Homeರಾಷ್ಟ್ರೀಯಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ...

ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ!

ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ

- Advertisement -
- Advertisement -

ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿವೆ. ಈ ಪೈಕಿ 27 ಚುನಾಯಿತ ನಾಯಕರಿಗೆ ಇಂತಹ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದ್ದು, ಧಾರ್ಮಿಕ ವಿಚಾರಗಳ ಕುರಿತು ಹೇಳಿಕೆ ನೀಡುವ ಮುನ್ನ ಪಕ್ಷದಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ.

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಮತ್ತು ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಅವರ ವಿರುದ್ಧ ಕ್ರಮ ಕೈಗೊಂಡ ನಂತರ ಪಕ್ಷವು ಈ ಬಗ್ಗೆ ಕಾರ್ಯಪ್ರವೃತ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ 8 ವರ್ಷಗಳಿಂದ (ಸೆಪ್ಟೆಂಬರ್ 2014 ರಿಂದ ಮೇ 3, 2022 ರವರೆಗೆ) ನಾಯಕರ ಹೇಳಿಕೆಗಳನ್ನು ಐಟಿ ತಜ್ಞರ ಸಹಾಯದಿಂದ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಸುಮಾರು 5,200 ಹೇಳಿಕೆಗಳು ಅನಗತ್ಯವೆಂದು ಕಂಡುಬಂದಿದೆ. 2,700 ಹೇಳಿಕೆಗಳ ಪದಗಳು ಸೂಕ್ಷ್ಮವಾಗಿರುವುದು ಕಂಡುಬಂದಿದೆ. 38 ನಾಯಕರ ಹೇಳಿಕೆಗಳನ್ನು ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡುವ ವರ್ಗದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

ಅನಂತ್ ಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ, ಗಿರಿರಾಜ್ ಸಿಂಗ್, ತಥಾಗತ ರೈ, ಪ್ರತಾಪ್ ಸಿಂಹ, ವಿನಯ್ ಕಟಿಯಾರ್, ಮಹೇಶ್ ಶರ್ಮಾ, ಟಿ.ರಾಜ ಸಿಂಗ್, ವಿಕ್ರಮ್ ಸಿಂಗ್ ಸೈನಿ, ಸಾಕ್ಷಿ ಮಹಾರಾಜ್, ಸಂಗೀತ್ ಸೋಮ್ ಸೇರಿದಂತೆ ಹಲವು ಬಿಜೆಪಿ ನಾಯಕರು ದ್ವೇಷದ ಭಾಷಣ ಮಾಡುತ್ತಾರೆ ಎಂದು ಪಕ್ಷವು ನಿರ್ಧರಿಸಿದೆ ಎಂದು ದೈನಿಕ್ ಬಾಸ್ಕರ್‌ ವರದಿ ಮಾಡಿದೆ.

ಕುವೈತ್: ಭಾರತದಲ್ಲಿ ತಯಾರಾದ ವಸ್ತುಗಳ ಮಾರಾಟ ಸ್ಥಗಿತ

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಅರಬ್ ರಾಷ್ಟ್ರಗಳಲ್ಲಿ ಭಾರತವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿದೆ. ಈ ಮಧ್ಯೆ, ಕುವೈತ್‌ನ ಕೆಲವು ಸೂಪರ್‌ ಮಾರ್ಕೆಟ್‌ಗಳಲ್ಲಿ ಭಾರತದಲ್ಲಿ ತಯಾರಾದ ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಿವೆ.

ದೇಶದ ಆಡಳಿತ ಪಕ್ಷದ ನಾಯಕರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿದ್ದು, ಇದಕ್ಕಾಗಿ ನೀವು ಕ್ಷಮೆಯಾಚಿಸಬೇಕು ಎಂದು ಕುವೈತ್ ಸರ್ಕಾರ ಆಗ್ರಹಿಸಿದೆ. ಯುಎಇ, ಜೋರ್ಡಾನ್ ಮತ್ತು ಇಂಡೋನೇಷ್ಯಾ ಸೇರಿದಂತೆ ವಿಶ್ವದ 17 ರಾಷ್ಟ್ರಗಳು ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

OIC ಹೇಳಿಕೆ ಅನಗತ್ಯ: ಭಾರತ

ಮುಸ್ಲಿಮರ ಹಕ್ಕುಗಳ ರಕ್ಷಣೆಯನ್ನು ಖಾತ್ರಿಪಡಿಸುವಂತೆ ‘ಇಸ್ಲಾಮಿಕ್ ಸಹಕಾರ ಸಂಘಟನೆ’ (OIC)  ವಿಶ್ವಸಂಸ್ಥೆಗೆ ಒತ್ತಾಯಿಸಿದೆ. ಒಐಸಿ ಹೇಳಿಕೆಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದ್ದು, ಅದನ್ನು ‘ಸಂಕುಚಿತ’ ಎಂದು ಬಣ್ಣಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಕೆಲವು ಜನರ ಅಸಭ್ಯ ಹೇಳಿಕೆಗಳು ಭಾರತ ಸರ್ಕಾರವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. The argument which put forward is confusing. Ruling patty leaders statement is government’s statement and it’s impact is fatal. Govt.has take actions against them control them.

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...