Homeಮುಖಪುಟ’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

- Advertisement -
- Advertisement -

ಮಧ್ಯಪ್ರದೇಶದ ಪ್ರಸಿದ್ಧ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಅವರು ಗಣರಾಜ್ಯೋತ್ಸವದಂದು ’ತಿಥುರ್ತಾ ಗಣತಂತ್ರ್ ಔರ್ ಭೀಗ್ತಿ ಸ್ವತಂತ್ರ್’ (ನಡುಗುತ್ತಿರುವ ಗಣತಂತ್ರ ಮತ್ತು ಸೊರಗುತ್ತಿರುವ ಸ್ವಾತಂತ್ರ್ಯ ದಿವಸ) ಎಂಬ ಶೀರ್ಷಿಕೆಯ ಕಿರು ಪ್ರಬಂಧವನ್ನು ಬರೆದಿದ್ದಾರೆ. ಇದರಲ್ಲಿ ’ನಮ್ಮ ಗಣರಾಜ್ಯ ದಿನ ನಡುಗುತ್ತಿದೆ, ಸ್ವಾತಂತ್ರ್ಯ ದಿನ ಸೊರಗುತ್ತಿದೆ’ ಎಂದು ಅವರು ಪ್ರತಿಪಾದಿಸುತ್ತಾರೆ.

ಈ ರಾಷ್ಟ್ರೀಯ ದಿನಗಳು ಮತ್ತು ಅಧಿಕೃತ ರಜಾದಿನಗಳ ಹಿನ್ನೆಲೆಯಲ್ಲಿ ಪಾರ್ಸಾಯಿ ಈ ವಿಡಂಬನೆ ಬರೆದಿದ್ದಾರೆ. ದೆಹಲಿಯಲ್ಲೆ ನಡೆದ ಗಣರಾಜ್ಯೋತ್ಸವದ ಸರ್ಕಾರಿ ಕಾರ್ಯಕ್ರಮದ ಮೆರವಣಿಗೆಯ ವಾತಾವರಣವನ್ನು ಪಾರ್ಸಾಯಿ ವಿವರಿಸಿದ್ದಾರೆ. ರೇಡಿಯೊ ಅನೌನ್ಸರ್ (ಉದ್ಘೋಷಕಿ), ’ಜೋರಾಗಿ ಚಪ್ಪಾಳೆ ಕೇಳಿಸುತ್ತಿವೆ’ ಎಂದು ವಿವರಿಸುವುದನ್ನು ಲೇಖಕ ಕೇಳಿಸಿಕೊಳ್ಳುತ್ತಾರೆ. ಆದರೆ ಪಾರ್ಸಾಯ್‌ಗೆ ಆ ಚಪ್ಪಾಳೆಗಳು ಎಲ್ಲಿಂದ ಬರುತ್ತವೆ ಎಂದು ನೋಡಲು/ತಿಳಿಯಲು ಸಾಧ್ಯವಾಗುವುದಿಲ್ಲ. ಓವರ್‌ಕೋಟ್ ಧರಿಸಿ, ಕುರ್ಚಿಗಳ ಮೇಲೆ ಕುಳಿತ ಪ್ರೇಕ್ಷಕರಿಂದ ಈ ಚಪ್ಪಾಳೆಗಳು ಬರುತ್ತಿಲ್ಲ. ಕೈ ಬೆಚ್ಚಗಾಗಲು ಓವರ್‌ಕೋಟ್ ಪಾಕೆಟ್‌ಗಳಿಲ್ಲದ, ನೆಲದ ಮೇಲೆ ಕುಳಿತಿರುವ ಜನರ ನಿರಂತರ ಚಪ್ಪಾಳೆಯಿಂದ ಈ ಶಬ್ದ ಬರುತ್ತಿದೆ. ಈ ನಡುಗುವ ಕೈಗಳ ಚಪ್ಪಾಳೆಯನ್ನು ಗಣತಂತ್ರವು ಹಿಡಿದಿಟ್ಟುಕೊಂಡಿದೆ ಎಂದು ತೋರುತ್ತದೆ.

ಭಾರತದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ತೀಕ್ಷ್ಣ ವಿಡಂಬನೆ ಮತ್ತು ವ್ಯಾಖ್ಯಾನಕ್ಕೆ ಹೆಸರುವಾಸಿಯಾದ ಪಾರ್ಸಾಯಿ ವಸ್ತುಸ್ಥಿತಿಯನ್ನು ಬಿಂಬಿಸಿದ್ದಾರೆ. ರಾಜಕೀಯ ಪಕ್ಷಗಳು ಮತ್ತು ಅವುಗಳ ಪುನರಾವರ್ತಿತ ಭರವಸೆಗಳಿಂದ ಮತ್ತೆ ಮತ್ತೆ ಮೂರ್ಖರಾಗುವ ಜನರನ್ನು ಸಹ ಅವರು ಟೀಕಿಸಿದ್ದಾರೆ. ಬಹುಷಃ ಪಾರ್ಸಾಯಿ ಹೇಳಿದಂತೆ, ಚಪ್ಪಾಳೆ ಹೊಡಿ ಯುತ್ತಿರುವ ಕೈಗಳ ಶಾಖದ ಹೊರತಾಗಿ ಜನರ ಬಳಿ ಏನೂ ಇಲ್ಲ.

ಚಳವಳಿಯ ಬೆಂಕಿ

ಪ್ರತಿಯೊಬ್ಬ ಸಿನಿಕ ವ್ಯಕ್ತಿಯ ಹಿಂದೆ ಒಬ್ಬ ನಿರಾಶೆಗೊಂಡ ಆದರ್ಶವಾದಿ ಇರುತ್ತಾನೆ

– ಜಾರ್ಜ್ ಕ್ಯಾರ್ಲಿನ್.

ಪರ್ಸಾಯಿ ಅವರ ವಿಡಂಬನೆಯು ಜಯಪ್ರಕಾಶ್ ನಾರಾಯಣರು ನೀಡಿದ್ದ ಭರವಸೆಗಳ ವೈಫಲ್ಯ ಮತ್ತು ಲೋಹಿಯಾವಾದಿ ಚಳವಳಿಯಿಂದಾದ ನಿರಾಸೆಯಿಂದ ಹುಟ್ಟುತ್ತದೆ.

ರೈತ ಹೋರಾಟವನ್ನು ನೋಡಲು ಅವರು ಬದುಕಿರಬೇಕಿತ್ತೆಂದು ನನಗೆಷ್ಟು ಅನ್ನಿಸುತ್ತಿದೆ ನೋಡಿ.
ಅವರಂತಹ ಸಿನಿಕ ವ್ಯಕ್ತಿಯನ್ನು ಅದು ಜನಶಕ್ತಿಯ ಮೇಲೆ ಭರವಸೆಯಿಟ್ಟಿರುವ ವ್ಯಕ್ತಿಯನ್ನಾಗಿ ಪರಿವರ್ತಿಸುತ್ತಿತ್ತು.

ಮಾಸ್ಟರ್‌ಸ್ಟ್ರೋಕ್

ದೆಹಲಿಯಲ್ಲಿ ಇಳಿಯುವ ಮುಂಚೆ ಕುಟುಂಬ ಮತ್ತು ಸ್ನೇಹಿತರು ದೆಹಲಿಯ ಚಳವಳಿಯ ಕುರಿತು ಮತ್ತು ಸರ್ಕಾರ ಹಾಗೂ ಚಳವಳಿಕಾರರಿಂದ ಉಂಟಾಗಬಹುದಾದ ಹಿಂಸೆಯ ಕುರಿತು ಎಚ್ಚರಿಸಿದ್ದರು. ದೆಹಲಿಯ ಚಳಿಯು ದಿನೇ ದಿನೇ ಹೆಚ್ಚೆಚ್ಚು ಕೊರೆಯುತ್ತಿದ್ದು, ಪ್ರತೀ ವರ್ಷ 20-40-50 ವರ್ಷಗಳ ದಾಖಲೆಯನ್ನು ಮುರಿಯುತ್ತಲೇ ಇದೆ. ನಾನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಿದ್ಧಳಾಗಿಯೇ ಬಂದಿದ್ದೆ. ಸಿಂಘು ಗಡಿಯಲ್ಲಿ ಬೆಳಿಗಿನ ಚಳಿಯು ಮಂಜಿನ ಕಾರಣದಿಂದ ಇನ್ನೂ ತೀವ್ರವಾಗಿತ್ತು. ಸಿಂಘು ಗಡಿಯ ಪ್ರವೇಶದಲ್ಲಿ ವಿಪರೀತವಾಗಿ ನಿಯೋಜಿಸಲಾಗಿದ್ದ ಪೊಲೀಸ್ ಮತ್ತು ಮೀಸಲುಪಡೆಯು ಪ್ರತಿಭಟನಾಕಾರರನ್ನು ಸದೆಬಡಿಯಲು ದೆಹಲಿ ಪೊಲೀಸರ ಕುಪ್ರಸಿದ್ಧ ಆಯುಧಗಳಾದ ಜಲಫಿರಂಗಿ, ಲಾಠಿಗಳ ಚಿತ್ರಣವನ್ನು ಕಣ್ಣ ಮುಂದೆ ತಂದಿತು.

ಆ ಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ನನ್ನೊಳಗೆ ಭಯವೂ ಪ್ರವೇಶಿಸಿತು. ಆದರೆ, ಇನ್ನಷ್ಟು ಒಳಗೆ ಹೋದಂತೆ ರೈತರ ಬೆಚ್ಚಗಿನ ನಡವಳಿಕೆಯಿಂದ ಚಳಿಯು ಮಾಯವಾಯಿತು. ಈ ರೈತರು 60 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ಇಲ್ಲಿದ್ದು ಕಟ್ಟಿರುವ ಚಳವಳಿಯು ಇನ್ನೂ ಎಷ್ಟೋ ಚಳವಳಿಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ನಮ್ಮ ಮೊದಲ ಅನಿಸಿಕೆಯು ಅದುವರೆಗೆ ಮನದಲ್ಲಿ ಮೂಡಿರುವ ಪೂರ್ವಗ್ರಹಗಳಿಂದ ರೂಪುಗೊಳ್ಳುತ್ತದೆ ಮತ್ತು ಪಂಜಾಬಿನ ಕುರಿತು ಅಂತಹವು ಸಾಕಷ್ಟಿವೆ. ಪಂಜಾಬಿನ ಸಂಪತ್ತು ಮತ್ತು ಮಹಿಳೆಯರ ಕುರಿತಂತೆ ಇರುವ ಪಾಪ್ ಹಾಡುಗಳು ಮತ್ತು ರ್‍ಯಾಪ್ ಸಂಗೀತವು ಬಹಳ ಸಾಮಾನ್ಯ. ಆದರೆ ಈ ಚಳವಳಿಯು ವಿದೇಶದಿಂದ ಬಂದ ಸಂಪತ್ತು ಮತ್ತು ಉಪಭೋಗಿತನದಲ್ಲಿ ಬಹುಕಾಲ ಮುಳುಗಿದ್ದ ಪಂಜಾಬಿನ ಇನ್ನೊಂದು ಮುಖದ ಪರಿಚಯವನ್ನು ನಮಗೆ ಮಾಡಿಕೊಡುತ್ತದೆ. ಬಹುತೇಕ ಕುಟುಂಬಗಳ ಒಬ್ಬ ಸದಸ್ಯ ವಿದೇಶದಲ್ಲಿದ್ದು, ಇನ್ನೊಬ್ಬರು ಕೃಷಿ ಮಾಡುತ್ತಿರುವುದನ್ನು ನೀವು ನೋಡಬಹುದು.

ಈ ಚಳವಳಿಯು ಪಂಜಾಬನ್ನು ಎಷ್ಟರಮಟ್ಟಿಗೆ ಬಡಿದೆಬ್ಬಿಸಿದೆಯೆಂದರೆ, ತಪ್ಪುದಾರಿಗೆ ಹೋಗಿರುವವರನ್ನೂ ಸರಿದಾರಿಗೆ ಕರೆತರುವ ರೀತಿಯ ಬದಲಾವಣೆಗೆ ಕಾರಣವಾಗಿ, ಸರ್ವರ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲಿದೆ. ಪ್ರತೀ ಮೂಲೆಗೂ ಏನೋ ಒಂದು ಸೌಲಭ್ಯ ಕಲ್ಪಿಸುವ ಜನರಿದ್ದಾರೆ. ಅದು ಊಟದ ಮನೆಯಾಗಿರಬಹುದು, ಶೂ ಪಾಲಿಷ್, ಕಾಲಿನ ಮಸಾಜ್, ಹೊದಿಕೆಗಳು, ಟೆಂಟುಗಳು ಇತ್ಯಾದಿ ಇತ್ಯಾದಿ. ನೀವು ದೂರದ ಊರಿಂದ ಹೋರಾಟವನ್ನು ಬೆಂಬಲಿಸಲು ಬಂದಿದ್ದೀರೆಂದು ಗೊತ್ತಾದರೆ ಇಲ್ಲಿನ ಜನರು ಬಹಳ ಸಂತಸಗೊಳ್ಳುತ್ತಾರೆ.
ಹಿಂದೆಂದೂ ಹೋರಾಟದಲ್ಲಿ ಪಾಲ್ಗೊಂಡ ಅನುಭವವಿಲ್ಲದ ರೈತರು ಈ ಸಾರಿಯ ಹೋರಾಟದಲ್ಲಿ ಸೇರಿಕೊಂಡು ಸಂಗಾತಿಗಳು, ಸ್ನೇಹಿತರು, ಕುಟುಂಬಸ್ಥರೇ ಆಗಿ ಹೋಗಿದ್ದಾರೆ. ಈ ಆಂದೋಲನದಲ್ಲಿ ಅವರು ಹೊಸ ಮನುಷ್ಯರೇ ಆಗಿದ್ದಾರೆ. ಕೆನಡಾಕ್ಕೆ ಹೋಗುವುದಕ್ಕಿಂತ ಸಾರ್ಥಕವಾದ ಹೊಸ ಬದುಕು ಇಲ್ಲಿನ ಬಾಂಧವ್ಯದಲ್ಲಿದೆ ಎನ್ನುವಂತಾಗಿದೆ. ಸಮಾಜದ ಕುರಿತಾದ ವಿಶೇಷ ಚಿಂತನೆಯ ಅಗತ್ಯವಿಲ್ಲದಂತೆ ಗಂಡು ಹೆಣ್ಣಿನ ಪಾತ್ರಗಳಲ್ಲೂ ನಿಧಾನದ ಬದಲಾವಣೆ ಕಾಣಸಿಗುತ್ತದೆ. ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುತ್ತಾ ಗಂಡು ಹೆಣ್ಣುಗಳಿಬ್ಬರೂ ಒಟ್ಟಿಗೆ ಅಡಿಗೆ ಮಾಡುತ್ತಾರೆ.

ಪಂಜಾಬ್ ಮತ್ತು ಹರಿಯಾಣಗಳಲ್ಲಿ ನಿರುದ್ಯೋಗ ಹೆಚ್ಚಾಗಿರುವುದು ಹಾಗೂ ವಿಶ್ವವಿದ್ಯಾಲಯಗಳ ಖಾಸಗೀಕರಣದ ಕುರಿತು ಚರ್ಚಿಸುವ ವಿದ್ಯಾರ್ಥಿಗಳು ಈ ಹೋರಾಟದ ನಂತರ ಮೂಡಿಬರುವ ಹೊಸ ಹೋರಾಟಗಳ ಕುರಿತು ಭರವಸೆಯಿಂದ ಚರ್ಚಿಸುತ್ತಾರೆ. ಚೆ, ಕ್ಯಾಸ್ಟ್ರೋ ಮತ್ತು ಚೇತನ್ ಭಗತ್‌ರನ್ನೂ ಅವರಲ್ಲಿ ಓದುತ್ತಿದ್ದಾರೆ. ಸಂಜೆಯ ಚಹಾ ಮತ್ತು ತಡರಾತ್ರಿಯವರೆಗಿನ ಚರ್ಚೆಗಳು ದೇಶವನ್ನು ಕಾಡುತ್ತಿರುವ ಸಂಗತಿಗಳು ಮತ್ತು ಅಸಮಾನತೆ, ಜಾತಿ, ಜೆಂಡರ್‌ಗಳ ಸಂಕೋಲೆಗಳನ್ನು ಒಡೆದು ಅವರವರ ಹಕ್ಕುಗಳನ್ನು ಪಡೆಯುವ ಬಗ್ಗೆ ನಡೆಯುತ್ತವೆ.

ಇಂದು ನಡುಗುತ್ತಿರುವ ಗಣರಾಜ್ಯದಲ್ಲಿ ಜನರು ಚಪ್ಪಾಳೆಗಳ ಮೂಲಕ ಬೆಚ್ಚಗಾಗುತ್ತಿಲ್ಲ; ಬದಲಿಗೆ ಅವರ ಜಠರದಲ್ಲಿ ಉರಿಯುತ್ತಿರುವ ಬೆಂಕಿ ಮತ್ತು ಹೃದಯದ ಬೆಚ್ಚಗಿನ ಭಾವನೆಗಳು ಬೆಚ್ಚಗಾಗಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...