Homeಮುಖಪುಟಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

ಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯಲ್ಲಿ ಜೋರ್ಡಾನ್‌ ದೇಶ ಮಂಡಿಸಿದ ನಾಗರಿಕರ ರಕ್ಷಣೆ ಮತ್ತು ಕದನ ವಿರಾಮದ ಕುರಿತ ನಿರ್ಣಯಕ್ಕೆ ಮತಚಲಾಯಿಸದೆ ದೂರ ಉಳಿದ ಭಾರತದ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಘಾತ ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ನೋಡುವುದು ಭಾರತದ ಆಶಯಕ್ಕೆ  ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ  ಕದನ ವಿರಾಮ ಮತ್ತು ಗಾಝಾ ಪಟ್ಟಿಯ ಜನರಿಗೆ ಮಾನವೀಯ ನೆರವು, ನಾಗರಿಕರ ರಕ್ಷಣೆ , ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವ ಶೀರ್ಷಿಕೆಯಡಿ ಜೋರ್ಡಾನ್ ದೇಶವು ಕರಡು ನಿರ್ಣಯವನ್ನು ಮಂಡಿಸಿತ್ತು. ಆದರೆ ಭಾರತ ಮತದಾನದಿಂದ ದೂರ ಉಳಿದಿತ್ತು.

193 ಸದಸ್ಯ ಬಲದ ಜನರಲ್ ಅಸೆಂಬ್ಲಿಯು ಬಹುಮತದಿಂದ ಜೋರ್ಡಾನ್ ದೇಶವು ಮಂಡಿಸಿದ ಕರಡು ಮಸೂದೆಯನ್ನು ಅಂಗೀಕರಿಸಿದೆ. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿಯವರು, ಮಹಾತ್ಮ ಗಾಂಧಿಯವರ ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿಸುತ್ತದೆ ಎಂಬ ವಾಕ್ಯವನ್ನು ಉಲ್ಲೇಖ ಮಾಡಿದ್ದಾರೆ.

ಗಾಝಾದಲ್ಲಿ ಕದನ ವಿರಾಮಕ್ಕೆ ನಮ್ಮ ದೇಶವು ಮತದಾನ ಮಾಡದೆ ದೂರ ಉಳಿದಿರುವುದಕ್ಕೆ ನನಗೆ ಆಘಾತವಾಗಿದೆ ಮತ್ತು ನಾಚಿಕೆಯಾಗಿದೆ. ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿಸಲ್ಪಟ್ಟಿದೆ. ನಮ್ಮದು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ ಎಂದು ಹೇಳಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಲಕ್ಷಾಂತರ ಜನರಿಗೆ ಆಹಾರ, ನೀರು, ವೈದ್ಯಕೀಯ ಸೇವೆ ಮತ್ತು ವಿದ್ಯುತ್ ಕಡಿತಗೊಂಡಿರುವಾಗ, ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ವೀಕ್ಷಿಸುತ್ತಿರುವುದು ಮತ್ತು ಆ ಕುರಿತ ನಿಲುವಿಗೆ ವಿರುದ್ಧವಾಗಿರುವುದು ನಮ್ಮ ದೇಶವು ಈವರೆಗೆ ನಿಂತಿರುವ ಎಲ್ಲ ಆಶಯಕ್ಕೂ ವಿರುದ್ಧವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...