Homeಎಕಾನಮಿದಾಖಲೆಯ 8.2%ಕ್ಕೆ ಏರಿದ ನಿರುದ್ಯೋಗ ದರ: ಹರ್ಯಾಣದಲ್ಲಿ ಗರಿಷ್ಠ, ಕರ್ನಾಟಕದಲ್ಲಿ ಕನಿಷ್ಠ

ದಾಖಲೆಯ 8.2%ಕ್ಕೆ ಏರಿದ ನಿರುದ್ಯೋಗ ದರ: ಹರ್ಯಾಣದಲ್ಲಿ ಗರಿಷ್ಠ, ಕರ್ನಾಟಕದಲ್ಲಿ ಕನಿಷ್ಠ

- Advertisement -
- Advertisement -

ನಿರುದ್ಯೋಗ ದರವು ದಿನೇ ದಿನೇ ಏರುತ್ತಿದ್ದ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಸೆಂಟರ್ ಫಾರ್ ಮಾನಿಟರಿ ಇಂಡಿಯನ್ ಎಕಾನಮಿ (ಸಿ.ಎಂ.ಐ.ಇ) ಪ್ರಕಾರ ಭಾರತದಲ್ಲಿ 8.2% ಏರಿದ್ದು ನಗರ ಪ್ರದೇಶಗಳಲ್ಲಿ ಇನ್ನು ಹೆಚ್ಚು ಅಂದರೆ 9.2% ಏರಿದೆ. ಆಶ್ಚರ್ಯಕರವಾಗಿ ಗ್ರಾಮೀಣ ಭಾಗದಲ್ಲಿ 7.7% ರಷ್ಟಿದೆ.

ಈ ಕುರಿತು ಅಧಿಕೃತವಾಗಿ CMIE ಟ್ವೀಟ್ ಮಾಡಿದ್ದು ನಿರುದ್ಯೋಗ ದರದ ಚಾರ್ಟ್ ಒಂದನ್ನು ಹಾಕಿದೆ. 2017ರ ಆಗಸ್ಟ್ ನಿಂದ ಆರಂಭವಾಗ ನಿರುದ್ಯೋಗ ಹೆಚ್ಚಳದ ದರ ನಿರಂತರವಾಗಿ ಹೆಚ್ಚುತ್ತಲೇ ಇದ್ದಿದ್ದು ಈಗ 8.2% ರಷ್ಟರ ಅಪಾಯಕಾರಿ ಮಟ್ಟಕ್ಕೆ ತಲುಪಿದೆ.

ಹರ್ಯಾಣ ರಾಜ್ಯದಲ್ಲಿ 28.7% ರಷ್ಟು ಅತಿ ಹೆಚ್ಚಿನ ನಿರುದ್ಯೋಗವಿದ್ದರೆ, ಕರ್ನಾಟಕವೂ 0.9% ಅತಿ ಕಡಿಮೆ ನಿರುದ್ಯೋಗ ದರ ಹೊಂದಿರುವ ರಾಜ್ಯವಾಗಿದೆ.

ಈ ಕುರಿತು ಖ್ಯಾತ ಚಿಂತಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದು “ಆಗಸ್ಟ್ 2019 ರಲ್ಲಿ ಹರಿಯಾಣವು ಆಘಾತಕಾರಿ 28.9% ನಿರುದ್ಯೋಗ ದರದೊಂದಿಗೆ ಅಗ್ರಸ್ಥಾನದಲ್ಲಿದೆ, ಹರಿಯಾಣದ ಮುಖ್ಯಮಂತ್ರಿಗಳು ಉದ್ಯೋಗಗಳಿಗೆ ಬೆನ್ನು ತಿರುಗಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ಕಳೆದ ವರ್ಷವೂ 45 ವರ್ಷಗಳಲ್ಲೇ ನಿರುದ್ಯೋಗ ದರವೂ 7.5% ದಾಖಲೆಯ ಮಟ್ಟಕ್ಕೆ ಏರಿದೆ ಎಂದು ಸಿಎಂಐಇ ವರದಿ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳದೇ ಸಿಎಂಐಇ ತಪ್ಪು ಮಾಹಿತಿ ನೀಡಿದೆ ಎಂದು ಆರೋಪ ಮಾಡಿತ್ತು. ಆದರೆ ಚುನಾವಣೆಗಳು ಮುಗಿದ ಕೂಡಲೇ ಅದೇ ಸರ್ಕಾರ ಆ ಅಂಕಿ ಅಂಶಗಳು ನಿಜ ಎಂದು ಒಪ್ಪಿಕೊಂಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಈ ವಿಷಯದ ಬಗ್ಗೆ ನಾನುಗೌರಿ.ಕಾಂ ನೊಂದಿಗೆ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಸಂಚಾಲಕ ಸರೋವರ್ ಬೆಂಕಿಕೇರೆ ಮಾತನಾಡಿ ‘ಇಂದು ಭಾರತದಲ್ಲಿ ತೀವ್ರಮಟ್ಟದಲ್ಲಿ ಆರ್ಥಿಕ ಕುಸಿತವುಂಟಾಗುತ್ತಿದೆ. ಈ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಸುವುದಿರಲಿ, ಇರುವ ಉದ್ಯೋಗಗಳನ್ನೇ ಕಿತ್ತು ಹಾಕಲಾಗುತ್ತಿದೆ. ಮುನ್ನೋಟವಿಲ್ಲದ ನೋಟು ರದ್ಧತಿ ಮತ್ತು ಅವೈಜ್ಞಾನಿಕ ಜಿ.ಎಸ್.ಟಿ ಜಾರಿಗೆ ತಂದ ನಂತರವೇ ಈ ಉದ್ಯೋಗ ಕಡಿತ ಇನ್ನಷ್ಟು ಹೆಚ್ಚಾಗಿದೆ. ಸರ್ಕಾರಗಳು ಈ ದುಸ್ಥಿತಿಯನ್ನು ಒಪ್ಪಿಕೊಳ್ಳದಿರುವುದರಿಂದ ಪರಿಹಾರ ಸಾಧ್ಯವಾಗುತ್ತಿಲ್ಲ. ಈ ಕುರಿತು ಉದ್ಯೋಗಕ್ಕಾಗಿ ಯುವಜನರು ವೇದಿಕೆಯು ಹೋರಾಟ ರೂಪಿಸುವ ಸಲುವಾಗಿ ಸೆಪ್ಟಂಬರ್ 16 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ದುಂಡುಮೇಜಿನ ಸಭೆಯೊಂದನ್ನು ಕರೆದಿದ್ದೇವೆ’ ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...