Homeಮುಖಪುಟ’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

- Advertisement -
- Advertisement -

ಮಧ್ಯಪ್ರದೇಶದ ಪ್ರಸಿದ್ಧ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಅವರು ಗಣರಾಜ್ಯೋತ್ಸವದಂದು ’ತಿಥುರ್ತಾ ಗಣತಂತ್ರ್ ಔರ್ ಭೀಗ್ತಿ ಸ್ವತಂತ್ರ್’ (ನಡುಗುತ್ತಿರುವ ಗಣತಂತ್ರ ಮತ್ತು ಸೊರಗುತ್ತಿರುವ ಸ್ವಾತಂತ್ರ್ಯ ದಿವಸ) ಎಂಬ ಶೀರ್ಷಿಕೆಯ ಕಿರು ಪ್ರಬಂಧವನ್ನು ಬರೆದಿದ್ದಾರೆ. ಇದರಲ್ಲಿ ’ನಮ್ಮ ಗಣರಾಜ್ಯ ದಿನ ನಡುಗುತ್ತಿದೆ, ಸ್ವಾತಂತ್ರ್ಯ ದಿನ ಸೊರಗುತ್ತಿದೆ’ ಎಂದು ಅವರು ಪ್ರತಿಪಾದಿಸುತ್ತಾರೆ.

ಈ ರಾಷ್ಟ್ರೀಯ ದಿನಗಳು ಮತ್ತು ಅಧಿಕೃತ ರಜಾದಿನಗಳ ಹಿನ್ನೆಲೆಯಲ್ಲಿ ಪಾರ್ಸಾಯಿ ಈ ವಿಡಂಬನೆ ಬರೆದಿದ್ದಾರೆ. ದೆಹಲಿಯಲ್ಲೆ ನಡೆದ ಗಣರಾಜ್ಯೋತ್ಸವದ ಸರ್ಕಾರಿ ಕಾರ್ಯಕ್ರಮದ ಮೆರವಣಿಗೆಯ ವಾತಾವರಣವನ್ನು ಪಾರ್ಸಾಯಿ ವಿವರಿಸಿದ್ದಾರೆ. ರೇಡಿಯೊ ಅನೌನ್ಸರ್ (ಉದ್ಘೋಷಕಿ), ’ಜೋರಾಗಿ ಚಪ್ಪಾಳೆ ಕೇಳಿಸುತ್ತಿವೆ’ ಎಂದು ವಿವರಿಸುವುದನ್ನು ಲೇಖಕ ಕೇಳಿಸಿಕೊಳ್ಳುತ್ತಾರೆ. ಆದರೆ ಪಾರ್ಸಾಯ್‌ಗೆ ಆ ಚಪ್ಪಾಳೆಗಳು ಎಲ್ಲಿಂದ ಬರುತ್ತವೆ ಎಂದು ನೋಡಲು/ತಿಳಿಯಲು ಸಾಧ್ಯವಾಗುವುದಿಲ್ಲ. ಓವರ್‌ಕೋಟ್ ಧರಿಸಿ, ಕುರ್ಚಿಗಳ ಮೇಲೆ ಕುಳಿತ ಪ್ರೇಕ್ಷಕರಿಂದ ಈ ಚಪ್ಪಾಳೆಗಳು ಬರುತ್ತಿಲ್ಲ. ಕೈ ಬೆಚ್ಚಗಾಗಲು ಓವರ್‌ಕೋಟ್ ಪಾಕೆಟ್‌ಗಳಿಲ್ಲದ, ನೆಲದ ಮೇಲೆ ಕುಳಿತಿರುವ ಜನರ ನಿರಂತರ ಚಪ್ಪಾಳೆಯಿಂದ ಈ ಶಬ್ದ ಬರುತ್ತಿದೆ. ಈ ನಡುಗುವ ಕೈಗಳ ಚಪ್ಪಾಳೆಯನ್ನು ಗಣತಂತ್ರವು ಹಿಡಿದಿಟ್ಟುಕೊಂಡಿದೆ ಎಂದು ತೋರುತ್ತದೆ.

ಭಾರತದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ತೀಕ್ಷ್ಣ ವಿಡಂಬನೆ ಮತ್ತು ವ್ಯಾಖ್ಯಾನಕ್ಕೆ ಹೆಸರುವಾಸಿಯಾದ ಪಾರ್ಸಾಯಿ ವಸ್ತುಸ್ಥಿತಿಯನ್ನು ಬಿಂಬಿಸಿದ್ದಾರೆ. ರಾಜಕೀಯ ಪಕ್ಷಗಳು ಮತ್ತು ಅವುಗಳ ಪುನರಾವರ್ತಿತ ಭರವಸೆಗಳಿಂದ ಮತ್ತೆ ಮತ್ತೆ ಮೂರ್ಖರಾಗುವ ಜನರನ್ನು ಸಹ ಅವರು ಟೀಕಿಸಿದ್ದಾರೆ. ಬಹುಷಃ ಪಾರ್ಸಾಯಿ ಹೇಳಿದಂತೆ, ಚಪ್ಪಾಳೆ ಹೊಡಿ ಯುತ್ತಿರುವ ಕೈಗಳ ಶಾಖದ ಹೊರತಾಗಿ ಜನರ ಬಳಿ ಏನೂ ಇಲ್ಲ.

ಚಳವಳಿಯ ಬೆಂಕಿ

ಪ್ರತಿಯೊಬ್ಬ ಸಿನಿಕ ವ್ಯಕ್ತಿಯ ಹಿಂದೆ ಒಬ್ಬ ನಿರಾಶೆಗೊಂಡ ಆದರ್ಶವಾದಿ ಇರುತ್ತಾನೆ

– ಜಾರ್ಜ್ ಕ್ಯಾರ್ಲಿನ್.

ಪರ್ಸಾಯಿ ಅವರ ವಿಡಂಬನೆಯು ಜಯಪ್ರಕಾಶ್ ನಾರಾಯಣರು ನೀಡಿದ್ದ ಭರವಸೆಗಳ ವೈಫಲ್ಯ ಮತ್ತು ಲೋಹಿಯಾವಾದಿ ಚಳವಳಿಯಿಂದಾದ ನಿರಾಸೆಯಿಂದ ಹುಟ್ಟುತ್ತದೆ.

ರೈತ ಹೋರಾಟವನ್ನು ನೋಡಲು ಅವರು ಬದುಕಿರಬೇಕಿತ್ತೆಂದು ನನಗೆಷ್ಟು ಅನ್ನಿಸುತ್ತಿದೆ ನೋಡಿ.
ಅವರಂತಹ ಸಿನಿಕ ವ್ಯಕ್ತಿಯನ್ನು ಅದು ಜನಶಕ್ತಿಯ ಮೇಲೆ ಭರವಸೆಯಿಟ್ಟಿರುವ ವ್ಯಕ್ತಿಯನ್ನಾಗಿ ಪರಿವರ್ತಿಸುತ್ತಿತ್ತು.

ಮಾಸ್ಟರ್‌ಸ್ಟ್ರೋಕ್

ದೆಹಲಿಯಲ್ಲಿ ಇಳಿಯುವ ಮುಂಚೆ ಕುಟುಂಬ ಮತ್ತು ಸ್ನೇಹಿತರು ದೆಹಲಿಯ ಚಳವಳಿಯ ಕುರಿತು ಮತ್ತು ಸರ್ಕಾರ ಹಾಗೂ ಚಳವಳಿಕಾರರಿಂದ ಉಂಟಾಗಬಹುದಾದ ಹಿಂಸೆಯ ಕುರಿತು ಎಚ್ಚರಿಸಿದ್ದರು. ದೆಹಲಿಯ ಚಳಿಯು ದಿನೇ ದಿನೇ ಹೆಚ್ಚೆಚ್ಚು ಕೊರೆಯುತ್ತಿದ್ದು, ಪ್ರತೀ ವರ್ಷ 20-40-50 ವರ್ಷಗಳ ದಾಖಲೆಯನ್ನು ಮುರಿಯುತ್ತಲೇ ಇದೆ. ನಾನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಿದ್ಧಳಾಗಿಯೇ ಬಂದಿದ್ದೆ. ಸಿಂಘು ಗಡಿಯಲ್ಲಿ ಬೆಳಿಗಿನ ಚಳಿಯು ಮಂಜಿನ ಕಾರಣದಿಂದ ಇನ್ನೂ ತೀವ್ರವಾಗಿತ್ತು. ಸಿಂಘು ಗಡಿಯ ಪ್ರವೇಶದಲ್ಲಿ ವಿಪರೀತವಾಗಿ ನಿಯೋಜಿಸಲಾಗಿದ್ದ ಪೊಲೀಸ್ ಮತ್ತು ಮೀಸಲುಪಡೆಯು ಪ್ರತಿಭಟನಾಕಾರರನ್ನು ಸದೆಬಡಿಯಲು ದೆಹಲಿ ಪೊಲೀಸರ ಕುಪ್ರಸಿದ್ಧ ಆಯುಧಗಳಾದ ಜಲಫಿರಂಗಿ, ಲಾಠಿಗಳ ಚಿತ್ರಣವನ್ನು ಕಣ್ಣ ಮುಂದೆ ತಂದಿತು.

ಆ ಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ನನ್ನೊಳಗೆ ಭಯವೂ ಪ್ರವೇಶಿಸಿತು. ಆದರೆ, ಇನ್ನಷ್ಟು ಒಳಗೆ ಹೋದಂತೆ ರೈತರ ಬೆಚ್ಚಗಿನ ನಡವಳಿಕೆಯಿಂದ ಚಳಿಯು ಮಾಯವಾಯಿತು. ಈ ರೈತರು 60 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ಇಲ್ಲಿದ್ದು ಕಟ್ಟಿರುವ ಚಳವಳಿಯು ಇನ್ನೂ ಎಷ್ಟೋ ಚಳವಳಿಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ನಮ್ಮ ಮೊದಲ ಅನಿಸಿಕೆಯು ಅದುವರೆಗೆ ಮನದಲ್ಲಿ ಮೂಡಿರುವ ಪೂರ್ವಗ್ರಹಗಳಿಂದ ರೂಪುಗೊಳ್ಳುತ್ತದೆ ಮತ್ತು ಪಂಜಾಬಿನ ಕುರಿತು ಅಂತಹವು ಸಾಕಷ್ಟಿವೆ. ಪಂಜಾಬಿನ ಸಂಪತ್ತು ಮತ್ತು ಮಹಿಳೆಯರ ಕುರಿತಂತೆ ಇರುವ ಪಾಪ್ ಹಾಡುಗಳು ಮತ್ತು ರ್‍ಯಾಪ್ ಸಂಗೀತವು ಬಹಳ ಸಾಮಾನ್ಯ. ಆದರೆ ಈ ಚಳವಳಿಯು ವಿದೇಶದಿಂದ ಬಂದ ಸಂಪತ್ತು ಮತ್ತು ಉಪಭೋಗಿತನದಲ್ಲಿ ಬಹುಕಾಲ ಮುಳುಗಿದ್ದ ಪಂಜಾಬಿನ ಇನ್ನೊಂದು ಮುಖದ ಪರಿಚಯವನ್ನು ನಮಗೆ ಮಾಡಿಕೊಡುತ್ತದೆ. ಬಹುತೇಕ ಕುಟುಂಬಗಳ ಒಬ್ಬ ಸದಸ್ಯ ವಿದೇಶದಲ್ಲಿದ್ದು, ಇನ್ನೊಬ್ಬರು ಕೃಷಿ ಮಾಡುತ್ತಿರುವುದನ್ನು ನೀವು ನೋಡಬಹುದು.

ಈ ಚಳವಳಿಯು ಪಂಜಾಬನ್ನು ಎಷ್ಟರಮಟ್ಟಿಗೆ ಬಡಿದೆಬ್ಬಿಸಿದೆಯೆಂದರೆ, ತಪ್ಪುದಾರಿಗೆ ಹೋಗಿರುವವರನ್ನೂ ಸರಿದಾರಿಗೆ ಕರೆತರುವ ರೀತಿಯ ಬದಲಾವಣೆಗೆ ಕಾರಣವಾಗಿ, ಸರ್ವರ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲಿದೆ. ಪ್ರತೀ ಮೂಲೆಗೂ ಏನೋ ಒಂದು ಸೌಲಭ್ಯ ಕಲ್ಪಿಸುವ ಜನರಿದ್ದಾರೆ. ಅದು ಊಟದ ಮನೆಯಾಗಿರಬಹುದು, ಶೂ ಪಾಲಿಷ್, ಕಾಲಿನ ಮಸಾಜ್, ಹೊದಿಕೆಗಳು, ಟೆಂಟುಗಳು ಇತ್ಯಾದಿ ಇತ್ಯಾದಿ. ನೀವು ದೂರದ ಊರಿಂದ ಹೋರಾಟವನ್ನು ಬೆಂಬಲಿಸಲು ಬಂದಿದ್ದೀರೆಂದು ಗೊತ್ತಾದರೆ ಇಲ್ಲಿನ ಜನರು ಬಹಳ ಸಂತಸಗೊಳ್ಳುತ್ತಾರೆ.
ಹಿಂದೆಂದೂ ಹೋರಾಟದಲ್ಲಿ ಪಾಲ್ಗೊಂಡ ಅನುಭವವಿಲ್ಲದ ರೈತರು ಈ ಸಾರಿಯ ಹೋರಾಟದಲ್ಲಿ ಸೇರಿಕೊಂಡು ಸಂಗಾತಿಗಳು, ಸ್ನೇಹಿತರು, ಕುಟುಂಬಸ್ಥರೇ ಆಗಿ ಹೋಗಿದ್ದಾರೆ. ಈ ಆಂದೋಲನದಲ್ಲಿ ಅವರು ಹೊಸ ಮನುಷ್ಯರೇ ಆಗಿದ್ದಾರೆ. ಕೆನಡಾಕ್ಕೆ ಹೋಗುವುದಕ್ಕಿಂತ ಸಾರ್ಥಕವಾದ ಹೊಸ ಬದುಕು ಇಲ್ಲಿನ ಬಾಂಧವ್ಯದಲ್ಲಿದೆ ಎನ್ನುವಂತಾಗಿದೆ. ಸಮಾಜದ ಕುರಿತಾದ ವಿಶೇಷ ಚಿಂತನೆಯ ಅಗತ್ಯವಿಲ್ಲದಂತೆ ಗಂಡು ಹೆಣ್ಣಿನ ಪಾತ್ರಗಳಲ್ಲೂ ನಿಧಾನದ ಬದಲಾವಣೆ ಕಾಣಸಿಗುತ್ತದೆ. ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುತ್ತಾ ಗಂಡು ಹೆಣ್ಣುಗಳಿಬ್ಬರೂ ಒಟ್ಟಿಗೆ ಅಡಿಗೆ ಮಾಡುತ್ತಾರೆ.

ಪಂಜಾಬ್ ಮತ್ತು ಹರಿಯಾಣಗಳಲ್ಲಿ ನಿರುದ್ಯೋಗ ಹೆಚ್ಚಾಗಿರುವುದು ಹಾಗೂ ವಿಶ್ವವಿದ್ಯಾಲಯಗಳ ಖಾಸಗೀಕರಣದ ಕುರಿತು ಚರ್ಚಿಸುವ ವಿದ್ಯಾರ್ಥಿಗಳು ಈ ಹೋರಾಟದ ನಂತರ ಮೂಡಿಬರುವ ಹೊಸ ಹೋರಾಟಗಳ ಕುರಿತು ಭರವಸೆಯಿಂದ ಚರ್ಚಿಸುತ್ತಾರೆ. ಚೆ, ಕ್ಯಾಸ್ಟ್ರೋ ಮತ್ತು ಚೇತನ್ ಭಗತ್‌ರನ್ನೂ ಅವರಲ್ಲಿ ಓದುತ್ತಿದ್ದಾರೆ. ಸಂಜೆಯ ಚಹಾ ಮತ್ತು ತಡರಾತ್ರಿಯವರೆಗಿನ ಚರ್ಚೆಗಳು ದೇಶವನ್ನು ಕಾಡುತ್ತಿರುವ ಸಂಗತಿಗಳು ಮತ್ತು ಅಸಮಾನತೆ, ಜಾತಿ, ಜೆಂಡರ್‌ಗಳ ಸಂಕೋಲೆಗಳನ್ನು ಒಡೆದು ಅವರವರ ಹಕ್ಕುಗಳನ್ನು ಪಡೆಯುವ ಬಗ್ಗೆ ನಡೆಯುತ್ತವೆ.

ಇಂದು ನಡುಗುತ್ತಿರುವ ಗಣರಾಜ್ಯದಲ್ಲಿ ಜನರು ಚಪ್ಪಾಳೆಗಳ ಮೂಲಕ ಬೆಚ್ಚಗಾಗುತ್ತಿಲ್ಲ; ಬದಲಿಗೆ ಅವರ ಜಠರದಲ್ಲಿ ಉರಿಯುತ್ತಿರುವ ಬೆಂಕಿ ಮತ್ತು ಹೃದಯದ ಬೆಚ್ಚಗಿನ ಭಾವನೆಗಳು ಬೆಚ್ಚಗಾಗಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...