Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ ಬಿಜೆಪಿಯ ವೋಟ್‌ ಬ್ಯಾಂಕ್‌ ಗಿಮಿಕ್‌ ಅಷ್ಟೇ: ಶಿವಸೇನೆ

ಪೌರತ್ವ ತಿದ್ದುಪಡಿ ಮಸೂದೆ ಬಿಜೆಪಿಯ ವೋಟ್‌ ಬ್ಯಾಂಕ್‌ ಗಿಮಿಕ್‌ ಅಷ್ಟೇ: ಶಿವಸೇನೆ

ಹಿಂದೂ - ಮುಸ್ಲಿಮರ ಅದೃಶ್ಯ ವಿಭಜನೆಗೆ ಪೌರತ್ವ ತಿದ್ದುಪಡಿ ಮಸೂದೆ ದಾರಿ ಮಾಡಿಕೊಡಲಿದೆ ಎಂದು ಶಿವಸೇನೆ ಆರೋಪಿಸಿದೆ.

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸುವ ಮುನ್ನ, ಮಾಜಿ ಮಿತ್ರ ಪಕ್ಷವಾದ ಶಿವಸೇನೆ ಹಿಂದೂಗಳು ಮತ್ತು ಮುಸ್ಲಿಮರ “ಅದೃಶ್ಯ ವಿಭಜನೆಯನ್ನು” ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಆಯ್ದ ಕೆಲವರಿಗೆ ಮಾತ್ರ ಪೌರತ್ವ ನೀಡುವುದು ದೇಶದಲ್ಲಿ ಧಾರ್ಮಿಕ ಯುದ್ಧಕ್ಕೆ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆಯೇ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪ್ರಜೆಗಳಾಗಲು ಸುಲಭವಾಗುವಂತೆ ಆರು ದಶಕಗಳಷ್ಟು ಹಳೆಯದಾದ ಕಾನೂನನ್ನು ಪೌರತ್ವ ತಿದ್ದುಪಡಿ ಮಸೂದೆ ಯತ್ನಿಸಿದೆ. ಅನೇಕ ವಿರೋಧ ಪಕ್ಷಗಳು ಪ್ರಸ್ತಾವಿತ ಕಾನೂನನ್ನು ತಾರತಮ್ಯವೆಂದು ಕರೆಯುತ್ತವೆ ಮತ್ತು ಇದು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಜಾತ್ಯತೀತತೆಯ ಮೂಲ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿವೆ.

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆಯ ವಿಷಯದಲ್ಲಿನ ವಿರೋಧದಿಂದಾಗಿ ನಾಲ್ಕು ದಶಕಗಳ ಮಿತ್ರಪಕ್ಷವಾದ ಬಿಜೆಪಿಯೊಂದಿಗೆ ಮೈತ್ರಿ ಕೈಬಿಟ್ಟ ಶಿವಸೇನೆ ಮತ್ತು ಅಂತಿಮವಾಗಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಈಗ ವಿರೋಧ ಪಕ್ಷಗಳ ಪೌರತ್ವ ತಿದ್ದುಪಡಿಯ ವಿರೋಧಕ್ಕೆ ಅದು ಕೂಡ ಕೋರಸ್‌ ನೀಡುತ್ತಿದೆ.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯೂ ಈ ಮಸೂದೆಯನ್ನು ತರುತ್ತಿರುವುದು “ಮತ ಬ್ಯಾಂಕ್ ರಾಜಕೀಯ” ಉದ್ದೇಶದಿಂದಲೇ ಹೊರತು ದೇಶದ ಹಿತದೃಷ್ಟಿಯಿಂದಲ್ಲ ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ಈಗ ಸಮಸ್ಯೆಗಳ ಕೊರತೆಯಿಲ್ಲ. ಆದರೆ ಇಂತಹ ಸಮಯದಲ್ಲಿ ಪೌರತ್ವ ತಿದ್ದುಪಡಿಯಂತಹ ಹೊಸದನ್ನು ಆಹ್ವಾನಿಸುತ್ತಿದ್ದೇವೆ. ಮಸೂದೆಯೂ ಕೇಂದ್ರವು ಹಿಂದೂ ಮತ್ತು ಮುಸ್ಲಿಮರ ಅದೃಶ್ಯ ವಿಭಜನೆಯನ್ನು ಮಾಡುತ್ತದೆ ಎಂದು ಶಿವಸೇನೆ ಆರೋಪಿಸಿದೆ.

“ಹಿಂದೂಗಳನ್ನು ಹೊರತುಪಡಿಸಿ ಹಿಂದೂಗಳಿಗೆ ಬೇರೆ ದೇಶವಿಲ್ಲ ಎಂಬುದು ನಿಜ. ಆದರೆ ಅಕ್ರಮ ವಲಸಿಗರಲ್ಲಿ ಹಿಂದೂಗಳನ್ನು ಮಾತ್ರ ಸ್ವೀಕರಿಸುವ ಮೂಲಕ ಅದು ದೇಶದಲ್ಲಿ ಧಾರ್ಮಿಕ ಯುದ್ಧದ ಪ್ರಚೋದನೆಯಾಗಬಹುದೇ?” ಎಂದು ಶಿವಸೇನೆ ಪ್ರಶ್ನಿಸಿದೆ.

ಲೋಕಸಭೆಯಲ್ಲಿ 18 ಸಂಸದರನ್ನು ಹೊಂದಿರುವ ಶಿವಸೇನೆ, ಈಶಾನ್ಯ ಪ್ರದೇಶದ ಹೆಚ್ಚಿನ ರಾಜ್ಯಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ಮಸೂದೆಯನ್ನು ದೀರ್ಘಕಾಲ ವಿರೋಧಿಸಿವೆ ಎಂಬ ಉಹಾಹರಣೆಯನ್ನು ನೀಡಿದೆ.

ಅದೇ ಸಮಯದಲ್ಲಿ, ಪಾಕಿಸ್ತಾನದಲ್ಲಿ ಹಿಂದೂಗಳಿಗೆ ತೊಂದರೆ ಕೊಡುವಂತೆ, ಹಿಂದೂಗಳಿಗೆ ಹಿಂಸೆ ನೀಡುವ ಕೆಲವು ನೆರೆಯ ರಾಷ್ಟ್ರಗಳ ವಿರುದ್ಧ ಬಲವಾದ ಕ್ರಮ ತೆಗೆದುಕೊಳ್ಳುವಂತೆ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...