Homeಮುಖಪುಟಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

- Advertisement -
- Advertisement -

ರಾಜ್ಯದ ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರ ನೀಡುವಂತೆ ಸಂಸದರು ಮತ್ತು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಶೋಭಾ ಕರಂದ್ಲಾಜೆಯವರು ತಮ್ಮ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು, “ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?
ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಅಥವಾ ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಅವರು ಪ್ರಶ್ನಿಸಿದ್ದಾರೆ.

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಕೂಡ ಈ ಪತ್ರದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. “ಚುನಾವಣೆ ನಡೆಸುತ್ತಿರುವುದು ಬಿಜೆಪಿ ಪಕ್ಷವೋ, ಚುನಾವಣಾ ಆಯೋಗವೋ? ಆಯೋಗವು ಬಿಜೆಪಿ ಹೇಳಿದಂತೆ ಕೇಳುತ್ತಿದೆಯೇ? ಇದನ್ನು Chief Electoral Officer Karnataka ಸ್ಪಷ್ಟಪಡಿಸಬೇಕು. ಇಲ್ಲ ಎಂದಾದಲ್ಲಿ ಈ ಪತ್ರದ ಕುರಿತು ತನಿಖೆ ಕೈಗೊಂಡು ಬಿಜೆಪಿ ಪಕ್ಷದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಲ್ಲಿ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಬೇಕಾಗುತ್ತದೆ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ‘ಈದಿನ’ ಮಾಧ್ಯಮ ಮೆಗಾ ಸರ್ವೇ: ಕಾಂಗ್ರೆಸ್‌ಗೆ 132-140 ಸ್ಥಾನ – ಸ್ಪಷ್ಟ ಬಹುಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...