Homeಎಕಾನಮಿದಾಖಲೆಯ 8.2%ಕ್ಕೆ ಏರಿದ ನಿರುದ್ಯೋಗ ದರ: ಹರ್ಯಾಣದಲ್ಲಿ ಗರಿಷ್ಠ, ಕರ್ನಾಟಕದಲ್ಲಿ ಕನಿಷ್ಠ

ದಾಖಲೆಯ 8.2%ಕ್ಕೆ ಏರಿದ ನಿರುದ್ಯೋಗ ದರ: ಹರ್ಯಾಣದಲ್ಲಿ ಗರಿಷ್ಠ, ಕರ್ನಾಟಕದಲ್ಲಿ ಕನಿಷ್ಠ

- Advertisement -
- Advertisement -

ನಿರುದ್ಯೋಗ ದರವು ದಿನೇ ದಿನೇ ಏರುತ್ತಿದ್ದ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಸೆಂಟರ್ ಫಾರ್ ಮಾನಿಟರಿ ಇಂಡಿಯನ್ ಎಕಾನಮಿ (ಸಿ.ಎಂ.ಐ.ಇ) ಪ್ರಕಾರ ಭಾರತದಲ್ಲಿ 8.2% ಏರಿದ್ದು ನಗರ ಪ್ರದೇಶಗಳಲ್ಲಿ ಇನ್ನು ಹೆಚ್ಚು ಅಂದರೆ 9.2% ಏರಿದೆ. ಆಶ್ಚರ್ಯಕರವಾಗಿ ಗ್ರಾಮೀಣ ಭಾಗದಲ್ಲಿ 7.7% ರಷ್ಟಿದೆ.

ಈ ಕುರಿತು ಅಧಿಕೃತವಾಗಿ CMIE ಟ್ವೀಟ್ ಮಾಡಿದ್ದು ನಿರುದ್ಯೋಗ ದರದ ಚಾರ್ಟ್ ಒಂದನ್ನು ಹಾಕಿದೆ. 2017ರ ಆಗಸ್ಟ್ ನಿಂದ ಆರಂಭವಾಗ ನಿರುದ್ಯೋಗ ಹೆಚ್ಚಳದ ದರ ನಿರಂತರವಾಗಿ ಹೆಚ್ಚುತ್ತಲೇ ಇದ್ದಿದ್ದು ಈಗ 8.2% ರಷ್ಟರ ಅಪಾಯಕಾರಿ ಮಟ್ಟಕ್ಕೆ ತಲುಪಿದೆ.

ಹರ್ಯಾಣ ರಾಜ್ಯದಲ್ಲಿ 28.7% ರಷ್ಟು ಅತಿ ಹೆಚ್ಚಿನ ನಿರುದ್ಯೋಗವಿದ್ದರೆ, ಕರ್ನಾಟಕವೂ 0.9% ಅತಿ ಕಡಿಮೆ ನಿರುದ್ಯೋಗ ದರ ಹೊಂದಿರುವ ರಾಜ್ಯವಾಗಿದೆ.

ಈ ಕುರಿತು ಖ್ಯಾತ ಚಿಂತಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದು “ಆಗಸ್ಟ್ 2019 ರಲ್ಲಿ ಹರಿಯಾಣವು ಆಘಾತಕಾರಿ 28.9% ನಿರುದ್ಯೋಗ ದರದೊಂದಿಗೆ ಅಗ್ರಸ್ಥಾನದಲ್ಲಿದೆ, ಹರಿಯಾಣದ ಮುಖ್ಯಮಂತ್ರಿಗಳು ಉದ್ಯೋಗಗಳಿಗೆ ಬೆನ್ನು ತಿರುಗಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ಕಳೆದ ವರ್ಷವೂ 45 ವರ್ಷಗಳಲ್ಲೇ ನಿರುದ್ಯೋಗ ದರವೂ 7.5% ದಾಖಲೆಯ ಮಟ್ಟಕ್ಕೆ ಏರಿದೆ ಎಂದು ಸಿಎಂಐಇ ವರದಿ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳದೇ ಸಿಎಂಐಇ ತಪ್ಪು ಮಾಹಿತಿ ನೀಡಿದೆ ಎಂದು ಆರೋಪ ಮಾಡಿತ್ತು. ಆದರೆ ಚುನಾವಣೆಗಳು ಮುಗಿದ ಕೂಡಲೇ ಅದೇ ಸರ್ಕಾರ ಆ ಅಂಕಿ ಅಂಶಗಳು ನಿಜ ಎಂದು ಒಪ್ಪಿಕೊಂಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಈ ವಿಷಯದ ಬಗ್ಗೆ ನಾನುಗೌರಿ.ಕಾಂ ನೊಂದಿಗೆ ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಸಂಚಾಲಕ ಸರೋವರ್ ಬೆಂಕಿಕೇರೆ ಮಾತನಾಡಿ ‘ಇಂದು ಭಾರತದಲ್ಲಿ ತೀವ್ರಮಟ್ಟದಲ್ಲಿ ಆರ್ಥಿಕ ಕುಸಿತವುಂಟಾಗುತ್ತಿದೆ. ಈ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿಸುವುದಿರಲಿ, ಇರುವ ಉದ್ಯೋಗಗಳನ್ನೇ ಕಿತ್ತು ಹಾಕಲಾಗುತ್ತಿದೆ. ಮುನ್ನೋಟವಿಲ್ಲದ ನೋಟು ರದ್ಧತಿ ಮತ್ತು ಅವೈಜ್ಞಾನಿಕ ಜಿ.ಎಸ್.ಟಿ ಜಾರಿಗೆ ತಂದ ನಂತರವೇ ಈ ಉದ್ಯೋಗ ಕಡಿತ ಇನ್ನಷ್ಟು ಹೆಚ್ಚಾಗಿದೆ. ಸರ್ಕಾರಗಳು ಈ ದುಸ್ಥಿತಿಯನ್ನು ಒಪ್ಪಿಕೊಳ್ಳದಿರುವುದರಿಂದ ಪರಿಹಾರ ಸಾಧ್ಯವಾಗುತ್ತಿಲ್ಲ. ಈ ಕುರಿತು ಉದ್ಯೋಗಕ್ಕಾಗಿ ಯುವಜನರು ವೇದಿಕೆಯು ಹೋರಾಟ ರೂಪಿಸುವ ಸಲುವಾಗಿ ಸೆಪ್ಟಂಬರ್ 16 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ದುಂಡುಮೇಜಿನ ಸಭೆಯೊಂದನ್ನು ಕರೆದಿದ್ದೇವೆ’ ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...