Homeಕರ್ನಾಟಕಬೆನ್ನು ಬಿಡದ ಅಪರಾಧ

ಬೆನ್ನು ಬಿಡದ ಅಪರಾಧ

- Advertisement -
- Advertisement -

ಮಂಡ್ಯ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಿಂತ ಸುಮಲತಾ ಅಂಬರೀಶರ ಚುನಾವಣಾ ಪ್ರಚಾರ ಮಾಡಿ ಸುಸ್ತಾಗಿ ಬಂದು ಮನೆ ಮುಂದೆ ನಿಂತಿದ್ದೆ. ಆಗ ನಾಗಮಂಗಲದಲ್ಲಿ ನಡೆದ ದೇವೇಗೌಡರ ಸಭೆಯ ಬಗ್ಗೆ ಮನಸ್ಸು ಒಂದಿಷ್ಟು ಘಾಸಿಗೊಂಡಿತ್ತು. ಏಕೆಂದರೆ ಕಾಂಗ್ರೆಸ್ ಮತ್ತು ದಳದ ಘಟಾನುಘಟಿ ಲೀಡರುಗಳ ಸಮ್ಮುಖದಲ್ಲಿ ಮಾತನಾಡುತ್ತಿದ್ದ ಗೆಳೆಯ ಶಿವರಾಮೇಗೌಡ ಸುಮಲತಾರನ್ನು ‘ಮಾಯಾಂಗನೆ’ ಎಂದು ಮೂದಲಿಸಿದ್ದಲ್ಲದೆ, ‘ಕರ್ನಾಟಕದ ಜಯಲಲಿತ ಆಗಲು ಬಂದಿದ್ದಾಳೆ’ ಎಂದುಬಿಟ್ಟಿದ್ದ. ಇದು ಅವನ ವ್ಯಕ್ತಿತ್ವಕ್ಕೆ ಸರಿಯಾದ ಮಾತು, ಆದರೆ ಆ ಸಭೆಯಲ್ಲಿದ್ದ ಸಿದ್ದರಾಮಯ್ಯ ಮತ್ತು ದೇವೇಗೌಡರು ಸಭ್ಯತೆಯ ಎಲ್ಲೆ ಮೀರಿದ್ದ ಶಿವರಾಮೇಗೌಡನ ಮಾತಿಗೆ ಆಕ್ಷೇಪವೆತ್ತಿರಲಿಲ್ಲ. ಬದಲಿಗೆ ದೇವೇಗೌಡರ ಮಾತಿಗೆ ಅವಕಾಶ ದೊರೆತಾಗ ‘ನಾನು ಭಾಷಣ ಮಾಡಲ್ಲ. ಶಿವರಾಮೇಗೌಡರ ಮಾತೇ ಅಂತಿಮ’ ಎಂದು ಹೇಳಿ ದಂಗುಬಡಿಸಿದ್ದರು. ಅಂತು ಇವರಿಗೇನೂ ಕೇಡುಗಾಲ ಎಂದುಕೊಂಡು ಸುಮ್ಮನೆ ಊರಿಗೆ ಬಂದಿದ್ದೆ.

ಆ ದಿನ ಸಾಯಂಕಾಲ ಮನೆ ಮುಂದೆ ಒಂದು ಬೈಕ್ ಬಂದು ನಿಂತಿತು. ಅಲ್ಲದೆ ‘ನಮಸ್ಕಾರ ಕಣಣ್ಣಾ’ ಎಂದಿತು. ನಸುಗತ್ತಲಾದ್ದರಿಂದ ಯಾರೆಂದು ಅರಿವಾಗಲಿಲ್ಲ ಹತ್ತಿರ ಹೋದೆ. ‘ನಾನು ಕಣಣ್ಣ ಎಂದ’. ‘ನಾನು ಮತ್ತೂ ಅನುಮಾನಿಸಿ ಗೊತ್ತಾಗಲಿಲ್ಲ’ ಎಂದೆ. ‘ನಾನು ಕಣಣ್ಣ, ಅದೇ ಗಂಗಾಧರಮೂರ್ತಿ’ ಎಂದ. ಆಗ ತಿಳಿಯಿತು. ನಮ್ಮೂರ ಮಗಳ ಮಗನಾದ ಈತ ತನ್ನ ಪರಿಚಯ ಹೇಳಿಕೊಳ್ಳಲು ‘ನಾನು ಗಂಗಾಧರ ಮೂರ್ತಿ ಕೊಂದವನು’ ಎಂದು ಹೇಳಿಕೊಳ್ಳುತ್ತಿದ್ದಾನೆ’ ಎಂಬುದು ಅರಿವಿಗೆ ಬಂತು. ಒಂದುಕ್ಷಣ ಅಳುಕಾಗಿ ‘ಏನಪ್ಪ ಸಮಾಚಾರ’ ಎಂದೆ. ‘ಏನಿಲ್ಲ ಕಣಣ್ಣ ನಿಮ್ಮತ್ರ ಏನೋ ಹೇಳಬೇಕಾಗ್ಯದೆ’ ಎಂದ. ‘ಏನು ವಿಷಯ’ ಎಂದೆ. ‘ಅದೆ ಶಿವರಾಮೇಗೌಡನ ವಿಷಯ ಕಣಣ್ಣ’ ಎಂದೆ. ‘ಅಯ್ಯೊ ಅವುನ ವಿಷಯ ಬಂದೂ ಬಂದೂ ಸಾಕಾಗ್ಯದೆ ಕಣಪ್ಪ. ಈಗವುನ್ನೇನು ಮುಟ್ಟಂಗಿಲ್ಲ. ದೇವೇಗೌಡ್ರು ಕರಕಂಡು ಬಂದು ಎಂ.ಪಿ ಮಾಡ್ಯವುರೆ’ ಎಂದೆ. ಆದ್ರು ಬರಿಬೇಕು ಬುಡಬಾರ್ದು ಕಣಣ್ಣ’ ಎಂದ. ‘ಆಯ್ತು ಬರಿಯನ ಅದೇನೇಳು’ ಎಂದೆ. ನೀವೊಂದೆರಡು ದಿನ ಬಿಡುವಾಗಿ ಸಿಕ್ಕಬೇಕಲ್ಲಣ್ಣ’ ಎಂದ. ‘ಸಿಗನ ತಗೊ ನನಿಗೇನು ಕ್ಯಲ್ಸಿಲ್ಲ’ ಎಂದೆ. ಶಿವರಾಮೇಗೌಡ ಕೋರ್ಟಿಗೋಗಬಹುದು’ ಎಂದ. ‘ಯಾಕೆ!’ ಎಂದೆ. ‘ಗಂಗಾಧರ ಮೂರ್ತಿ ಕೊಲೇಲಿ ನಮ್ಮನ್ನ ಹ್ಯಂಗೆ ಬಳಸಿಗಂಡ ಅನ್ನದನ್ಯಲ್ಲ ಹೇಳತಿನಿ’ ಎಂದ.

‘ನೋಡ್ರಪ್ಪ ಈಚೆಗೆ ನಮ್ಮ ಕೋರ್ಟಿಗೆ ಯಾರೂ ಹೆದರತಾಯಿಲ್ಲ. ಕೇಸಿನ ತೀರ್ಪು ಬರಕ್ಕೆ ಕನಿಷ್ಟ ಇಪ್ಪತ್ತು ವರ್ಷ ಆಯ್ತಾ ಅದೆ. ಅಷ್ಟೊತ್ತಿಗೆ ಶಿವರಾಮ ನೀನು ನಾನು ಯಾರೂ ಇರದಿಲ್ಲ ಆದ್ರಿಂದ ಧೈರ್ಯವಾಗಿ ಹೇಳು ಬರಿಯನ’ ಎಂದೆ. ಬರಿಬೇಕು ಕಣಣ್ಣ. ಇವತ್ತು ನಾನು ಬಾಳ ಯಾತನೇಲಿದ್ದಿನಿ’ ಎಂದ. ಒಂದಿಷ್ಟು ಸುಮ್ಮನಾದ. ನಾನು ಗಂಗಾಧರ ಮೂರ್ತಿ ಕೊಲೆ ಕಾಡಿಸುತ್ತಿರಬಹುದೆ. ಈತ ಹೊಡೆದ ಮಚ್ಚಿನೇಟಿಗೆ ಮರು ಮಾತನಾಡದೆ ಬೈಕ್ ಸಮೇತ ಭೂಮಿಗೊರಗಿದ. ಆ ದೃಶ್ಯ ಜೀವ ಹಿಂಡುತ್ತಿರಬಹುದೆ. ಎಂದು ಒಂದುಕ್ಷಣ ಯೋಚಿಸಿ ‘ಯಾಕಪ್ಪ ಏನಾಯ್ತು’ ಎಂದೆ. ‘ನನಿಗೆ ಜೀವಾವಧಿ ಆಯ್ತು ಕಣಣ್ಣ. ಅದೇ ಟೈಮಿಗೆ ನನಿಗೆ ಮಗ ಹುಟ್ಟಿದ. ಇತ್ತಗೆ ಹೆರಿಗೆ ಆದ್ರೆ ಅತ್ತಗೆ ನಾನು ಜೈಲಿಗೋದೆ. ಹೋಗುವಾಗ ನನ್ನೆಡ್ತಿಗೆ ಧೈರ್ಯ ಹೇಳಿ ಹೋಗಿದ್ದೆ. ಪೆರೋಲ್ ಮ್ಯಾಲೆ ಬಿಡುಗಡೆ ಆಯ್ತು ಸಾ… ಅದು ಎಂಟು ದಿನಕ್ಕೆ ಮಾತ್ರ. ಊರಿಗೆ ಬಂದು ನೋಡ್ತಿನಿ. ಮಗನಿಗಾಗ್ಲೆ ಹನ್ನೆರಡೊರ್ಸ. ಅವುನ ಜೊತೆ ಅರಾಮಾಗಿದ್ದು ಪುನಃ ಜೈಲಿಗೋದೆ ಕಣಣ್ಣ. ಒಳ್ಳೆ ನಡವಳಿಕೆ ಕಾರಣಕ್ಕೆ ಬೇಗ ಬಿಡುಗಡೆಯಾಗಕ್ಕೆ ಕುಮಾರಸ್ವಾಮಿಗೆ ಹೇಳೋದಕ್ಕೆ ಯವಸ್ಥೆ ಮಾಡಿದ್ದೆ ಕಣಣ್ಣ. ಅಷ್ಟರಲ್ಲಿ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಅನ್ನ ಸುದ್ದಿ ಬಿತ್ತು ಕಣಣ್ಣ’ ಎಂದು ಹೇಳುವಷ್ಟರಲ್ಲಿ, ಲೋಕೇಶನ ಗಂಟಲು ಬಿಗಿದು ಬಂದು ಕಣ್ಣು ತುಂಬಿಕೊಂಡವು. ‘ಅಯ್ಯೊ ಯಂತ ದುರಂತನಯ್ಯ’ ಎಂದು ಉದ್ಘಾರ ತೆಗೆದ. ನಾನು, ಬರೋಬ್ಬರಿ 26 ವರ್ಷಕ್ಕೆ ಮಗುಚಿಕೊಂಡೆ. ಆಗ ಇದೇ ಲೋಕೇಶ್‍ನಂತೆ ನನಗೂ ದುಃಖ ಒತ್ತರಿಸಿ ಬಂದು ಗೆಳೆಯರು ಸುಮ್ಮನಿರಿಸಿದರೂ ಆಗದೇ ಗೊಳೋ ಎಂದು ಅತ್ತು ಬಿಟ್ಟಿದ್ದೆ. ಎದೆಯ ದುಃಖ ಬಸಿದ ನಂತರ ಸಮಾಧಾನ ಮಾಡಿಕೊಂಡು ಆಲಿಸಿದೆ. ನನ್ನ ಅಳುವಿಗೆ ಕಾರಣನಾಗಿದ್ದ ಗಂಗಾಧರ ಮೂರ್ತಿ ಮಗ ರವಿವರ್ಮನ ಅಳು ನಿಂತಿತ್ತು. ತನ್ನ ತಂದೆಯ ಶವಸಂಸ್ಕಾರ ಮುಗಿದ ಮೇಲೆ ಇದ್ದಕ್ಕಿದ್ದಂತೆ ಅಪ್ಪನನ್ನ ನೆನೆಸಿಕೊಂಡು ಯಾರೂ ಸುಮ್ಮನಿರಿಸಲಾಗದ ಅಳುವಿಗೆ ತುತ್ತಾಗಿತ್ತು. ಈಗ ಸುಸ್ತಾಗಿ ಸುಮ್ಮನಾಗಿತ್ತು. ಆ ದಾರುಣ ಸಂದರ್ಭ ನನ್ನ ಮನಸ್ಸಿನಲ್ಲಿ ಉಳಿದುಬಿಟ್ಟಿತ್ತು. ಆವತ್ತು ಅಪ್ಪನನ್ನು ಕಳೆದುಕೊಂಡು ಮಗು ರವಿವರ್ಮ ಅಳುತ್ತಿದ್ದರೆ, ಈಗ ಮಗನನ್ನು ಕಳೆದುಕೊಂಡು ಲೋಕೇಶ್ ದುಃಖಿತನಾಗಿದ್ದ. ಬಹುಶಃ ಇಂತಹ ದುಃಖವೇ ಆತನನ್ನ ಶಿವರಾಮೇಗೌಡನ ವಿರುದ್ಧ ಸೇಡಿಗೆ ಪ್ರಚೋದಿಸಿರಬಹುದು ಎಂದುಕೊಳ್ಳುತ್ತಿರುವಾಗ, ಲೋಕೇಶ್ ‘ಮಗನ ಸಾವಿನ ದುಃಖ ಮರಿಯಕ್ಕೆ ಆಗಾಗ್ಗೆ ಕುಡಿತಿನಿ ಕಣಣ್ಣ’ ಎಂದ. ಈ ಬಗ್ಗೆ ನಾನು ಏನೂ ಹೇಳಲಾಗಲಿಲ್ಲ. ಆದರೆ, ಜೈಲಿನಲ್ಲಿದ್ದ ಅಪ್ಪ ಪೆರೋಲ್ ಮೇಲೆ ಬಂದು ಮಗನನ್ನ ಮಾತನಾಡಿಸಿ ಮುದ್ದಾಡಿ ಮತ್ತೆ ಜೈಲಿಗೆ ಹೋದಾಗ, ಆ ಹುಡುಗ ಏನು ಯೋಚಿಸಿರಬಹುದು. ಶಾಲೆಯಲ್ಲಿ ಯಾರಾದರೂ ಹಂಗಿಸಿರಬಹುದೇ ಎಂದೆಲ್ಲ ಆ ಯೋಚಿಸುತ್ತಿರುವಾಗ ‘ಬರ್ತಿನಿ ಕಣಣ್ಣ ಬಿಡುವು ಮಾಡಿಕೊಂಡು ಸಿಕ್ಕಿ ಯಲ್ಲನು ಹೇಳ್ತಿನಿ’ ಎಂದು ಹೊರಟ. ಈಗ ಅದ್ಯಾವುದರಿಂದ ಏನೂ ಪ್ರಯೋಜನವಿಲ್ಲ ಎಂದುಕೊಂಡರೂ, ಗಂಗಾಧರ ಮೂರ್ತಿ ಕೊಲೆ ನಡೆದು ಇಪ್ಪತ್ತಾರು ವರ್ಷಗಳಾಗಿವೆ. ಈ ನಡುವೆ ರಾಜಕೀಯವಾಗಿ ಮತ್ತು ಮತೀಯವಾಗಿ ನೂರಾರು ಕೊಲೆಗಳಾಗಿವೆ. ಆದರೂ ಇದೊಂದು ಕೊಲೆಗೆ ಸಂಬಂಧಿಸಿದವರು ಅಶಾಂತಿ ಮತ್ತು ದುಃಖದಿಂದ ತತ್ತರಿಸುತ್ತಿರುವುದು ಗೋಚರವಾಗುತ್ತಿದ್ದಂತೆ ಆಶ್ಚರ್ಯವಾಗತೊಡಗಿತು. ನಿಜಕ್ಕೂ ಅದೊಂದು ಅಮಾಯಕನ ಕೊಲೆಯಾಗಿತ್ತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...