Homeಮುಖಪುಟತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

- Advertisement -
- Advertisement -

ತೆಲಂಗಾಣ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯದಲ್ಲಿ ಭಾರೀ ಬದಲಾವಣೆ ನಡೆಯುತ್ತಿದೆ. 35 ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರು ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಆರ್‌ಎಸ್ ನಾಯಕರು ಕೆಸಿಆರ್‌ಗೆ ಬಿಗ್‌ ಶಾಕ್ ನೀಡಿದ್ದಾರೆ.

ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ 35 ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದು ಸೋಮವಾರ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯೊಂದಿಗೆ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಬಿಆರ್‌ಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಖಮ್ಮಂನಿಂದ ಬಿಆರ್‌ಎಸ್ ಸಂಸದರಾಗಿದ್ದರು.

ಕಾಂಗ್ರೆಸ್ ಸೇರಲಿರುವ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಅವರು ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು.

35 Bharat Rashtra Samithi leaders join Congress months ahead of Telangana polls

ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಬೆಳವಣಿಗೆಯನ್ನು “ಬದಲಾವಣೆಯ ಗಾಳಿ” ಎಂದು ಬಣ್ಣಿಸಿದ್ದಾರೆ. ”ಈ ಬದಲಾವಣೆಯ ಗಾಳಿಯು ‘ಭಾರತ್ ಜೋಡೋ ಯಾತ್ರೆ’ಯಿಂದ ಪ್ರಾರಂಭವಾಯಿತು, ಅದರ ಪರಿಣಾಮವನ್ನು ನೀವು ಕರ್ನಾಟಕದಲ್ಲಿ ನೋಡಿದ್ದೀರಿ. ಇಂದು, ತೆಲಂಗಾಣದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ ಮತ್ತು ಅವರೆಲ್ಲರೂ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ನಂತರ ಸುದೀರ್ಘ ಮಾತುಕತೆ ನಡೆಸಿದ್ದಾರೆ” ಎಂದು ಖೇರಾ ಹೇಳಿದರು.

ಈ ಬೆಳವಣಿಗೆಯನ್ನು ಸ್ವಾಗತಿಸಿದ ರಾಹುಲ್ ಗಾಂಧಿ, ”ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ತನ್ನ ಯಶಸ್ಸನ್ನು ಮುಂದುವರೆಸುತ್ತದೆ” ಎಂದು ಹೇಳಿದರು.

”ಒಗ್ಗೂಡಿದ ಕಾಂಗ್ರೆಸ್ ಅನ್ನು ತಡೆಯಲಾಗದು” ಎಂದು ಗಾಂಧಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ 224 ವಿಧಾನಸಭಾ ಸ್ಥಾನಗಳ ಪೈಕಿ 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿತ್ತು. ತೆಲಂಗಾಣದಲ್ಲಿ, 2014 ರಿಂದ ರಾಜ್ಯವನ್ನು ಆಳುತ್ತಿರುವ ಭಾರತ್ ರಾಷ್ಟ್ರ ಸಮಿತಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಮೂಲಗಳ ಪ್ರಕಾರ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ಜುಲೈ ಮೊದಲ ವಾರದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಖಮ್ಮಂನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಲ್ಲೇ ಕಾಂಗ್ರೆಸ್ ಮುಖಂಡ ಭಟ್ಟಿ ವಿಕ್ರಮಾರ್ಕ ತಮ್ಮ ಪಾದಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ. ಏಪ್ರಿಲ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಅವರನ್ನು ಬಿಆರ್‌ಎಸ್‌ನಿಂದ ಅಮಾನತುಗೊಳಿಸಲಾಗಿತ್ತು. ಇದಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಇವರಿಬ್ಬರನ್ನು ಓಲೈಸಲು ಪ್ರಯತ್ನಿಸಿದ್ದವು. ಆದರೂ ಇಬ್ಬರೂ ಕಾಂಗ್ರೆಸ್ ಆಯ್ಕೆ ಮಾಡಿದ್ದಕ್ಕೆ ಅವರದ್ದೇ ಆದ ರಾಜಕೀಯ ಕಾರಣಗಳಿವೆ.

ಜೂಪಲ್ಲಿ ಕೃಷ್ಣರಾವ್ ಕೊಲ್ಲೂರಿನಿಂದ ಐದು ಬಾರಿ ಶಾಸಕರಾಗಿದ್ದು ಮಹೆಬೂಬ್‌ನಗರದಿಂದ ಮಾಜಿ ಸಚಿವರಾಗಿದ್ದಾರೆ, ಅಲ್ಲಿ ಅವರ ದೀರ್ಘಕಾಲದ ರಾಜಕೀಯ ಪ್ರತಿಸ್ಪರ್ಧಿ ಡಿಕೆ ಅರುಣಾ ರಾಜ್ಯ ಬಿಜೆಪಿಯಲ್ಲಿ ಉದಯೋನ್ಮುಖ ತಾರೆಯಾಗಿದ್ದಾರೆ. ಹಾಗಾಗಿ ಬಿಜೆಪಿಗೆ ಹೋಗುವುದು ಸೂಕ್ತವಲ್ಲ.

ಬಿಆರ್‌ಎಸ್ ದುರ್ಬಲವಾಗಿರುವ ಖಮ್ಮಂನಲ್ಲಿ ರೆಡ್ಡಿ ಪ್ರಬಲ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು 2014ರಲ್ಲಿ ವೈಎಸ್‌ಆರ್‌ಸಿಪಿ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮೂರು ಎಂಎಲ್‌ಎ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿದರು. ಆದರೆ 2018ರ ಚುನಾವಣೆಯಲ್ಲಿ ಸಚಿವ ಪುವ್ವಾಡ ಅಜಯ್ ಕುಮಾರ್ ಅವರನ್ನು ಸೋಲಿಸಲು ಅವರು ಕೆಲಸ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಇದಾದ ನಂತರ ಅವರಿಗೆ ಸಂಸದ ಟಿಕೆಟ್ ನಿರಾಕರಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...