Homeಮುಖಪುಟಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

ಗಾಝಾ ಕುರಿತ ನಿರ್ಣಯ: ಭಾರತ ಮತದಾನದಿಂದ ದೂರ ಉಳಿದಿದ್ದಕ್ಕೆ ಆಘಾತವಾಗಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯಲ್ಲಿ ಜೋರ್ಡಾನ್‌ ದೇಶ ಮಂಡಿಸಿದ ನಾಗರಿಕರ ರಕ್ಷಣೆ ಮತ್ತು ಕದನ ವಿರಾಮದ ಕುರಿತ ನಿರ್ಣಯಕ್ಕೆ ಮತಚಲಾಯಿಸದೆ ದೂರ ಉಳಿದ ಭಾರತದ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಘಾತ ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ನೋಡುವುದು ಭಾರತದ ಆಶಯಕ್ಕೆ  ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ  ಕದನ ವಿರಾಮ ಮತ್ತು ಗಾಝಾ ಪಟ್ಟಿಯ ಜನರಿಗೆ ಮಾನವೀಯ ನೆರವು, ನಾಗರಿಕರ ರಕ್ಷಣೆ , ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವ ಶೀರ್ಷಿಕೆಯಡಿ ಜೋರ್ಡಾನ್ ದೇಶವು ಕರಡು ನಿರ್ಣಯವನ್ನು ಮಂಡಿಸಿತ್ತು. ಆದರೆ ಭಾರತ ಮತದಾನದಿಂದ ದೂರ ಉಳಿದಿತ್ತು.

193 ಸದಸ್ಯ ಬಲದ ಜನರಲ್ ಅಸೆಂಬ್ಲಿಯು ಬಹುಮತದಿಂದ ಜೋರ್ಡಾನ್ ದೇಶವು ಮಂಡಿಸಿದ ಕರಡು ಮಸೂದೆಯನ್ನು ಅಂಗೀಕರಿಸಿದೆ. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿಯವರು, ಮಹಾತ್ಮ ಗಾಂಧಿಯವರ ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿಸುತ್ತದೆ ಎಂಬ ವಾಕ್ಯವನ್ನು ಉಲ್ಲೇಖ ಮಾಡಿದ್ದಾರೆ.

ಗಾಝಾದಲ್ಲಿ ಕದನ ವಿರಾಮಕ್ಕೆ ನಮ್ಮ ದೇಶವು ಮತದಾನ ಮಾಡದೆ ದೂರ ಉಳಿದಿರುವುದಕ್ಕೆ ನನಗೆ ಆಘಾತವಾಗಿದೆ ಮತ್ತು ನಾಚಿಕೆಯಾಗಿದೆ. ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿಸಲ್ಪಟ್ಟಿದೆ. ನಮ್ಮದು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ ಎಂದು ಹೇಳಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿ ಲಕ್ಷಾಂತರ ಜನರಿಗೆ ಆಹಾರ, ನೀರು, ವೈದ್ಯಕೀಯ ಸೇವೆ ಮತ್ತು ವಿದ್ಯುತ್ ಕಡಿತಗೊಂಡಿರುವಾಗ, ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಿರ್ನಾಮವಾಗುತ್ತಿರುವುದನ್ನು ಮೌನವಾಗಿ ವೀಕ್ಷಿಸುತ್ತಿರುವುದು ಮತ್ತು ಆ ಕುರಿತ ನಿಲುವಿಗೆ ವಿರುದ್ಧವಾಗಿರುವುದು ನಮ್ಮ ದೇಶವು ಈವರೆಗೆ ನಿಂತಿರುವ ಎಲ್ಲ ಆಶಯಕ್ಕೂ ವಿರುದ್ಧವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...