Homeಮುಖಪುಟಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

- Advertisement -
- Advertisement -

ರಾಜ್ಯದ ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರ ನೀಡುವಂತೆ ಸಂಸದರು ಮತ್ತು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಶೋಭಾ ಕರಂದ್ಲಾಜೆಯವರು ತಮ್ಮ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು, “ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?
ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಅಥವಾ ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಅವರು ಪ್ರಶ್ನಿಸಿದ್ದಾರೆ.

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಕೂಡ ಈ ಪತ್ರದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. “ಚುನಾವಣೆ ನಡೆಸುತ್ತಿರುವುದು ಬಿಜೆಪಿ ಪಕ್ಷವೋ, ಚುನಾವಣಾ ಆಯೋಗವೋ? ಆಯೋಗವು ಬಿಜೆಪಿ ಹೇಳಿದಂತೆ ಕೇಳುತ್ತಿದೆಯೇ? ಇದನ್ನು Chief Electoral Officer Karnataka ಸ್ಪಷ್ಟಪಡಿಸಬೇಕು. ಇಲ್ಲ ಎಂದಾದಲ್ಲಿ ಈ ಪತ್ರದ ಕುರಿತು ತನಿಖೆ ಕೈಗೊಂಡು ಬಿಜೆಪಿ ಪಕ್ಷದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಲ್ಲಿ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಬೇಕಾಗುತ್ತದೆ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ – ಸ್ಪಷ್ಟ ಬಹುಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...