Homeಅಂಕಣಗಳುಬಹುಜನ ಭಾರತ; ಸ್ವತಂತ್ರ ಅಸ್ಮಿತೆಯಲ್ಲಿ ಅರಳಿದ ಶಿವರಾಣಿ ದೇವಿ

ಬಹುಜನ ಭಾರತ; ಸ್ವತಂತ್ರ ಅಸ್ಮಿತೆಯಲ್ಲಿ ಅರಳಿದ ಶಿವರಾಣಿ ದೇವಿ

- Advertisement -
- Advertisement -

ಪ್ರಚಂಡ ಪ್ರಸಿದ್ಧ ಜೀವನ ಸಂಗಾತಿಯ ನೆರಳಿನಲ್ಲಿ ಕಳೆದೇ ಹೋದ ಪತ್ನಿಯರು, ಪತಿಯರಿಗೆ ಲೆಕ್ಕವಿಲ್ಲ.

ಆದರೆ ಹಿಂದೀ ಉರ್ದುವಿನಲ್ಲಿ ಬರೆದ ಮಾನವತಾವಾದಿ ಲೇಖಕ ಮುನ್ಷಿ ಪ್ರೇಮ್ ಚಂದ್ ಅವರ ಪತ್ನಿ ಶಿವರಾಣಿ ದೇವಿ, ಪತಿಯ ಪ್ರಕಾಶಮಯ ಪ್ರಭಾವಳಿಯಲ್ಲೂ ಕಳೆದುಹೋಗದೆ ಹೊಳೆದವರು. ಸ್ವಂತ ಅಸ್ಮಿತೆ ಉಳಿಸಿಕೊಂಡವರು.

’ನಮ್ಮ ಕನಸಿನ ರಾಷ್ಟ್ರೀಯತೆಯಲ್ಲಿ ಜನ್ಮಜಾತ ವರ್ಣಗಳ ಗಂಧಗಾಳಿಗೂ ಅವಕಾಶ ಇರದು. ಅದು ಶ್ರಮಿಕರು ಮತ್ತು ರೈತರ ಸಾಮ್ರಾಜ್ಯ. ಬ್ರಾಹ್ಮಣ ಕಾಯಸ್ಥ ಕ್ಷತ್ರಿಯರು ಅಲ್ಲಿರುವುದಿಲ್ಲ. ಸಮಸ್ತರೂ ಭಾರತವಾಸಿಗಳು. ಈ ಎಲ್ಲ ಲಡಾಯಿ ಬೆರಳೆಣಿಕೆಯ ವ್ಯಕ್ತಿಗಳದು. ಇವರಿಂದ ದೂರವಿರುವ ರಾಷ್ಟ್ರದಲ್ಲಿ ಹಿಂದೂಗಳೂ ಇಲ್ಲ, ಮುಸಲ್ಮಾನರೂ ಇಲ್ಲ. ಅಲ್ಲಿರುವವರೆಲ್ಲ ಶ್ರಮಿಕರು ಮತ್ತು ರೈತರು. ಒಬ್ಬರಿಗಿಂತ ಮತ್ತೊಬ್ಬರು ದೀನ ದರಿದ್ರ ದಲಿತರು ಮತ್ತು ಶೋಷಣೆಯ ಗಾಣದಲ್ಲಿ ಅರೆಯಲ್ಪಟ್ಟವರು. ಆರತಿ ನಮಾಜು-ಹಿಂದೀ-ಉರ್ದು ಸಮಸ್ಯೆಗಳು ಇಲ್ಲಿ ಇರುವುದೇ ಇಲ್ಲ’ ಎಂದು 90 ವರ್ಷಗಳ ಹಿಂದೆಯೇ ಹೇಳಿದ್ದವರು ಪ್ರೇಮ್ ಚಂದ್.

ಪ್ರೇಮಚಂದ್ ಅವರ 141ನೆಯ ಜಯಂತಿ ಮೊನ್ನೆ ಜುಲೈ 31ರಂದು ಸರಿದುಹೋಯಿತು. ಪತ್ನಿ ಶಿವರಾಣಿ ದೇವಿಯವರ ಬರೆಹದ ಬದುಕಿಗೆ ನೀರೆರೆದು ಮನಸಾರೆ ಪ್ರೋತ್ಸಾಹಿಸಿದ ಪತಿಯಾಗಿದ್ದರು ಅವರು.

ಪ್ರೇಮ್ ಚಂದ್ ಅವರ ಬದುಕು ಬರೆಹಗಳ ಬಿಡಿಸಲಾಗದ ಭಾಗವೇ ಆಗಿಹೋಗಿದ್ದರು ಪತ್ನಿ ಶಿವರಾಣಿದೇವಿ. ಪ್ರೇಮ್ ಚಂದ್ ಎರಡನೆಯ ಮದುವೆಯಲ್ಲಿ ಅವರ ಕೈಹಿಡಿದಾಗ ಶಿವರಾಣಿ ಹನ್ನೊಂದು ವರ್ಷ ವಯಸ್ಸಿನ ಬಾಲವಿಧವೆ. ’ಕಾಯಸ್ಥ ಬಾಲ ವಿಧವಾ ಉದ್ಧಾರಕ ಪುಸ್ತಿಕಾ’ದಲ್ಲಿ ಅಚ್ಚಾಗಿದ್ದ ಜಾಹೀರಾತನ್ನು ಓದಿ ಶಿವರಾಣಿದೇವಿಯವರ ತಂದೆಗೆ ಪತ್ರ ಬರೆದು ಆಕೆಯನ್ನು ವರಿಸಿದ್ದರು ಪ್ರೇಮ್ ಚಂದ್.

ಪತಿಯ ನಿಧನಾನಂತರ ನಲವತ್ತು ವರ್ಷಗಳ ಕಾಲ ಜೀವಿಸಿದ್ದವರು. ಬರವಣಿಗೆಯಲ್ಲಿ ತೊಡಗಿಕೊಂಡವರು. ಅಂದಿನ ಕಾಲಘಟ್ಟದ ಮಹತ್ವದ ಕತೆಗಾರ್ತಿಯಾಗಿದ್ದರು ಆಕೆ. ಸ್ತ್ರೀ ವಿಮುಕ್ತಿಯ ವಿಷಯದಲ್ಲಿ ಪತಿಗಿಂತ ಹೆಚ್ಚು ಮುಂದೆ ಸಾಗಿದ್ದ ಆಲೋಚನೆ ಅವರದಾಗಿತ್ತು.

ಆಕೆಯ ಕಥಾನಾಯಕಿಯರು ಅನ್ಯಾಯದ ವಿರುದ್ಧ ಸಿಡಿದೇಳುವವರು. ದಿಟ್ಟರೂ ಆತ್ಮವಿಶ್ವಾಸಭರಿತರೂ, ಉದ್ಧಟರೂ ಆಗಿರುತ್ತಿದ್ದರು. ಬಾಲವಿಧವೆ ಕಾಂತಿ ತನ್ನ ಗ್ರಾಮದ ಲಂಪಟ ಮೋಹನನ ಮೂಗನ್ನೇ ಕತ್ತರಿಸಿ ಶಿಕ್ಷಿಸುತ್ತಾಳೆ. ನಲವತ್ತರ ವಯಸ್ಸಿನ ನಾಲ್ಕು ಮಕ್ಕಳ ತಂದೆಯನ್ನು ಮದುವೆಯಾಗುವ ಅನಿವಾರ್ಯದ ಕತ್ತರಿಯಲ್ಲಿ ಸಿಕ್ಕಿಹಾಕಿಕೊಳ್ಳುವ ರಾಮ್ ಪ್ಯಾರಿ ಪತ್ರ ಬರೆದು ವರನಿಗೆ ಬುದ್ಧಿ ಹೇಳಲು ಪ್ರಯತ್ನಿಸುತ್ತಾಳೆ. ಅವನು ಲೆಕ್ಕಿಸುವುದಿಲ್ಲ. ಮದುವೆ ಮಂಟಪದಲ್ಲಿ ಘೂಂಘಟ್ ಕಿತ್ತೆಸೆದು ವರನನ್ನು ಚಪ್ಪಲಿಯಿಂದ ಬಾರಿಸುತ್ತಾಳೆ. ತಂದೆಯತ್ತ ಮತ್ತೊಂದು ಚಪ್ಪಲಿಯನ್ನು ಎಸೆದು ಹೊರನಡೆಯುತ್ತಾಳೆ. ಅವರ ಕತೆಗಳು ಎಂಬತ್ತು ವರ್ಷಗಳ ನಂತರ ಹಿಂದೀ ಓದುಗರಿಗೆ ಇದೀಗ ಲಭಿಸತೊಡಗಿವೆ.

ಶಿವರಾಣಿಯವರ ಕತೆಗಳನ್ನು ಪ್ರೇಮ್ ಚಂದ್ ಬರೆದುಕೊಡುತಿದ್ದರು ಎಂಬ ಓದುಗರ ಸಂದೇಹ ಕಾಲಕ್ರಮೇಣ ನಿವಾರಣೆಯಾಗುತ್ತದೆ. ಅದನ್ನು ನಿವಾರಿಸಲು ಖುದ್ದು ಪ್ರೇಮ್ ಚಂದ್ ಹೆಣಗುತ್ತಾರೆ. ತಮ್ಮ ಕತೆಗಳು ಪತಿಯ ಕತೆಗಳ ಅನುಕರಣೆ ಆಗದಂತೆ ಪ್ರಜ್ಞಾಪೂರ್ವಕವಾಗಿ ಎಚ್ಚರ ವಹಿಸುತ್ತಾರೆ ಶಿವರಾಣಿ.

1956ರಲ್ಲಿ ಪ್ರಕಟವಾದ ಅವರ ’ಪ್ರೇಮ್ ಚಂದ್ ಘರ್ ಮೇಂ’ (ಮನೆಯೊಳಗೆ ಪ್ರೇಮ್ ಚಂದ್) ಎಂಬ ಅವರ ಕೃತಿ, ಸಾಹಿತ್ಯ ಇತಿಹಾಸಕಾರರ ಪಾಲಿನ ಅಮೂಲ್ಯ ನಿಧಿ. ಪ್ರೇಮ್ ಚಂದ್ ಮತ್ತು ಶಿವರಾಣಿಯವರ ಸುತ್ತ ಸುತ್ತುವ ಈ ಕೃತಿ ಅಲ್ಲಲ್ಲಿ ಶಿವರಾಣಿಯವರ ಸಾಹಿತ್ಯಾಸಕ್ತಿ ಮತ್ತು ಅಂದಿನ ರಾಜಕೀಯ ವಾತಾವರಣ ಕುರಿತು ಬೆಳಕು ಚೆಲ್ಲುತ್ತದೆ. ಪ್ರೇಮ್ ಚಂದ್ ಕುರಿತ ಅವರ ಕೃತಿಯಲ್ಲಿ ಅವರ ಮನಸ್ಸಾಕ್ಷಿ ಮಾತಾಡುತ್ತದೆ. ಜಗತ್ತಿನ ಕಣ್ಣಿಗೆ ಕಾಣದಿರುವ ಪ್ರೇಮ್ ಚಂದ್ ಅವರಿಗೆ ಮಡದಿಯ ಕಣ್ಣಿನ ಕನ್ನಡಿಯನ್ನು ಹಿಡಿಯುತ್ತದೆ. ಈ ಕೃತಿಯು ಸ್ತ್ರೀವಾದಿ ಕಣ್ಣೋಟವನ್ನು ಕಟ್ಟಿಕೊಡುವ ದಸ್ತಾವೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹೊತ್ತಗೆಯು ಕೇವಲ ಪ್ರೇಮ್ ಚಂದ್ ಅವರ ಜೀವನ ಚರಿತ್ರೆಯಲ್ಲ, ಶಿವರಾಣಿಯವರ ಆತ್ಮಕತೆಯೂ ಹೌದು ಎಂಬ ನಿಷ್ಕರ್ಷೆಗೆ ಬರಲಾಗಿದೆ. ಮೇಲ್ನೋಟಕ್ಕೆ ಈ ಪುಸ್ತಕ ಮನೆವಾರ್ತೆಯ ನೆನಪುಗಳನ್ನು ಆಧರಿಸಿದ್ದೆಂದು ತೋರಬಹುದು. ಆದರೆ ಪ್ರೇಮ್ ಚಂದ್ ಅವರ ಒಳ-ಹೊರಗುಗಳನ್ನು ಇಣುಕಿ ನೋಡಿ ಅರ್ಥ ಮಾಡಿಕೊಳ್ಳಲು ಅನುವಾಗುವ ಪ್ರಾಮಾಣಿಕ ಕಿಟಕಿಯಿದು. ಅವರ ಸಾಹಿತ್ಯಕ ಮತ್ತು ಮಾನವೀಯ ಗುಣಗಳ ಮೇಲೆ ಬೆಳಕು ಚೆಲ್ಲುವ ಕಿಟಕಿ. ಪ್ರೇಮ್ ಚಂದ್ ಅವರ ಸಾಹಿತ್ಯವನ್ನು ಅರ್ಥಮಾಡಿಕೊಳ್ಳುವಲ್ಲಿ ನೆರವಾಗುವ ಬರೆಹವಿದು. ಇಲ್ಲಿನ ಪ್ರತಿಯೊಂದು ಪದ ಪದದ ಮೇಲೂ ಅವರ ವ್ಯಕ್ತಿತ್ವದ ಛಾಪು ಮೂಡಿದೆ ಎಂದು ವಿಮರ್ಶಕರು ಹೇಳಿದ್ದಾರೆ.

ದಿನನಿತ್ಯದ ಬದುಕು ಬಾಳುವೆಯ ಸಹಜ ಸರಳ ಮಾತುಕತೆಗಳಲ್ಲೇ ಪ್ರೇಮ್ ಚಂದ್ ಅವರನ್ನು ಶಿವರಾಣಿ ಸಾಕಾರಗೊಳಿಸಿದ್ದಾರೆ. ’ಅವರು ಉಳಿದೆಲ್ಲರಿಗೂ ಮಹಾನ್ ಆಗಿದ್ದಿರಬಹುದು ಆದರೆ ನನ್ನ ಪಾಲಿಗೆ ನನ್ನವರಾಗಿದ್ದರು, ನಾನು ಅವರವಳಾಗಿದ್ದೆ. ನಮ್ಮಿಬ್ಬರ ನಡುವೆ ಮಹಾನತೆಗೆ ಜಾಗವೆಲ್ಲಿಯದು?’ ಎಂಬ ಅವರ ಮಾತುಗಳು ಅರ್ಥಪೂರ್ಣ.

ಪತಿಯ ಮಾನವೀಯತೆಯನ್ನು ಮೆಚ್ಚುತ್ತಲೇ ಕಟಕಟೆಯಲ್ಲಿ ನಿಲ್ಲಿಸಿ ಆತನ ವಿವಾಹೇತರ ಪ್ರೇಮ ಪ್ರಸಂಗವನ್ನು ಪ್ರಶ್ನಿಸಿದ್ದಾರೆ.

ಮೊದಲ ಪತ್ನಿ ಇದ್ದಾಗಲೇ ಮತ್ತೊಬ್ಬ ಹೆಣ್ಣುಮಗಳ ಸಂಗ ಮಾಡಿದ್ದೆ. ನೀನು ಬಂದ ನಂತರವೂ ಈ ಸಂಬಂಧ ಮುಂದುವರೆದಿತ್ತು ಎಂದು ಶಿವರಾಣಿಯವರ ಮುಂದೆ ಪ್ರೇಮ್ ಚಂದ್ ತಪ್ಪೊಪ್ಪಿಕೊಂಡಿದ್ದರು. ಆದರೆ ತಾವು ಪ್ರೇಮ್‌ಚಂದ್ ಬದುಕಿನಲ್ಲಿ ಕಾಲಿಟ್ಟ ನಂತರವೂ ಆತ ಮತ್ತೊಬ್ಬ ಹೆಣ್ಣುಮಗಳ ಸಂಗ ಮುಂದುವರೆಸಿದ್ದ ಶಿವರಾಣಿಯವರಿಗೆ ತಿಳಿದಿತ್ತು. ಆದರೆ ಪತಿಯ ಮುಂದೆ ಆ ಬಗ್ಗೆ ಬಾಯಿ ಬಿಡಲಿಲ್ಲ. ಈ ವಿಷಯ ಪ್ರೇಮ್ ಚಂದ್ ಅವರಿಗೆ ಗೊತ್ತಾಯಿತು. ಹೃದಯವಂತಿಕೆಯಲ್ಲಿ ನೀನು ನನಗಿಂತ ದೊಡ್ಡವಳು ಎಂದು ಪ್ರತಿಕ್ರಿಯಿಸುತ್ತಾರೆ.

ಪ್ರೇಮ್ ಚಂದ್ ಅವರ ಮೇಲೆ ಆದ ಗಾಂಧೀ ಪ್ರಭಾವ ಶಿವರಾಣಿಯವರನ್ನೂ ತಾಗುತ್ತದೆ. ಗಾಂಧೀ ಆಂದೋಲನದಲ್ಲಿ ಭಾಗವಹಿಸುತ್ತಾರೆ. ಗೋರಖಪುರಕ್ಕೆ ಗಾಂಧೀ ಬಂದ ವರ್ಷ ಒಡವೆ ಧರಿಸುವುದಿಲ್ಲವೆಂದು ಮಾಡಿದ ಪ್ರತಿಜ್ಞೆಯನ್ನು ಆಕೆ ಕಡೆಯುಸಿರ ತನಕ ಪಾಲಿಸುತ್ತಾರೆ. 1930ರ ದಶಕದಲ್ಲಿ ಲಕ್ನೋದ ಮಹಿಳಾ ಆಶ್ರಮದ ಸಭೆಯೊಂದರಲ್ಲಿ 12 ಸಾವಿರ ಮಂದಿಯನ್ನು ಉದ್ದೇಶಿಸಿ ಸುಡುಗೆಂಡದ ಭಾಷಣ ಮಾಡುತ್ತಾರೆ. ವಿದೇಶೀ ವಸ್ತ್ರ ಸುಟ್ಟಿದ್ದಕ್ಕಾಗಿ ಬಂಧನಕ್ಕೆ ಒಳಗಾಗುತ್ತಾರೆ.

ಇಂತಹ ವಿಶಿಷ್ಟ ವ್ಯಕ್ತಿತ್ವದ ಶಿವರಾಣಿಯವರ ಹೂತು ಹೋಗಿದ್ದ ಕತೆಗಳು ಇದೀಗ ಬೆಳಕಿಗೆ ಬರತೊಡಗಿವೆ.


ಇದನ್ನೂ ಓದಿ: ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...