Homeಮುಖಪುಟಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

ಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯಲ್ಲಿ ಜೋರ್ಡಾನ್‌ ದೇಶ ಮಂಡಿಸಿದ ನಾಗರಿಕರ ರಕ್ಷಣೆ ಮತ್ತು ಕದನ ವಿರಾಮದ ಕುರಿತ ನಿರ್ಣಯಕ್ಕೆ ಮತಚಲಾಯಿಸದೆ ದೂರ ಉಳಿದ ಭಾರತದ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಘಾತ ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ನೋಡುವುದು ಭಾರತದ ಆಶಯಕ್ಕೆ  ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ  ಕದನ ವಿರಾಮ ಮತ್ತು ಗಾಝಾ ಪಟ್ಟಿಯ ಜನರಿಗೆ ಮಾನವೀಯ ನೆರವು, ನಾಗರಿಕರ ರಕ್ಷಣೆ , ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವ ಶೀರ್ಷಿಕೆಯಡಿ ಜೋರ್ಡಾನ್ ದೇಶವು ಕರಡು ನಿರ್ಣಯವನ್ನು ಮಂಡಿಸಿತ್ತು. ಆದರೆ ಭಾರತ ಮತದಾನದಿಂದ ದೂರ ಉಳಿದಿತ್ತು.

193 ಸದಸ್ಯ ಬಲದ ಜನರಲ್ ಅಸೆಂಬ್ಲಿಯು ಬಹುಮತದಿಂದ ಜೋರ್ಡಾನ್ ದೇಶವು ಮಂಡಿಸಿದ ಕರಡು ಮಸೂದೆಯನ್ನು ಅಂಗೀಕರಿಸಿದೆ. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿಯವರು, ಮಹಾತ್ಮ ಗಾಂಧಿಯವರ ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿಸುತ್ತದೆ ಎಂಬ ವಾಕ್ಯವನ್ನು ಉಲ್ಲೇಖ ಮಾಡಿದ್ದಾರೆ.

ಗಾಝಾದಲ್ಲಿ ಕದನ ವಿರಾಮಕ್ಕೆ ನಮ್ಮ ದೇಶವು ಮತದಾನ ಮಾಡದೆ ದೂರ ಉಳಿದಿರುವುದಕ್ಕೆ ನನಗೆ ಆಘಾತವಾಗಿದೆ ಮತ್ತು ನಾಚಿಕೆಯಾಗಿದೆ. ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿಸಲ್ಪಟ್ಟಿದೆ. ನಮ್ಮದು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ ಎಂದು ಹೇಳಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಲಕ್ಷಾಂತರ ಜನರಿಗೆ ಆಹಾರ, ನೀರು, ವೈದ್ಯಕೀಯ ಸೇವೆ ಮತ್ತು ವಿದ್ಯುತ್ ಕಡಿತಗೊಂಡಿರುವಾಗ, ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ವೀಕ್ಷಿಸುತ್ತಿರುವುದು ಮತ್ತು ಆ ಕುರಿತ ನಿಲುವಿಗೆ ವಿರುದ್ಧವಾಗಿರುವುದು ನಮ್ಮ ದೇಶವು ಈವರೆಗೆ ನಿಂತಿರುವ ಎಲ್ಲ ಆಶಯಕ್ಕೂ ವಿರುದ್ಧವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...