Homeಅಂಕಣಗಳುಬಹುಜನ ಭಾರತ; ಸ್ವತಂತ್ರ ಅಸ್ಮಿತೆಯಲ್ಲಿ ಅರಳಿದ ಶಿವರಾಣಿ ದೇವಿ

ಬಹುಜನ ಭಾರತ; ಸ್ವತಂತ್ರ ಅಸ್ಮಿತೆಯಲ್ಲಿ ಅರಳಿದ ಶಿವರಾಣಿ ದೇವಿ

- Advertisement -
- Advertisement -

ಪ್ರಚಂಡ ಪ್ರಸಿದ್ಧ ಜೀವನ ಸಂಗಾತಿಯ ನೆರಳಿನಲ್ಲಿ ಕಳೆದೇ ಹೋದ ಪತ್ನಿಯರು, ಪತಿಯರಿಗೆ ಲೆಕ್ಕವಿಲ್ಲ.

ಆದರೆ ಹಿಂದೀ ಉರ್ದುವಿನಲ್ಲಿ ಬರೆದ ಮಾನವತಾವಾದಿ ಲೇಖಕ ಮುನ್ಷಿ ಪ್ರೇಮ್ ಚಂದ್ ಅವರ ಪತ್ನಿ ಶಿವರಾಣಿ ದೇವಿ, ಪತಿಯ ಪ್ರಕಾಶಮಯ ಪ್ರಭಾವಳಿಯಲ್ಲೂ ಕಳೆದುಹೋಗದೆ ಹೊಳೆದವರು. ಸ್ವಂತ ಅಸ್ಮಿತೆ ಉಳಿಸಿಕೊಂಡವರು.

’ನಮ್ಮ ಕನಸಿನ ರಾಷ್ಟ್ರೀಯತೆಯಲ್ಲಿ ಜನ್ಮಜಾತ ವರ್ಣಗಳ ಗಂಧಗಾಳಿಗೂ ಅವಕಾಶ ಇರದು. ಅದು ಶ್ರಮಿಕರು ಮತ್ತು ರೈತರ ಸಾಮ್ರಾಜ್ಯ. ಬ್ರಾಹ್ಮಣ ಕಾಯಸ್ಥ ಕ್ಷತ್ರಿಯರು ಅಲ್ಲಿರುವುದಿಲ್ಲ. ಸಮಸ್ತರೂ ಭಾರತವಾಸಿಗಳು. ಈ ಎಲ್ಲ ಲಡಾಯಿ ಬೆರಳೆಣಿಕೆಯ ವ್ಯಕ್ತಿಗಳದು. ಇವರಿಂದ ದೂರವಿರುವ ರಾಷ್ಟ್ರದಲ್ಲಿ ಹಿಂದೂಗಳೂ ಇಲ್ಲ, ಮುಸಲ್ಮಾನರೂ ಇಲ್ಲ. ಅಲ್ಲಿರುವವರೆಲ್ಲ ಶ್ರಮಿಕರು ಮತ್ತು ರೈತರು. ಒಬ್ಬರಿಗಿಂತ ಮತ್ತೊಬ್ಬರು ದೀನ ದರಿದ್ರ ದಲಿತರು ಮತ್ತು ಶೋಷಣೆಯ ಗಾಣದಲ್ಲಿ ಅರೆಯಲ್ಪಟ್ಟವರು. ಆರತಿ ನಮಾಜು-ಹಿಂದೀ-ಉರ್ದು ಸಮಸ್ಯೆಗಳು ಇಲ್ಲಿ ಇರುವುದೇ ಇಲ್ಲ’ ಎಂದು 90 ವರ್ಷಗಳ ಹಿಂದೆಯೇ ಹೇಳಿದ್ದವರು ಪ್ರೇಮ್ ಚಂದ್.

ಪ್ರೇಮಚಂದ್ ಅವರ 141ನೆಯ ಜಯಂತಿ ಮೊನ್ನೆ ಜುಲೈ 31ರಂದು ಸರಿದುಹೋಯಿತು. ಪತ್ನಿ ಶಿವರಾಣಿ ದೇವಿಯವರ ಬರೆಹದ ಬದುಕಿಗೆ ನೀರೆರೆದು ಮನಸಾರೆ ಪ್ರೋತ್ಸಾಹಿಸಿದ ಪತಿಯಾಗಿದ್ದರು ಅವರು.

ಪ್ರೇಮ್ ಚಂದ್ ಅವರ ಬದುಕು ಬರೆಹಗಳ ಬಿಡಿಸಲಾಗದ ಭಾಗವೇ ಆಗಿಹೋಗಿದ್ದರು ಪತ್ನಿ ಶಿವರಾಣಿದೇವಿ. ಪ್ರೇಮ್ ಚಂದ್ ಎರಡನೆಯ ಮದುವೆಯಲ್ಲಿ ಅವರ ಕೈಹಿಡಿದಾಗ ಶಿವರಾಣಿ ಹನ್ನೊಂದು ವರ್ಷ ವಯಸ್ಸಿನ ಬಾಲವಿಧವೆ. ’ಕಾಯಸ್ಥ ಬಾಲ ವಿಧವಾ ಉದ್ಧಾರಕ ಪುಸ್ತಿಕಾ’ದಲ್ಲಿ ಅಚ್ಚಾಗಿದ್ದ ಜಾಹೀರಾತನ್ನು ಓದಿ ಶಿವರಾಣಿದೇವಿಯವರ ತಂದೆಗೆ ಪತ್ರ ಬರೆದು ಆಕೆಯನ್ನು ವರಿಸಿದ್ದರು ಪ್ರೇಮ್ ಚಂದ್.

ಪತಿಯ ನಿಧನಾನಂತರ ನಲವತ್ತು ವರ್ಷಗಳ ಕಾಲ ಜೀವಿಸಿದ್ದವರು. ಬರವಣಿಗೆಯಲ್ಲಿ ತೊಡಗಿಕೊಂಡವರು. ಅಂದಿನ ಕಾಲಘಟ್ಟದ ಮಹತ್ವದ ಕತೆಗಾರ್ತಿಯಾಗಿದ್ದರು ಆಕೆ. ಸ್ತ್ರೀ ವಿಮುಕ್ತಿಯ ವಿಷಯದಲ್ಲಿ ಪತಿಗಿಂತ ಹೆಚ್ಚು ಮುಂದೆ ಸಾಗಿದ್ದ ಆಲೋಚನೆ ಅವರದಾಗಿತ್ತು.

ಆಕೆಯ ಕಥಾನಾಯಕಿಯರು ಅನ್ಯಾಯದ ವಿರುದ್ಧ ಸಿಡಿದೇಳುವವರು. ದಿಟ್ಟರೂ ಆತ್ಮವಿಶ್ವಾಸಭರಿತರೂ, ಉದ್ಧಟರೂ ಆಗಿರುತ್ತಿದ್ದರು. ಬಾಲವಿಧವೆ ಕಾಂತಿ ತನ್ನ ಗ್ರಾಮದ ಲಂಪಟ ಮೋಹನನ ಮೂಗನ್ನೇ ಕತ್ತರಿಸಿ ಶಿಕ್ಷಿಸುತ್ತಾಳೆ. ನಲವತ್ತರ ವಯಸ್ಸಿನ ನಾಲ್ಕು ಮಕ್ಕಳ ತಂದೆಯನ್ನು ಮದುವೆಯಾಗುವ ಅನಿವಾರ್ಯದ ಕತ್ತರಿಯಲ್ಲಿ ಸಿಕ್ಕಿಹಾಕಿಕೊಳ್ಳುವ ರಾಮ್ ಪ್ಯಾರಿ ಪತ್ರ ಬರೆದು ವರನಿಗೆ ಬುದ್ಧಿ ಹೇಳಲು ಪ್ರಯತ್ನಿಸುತ್ತಾಳೆ. ಅವನು ಲೆಕ್ಕಿಸುವುದಿಲ್ಲ. ಮದುವೆ ಮಂಟಪದಲ್ಲಿ ಘೂಂಘಟ್ ಕಿತ್ತೆಸೆದು ವರನನ್ನು ಚಪ್ಪಲಿಯಿಂದ ಬಾರಿಸುತ್ತಾಳೆ. ತಂದೆಯತ್ತ ಮತ್ತೊಂದು ಚಪ್ಪಲಿಯನ್ನು ಎಸೆದು ಹೊರನಡೆಯುತ್ತಾಳೆ. ಅವರ ಕತೆಗಳು ಎಂಬತ್ತು ವರ್ಷಗಳ ನಂತರ ಹಿಂದೀ ಓದುಗರಿಗೆ ಇದೀಗ ಲಭಿಸತೊಡಗಿವೆ.

ಶಿವರಾಣಿಯವರ ಕತೆಗಳನ್ನು ಪ್ರೇಮ್ ಚಂದ್ ಬರೆದುಕೊಡುತಿದ್ದರು ಎಂಬ ಓದುಗರ ಸಂದೇಹ ಕಾಲಕ್ರಮೇಣ ನಿವಾರಣೆಯಾಗುತ್ತದೆ. ಅದನ್ನು ನಿವಾರಿಸಲು ಖುದ್ದು ಪ್ರೇಮ್ ಚಂದ್ ಹೆಣಗುತ್ತಾರೆ. ತಮ್ಮ ಕತೆಗಳು ಪತಿಯ ಕತೆಗಳ ಅನುಕರಣೆ ಆಗದಂತೆ ಪ್ರಜ್ಞಾಪೂರ್ವಕವಾಗಿ ಎಚ್ಚರ ವಹಿಸುತ್ತಾರೆ ಶಿವರಾಣಿ.

1956ರಲ್ಲಿ ಪ್ರಕಟವಾದ ಅವರ ’ಪ್ರೇಮ್ ಚಂದ್ ಘರ್ ಮೇಂ’ (ಮನೆಯೊಳಗೆ ಪ್ರೇಮ್ ಚಂದ್) ಎಂಬ ಅವರ ಕೃತಿ, ಸಾಹಿತ್ಯ ಇತಿಹಾಸಕಾರರ ಪಾಲಿನ ಅಮೂಲ್ಯ ನಿಧಿ. ಪ್ರೇಮ್ ಚಂದ್ ಮತ್ತು ಶಿವರಾಣಿಯವರ ಸುತ್ತ ಸುತ್ತುವ ಈ ಕೃತಿ ಅಲ್ಲಲ್ಲಿ ಶಿವರಾಣಿಯವರ ಸಾಹಿತ್ಯಾಸಕ್ತಿ ಮತ್ತು ಅಂದಿನ ರಾಜಕೀಯ ವಾತಾವರಣ ಕುರಿತು ಬೆಳಕು ಚೆಲ್ಲುತ್ತದೆ. ಪ್ರೇಮ್ ಚಂದ್ ಕುರಿತ ಅವರ ಕೃತಿಯಲ್ಲಿ ಅವರ ಮನಸ್ಸಾಕ್ಷಿ ಮಾತಾಡುತ್ತದೆ. ಜಗತ್ತಿನ ಕಣ್ಣಿಗೆ ಕಾಣದಿರುವ ಪ್ರೇಮ್ ಚಂದ್ ಅವರಿಗೆ ಮಡದಿಯ ಕಣ್ಣಿನ ಕನ್ನಡಿಯನ್ನು ಹಿಡಿಯುತ್ತದೆ. ಈ ಕೃತಿಯು ಸ್ತ್ರೀವಾದಿ ಕಣ್ಣೋಟವನ್ನು ಕಟ್ಟಿಕೊಡುವ ದಸ್ತಾವೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹೊತ್ತಗೆಯು ಕೇವಲ ಪ್ರೇಮ್ ಚಂದ್ ಅವರ ಜೀವನ ಚರಿತ್ರೆಯಲ್ಲ, ಶಿವರಾಣಿಯವರ ಆತ್ಮಕತೆಯೂ ಹೌದು ಎಂಬ ನಿಷ್ಕರ್ಷೆಗೆ ಬರಲಾಗಿದೆ. ಮೇಲ್ನೋಟಕ್ಕೆ ಈ ಪುಸ್ತಕ ಮನೆವಾರ್ತೆಯ ನೆನಪುಗಳನ್ನು ಆಧರಿಸಿದ್ದೆಂದು ತೋರಬಹುದು. ಆದರೆ ಪ್ರೇಮ್ ಚಂದ್ ಅವರ ಒಳ-ಹೊರಗುಗಳನ್ನು ಇಣುಕಿ ನೋಡಿ ಅರ್ಥ ಮಾಡಿಕೊಳ್ಳಲು ಅನುವಾಗುವ ಪ್ರಾಮಾಣಿಕ ಕಿಟಕಿಯಿದು. ಅವರ ಸಾಹಿತ್ಯಕ ಮತ್ತು ಮಾನವೀಯ ಗುಣಗಳ ಮೇಲೆ ಬೆಳಕು ಚೆಲ್ಲುವ ಕಿಟಕಿ. ಪ್ರೇಮ್ ಚಂದ್ ಅವರ ಸಾಹಿತ್ಯವನ್ನು ಅರ್ಥಮಾಡಿಕೊಳ್ಳುವಲ್ಲಿ ನೆರವಾಗುವ ಬರೆಹವಿದು. ಇಲ್ಲಿನ ಪ್ರತಿಯೊಂದು ಪದ ಪದದ ಮೇಲೂ ಅವರ ವ್ಯಕ್ತಿತ್ವದ ಛಾಪು ಮೂಡಿದೆ ಎಂದು ವಿಮರ್ಶಕರು ಹೇಳಿದ್ದಾರೆ.

ದಿನನಿತ್ಯದ ಬದುಕು ಬಾಳುವೆಯ ಸಹಜ ಸರಳ ಮಾತುಕತೆಗಳಲ್ಲೇ ಪ್ರೇಮ್ ಚಂದ್ ಅವರನ್ನು ಶಿವರಾಣಿ ಸಾಕಾರಗೊಳಿಸಿದ್ದಾರೆ. ’ಅವರು ಉಳಿದೆಲ್ಲರಿಗೂ ಮಹಾನ್ ಆಗಿದ್ದಿರಬಹುದು ಆದರೆ ನನ್ನ ಪಾಲಿಗೆ ನನ್ನವರಾಗಿದ್ದರು, ನಾನು ಅವರವಳಾಗಿದ್ದೆ. ನಮ್ಮಿಬ್ಬರ ನಡುವೆ ಮಹಾನತೆಗೆ ಜಾಗವೆಲ್ಲಿಯದು?’ ಎಂಬ ಅವರ ಮಾತುಗಳು ಅರ್ಥಪೂರ್ಣ.

ಪತಿಯ ಮಾನವೀಯತೆಯನ್ನು ಮೆಚ್ಚುತ್ತಲೇ ಕಟಕಟೆಯಲ್ಲಿ ನಿಲ್ಲಿಸಿ ಆತನ ವಿವಾಹೇತರ ಪ್ರೇಮ ಪ್ರಸಂಗವನ್ನು ಪ್ರಶ್ನಿಸಿದ್ದಾರೆ.

ಮೊದಲ ಪತ್ನಿ ಇದ್ದಾಗಲೇ ಮತ್ತೊಬ್ಬ ಹೆಣ್ಣುಮಗಳ ಸಂಗ ಮಾಡಿದ್ದೆ. ನೀನು ಬಂದ ನಂತರವೂ ಈ ಸಂಬಂಧ ಮುಂದುವರೆದಿತ್ತು ಎಂದು ಶಿವರಾಣಿಯವರ ಮುಂದೆ ಪ್ರೇಮ್ ಚಂದ್ ತಪ್ಪೊಪ್ಪಿಕೊಂಡಿದ್ದರು. ಆದರೆ ತಾವು ಪ್ರೇಮ್‌ಚಂದ್ ಬದುಕಿನಲ್ಲಿ ಕಾಲಿಟ್ಟ ನಂತರವೂ ಆತ ಮತ್ತೊಬ್ಬ ಹೆಣ್ಣುಮಗಳ ಸಂಗ ಮುಂದುವರೆಸಿದ್ದ ಶಿವರಾಣಿಯವರಿಗೆ ತಿಳಿದಿತ್ತು. ಆದರೆ ಪತಿಯ ಮುಂದೆ ಆ ಬಗ್ಗೆ ಬಾಯಿ ಬಿಡಲಿಲ್ಲ. ಈ ವಿಷಯ ಪ್ರೇಮ್ ಚಂದ್ ಅವರಿಗೆ ಗೊತ್ತಾಯಿತು. ಹೃದಯವಂತಿಕೆಯಲ್ಲಿ ನೀನು ನನಗಿಂತ ದೊಡ್ಡವಳು ಎಂದು ಪ್ರತಿಕ್ರಿಯಿಸುತ್ತಾರೆ.

ಪ್ರೇಮ್ ಚಂದ್ ಅವರ ಮೇಲೆ ಆದ ಗಾಂಧೀ ಪ್ರಭಾವ ಶಿವರಾಣಿಯವರನ್ನೂ ತಾಗುತ್ತದೆ. ಗಾಂಧೀ ಆಂದೋಲನದಲ್ಲಿ ಭಾಗವಹಿಸುತ್ತಾರೆ. ಗೋರಖಪುರಕ್ಕೆ ಗಾಂಧೀ ಬಂದ ವರ್ಷ ಒಡವೆ ಧರಿಸುವುದಿಲ್ಲವೆಂದು ಮಾಡಿದ ಪ್ರತಿಜ್ಞೆಯನ್ನು ಆಕೆ ಕಡೆಯುಸಿರ ತನಕ ಪಾಲಿಸುತ್ತಾರೆ. 1930ರ ದಶಕದಲ್ಲಿ ಲಕ್ನೋದ ಮಹಿಳಾ ಆಶ್ರಮದ ಸಭೆಯೊಂದರಲ್ಲಿ 12 ಸಾವಿರ ಮಂದಿಯನ್ನು ಉದ್ದೇಶಿಸಿ ಸುಡುಗೆಂಡದ ಭಾಷಣ ಮಾಡುತ್ತಾರೆ. ವಿದೇಶೀ ವಸ್ತ್ರ ಸುಟ್ಟಿದ್ದಕ್ಕಾಗಿ ಬಂಧನಕ್ಕೆ ಒಳಗಾಗುತ್ತಾರೆ.

ಇಂತಹ ವಿಶಿಷ್ಟ ವ್ಯಕ್ತಿತ್ವದ ಶಿವರಾಣಿಯವರ ಹೂತು ಹೋಗಿದ್ದ ಕತೆಗಳು ಇದೀಗ ಬೆಳಕಿಗೆ ಬರತೊಡಗಿವೆ.


ಇದನ್ನೂ ಓದಿ: ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...