Homeಮುಖಪುಟಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

ಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

’ಪ್ರಜಾಪ್ರಭುತ್ವವನ್ನು ರೂಪಿಸುವ ಮಾಧ್ಯಮ, ನ್ಯಾಯಾಂಗ ಮತ್ತು ಚುನಾವಣಾ ಆಯೋಗ ಮೂರನ್ನು ಪೆಗಾಸಸ್ ವಶಪಡಿಸಿಕೊಂಡಿದೆ’

- Advertisement -
- Advertisement -

ಪೆಗಾಸಸ್ ಹಗರಣದಲ್ಲಿ ಒಕ್ಕೂಟ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿರುವ ಶಿವಸೇನೆ ಮತ್ತು ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿವೆ. ಇದು ವೈಯಕ್ತಿಕ ದಾಳಿಯಲ್ಲ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರೆ, ಹಗರಣದ ಬಗ್ಗೆ ಸುಮೋಟೋ ಕೇಸ್ ದಾಖಲಿಸಿ ಎಂದು ಸುಪ್ರೀಂ ಕೋರ್ಟ್‌ಗೆ ಶಿವಸೇನೆ ಆಗ್ರಹಿಸಿದೆ.

ಪೆಗಾಸಸ್ ಗೂಢಚರ್ಯೆಯು 1970 ರ ದಶಕದ ತುರ್ತು ಪರಿಸ್ಥಿತಿಗಿಂತ ಹೆಚ್ಚು ಗಂಭೀರ ವಿಚಾರವಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ. ಆಯ್ದ ಭಾರತೀಯರ ಮೇಲೆ ನಡೆದಿರುವ ಸೈಬರ್‌ ಆಟ್ಯಾಕ್, ಒಕ್ಕೂಟ ಸರ್ಕಾರದ ಅನುಮೋದನೆಯಿಲ್ಲದೆ ನಡೆಯಲಾರದು ಎಂದು ಒತ್ತಿ ಹೇಳಿದೆ.

ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಒತ್ತಾಯಿಸುವಾಗ ಗೂಢಚರ್ಯೆಯ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ ಎಂದು ಶಿವಸೇನೆ ಪ್ರಶ್ನಿಸಿದೆ. ಈ ವಿಷಯದ ಬಗ್ಗೆ ಸುಮೋಟೊ ಕೇಸ್ ದಾಖಲಿಸಿಕೊಂಡು ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಶಿವಸೇನಾ ಮನವಿ ಮಾಡಿದೆ.

ಶಿವಸೇನೆಯು ಈ ಹಿಂದೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬರೆದ ಪತ್ರದಲ್ಲಿ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿದೆ.

ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ಪೆಗಾಸಸ್ ಸ್ಪೈವೇರ್ ಬಳಕೆಯ ಬಗ್ಗೆ ಮಾಧ್ಯಮ ವರದಿಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಆಶ್ಚರ್ಯಕರ ಎಂದು ಕರೆದಿರುವ ಶಿವಸೇನೆ, ದೇಶದ ಹೆಸರು ಕೆಡಿಸಲು ಯಾರು ಹೊರಟಿದ್ದಾರೆ ಎಂದು ಪ್ರಶ್ನೆ ಮಾಡಿದೆ.

ಇತ್ತ, ಪೆಗಾಸಸ್ ಹಗರಣದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ವಿರುದ್ಧ ಎಲ್ಲರೂ ಒಗ್ಗೂಡಬೇಕೆಂದು ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. “ಪ್ರಜಾಪ್ರಭುತ್ವವನ್ನು ರೂಪಿಸುವ ಮಾಧ್ಯಮ, ನ್ಯಾಯಾಂಗ ಮತ್ತು ಚುನಾವಣಾ ಆಯೋಗ ಮೂರನ್ನು ಪೆಗಾಸಸ್ ವಶಪಡಿಸಿಕೊಂಡಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿರುವ ದಾಳಿಯಲ್ಲಿ ಅವರು, “ಮೋದಿಜೀ, ನಾನು ನಿಮ್ಮ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿಲ್ಲ. ಆದರೆ ನೀವು ಮತ್ತು ಬಹುಷಃ ಗೃಹ ಸಚಿವರು ವಿರೋಧ ಪಕ್ಷದ ನಾಯಕರ ವಿರುದ್ದದ ಏಜೆನ್ಸಿಗಳನ್ನು ನಿಯೋಜಿಸುತ್ತಿದ್ದೀರಿ. ಏಜೆನ್ಸಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಿ. ಬಂಗಾಳದ ಜನರು ನಿಮ್ಮನ್ನು ಬೆಂಬಲಿಸುವುದಿಲ್ಲ” ಎಂದಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿರುವ ಅಭಿಷೇಕ್ ಬ್ಯಾನರ್ಜಿಯ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಟಿಎಂಸಿ,  “ಫೋನ್  ಹ್ಯಾಕಿಂಗ್ ಹೊರತಾಗಿಯೂ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ವ್ಯಂಗ್ಯವಾಡಿತ್ತು.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...