Homeಚಳವಳಿಮಾಧ್ಯಮಗಳ ಶಾಕಿಂಗ್ ನ್ಯೂಸ್ ಎಂಬ ಮಹಾನಾಟಕ: ಅದು ಒಂದು ಪಕ್ಷದ ಪರ ಪ್ರಚಾರದ ದ್ಯೋತಕ

ಮಾಧ್ಯಮಗಳ ಶಾಕಿಂಗ್ ನ್ಯೂಸ್ ಎಂಬ ಮಹಾನಾಟಕ: ಅದು ಒಂದು ಪಕ್ಷದ ಪರ ಪ್ರಚಾರದ ದ್ಯೋತಕ

- Advertisement -
- Advertisement -

ಶಾಕಿಂಗ್: “ಪಶ್ಚಿಮ ಬಂಗಾಳದಲ್ಲಿ ನೇತಾಡುವ ಸ್ಥಿತಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಶವ ಪತ್ತೆ”. ಎಂಬ ತಲೆಬರಹದಲ್ಲಿ ಎರಡು ದಿನಗಳ ಹಿಂದೆ ಪ್ರಸಿದ್ದ ದಿನಪತ್ರಿಕೆ ಟೈಮ್ಸ್ ನೌ ವರದಿ ಮಾಡಿತ್ತು.

ಈ ರೀತಿಯ ಶಾಕಿಂಗ್ ಸುದ್ದಿಗಳನ್ನು ಕೊಡುವ ಮುಖ್ಯವಾಹಿನಿ ಮಾಧ್ಯಮಗಳ ಕೆಲಸವನ್ನು ಶ್ಲಾಘಿಸುತ್ತೇನೆ. ಆದರೆ ಮತ್ತೆ ನನಗೆ ಆಶ್ಚರ್ಯವಾಗುತ್ತದೆ,

2015ರಲ್ಲಿ 3263 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2016ರಲ್ಲಿ 3063 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2017ರಲ್ಲಿ 2917 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2018ರಲ್ಲಿ 2761 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಂದರೆ 2014-2018ರ ಅವಧಿಯಲ್ಲಿ ಒಟ್ಟು 12004 ರೈತರು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ನಾಲ್ಕು ವರ್ಷದಲ್ಲಿ ಪ್ರತಿ ದಿನಕ್ಕೆ 8 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಅಂಕಿಅಂಶ ಇಡೀ ಭಾರತದ್ದು ಅಲ್ಲ ಬದಲಿಗೆ ಕೇವಲ ಮಹರಾಷ್ಟ್ರ ರಾಜ್ಯದಲ್ಲಿ ಸಂಭವಿಸಿರುವ ರೈತರ ಆತ್ಮಹತ್ಯೆಗಳ ಕುರಿತದ್ದಾಗಿದೆ.

ಈ ಅಂಕಿಅಂಶಗಳನ್ನು ನ್ಯಾಷನಲ್ ಕ್ರೈಮ್ ರೆಕಾಡ್ರ್ಸ್ ಬ್ಯೂರೋ(NCRB) ನೀಡಿದ ವರದಿಯಾಧರಿಸಿ ದಿ ಹಿಂದೂಸ್ಥಾನ್ ಟೈಮ್ಸ್ ಮತ್ತು ಇತರ ವೆಬ್ ತಾಣಗಳು ಪ್ರಕಟಿಸಿವೆ. ಇದೆ NCRB ಯು 2010ರಿಂದ 2014ರ ವರೆಗೆ ಒಟ್ಟು 8009 ರೈತರು ದಿನಕ್ಕೆ 4 ಜನರಂತೆ ಆತ್ಮಹತ್ಯೆಗೆ ಶರಣಾಗಿದ್ದರೆಂದು ವರದಿ ನೀಡಿದೆ.

ಆದರೆ ಯಾವುದೇ ಮುಖ್ಯವಾಹಿನಿ ಮಾಧ್ಯಮಕ್ಕೂ ಸಹ ಈ ನಾಲ್ಕು ವರ್ಷಗಳಲ್ಲಿ ದಿನಕ್ಕೆ 8 ಜನ ರೈತರು ಕೊಲೆಯಾಗುತ್ತಿರುವುದು ಕಂಡುಬಂದಿಲ್ಲ ಏಕೆ? ಇದು ಏಕೆ ಅವರಿಗೆ ಶಾಕಿಂಗ್ ಅನ್ನಿಸಲಿಲ್ಲ?

ಆದರೆ ಒಂದು ಪಕ್ಷಕ್ಕೆ ಸೇರಿದ ಇಬ್ಬರು ಗೂಂಡಾಗಳು ಬಹುಶಃ ಬೇರೆ ಪಕ್ಷಕ್ಕೆ ಸೇರಿದ ಗೂಂಡಾಗಳಿಂದ ಮೂಲತಃ ಚುನಾವಣಾ ವೈಷಮ್ಯದಿಂದ ಕೊಲೆಯಾದರೆ ಈ ಮಾಧ್ಯಮಗಳಿಗೆ ಶಾಕಿಂಗ್ ನ್ಯೂಸ್ ಆಗುತ್ತದೆ ಮತ್ತು ಅದನ್ನವರು ಮುಖಪುಟದಲ್ಲಿ ಪ್ರಕಟಿಸುತ್ತಾರೆ…

ಈ ನಡುವೆ ಘನತೆಯ ಜೀವನಕ್ಕಾಗಿ ಹೋರಾಟವನ್ನೇ ಮಾರ್ಗವಾಗಿಸಿಕೊಂಡವರು, ಯಾರು ಬಡತನದ ವಿರುದ್ಧ ಯುದ್ದ ಮಾಡುತ್ತಿದ್ದಾರೋ ಅವರು ವಿಷಯಗಳು ಯಾವುದೇ ಆಕ್ರೋಶವಿಲ್ಲದೆ ಹಿಂದಕ್ಕೆ ತಳ್ಳಲ್ಪಡುತ್ತಿವೆ.

ಬಡತನದ ಕಾರಣಕ್ಕೆ ಸ್ವಯಂ ಕೊಲೆಯಾಗಲ್ಪಡುತ್ತಿರುವ ಜನರ ನೋವಿಗೆ ಬದಲಾಗಿ ಯಾರೋ ಇಬ್ಬರು ಗೂಂಡಾಗಳು ಪರಸ್ಪರ ಕೊಲೆಯಾಗುತ್ತಿರುವುದೇ ನಮ್ಮನ್ನು ಹೆಚ್ಚು ಬಾಧಿಸುತ್ತಿರುವ ದೇಶದಲ್ಲಿ ನಾವು ವಾಸಿಸುತ್ತಿರುವುದು ನಮ್ಮ ದುರ್ಧೈವವೇ ಸರಿ.

– ದರ್ಶನ್ ಮಂಡ್ಕರ್ ಫೇಸ್ ಬುಕ್ ಪುಟದಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...