Homeಎಕಾನಮಿದಾಖಲೆಯ 8.2%ಕ್ಕೆ ಏರಿದ ನಿರುದ್ಯೋಗ ದರ: ಹರ್ಯಾಣದಲ್ಲಿ ಗರಿಷ್ಠ, ಕರ್ನಾಟಕದಲ್ಲಿ ಕನಿಷ್ಠ

ದಾಖಲೆಯ 8.2%ಕ್ಕೆ ಏರಿದ ನಿರುದ್ಯೋಗ ದರ: ಹರ್ಯಾಣದಲ್ಲಿ ಗರಿಷ್ಠ, ಕರ್ನಾಟಕದಲ್ಲಿ ಕನಿಷ್ಠ

- Advertisement -
- Advertisement -

ನಿರುದ್ಯೋಗ ದರವು ದಿನೇ ದಿನೇ ಏರುತ್ತಿದ್ದ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಸೆಂಟರ್ ಫಾರ್ ಮಾನಿಟರಿ ಇಂಡಿಯನ್ ಎಕಾನಮಿ (ಸಿ.ಎಂ.ಐ.ಇ) ಪ್ರಕಾರ ಭಾರತದಲ್ಲಿ 8.2% ಏರಿದ್ದು ನಗರ ಪ್ರದೇಶಗಳಲ್ಲಿ ಇನ್ನು ಹೆಚ್ಚು ಅಂದರೆ 9.2% ಏರಿದೆ. ಆಶ್ಚರ್ಯಕರವಾಗಿ ಗ್ರಾಮೀಣ ಭಾಗದಲ್ಲಿ 7.7% ರಷ್ಟಿದೆ.

ಈ ಕುರಿತು ಅಧಿಕೃತವಾಗಿ CMIE ಟ್ವೀಟ್ ಮಾಡಿದ್ದು ನಿರುದ್ಯೋಗ ದರದ ಚಾರ್ಟ್ ಒಂದನ್ನು ಹಾಕಿದೆ. 2017ರ ಆಗಸ್ಟ್ ನಿಂದ ಆರಂಭವಾಗ ನಿರುದ್ಯೋಗ ಹೆಚ್ಚಳದ ದರ ನಿರಂತರವಾಗಿ ಹೆಚ್ಚುತ್ತಲೇ ಇದ್ದಿದ್ದು ಈಗ 8.2% ರಷ್ಟರ ಅಪಾಯಕಾರಿ ಮಟ್ಟಕ್ಕೆ ತಲುಪಿದೆ.

ಹರ್ಯಾಣ ರಾಜ್ಯದಲ್ಲಿ 28.7% ರಷ್ಟು ಅತಿ ಹೆಚ್ಚಿನ ನಿರುದ್ಯೋಗವಿದ್ದರೆ, ಕರ್ನಾಟಕವೂ 0.9% ಅತಿ ಕಡಿಮೆ ನಿರುದ್ಯೋಗ ದರ ಹೊಂದಿರುವ ರಾಜ್ಯವಾಗಿದೆ.

ಈ ಕುರಿತು ಖ್ಯಾತ ಚಿಂತಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದು “ಆಗಸ್ಟ್ 2019 ರಲ್ಲಿ ಹರಿಯಾಣವು ಆಘಾತಕಾರಿ 28.9% ನಿರುದ್ಯೋಗ ದರದೊಂದಿಗೆ ಅಗ್ರಸ್ಥಾನದಲ್ಲಿದೆ, ಹರಿಯಾಣದ ಮುಖ್ಯಮಂತ್ರಿಗಳು ಉದ್ಯೋಗಗಳಿಗೆ ಬೆನ್ನು ತಿರುಗಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ಕಳೆದ ವರ್ಷವೂ 45 ವರ್ಷಗಳಲ್ಲೇ ನಿರುದ್ಯೋಗ ದರವೂ 7.5% ದಾಖಲೆಯ ಮಟ್ಟಕ್ಕೆ ಏರಿದೆ ಎಂದು ಸಿಎಂಐಇ ವರದಿ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳದೇ ಸಿಎಂಐಇ ತಪ್ಪು ಮಾಹಿತಿ ನೀಡಿದೆ ಎಂದು ಆರೋಪ ಮಾಡಿತ್ತು. ಆದರೆ ಚುನಾವಣೆಗಳು ಮುಗಿದ ಕೂಡಲೇ ಅದೇ ಸರ್ಕಾರ ಆ ಅಂಕಿ ಅಂಶಗಳು ನಿಜ ಎಂದು ಒಪ್ಪಿಕೊಂಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಈ ವಿಷಯದ ಬಗ್ಗೆ ನಾನುಗೌರಿ.ಕಾಂ ನೊಂದಿಗೆ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಸಂಚಾಲಕ ಸರೋವರ್ ಬೆಂಕಿಕೇರೆ ಮಾತನಾಡಿ ‘ಇಂದು ಭಾರತದಲ್ಲಿ ತೀವ್ರಮಟ್ಟದಲ್ಲಿ ಆರ್ಥಿಕ ಕುಸಿತವುಂಟಾಗುತ್ತಿದೆ. ಈ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಸುವುದಿರಲಿ, ಇರುವ ಉದ್ಯೋಗಗಳನ್ನೇ ಕಿತ್ತು ಹಾಕಲಾಗುತ್ತಿದೆ. ಮುನ್ನೋಟವಿಲ್ಲದ ನೋಟು ರದ್ಧತಿ ಮತ್ತು ಅವೈಜ್ಞಾನಿಕ ಜಿ.ಎಸ್.ಟಿ ಜಾರಿಗೆ ತಂದ ನಂತರವೇ ಈ ಉದ್ಯೋಗ ಕಡಿತ ಇನ್ನಷ್ಟು ಹೆಚ್ಚಾಗಿದೆ. ಸರ್ಕಾರಗಳು ಈ ದುಸ್ಥಿತಿಯನ್ನು ಒಪ್ಪಿಕೊಳ್ಳದಿರುವುದರಿಂದ ಪರಿಹಾರ ಸಾಧ್ಯವಾಗುತ್ತಿಲ್ಲ. ಈ ಕುರಿತು ಉದ್ಯೋಗಕ್ಕಾಗಿ ಯುವಜನರು ವೇದಿಕೆಯು ಹೋರಾಟ ರೂಪಿಸುವ ಸಲುವಾಗಿ ಸೆಪ್ಟಂಬರ್ 16 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ದುಂಡುಮೇಜಿನ ಸಭೆಯೊಂದನ್ನು ಕರೆದಿದ್ದೇವೆ’ ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...