Homeಮುಖಪುಟತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಕೆಸಿಆರ್‌ಗೆ ಆಘಾತ; ಬಿಆರ್‌ಎಸ್‌ನ 35 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ

- Advertisement -
- Advertisement -

ತೆಲಂಗಾಣ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯದಲ್ಲಿ ಭಾರೀ ಬದಲಾವಣೆ ನಡೆಯುತ್ತಿದೆ. 35 ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರು ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಆರ್‌ಎಸ್ ನಾಯಕರು ಕೆಸಿಆರ್‌ಗೆ ಬಿಗ್‌ ಶಾಕ್ ನೀಡಿದ್ದಾರೆ.

ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ 35 ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದು ಸೋಮವಾರ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯೊಂದಿಗೆ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಬಿಆರ್‌ಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಖಮ್ಮಂನಿಂದ ಬಿಆರ್‌ಎಸ್ ಸಂಸದರಾಗಿದ್ದರು.

ಕಾಂಗ್ರೆಸ್ ಸೇರಲಿರುವ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಅವರು ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು.

35 Bharat Rashtra Samithi leaders join Congress months ahead of Telangana polls

ಕಾಂಗ್ರೆಸ್ ನಾಯಕ ಪವನ್ ಖೇರಾ ಈ ಬೆಳವಣಿಗೆಯನ್ನು “ಬದಲಾವಣೆಯ ಗಾಳಿ” ಎಂದು ಬಣ್ಣಿಸಿದ್ದಾರೆ. ”ಈ ಬದಲಾವಣೆಯ ಗಾಳಿಯು ‘ಭಾರತ್ ಜೋಡೋ ಯಾತ್ರೆ’ಯಿಂದ ಪ್ರಾರಂಭವಾಯಿತು, ಅದರ ಪರಿಣಾಮವನ್ನು ನೀವು ಕರ್ನಾಟಕದಲ್ಲಿ ನೋಡಿದ್ದೀರಿ. ಇಂದು, ತೆಲಂಗಾಣದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ ಮತ್ತು ಅವರೆಲ್ಲರೂ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ನಂತರ ಸುದೀರ್ಘ ಮಾತುಕತೆ ನಡೆಸಿದ್ದಾರೆ” ಎಂದು ಖೇರಾ ಹೇಳಿದರು.

ಈ ಬೆಳವಣಿಗೆಯನ್ನು ಸ್ವಾಗತಿಸಿದ ರಾಹುಲ್ ಗಾಂಧಿ, ”ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ತನ್ನ ಯಶಸ್ಸನ್ನು ಮುಂದುವರೆಸುತ್ತದೆ” ಎಂದು ಹೇಳಿದರು.

”ಒಗ್ಗೂಡಿದ ಕಾಂಗ್ರೆಸ್ ಅನ್ನು ತಡೆಯಲಾಗದು” ಎಂದು ಗಾಂಧಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ 224 ವಿಧಾನಸಭಾ ಸ್ಥಾನಗಳ ಪೈಕಿ 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿತ್ತು. ತೆಲಂಗಾಣದಲ್ಲಿ, 2014 ರಿಂದ ರಾಜ್ಯವನ್ನು ಆಳುತ್ತಿರುವ ಭಾರತ್ ರಾಷ್ಟ್ರ ಸಮಿತಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಮೂಲಗಳ ಪ್ರಕಾರ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ಜುಲೈ ಮೊದಲ ವಾರದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಖಮ್ಮಂನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಲ್ಲೇ ಕಾಂಗ್ರೆಸ್ ಮುಖಂಡ ಭಟ್ಟಿ ವಿಕ್ರಮಾರ್ಕ ತಮ್ಮ ಪಾದಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ. ಏಪ್ರಿಲ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಅವರನ್ನು ಬಿಆರ್‌ಎಸ್‌ನಿಂದ ಅಮಾನತುಗೊಳಿಸಲಾಗಿತ್ತು. ಇದಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಇವರಿಬ್ಬರನ್ನು ಓಲೈಸಲು ಪ್ರಯತ್ನಿಸಿದ್ದವು. ಆದರೂ ಇಬ್ಬರೂ ಕಾಂಗ್ರೆಸ್ ಆಯ್ಕೆ ಮಾಡಿದ್ದಕ್ಕೆ ಅವರದ್ದೇ ಆದ ರಾಜಕೀಯ ಕಾರಣಗಳಿವೆ.

ಜೂಪಲ್ಲಿ ಕೃಷ್ಣರಾವ್ ಕೊಲ್ಲೂರಿನಿಂದ ಐದು ಬಾರಿ ಶಾಸಕರಾಗಿದ್ದು ಮಹೆಬೂಬ್‌ನಗರದಿಂದ ಮಾಜಿ ಸಚಿವರಾಗಿದ್ದಾರೆ, ಅಲ್ಲಿ ಅವರ ದೀರ್ಘಕಾಲದ ರಾಜಕೀಯ ಪ್ರತಿಸ್ಪರ್ಧಿ ಡಿಕೆ ಅರುಣಾ ರಾಜ್ಯ ಬಿಜೆಪಿಯಲ್ಲಿ ಉದಯೋನ್ಮುಖ ತಾರೆಯಾಗಿದ್ದಾರೆ. ಹಾಗಾಗಿ ಬಿಜೆಪಿಗೆ ಹೋಗುವುದು ಸೂಕ್ತವಲ್ಲ.

ಬಿಆರ್‌ಎಸ್ ದುರ್ಬಲವಾಗಿರುವ ಖಮ್ಮಂನಲ್ಲಿ ರೆಡ್ಡಿ ಪ್ರಬಲ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು 2014ರಲ್ಲಿ ವೈಎಸ್‌ಆರ್‌ಸಿಪಿ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮೂರು ಎಂಎಲ್‌ಎ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿದರು. ಆದರೆ 2018ರ ಚುನಾವಣೆಯಲ್ಲಿ ಸಚಿವ ಪುವ್ವಾಡ ಅಜಯ್ ಕುಮಾರ್ ಅವರನ್ನು ಸೋಲಿಸಲು ಅವರು ಕೆಲಸ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಇದಾದ ನಂತರ ಅವರಿಗೆ ಸಂಸದ ಟಿಕೆಟ್ ನಿರಾಕರಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಸುಳಿವು ನೀಡುತ್ತಿರುವ ಬಿಎಸ್‌ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...