಾರ್ ಮನಸ್ಸು ಮಾಡಿದರೆ ಶಿರಸಿ ಜಿಲ್ಲೆ ಸ್ಥಾಪನೆಗೆ ಚಾಲನೆ ನೀಡಬಹುದೆಂದು ಜನರಾಡಿಕೊಳ್ಳುತ್ತಿದ್ದಾರೆ. ಯಡ್ಡಿ ಆಸ್ಥಾನದಲ್ಲಿ ಹೆಬ್ಬಾರ್ ಮಾತಿಗೆ ವಜನಿದೆ: ತನ್ನನ್ನು ಸಿಎಂ ಮಾಡಿದ ಅನರ್ಹ ಗ್ಯಾಂಗಿನ ಮುಂಚೂಣಿ ಸದಸ್ಯ ಹೆಬ್ಬಾರ್ ಎಂಬ “ಗೌರವ” ಯಡ್ಡಿಗಿದೆ. ಬಳ್ಳಾರಿಯ ಆನಂದ್‍ಸಿಂಗ್ ಮನದಿಚ್ಛೆಯಂತೆ ವಿಜಯನಗರ ಜಿಲ್ಲೆ ರಚನೆಗೆ ರಡಿಯಾಗಿರುವ ಯಡ್ಡಿ ಏಕಾಏಕಿ ಹೆಬ್ಬಾರ್ ಬೇಡಿಕೆ ತಿರಸ್ಕರಿಸಲು ಹೇಗೆ ಸಾಧ್ಯ? ಅವಕಾಶವಿದ್ದರೂ ಹೆಬ್ಬಾರ್‍ಗೆ ಇಚ್ಛಾಶಕ್ತಿ ಇಲ್ಲ ಎಂದು ಜನ ಹೇಳುತ್ತಿದ್ದಾರೆ.

ಹೆಬ್ಬಾರ್ ತನ್ನ ಯಲ್ಲಾಪುರ ಕ್ಷೇತ್ರ ಒಳಗೊಂಡ ಶಿರಸಿ ಜಿಲ್ಲೆ ರಚನೆಗೆ ಪ್ರಯತ್ನಿಸುವುದಿರಲಿ, ಜಿಲ್ಲಾ ರಚನಾ ಹೋರಾಟವನ್ನೇ ಹಾಳುಮಾಡುವ ಕುತಂತ್ರ ನಡೆಸಿದ್ದಾನೆ. ಶಿರಸಿ ಜಿಲ್ಲಾ ಕೇಂದ್ರ ಆಗೋದು ಬೇಡ; ಯಲ್ಲಾಪುರ ಜಿಲ್ಲಾ ಕೇಂದ್ರಕ್ಕೆ ಸೂಕ್ತವೆಂಬ ಹೊಸ ವರಾತ ಈಚೆಗೆ ಶುರುವಾಗಿದ್ದೇ ಹೆಬ್ಬಾರ್ ಕಿತಾಪತಿಯಿಂದ ಎಂದು ಘಟ್ಟದ ಮೇಲಿನವರ ಅಭಿಪ್ರಾಯ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉದುರಿಸುವ ದೂರಾಲೋಚನೆ ಹೆಬ್ಬಾರ್‍ದು. ಹಾಗೊಮ್ಮೆ ಯಲ್ಲಾಪುರ ಜಿಲ್ಲಾ ರಾಜಧಾನಿಯಾದರೆ ಆ ಕ್ರೆಡಿಟ್ ತನಗೆ ಬರುತ್ತದೆ. ಈ ವಿವಾದದಲ್ಲಿ ಜಿಲ್ಲಾ ರಚನೆ ನೆನೆಗುದಿಗೆ ಬಿದ್ದರೆ ಅಖಂಡ ಉತ್ತರಕನ್ನಡದ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಕಾರುಬಾರು ನೆಡೆಸಬಹುದೆಂಬ ಲೆಕ್ಕಾಚಾರ ಹೆಬ್ಬಾರ್‍ದು. ಅಧಿಕಾರದ ತೆವಲಿಗೆ ಬಿದ್ದಿರುವ ಹೆಬ್ಬಾರ್‍ಗೆ ಹೊಸಜಿಲ್ಲೆ, ಹಳೆಜಿಲ್ಲೆ, ಕ್ಷೇತ್ರ, ಬನವಾಸಿ ಹೀಗೆ ಜನರ ಬೇಕು ಬೇಡುಗಳೆಲ್ಲವು ಜುಜುಬಿಯೇ..

ಅದೆಷ್ಟೇ ಅಡ್ಡ ಸರ್ಕಸ್ ಮಾಡಿದರೂ ಹೆಬ್ಬಾರ್‌ಗೆ ನಿದ್ದೆ ಬೀಳುತ್ತಿಲ್ಲ. ಅತ್ತ ಸುಪ್ರೀಂ ಕೋರ್ಟ್‍ನಲ್ಲಿ ಅನರ್ಹತೆ ವಿಚಾರಣೆ ನಡೆಯುತ್ತಿದೆ. ಇತ್ತ ಉಪಚುನಾವಣೆ ಎದೆಮೆಲೆ ಬಂದು ಕೂತಿದೆ. ಬಿಜೆಪಿ ಟಿಕೆಟ್ ತರಲು ತೊಂದರೆ ಕೊಡುವ ಸ್ಥಳೀಯ ಮಾಜಿ ಶಾಸಕ ವಿ.ಎಸ್.ಪಾಟೀಲ್‍ಗೆ ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷತೆ ಯಡ್ಡಿಯಿಂದ ಕೊಡಿಸಿ ಪಳಗಿಸಲು ಹೆಬ್ಬಾಳ್ ಪ್ರಯತ್ನಿಸುತ್ತಿದ್ದಾನೆ. ಸುಪ್ರೀಮ್ ತನ್ನ ಅನರ್ಹತೆ ಪಕ್ಕಾ ಮಾಡಿದರೆ ತನ್ನ ಮಗ ಅಥವಾ ಹೆಂಡತಿಗೆ ಬಿಜೆಪಿ ಕ್ಯಾಂಡಿಡೇಟ್ ಮಾಡುವ ಆಸೆ ಹೆಬ್ಬಾರ್‍ಗೆ. ತನ್ನ ಎ ಪ್ಲಾನ್‍ಗಷ್ಟೇ ಅಲ್ಲ ಪ್ಲಾನ್ ಬಿಗೂ ಪಾಟೀಲ್ ಅಪಸ್ವರ ಎತ್ತಬಾರದೆಂದು ಹೆಬ್ಬಾರ್ ಒತ್ತಾಯಿಸುತ್ತಿದ್ದಾನೆ.

ಆದರೆ ಪಾಟೀಲ್ ಅರ್ಧ ಪಳಗಿದ್ದಾರಷ್ಟೆ. ಸಾರಿಗೆ ನಿಗಮದ ಅಧ್ಯಕ್ಷತೆ ವಹಿಸಿಕೊಂಡ ಕ್ಷಣವೇ “ನಾನು ಬಿಜೆಪಿ ಸರ್ಕಾರಕ್ಕಾಗಿ ತ್ಯಾಗ ಮಾಡಿದ ಹೆಬ್ಬಾರ್‍ಗೆ ಕ್ಷೇತ್ರ ತ್ಯಾಗ ಮಾಡಿದ್ದೆನೆ..,. ಆದರೆ ಹೆಬ್ಬಾರ್ ಹೊರತಾಗಿ ಬೇರ್ಯಾರಾದರು ಬಿಜೆಪಿ ಕೇಳಿದರೆ, ನನ್ನ ಕ್ಲೇಮು ಇದ್ದೇ ಇದೆ” ಎಂದು ಹೆಬ್ಬಾರ್ ಪರಿವಾರಕ್ಕೆ ಶಾಕ್ ಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರ ಇದ್ದಾಗ ಒಲ್ಲದ ಮನಸ್ಸಿನಿಂದ ಇದೆ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷನಾಗಿದ್ದ ಹೆಬ್ಬಾರ್ ವಿದ್ರೋಹ ನಿಲ್ಲಿಸಿರಲಿಲ್ಲ. ಅಂಥದ್ದೇ ಪರಿಸ್ಥಿತಿ ಈಗ ಬಿಜೆಪಿಯಲ್ಲಿ ನಿರ್ಮಾಣವಾಗಿದೆ. ಪಾಟೀಲ್ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷನಾಗಿದ್ದರೂ ಯಲ್ಲಾಪುರ ಬೈ ಇಲೆಕ್ಷನ್‍ನಲ್ಲಿ ಸ್ಪರ್ಧಿಸುವ ಉಮೇದು ಬಿಟ್ಟಿಲ್ಲ. ಆಕಸ್ಮಾತ್ ಹೆಬ್ಬಾರ್ ಮಗ ಅಥವಾ ಹೆಂಡತಿಯಾದರೆ ಪಾಟೀಲ್ ಕಾಂಗ್ರೆಸ್ ಕ್ಯಾಂಡಿಡೇಟಾಗೋದು ಖಾತ್ರಿ. ಕಾಂಗ್ರೆಸ್ ಕಿಂಗ್‍ಗಳ ಜೊತೆ ಪಾಟೀಲ್ ರಹಸ್ಯ ಸಂಪರ್ಕ ಚಲೋ ಇಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....