Homeಮುಖಪುಟ’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

’ನಡುಗುತ್ತಿರುವ ಗಣತಂತ್ರದಲ್ಲಿ ಆಂದೋಲನದ ಬಿಸಿ’: ಡಾ. ಸ್ವಾತಿ

- Advertisement -
- Advertisement -

ಮಧ್ಯಪ್ರದೇಶದ ಪ್ರಸಿದ್ಧ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಅವರು ಗಣರಾಜ್ಯೋತ್ಸವದಂದು ’ತಿಥುರ್ತಾ ಗಣತಂತ್ರ್ ಔರ್ ಭೀಗ್ತಿ ಸ್ವತಂತ್ರ್’ (ನಡುಗುತ್ತಿರುವ ಗಣತಂತ್ರ ಮತ್ತು ಸೊರಗುತ್ತಿರುವ ಸ್ವಾತಂತ್ರ್ಯ ದಿವಸ) ಎಂಬ ಶೀರ್ಷಿಕೆಯ ಕಿರು ಪ್ರಬಂಧವನ್ನು ಬರೆದಿದ್ದಾರೆ. ಇದರಲ್ಲಿ ’ನಮ್ಮ ಗಣರಾಜ್ಯ ದಿನ ನಡುಗುತ್ತಿದೆ, ಸ್ವಾತಂತ್ರ್ಯ ದಿನ ಸೊರಗುತ್ತಿದೆ’ ಎಂದು ಅವರು ಪ್ರತಿಪಾದಿಸುತ್ತಾರೆ.

ಈ ರಾಷ್ಟ್ರೀಯ ದಿನಗಳು ಮತ್ತು ಅಧಿಕೃತ ರಜಾದಿನಗಳ ಹಿನ್ನೆಲೆಯಲ್ಲಿ ಪಾರ್ಸಾಯಿ ಈ ವಿಡಂಬನೆ ಬರೆದಿದ್ದಾರೆ. ದೆಹಲಿಯಲ್ಲೆ ನಡೆದ ಗಣರಾಜ್ಯೋತ್ಸವದ ಸರ್ಕಾರಿ ಕಾರ್ಯಕ್ರಮದ ಮೆರವಣಿಗೆಯ ವಾತಾವರಣವನ್ನು ಪಾರ್ಸಾಯಿ ವಿವರಿಸಿದ್ದಾರೆ. ರೇಡಿಯೊ ಅನೌನ್ಸರ್ (ಉದ್ಘೋಷಕಿ), ’ಜೋರಾಗಿ ಚಪ್ಪಾಳೆ ಕೇಳಿಸುತ್ತಿವೆ’ ಎಂದು ವಿವರಿಸುವುದನ್ನು ಲೇಖಕ ಕೇಳಿಸಿಕೊಳ್ಳುತ್ತಾರೆ. ಆದರೆ ಪಾರ್ಸಾಯ್‌ಗೆ ಆ ಚಪ್ಪಾಳೆಗಳು ಎಲ್ಲಿಂದ ಬರುತ್ತವೆ ಎಂದು ನೋಡಲು/ತಿಳಿಯಲು ಸಾಧ್ಯವಾಗುವುದಿಲ್ಲ. ಓವರ್‌ಕೋಟ್ ಧರಿಸಿ, ಕುರ್ಚಿಗಳ ಮೇಲೆ ಕುಳಿತ ಪ್ರೇಕ್ಷಕರಿಂದ ಈ ಚಪ್ಪಾಳೆಗಳು ಬರುತ್ತಿಲ್ಲ. ಕೈ ಬೆಚ್ಚಗಾಗಲು ಓವರ್‌ಕೋಟ್ ಪಾಕೆಟ್‌ಗಳಿಲ್ಲದ, ನೆಲದ ಮೇಲೆ ಕುಳಿತಿರುವ ಜನರ ನಿರಂತರ ಚಪ್ಪಾಳೆಯಿಂದ ಈ ಶಬ್ದ ಬರುತ್ತಿದೆ. ಈ ನಡುಗುವ ಕೈಗಳ ಚಪ್ಪಾಳೆಯನ್ನು ಗಣತಂತ್ರವು ಹಿಡಿದಿಟ್ಟುಕೊಂಡಿದೆ ಎಂದು ತೋರುತ್ತದೆ.

ಭಾರತದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ತೀಕ್ಷ್ಣ ವಿಡಂಬನೆ ಮತ್ತು ವ್ಯಾಖ್ಯಾನಕ್ಕೆ ಹೆಸರುವಾಸಿಯಾದ ಪಾರ್ಸಾಯಿ ವಸ್ತುಸ್ಥಿತಿಯನ್ನು ಬಿಂಬಿಸಿದ್ದಾರೆ. ರಾಜಕೀಯ ಪಕ್ಷಗಳು ಮತ್ತು ಅವುಗಳ ಪುನರಾವರ್ತಿತ ಭರವಸೆಗಳಿಂದ ಮತ್ತೆ ಮತ್ತೆ ಮೂರ್ಖರಾಗುವ ಜನರನ್ನು ಸಹ ಅವರು ಟೀಕಿಸಿದ್ದಾರೆ. ಬಹುಷಃ ಪಾರ್ಸಾಯಿ ಹೇಳಿದಂತೆ, ಚಪ್ಪಾಳೆ ಹೊಡಿ ಯುತ್ತಿರುವ ಕೈಗಳ ಶಾಖದ ಹೊರತಾಗಿ ಜನರ ಬಳಿ ಏನೂ ಇಲ್ಲ.

ಚಳವಳಿಯ ಬೆಂಕಿ

ಪ್ರತಿಯೊಬ್ಬ ಸಿನಿಕ ವ್ಯಕ್ತಿಯ ಹಿಂದೆ ಒಬ್ಬ ನಿರಾಶೆಗೊಂಡ ಆದರ್ಶವಾದಿ ಇರುತ್ತಾನೆ

– ಜಾರ್ಜ್ ಕ್ಯಾರ್ಲಿನ್.

ಪರ್ಸಾಯಿ ಅವರ ವಿಡಂಬನೆಯು ಜಯಪ್ರಕಾಶ್ ನಾರಾಯಣರು ನೀಡಿದ್ದ ಭರವಸೆಗಳ ವೈಫಲ್ಯ ಮತ್ತು ಲೋಹಿಯಾವಾದಿ ಚಳವಳಿಯಿಂದಾದ ನಿರಾಸೆಯಿಂದ ಹುಟ್ಟುತ್ತದೆ.

ರೈತ ಹೋರಾಟವನ್ನು ನೋಡಲು ಅವರು ಬದುಕಿರಬೇಕಿತ್ತೆಂದು ನನಗೆಷ್ಟು ಅನ್ನಿಸುತ್ತಿದೆ ನೋಡಿ.
ಅವರಂತಹ ಸಿನಿಕ ವ್ಯಕ್ತಿಯನ್ನು ಅದು ಜನಶಕ್ತಿಯ ಮೇಲೆ ಭರವಸೆಯಿಟ್ಟಿರುವ ವ್ಯಕ್ತಿಯನ್ನಾಗಿ ಪರಿವರ್ತಿಸುತ್ತಿತ್ತು.

ಮಾಸ್ಟರ್‌ಸ್ಟ್ರೋಕ್

ದೆಹಲಿಯಲ್ಲಿ ಇಳಿಯುವ ಮುಂಚೆ ಕುಟುಂಬ ಮತ್ತು ಸ್ನೇಹಿತರು ದೆಹಲಿಯ ಚಳವಳಿಯ ಕುರಿತು ಮತ್ತು ಸರ್ಕಾರ ಹಾಗೂ ಚಳವಳಿಕಾರರಿಂದ ಉಂಟಾಗಬಹುದಾದ ಹಿಂಸೆಯ ಕುರಿತು ಎಚ್ಚರಿಸಿದ್ದರು. ದೆಹಲಿಯ ಚಳಿಯು ದಿನೇ ದಿನೇ ಹೆಚ್ಚೆಚ್ಚು ಕೊರೆಯುತ್ತಿದ್ದು, ಪ್ರತೀ ವರ್ಷ 20-40-50 ವರ್ಷಗಳ ದಾಖಲೆಯನ್ನು ಮುರಿಯುತ್ತಲೇ ಇದೆ. ನಾನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಿದ್ಧಳಾಗಿಯೇ ಬಂದಿದ್ದೆ. ಸಿಂಘು ಗಡಿಯಲ್ಲಿ ಬೆಳಿಗಿನ ಚಳಿಯು ಮಂಜಿನ ಕಾರಣದಿಂದ ಇನ್ನೂ ತೀವ್ರವಾಗಿತ್ತು. ಸಿಂಘು ಗಡಿಯ ಪ್ರವೇಶದಲ್ಲಿ ವಿಪರೀತವಾಗಿ ನಿಯೋಜಿಸಲಾಗಿದ್ದ ಪೊಲೀಸ್ ಮತ್ತು ಮೀಸಲುಪಡೆಯು ಪ್ರತಿಭಟನಾಕಾರರನ್ನು ಸದೆಬಡಿಯಲು ದೆಹಲಿ ಪೊಲೀಸರ ಕುಪ್ರಸಿದ್ಧ ಆಯುಧಗಳಾದ ಜಲಫಿರಂಗಿ, ಲಾಠಿಗಳ ಚಿತ್ರಣವನ್ನು ಕಣ್ಣ ಮುಂದೆ ತಂದಿತು.

ಆ ಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ನನ್ನೊಳಗೆ ಭಯವೂ ಪ್ರವೇಶಿಸಿತು. ಆದರೆ, ಇನ್ನಷ್ಟು ಒಳಗೆ ಹೋದಂತೆ ರೈತರ ಬೆಚ್ಚಗಿನ ನಡವಳಿಕೆಯಿಂದ ಚಳಿಯು ಮಾಯವಾಯಿತು. ಈ ರೈತರು 60 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ಇಲ್ಲಿದ್ದು ಕಟ್ಟಿರುವ ಚಳವಳಿಯು ಇನ್ನೂ ಎಷ್ಟೋ ಚಳವಳಿಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ನಮ್ಮ ಮೊದಲ ಅನಿಸಿಕೆಯು ಅದುವರೆಗೆ ಮನದಲ್ಲಿ ಮೂಡಿರುವ ಪೂರ್ವಗ್ರಹಗಳಿಂದ ರೂಪುಗೊಳ್ಳುತ್ತದೆ ಮತ್ತು ಪಂಜಾಬಿನ ಕುರಿತು ಅಂತಹವು ಸಾಕಷ್ಟಿವೆ. ಪಂಜಾಬಿನ ಸಂಪತ್ತು ಮತ್ತು ಮಹಿಳೆಯರ ಕುರಿತಂತೆ ಇರುವ ಪಾಪ್ ಹಾಡುಗಳು ಮತ್ತು ರ್‍ಯಾಪ್ ಸಂಗೀತವು ಬಹಳ ಸಾಮಾನ್ಯ. ಆದರೆ ಈ ಚಳವಳಿಯು ವಿದೇಶದಿಂದ ಬಂದ ಸಂಪತ್ತು ಮತ್ತು ಉಪಭೋಗಿತನದಲ್ಲಿ ಬಹುಕಾಲ ಮುಳುಗಿದ್ದ ಪಂಜಾಬಿನ ಇನ್ನೊಂದು ಮುಖದ ಪರಿಚಯವನ್ನು ನಮಗೆ ಮಾಡಿಕೊಡುತ್ತದೆ. ಬಹುತೇಕ ಕುಟುಂಬಗಳ ಒಬ್ಬ ಸದಸ್ಯ ವಿದೇಶದಲ್ಲಿದ್ದು, ಇನ್ನೊಬ್ಬರು ಕೃಷಿ ಮಾಡುತ್ತಿರುವುದನ್ನು ನೀವು ನೋಡಬಹುದು.

ಈ ಚಳವಳಿಯು ಪಂಜಾಬನ್ನು ಎಷ್ಟರಮಟ್ಟಿಗೆ ಬಡಿದೆಬ್ಬಿಸಿದೆಯೆಂದರೆ, ತಪ್ಪುದಾರಿಗೆ ಹೋಗಿರುವವರನ್ನೂ ಸರಿದಾರಿಗೆ ಕರೆತರುವ ರೀತಿಯ ಬದಲಾವಣೆಗೆ ಕಾರಣವಾಗಿ, ಸರ್ವರ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲಿದೆ. ಪ್ರತೀ ಮೂಲೆಗೂ ಏನೋ ಒಂದು ಸೌಲಭ್ಯ ಕಲ್ಪಿಸುವ ಜನರಿದ್ದಾರೆ. ಅದು ಊಟದ ಮನೆಯಾಗಿರಬಹುದು, ಶೂ ಪಾಲಿಷ್, ಕಾಲಿನ ಮಸಾಜ್, ಹೊದಿಕೆಗಳು, ಟೆಂಟುಗಳು ಇತ್ಯಾದಿ ಇತ್ಯಾದಿ. ನೀವು ದೂರದ ಊರಿಂದ ಹೋರಾಟವನ್ನು ಬೆಂಬಲಿಸಲು ಬಂದಿದ್ದೀರೆಂದು ಗೊತ್ತಾದರೆ ಇಲ್ಲಿನ ಜನರು ಬಹಳ ಸಂತಸಗೊಳ್ಳುತ್ತಾರೆ.
ಹಿಂದೆಂದೂ ಹೋರಾಟದಲ್ಲಿ ಪಾಲ್ಗೊಂಡ ಅನುಭವವಿಲ್ಲದ ರೈತರು ಈ ಸಾರಿಯ ಹೋರಾಟದಲ್ಲಿ ಸೇರಿಕೊಂಡು ಸಂಗಾತಿಗಳು, ಸ್ನೇಹಿತರು, ಕುಟುಂಬಸ್ಥರೇ ಆಗಿ ಹೋಗಿದ್ದಾರೆ. ಈ ಆಂದೋಲನದಲ್ಲಿ ಅವರು ಹೊಸ ಮನುಷ್ಯರೇ ಆಗಿದ್ದಾರೆ. ಕೆನಡಾಕ್ಕೆ ಹೋಗುವುದಕ್ಕಿಂತ ಸಾರ್ಥಕವಾದ ಹೊಸ ಬದುಕು ಇಲ್ಲಿನ ಬಾಂಧವ್ಯದಲ್ಲಿದೆ ಎನ್ನುವಂತಾಗಿದೆ. ಸಮಾಜದ ಕುರಿತಾದ ವಿಶೇಷ ಚಿಂತನೆಯ ಅಗತ್ಯವಿಲ್ಲದಂತೆ ಗಂಡು ಹೆಣ್ಣಿನ ಪಾತ್ರಗಳಲ್ಲೂ ನಿಧಾನದ ಬದಲಾವಣೆ ಕಾಣಸಿಗುತ್ತದೆ. ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುತ್ತಾ ಗಂಡು ಹೆಣ್ಣುಗಳಿಬ್ಬರೂ ಒಟ್ಟಿಗೆ ಅಡಿಗೆ ಮಾಡುತ್ತಾರೆ.

ಪಂಜಾಬ್ ಮತ್ತು ಹರಿಯಾಣಗಳಲ್ಲಿ ನಿರುದ್ಯೋಗ ಹೆಚ್ಚಾಗಿರುವುದು ಹಾಗೂ ವಿಶ್ವವಿದ್ಯಾಲಯಗಳ ಖಾಸಗೀಕರಣದ ಕುರಿತು ಚರ್ಚಿಸುವ ವಿದ್ಯಾರ್ಥಿಗಳು ಈ ಹೋರಾಟದ ನಂತರ ಮೂಡಿಬರುವ ಹೊಸ ಹೋರಾಟಗಳ ಕುರಿತು ಭರವಸೆಯಿಂದ ಚರ್ಚಿಸುತ್ತಾರೆ. ಚೆ, ಕ್ಯಾಸ್ಟ್ರೋ ಮತ್ತು ಚೇತನ್ ಭಗತ್‌ರನ್ನೂ ಅವರಲ್ಲಿ ಓದುತ್ತಿದ್ದಾರೆ. ಸಂಜೆಯ ಚಹಾ ಮತ್ತು ತಡರಾತ್ರಿಯವರೆಗಿನ ಚರ್ಚೆಗಳು ದೇಶವನ್ನು ಕಾಡುತ್ತಿರುವ ಸಂಗತಿಗಳು ಮತ್ತು ಅಸಮಾನತೆ, ಜಾತಿ, ಜೆಂಡರ್‌ಗಳ ಸಂಕೋಲೆಗಳನ್ನು ಒಡೆದು ಅವರವರ ಹಕ್ಕುಗಳನ್ನು ಪಡೆಯುವ ಬಗ್ಗೆ ನಡೆಯುತ್ತವೆ.

ಇಂದು ನಡುಗುತ್ತಿರುವ ಗಣರಾಜ್ಯದಲ್ಲಿ ಜನರು ಚಪ್ಪಾಳೆಗಳ ಮೂಲಕ ಬೆಚ್ಚಗಾಗುತ್ತಿಲ್ಲ; ಬದಲಿಗೆ ಅವರ ಜಠರದಲ್ಲಿ ಉರಿಯುತ್ತಿರುವ ಬೆಂಕಿ ಮತ್ತು ಹೃದಯದ ಬೆಚ್ಚಗಿನ ಭಾವನೆಗಳು ಬೆಚ್ಚಗಾಗಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...