Homeಮುಖಪುಟಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

ಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

’ಪ್ರಜಾಪ್ರಭುತ್ವವನ್ನು ರೂಪಿಸುವ ಮಾಧ್ಯಮ, ನ್ಯಾಯಾಂಗ ಮತ್ತು ಚುನಾವಣಾ ಆಯೋಗ ಮೂರನ್ನು ಪೆಗಾಸಸ್ ವಶಪಡಿಸಿಕೊಂಡಿದೆ’

- Advertisement -
- Advertisement -

ಪೆಗಾಸಸ್ ಹಗರಣದಲ್ಲಿ ಒಕ್ಕೂಟ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿರುವ ಶಿವಸೇನೆ ಮತ್ತು ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿವೆ. ಇದು ವೈಯಕ್ತಿಕ ದಾಳಿಯಲ್ಲ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರೆ, ಹಗರಣದ ಬಗ್ಗೆ ಸುಮೋಟೋ ಕೇಸ್ ದಾಖಲಿಸಿ ಎಂದು ಸುಪ್ರೀಂ ಕೋರ್ಟ್‌ಗೆ ಶಿವಸೇನೆ ಆಗ್ರಹಿಸಿದೆ.

ಪೆಗಾಸಸ್ ಗೂಢಚರ್ಯೆಯು 1970 ರ ದಶಕದ ತುರ್ತು ಪರಿಸ್ಥಿತಿಗಿಂತ ಹೆಚ್ಚು ಗಂಭೀರ ವಿಚಾರವಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ. ಆಯ್ದ ಭಾರತೀಯರ ಮೇಲೆ ನಡೆದಿರುವ ಸೈಬರ್‌ ಆಟ್ಯಾಕ್, ಒಕ್ಕೂಟ ಸರ್ಕಾರದ ಅನುಮೋದನೆಯಿಲ್ಲದೆ ನಡೆಯಲಾರದು ಎಂದು ಒತ್ತಿ ಹೇಳಿದೆ.

ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಒತ್ತಾಯಿಸುವಾಗ ಗೂಢಚರ್ಯೆಯ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ ಎಂದು ಶಿವಸೇನೆ ಪ್ರಶ್ನಿಸಿದೆ. ಈ ವಿಷಯದ ಬಗ್ಗೆ ಸುಮೋಟೊ ಕೇಸ್ ದಾಖಲಿಸಿಕೊಂಡು ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಶಿವಸೇನಾ ಮನವಿ ಮಾಡಿದೆ.

ಶಿವಸೇನೆಯು ಈ ಹಿಂದೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬರೆದ ಪತ್ರದಲ್ಲಿ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿದೆ.

ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ಪೆಗಾಸಸ್ ಸ್ಪೈವೇರ್ ಬಳಕೆಯ ಬಗ್ಗೆ ಮಾಧ್ಯಮ ವರದಿಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಆಶ್ಚರ್ಯಕರ ಎಂದು ಕರೆದಿರುವ ಶಿವಸೇನೆ, ದೇಶದ ಹೆಸರು ಕೆಡಿಸಲು ಯಾರು ಹೊರಟಿದ್ದಾರೆ ಎಂದು ಪ್ರಶ್ನೆ ಮಾಡಿದೆ.

ಇತ್ತ, ಪೆಗಾಸಸ್ ಹಗರಣದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ವಿರುದ್ಧ ಎಲ್ಲರೂ ಒಗ್ಗೂಡಬೇಕೆಂದು ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. “ಪ್ರಜಾಪ್ರಭುತ್ವವನ್ನು ರೂಪಿಸುವ ಮಾಧ್ಯಮ, ನ್ಯಾಯಾಂಗ ಮತ್ತು ಚುನಾವಣಾ ಆಯೋಗ ಮೂರನ್ನು ಪೆಗಾಸಸ್ ವಶಪಡಿಸಿಕೊಂಡಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿರುವ ದಾಳಿಯಲ್ಲಿ ಅವರು, “ಮೋದಿಜೀ, ನಾನು ನಿಮ್ಮ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿಲ್ಲ. ಆದರೆ ನೀವು ಮತ್ತು ಬಹುಷಃ ಗೃಹ ಸಚಿವರು ವಿರೋಧ ಪಕ್ಷದ ನಾಯಕರ ವಿರುದ್ದದ ಏಜೆನ್ಸಿಗಳನ್ನು ನಿಯೋಜಿಸುತ್ತಿದ್ದೀರಿ. ಏಜೆನ್ಸಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಿ. ಬಂಗಾಳದ ಜನರು ನಿಮ್ಮನ್ನು ಬೆಂಬಲಿಸುವುದಿಲ್ಲ” ಎಂದಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿರುವ ಅಭಿಷೇಕ್ ಬ್ಯಾನರ್ಜಿಯ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಟಿಎಂಸಿ,  “ಫೋನ್  ಹ್ಯಾಕಿಂಗ್ ಹೊರತಾಗಿಯೂ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ವ್ಯಂಗ್ಯವಾಡಿತ್ತು.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...