Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ ಬಿಜೆಪಿಯ ವೋಟ್‌ ಬ್ಯಾಂಕ್‌ ಗಿಮಿಕ್‌ ಅಷ್ಟೇ: ಶಿವಸೇನೆ

ಪೌರತ್ವ ತಿದ್ದುಪಡಿ ಮಸೂದೆ ಬಿಜೆಪಿಯ ವೋಟ್‌ ಬ್ಯಾಂಕ್‌ ಗಿಮಿಕ್‌ ಅಷ್ಟೇ: ಶಿವಸೇನೆ

ಹಿಂದೂ - ಮುಸ್ಲಿಮರ ಅದೃಶ್ಯ ವಿಭಜನೆಗೆ ಪೌರತ್ವ ತಿದ್ದುಪಡಿ ಮಸೂದೆ ದಾರಿ ಮಾಡಿಕೊಡಲಿದೆ ಎಂದು ಶಿವಸೇನೆ ಆರೋಪಿಸಿದೆ.

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸುವ ಮುನ್ನ, ಮಾಜಿ ಮಿತ್ರ ಪಕ್ಷವಾದ ಶಿವಸೇನೆ ಹಿಂದೂಗಳು ಮತ್ತು ಮುಸ್ಲಿಮರ “ಅದೃಶ್ಯ ವಿಭಜನೆಯನ್ನು” ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಆಯ್ದ ಕೆಲವರಿಗೆ ಮಾತ್ರ ಪೌರತ್ವ ನೀಡುವುದು ದೇಶದಲ್ಲಿ ಧಾರ್ಮಿಕ ಯುದ್ಧಕ್ಕೆ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆಯೇ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪ್ರಜೆಗಳಾಗಲು ಸುಲಭವಾಗುವಂತೆ ಆರು ದಶಕಗಳಷ್ಟು ಹಳೆಯದಾದ ಕಾನೂನನ್ನು ಪೌರತ್ವ ತಿದ್ದುಪಡಿ ಮಸೂದೆ ಯತ್ನಿಸಿದೆ. ಅನೇಕ ವಿರೋಧ ಪಕ್ಷಗಳು ಪ್ರಸ್ತಾವಿತ ಕಾನೂನನ್ನು ತಾರತಮ್ಯವೆಂದು ಕರೆಯುತ್ತವೆ ಮತ್ತು ಇದು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಜಾತ್ಯತೀತತೆಯ ಮೂಲ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿವೆ.

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆಯ ವಿಷಯದಲ್ಲಿನ ವಿರೋಧದಿಂದಾಗಿ ನಾಲ್ಕು ದಶಕಗಳ ಮಿತ್ರಪಕ್ಷವಾದ ಬಿಜೆಪಿಯೊಂದಿಗೆ ಮೈತ್ರಿ ಕೈಬಿಟ್ಟ ಶಿವಸೇನೆ ಮತ್ತು ಅಂತಿಮವಾಗಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಈಗ ವಿರೋಧ ಪಕ್ಷಗಳ ಪೌರತ್ವ ತಿದ್ದುಪಡಿಯ ವಿರೋಧಕ್ಕೆ ಅದು ಕೂಡ ಕೋರಸ್‌ ನೀಡುತ್ತಿದೆ.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯೂ ಈ ಮಸೂದೆಯನ್ನು ತರುತ್ತಿರುವುದು “ಮತ ಬ್ಯಾಂಕ್ ರಾಜಕೀಯ” ಉದ್ದೇಶದಿಂದಲೇ ಹೊರತು ದೇಶದ ಹಿತದೃಷ್ಟಿಯಿಂದಲ್ಲ ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ಈಗ ಸಮಸ್ಯೆಗಳ ಕೊರತೆಯಿಲ್ಲ. ಆದರೆ ಇಂತಹ ಸಮಯದಲ್ಲಿ ಪೌರತ್ವ ತಿದ್ದುಪಡಿಯಂತಹ ಹೊಸದನ್ನು ಆಹ್ವಾನಿಸುತ್ತಿದ್ದೇವೆ. ಮಸೂದೆಯೂ ಕೇಂದ್ರವು ಹಿಂದೂ ಮತ್ತು ಮುಸ್ಲಿಮರ ಅದೃಶ್ಯ ವಿಭಜನೆಯನ್ನು ಮಾಡುತ್ತದೆ ಎಂದು ಶಿವಸೇನೆ ಆರೋಪಿಸಿದೆ.

“ಹಿಂದೂಗಳನ್ನು ಹೊರತುಪಡಿಸಿ ಹಿಂದೂಗಳಿಗೆ ಬೇರೆ ದೇಶವಿಲ್ಲ ಎಂಬುದು ನಿಜ. ಆದರೆ ಅಕ್ರಮ ವಲಸಿಗರಲ್ಲಿ ಹಿಂದೂಗಳನ್ನು ಮಾತ್ರ ಸ್ವೀಕರಿಸುವ ಮೂಲಕ ಅದು ದೇಶದಲ್ಲಿ ಧಾರ್ಮಿಕ ಯುದ್ಧದ ಪ್ರಚೋದನೆಯಾಗಬಹುದೇ?” ಎಂದು ಶಿವಸೇನೆ ಪ್ರಶ್ನಿಸಿದೆ.

ಲೋಕಸಭೆಯಲ್ಲಿ 18 ಸಂಸದರನ್ನು ಹೊಂದಿರುವ ಶಿವಸೇನೆ, ಈಶಾನ್ಯ ಪ್ರದೇಶದ ಹೆಚ್ಚಿನ ರಾಜ್ಯಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ಮಸೂದೆಯನ್ನು ದೀರ್ಘಕಾಲ ವಿರೋಧಿಸಿವೆ ಎಂಬ ಉಹಾಹರಣೆಯನ್ನು ನೀಡಿದೆ.

ಅದೇ ಸಮಯದಲ್ಲಿ, ಪಾಕಿಸ್ತಾನದಲ್ಲಿ ಹಿಂದೂಗಳಿಗೆ ತೊಂದರೆ ಕೊಡುವಂತೆ, ಹಿಂದೂಗಳಿಗೆ ಹಿಂಸೆ ನೀಡುವ ಕೆಲವು ನೆರೆಯ ರಾಷ್ಟ್ರಗಳ ವಿರುದ್ಧ ಬಲವಾದ ಕ್ರಮ ತೆಗೆದುಕೊಳ್ಳುವಂತೆ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...