Homeಮುಖಪುಟ’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

- Advertisement -
- Advertisement -

ಮಧ್ಯಪ್ರದೇಶದ ಪ್ರಸಿದ್ಧ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಅವರು ಗಣರಾಜ್ಯೋತ್ಸವದಂದು ’ತಿಥುರ್ತಾ ಗಣತಂತ್ರ್ ಔರ್ ಭೀಗ್ತಿ ಸ್ವತಂತ್ರ್’ (ನಡುಗುತ್ತಿರುವ ಗಣತಂತ್ರ ಮತ್ತು ಸೊರಗುತ್ತಿರುವ ಸ್ವಾತಂತ್ರ್ಯ ದಿವಸ) ಎಂಬ ಶೀರ್ಷಿಕೆಯ ಕಿರು ಪ್ರಬಂಧವನ್ನು ಬರೆದಿದ್ದಾರೆ. ಇದರಲ್ಲಿ ’ನಮ್ಮ ಗಣರಾಜ್ಯ ದಿನ ನಡುಗುತ್ತಿದೆ, ಸ್ವಾತಂತ್ರ್ಯ ದಿನ ಸೊರಗುತ್ತಿದೆ’ ಎಂದು ಅವರು ಪ್ರತಿಪಾದಿಸುತ್ತಾರೆ.

ಈ ರಾಷ್ಟ್ರೀಯ ದಿನಗಳು ಮತ್ತು ಅಧಿಕೃತ ರಜಾದಿನಗಳ ಹಿನ್ನೆಲೆಯಲ್ಲಿ ಪಾರ್ಸಾಯಿ ಈ ವಿಡಂಬನೆ ಬರೆದಿದ್ದಾರೆ. ದೆಹಲಿಯಲ್ಲೆ ನಡೆದ ಗಣರಾಜ್ಯೋತ್ಸವದ ಸರ್ಕಾರಿ ಕಾರ್ಯಕ್ರಮದ ಮೆರವಣಿಗೆಯ ವಾತಾವರಣವನ್ನು ಪಾರ್ಸಾಯಿ ವಿವರಿಸಿದ್ದಾರೆ. ರೇಡಿಯೊ ಅನೌನ್ಸರ್ (ಉದ್ಘೋಷಕಿ), ’ಜೋರಾಗಿ ಚಪ್ಪಾಳೆ ಕೇಳಿಸುತ್ತಿವೆ’ ಎಂದು ವಿವರಿಸುವುದನ್ನು ಲೇಖಕ ಕೇಳಿಸಿಕೊಳ್ಳುತ್ತಾರೆ. ಆದರೆ ಪಾರ್ಸಾಯ್‌ಗೆ ಆ ಚಪ್ಪಾಳೆಗಳು ಎಲ್ಲಿಂದ ಬರುತ್ತವೆ ಎಂದು ನೋಡಲು/ತಿಳಿಯಲು ಸಾಧ್ಯವಾಗುವುದಿಲ್ಲ. ಓವರ್‌ಕೋಟ್ ಧರಿಸಿ, ಕುರ್ಚಿಗಳ ಮೇಲೆ ಕುಳಿತ ಪ್ರೇಕ್ಷಕರಿಂದ ಈ ಚಪ್ಪಾಳೆಗಳು ಬರುತ್ತಿಲ್ಲ. ಕೈ ಬೆಚ್ಚಗಾಗಲು ಓವರ್‌ಕೋಟ್ ಪಾಕೆಟ್‌ಗಳಿಲ್ಲದ, ನೆಲದ ಮೇಲೆ ಕುಳಿತಿರುವ ಜನರ ನಿರಂತರ ಚಪ್ಪಾಳೆಯಿಂದ ಈ ಶಬ್ದ ಬರುತ್ತಿದೆ. ಈ ನಡುಗುವ ಕೈಗಳ ಚಪ್ಪಾಳೆಯನ್ನು ಗಣತಂತ್ರವು ಹಿಡಿದಿಟ್ಟುಕೊಂಡಿದೆ ಎಂದು ತೋರುತ್ತದೆ.

ಭಾರತದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ತೀಕ್ಷ್ಣ ವಿಡಂಬನೆ ಮತ್ತು ವ್ಯಾಖ್ಯಾನಕ್ಕೆ ಹೆಸರುವಾಸಿಯಾದ ಪಾರ್ಸಾಯಿ ವಸ್ತುಸ್ಥಿತಿಯನ್ನು ಬಿಂಬಿಸಿದ್ದಾರೆ. ರಾಜಕೀಯ ಪಕ್ಷಗಳು ಮತ್ತು ಅವುಗಳ ಪುನರಾವರ್ತಿತ ಭರವಸೆಗಳಿಂದ ಮತ್ತೆ ಮತ್ತೆ ಮೂರ್ಖರಾಗುವ ಜನರನ್ನು ಸಹ ಅವರು ಟೀಕಿಸಿದ್ದಾರೆ. ಬಹುಷಃ ಪಾರ್ಸಾಯಿ ಹೇಳಿದಂತೆ, ಚಪ್ಪಾಳೆ ಹೊಡಿ ಯುತ್ತಿರುವ ಕೈಗಳ ಶಾಖದ ಹೊರತಾಗಿ ಜನರ ಬಳಿ ಏನೂ ಇಲ್ಲ.

ಚಳವಳಿಯ ಬೆಂಕಿ

ಪ್ರತಿಯೊಬ್ಬ ಸಿನಿಕ ವ್ಯಕ್ತಿಯ ಹಿಂದೆ ಒಬ್ಬ ನಿರಾಶೆಗೊಂಡ ಆದರ್ಶವಾದಿ ಇರುತ್ತಾನೆ

– ಜಾರ್ಜ್ ಕ್ಯಾರ್ಲಿನ್.

ಪರ್ಸಾಯಿ ಅವರ ವಿಡಂಬನೆಯು ಜಯಪ್ರಕಾಶ್ ನಾರಾಯಣರು ನೀಡಿದ್ದ ಭರವಸೆಗಳ ವೈಫಲ್ಯ ಮತ್ತು ಲೋಹಿಯಾವಾದಿ ಚಳವಳಿಯಿಂದಾದ ನಿರಾಸೆಯಿಂದ ಹುಟ್ಟುತ್ತದೆ.

ರೈತ ಹೋರಾಟವನ್ನು ನೋಡಲು ಅವರು ಬದುಕಿರಬೇಕಿತ್ತೆಂದು ನನಗೆಷ್ಟು ಅನ್ನಿಸುತ್ತಿದೆ ನೋಡಿ.
ಅವರಂತಹ ಸಿನಿಕ ವ್ಯಕ್ತಿಯನ್ನು ಅದು ಜನಶಕ್ತಿಯ ಮೇಲೆ ಭರವಸೆಯಿಟ್ಟಿರುವ ವ್ಯಕ್ತಿಯನ್ನಾಗಿ ಪರಿವರ್ತಿಸುತ್ತಿತ್ತು.

ಮಾಸ್ಟರ್‌ಸ್ಟ್ರೋಕ್

ದೆಹಲಿಯಲ್ಲಿ ಇಳಿಯುವ ಮುಂಚೆ ಕುಟುಂಬ ಮತ್ತು ಸ್ನೇಹಿತರು ದೆಹಲಿಯ ಚಳವಳಿಯ ಕುರಿತು ಮತ್ತು ಸರ್ಕಾರ ಹಾಗೂ ಚಳವಳಿಕಾರರಿಂದ ಉಂಟಾಗಬಹುದಾದ ಹಿಂಸೆಯ ಕುರಿತು ಎಚ್ಚರಿಸಿದ್ದರು. ದೆಹಲಿಯ ಚಳಿಯು ದಿನೇ ದಿನೇ ಹೆಚ್ಚೆಚ್ಚು ಕೊರೆಯುತ್ತಿದ್ದು, ಪ್ರತೀ ವರ್ಷ 20-40-50 ವರ್ಷಗಳ ದಾಖಲೆಯನ್ನು ಮುರಿಯುತ್ತಲೇ ಇದೆ. ನಾನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಿದ್ಧಳಾಗಿಯೇ ಬಂದಿದ್ದೆ. ಸಿಂಘು ಗಡಿಯಲ್ಲಿ ಬೆಳಿಗಿನ ಚಳಿಯು ಮಂಜಿನ ಕಾರಣದಿಂದ ಇನ್ನೂ ತೀವ್ರವಾಗಿತ್ತು. ಸಿಂಘು ಗಡಿಯ ಪ್ರವೇಶದಲ್ಲಿ ವಿಪರೀತವಾಗಿ ನಿಯೋಜಿಸಲಾಗಿದ್ದ ಪೊಲೀಸ್ ಮತ್ತು ಮೀಸಲುಪಡೆಯು ಪ್ರತಿಭಟನಾಕಾರರನ್ನು ಸದೆಬಡಿಯಲು ದೆಹಲಿ ಪೊಲೀಸರ ಕುಪ್ರಸಿದ್ಧ ಆಯುಧಗಳಾದ ಜಲಫಿರಂಗಿ, ಲಾಠಿಗಳ ಚಿತ್ರಣವನ್ನು ಕಣ್ಣ ಮುಂದೆ ತಂದಿತು.

ಆ ಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ನನ್ನೊಳಗೆ ಭಯವೂ ಪ್ರವೇಶಿಸಿತು. ಆದರೆ, ಇನ್ನಷ್ಟು ಒಳಗೆ ಹೋದಂತೆ ರೈತರ ಬೆಚ್ಚಗಿನ ನಡವಳಿಕೆಯಿಂದ ಚಳಿಯು ಮಾಯವಾಯಿತು. ಈ ರೈತರು 60 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ಇಲ್ಲಿದ್ದು ಕಟ್ಟಿರುವ ಚಳವಳಿಯು ಇನ್ನೂ ಎಷ್ಟೋ ಚಳವಳಿಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ನಮ್ಮ ಮೊದಲ ಅನಿಸಿಕೆಯು ಅದುವರೆಗೆ ಮನದಲ್ಲಿ ಮೂಡಿರುವ ಪೂರ್ವಗ್ರಹಗಳಿಂದ ರೂಪುಗೊಳ್ಳುತ್ತದೆ ಮತ್ತು ಪಂಜಾಬಿನ ಕುರಿತು ಅಂತಹವು ಸಾಕಷ್ಟಿವೆ. ಪಂಜಾಬಿನ ಸಂಪತ್ತು ಮತ್ತು ಮಹಿಳೆಯರ ಕುರಿತಂತೆ ಇರುವ ಪಾಪ್ ಹಾಡುಗಳು ಮತ್ತು ರ್‍ಯಾಪ್ ಸಂಗೀತವು ಬಹಳ ಸಾಮಾನ್ಯ. ಆದರೆ ಈ ಚಳವಳಿಯು ವಿದೇಶದಿಂದ ಬಂದ ಸಂಪತ್ತು ಮತ್ತು ಉಪಭೋಗಿತನದಲ್ಲಿ ಬಹುಕಾಲ ಮುಳುಗಿದ್ದ ಪಂಜಾಬಿನ ಇನ್ನೊಂದು ಮುಖದ ಪರಿಚಯವನ್ನು ನಮಗೆ ಮಾಡಿಕೊಡುತ್ತದೆ. ಬಹುತೇಕ ಕುಟುಂಬಗಳ ಒಬ್ಬ ಸದಸ್ಯ ವಿದೇಶದಲ್ಲಿದ್ದು, ಇನ್ನೊಬ್ಬರು ಕೃಷಿ ಮಾಡುತ್ತಿರುವುದನ್ನು ನೀವು ನೋಡಬಹುದು.

ಈ ಚಳವಳಿಯು ಪಂಜಾಬನ್ನು ಎಷ್ಟರಮಟ್ಟಿಗೆ ಬಡಿದೆಬ್ಬಿಸಿದೆಯೆಂದರೆ, ತಪ್ಪುದಾರಿಗೆ ಹೋಗಿರುವವರನ್ನೂ ಸರಿದಾರಿಗೆ ಕರೆತರುವ ರೀತಿಯ ಬದಲಾವಣೆಗೆ ಕಾರಣವಾಗಿ, ಸರ್ವರ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲಿದೆ. ಪ್ರತೀ ಮೂಲೆಗೂ ಏನೋ ಒಂದು ಸೌಲಭ್ಯ ಕಲ್ಪಿಸುವ ಜನರಿದ್ದಾರೆ. ಅದು ಊಟದ ಮನೆಯಾಗಿರಬಹುದು, ಶೂ ಪಾಲಿಷ್, ಕಾಲಿನ ಮಸಾಜ್, ಹೊದಿಕೆಗಳು, ಟೆಂಟುಗಳು ಇತ್ಯಾದಿ ಇತ್ಯಾದಿ. ನೀವು ದೂರದ ಊರಿಂದ ಹೋರಾಟವನ್ನು ಬೆಂಬಲಿಸಲು ಬಂದಿದ್ದೀರೆಂದು ಗೊತ್ತಾದರೆ ಇಲ್ಲಿನ ಜನರು ಬಹಳ ಸಂತಸಗೊಳ್ಳುತ್ತಾರೆ.
ಹಿಂದೆಂದೂ ಹೋರಾಟದಲ್ಲಿ ಪಾಲ್ಗೊಂಡ ಅನುಭವವಿಲ್ಲದ ರೈತರು ಈ ಸಾರಿಯ ಹೋರಾಟದಲ್ಲಿ ಸೇರಿಕೊಂಡು ಸಂಗಾತಿಗಳು, ಸ್ನೇಹಿತರು, ಕುಟುಂಬಸ್ಥರೇ ಆಗಿ ಹೋಗಿದ್ದಾರೆ. ಈ ಆಂದೋಲನದಲ್ಲಿ ಅವರು ಹೊಸ ಮನುಷ್ಯರೇ ಆಗಿದ್ದಾರೆ. ಕೆನಡಾಕ್ಕೆ ಹೋಗುವುದಕ್ಕಿಂತ ಸಾರ್ಥಕವಾದ ಹೊಸ ಬದುಕು ಇಲ್ಲಿನ ಬಾಂಧವ್ಯದಲ್ಲಿದೆ ಎನ್ನುವಂತಾಗಿದೆ. ಸಮಾಜದ ಕುರಿತಾದ ವಿಶೇಷ ಚಿಂತನೆಯ ಅಗತ್ಯವಿಲ್ಲದಂತೆ ಗಂಡು ಹೆಣ್ಣಿನ ಪಾತ್ರಗಳಲ್ಲೂ ನಿಧಾನದ ಬದಲಾವಣೆ ಕಾಣಸಿಗುತ್ತದೆ. ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುತ್ತಾ ಗಂಡು ಹೆಣ್ಣುಗಳಿಬ್ಬರೂ ಒಟ್ಟಿಗೆ ಅಡಿಗೆ ಮಾಡುತ್ತಾರೆ.

ಪಂಜಾಬ್ ಮತ್ತು ಹರಿಯಾಣಗಳಲ್ಲಿ ನಿರುದ್ಯೋಗ ಹೆಚ್ಚಾಗಿರುವುದು ಹಾಗೂ ವಿಶ್ವವಿದ್ಯಾಲಯಗಳ ಖಾಸಗೀಕರಣದ ಕುರಿತು ಚರ್ಚಿಸುವ ವಿದ್ಯಾರ್ಥಿಗಳು ಈ ಹೋರಾಟದ ನಂತರ ಮೂಡಿಬರುವ ಹೊಸ ಹೋರಾಟಗಳ ಕುರಿತು ಭರವಸೆಯಿಂದ ಚರ್ಚಿಸುತ್ತಾರೆ. ಚೆ, ಕ್ಯಾಸ್ಟ್ರೋ ಮತ್ತು ಚೇತನ್ ಭಗತ್‌ರನ್ನೂ ಅವರಲ್ಲಿ ಓದುತ್ತಿದ್ದಾರೆ. ಸಂಜೆಯ ಚಹಾ ಮತ್ತು ತಡರಾತ್ರಿಯವರೆಗಿನ ಚರ್ಚೆಗಳು ದೇಶವನ್ನು ಕಾಡುತ್ತಿರುವ ಸಂಗತಿಗಳು ಮತ್ತು ಅಸಮಾನತೆ, ಜಾತಿ, ಜೆಂಡರ್‌ಗಳ ಸಂಕೋಲೆಗಳನ್ನು ಒಡೆದು ಅವರವರ ಹಕ್ಕುಗಳನ್ನು ಪಡೆಯುವ ಬಗ್ಗೆ ನಡೆಯುತ್ತವೆ.

ಇಂದು ನಡುಗುತ್ತಿರುವ ಗಣರಾಜ್ಯದಲ್ಲಿ ಜನರು ಚಪ್ಪಾಳೆಗಳ ಮೂಲಕ ಬೆಚ್ಚಗಾಗುತ್ತಿಲ್ಲ; ಬದಲಿಗೆ ಅವರ ಜಠರದಲ್ಲಿ ಉರಿಯುತ್ತಿರುವ ಬೆಂಕಿ ಮತ್ತು ಹೃದಯದ ಬೆಚ್ಚಗಿನ ಭಾವನೆಗಳು ಬೆಚ್ಚಗಾಗಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...