Homeಚಳವಳಿಮಾಧ್ಯಮಗಳ ಶಾಕಿಂಗ್ ನ್ಯೂಸ್ ಎಂಬ ಮಹಾನಾಟಕ: ಅದು ಒಂದು ಪಕ್ಷದ ಪರ ಪ್ರಚಾರದ ದ್ಯೋತಕ

ಮಾಧ್ಯಮಗಳ ಶಾಕಿಂಗ್ ನ್ಯೂಸ್ ಎಂಬ ಮಹಾನಾಟಕ: ಅದು ಒಂದು ಪಕ್ಷದ ಪರ ಪ್ರಚಾರದ ದ್ಯೋತಕ

- Advertisement -
- Advertisement -

ಶಾಕಿಂಗ್: “ಪಶ್ಚಿಮ ಬಂಗಾಳದಲ್ಲಿ ನೇತಾಡುವ ಸ್ಥಿತಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಶವ ಪತ್ತೆ”. ಎಂಬ ತಲೆಬರಹದಲ್ಲಿ ಎರಡು ದಿನಗಳ ಹಿಂದೆ ಪ್ರಸಿದ್ದ ದಿನಪತ್ರಿಕೆ ಟೈಮ್ಸ್ ನೌ ವರದಿ ಮಾಡಿತ್ತು.

ಈ ರೀತಿಯ ಶಾಕಿಂಗ್ ಸುದ್ದಿಗಳನ್ನು ಕೊಡುವ ಮುಖ್ಯವಾಹಿನಿ ಮಾಧ್ಯಮಗಳ ಕೆಲಸವನ್ನು ಶ್ಲಾಘಿಸುತ್ತೇನೆ. ಆದರೆ ಮತ್ತೆ ನನಗೆ ಆಶ್ಚರ್ಯವಾಗುತ್ತದೆ,

2015ರಲ್ಲಿ 3263 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2016ರಲ್ಲಿ 3063 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2017ರಲ್ಲಿ 2917 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2018ರಲ್ಲಿ 2761 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಂದರೆ 2014-2018ರ ಅವಧಿಯಲ್ಲಿ ಒಟ್ಟು 12004 ರೈತರು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ನಾಲ್ಕು ವರ್ಷದಲ್ಲಿ ಪ್ರತಿ ದಿನಕ್ಕೆ 8 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಅಂಕಿಅಂಶ ಇಡೀ ಭಾರತದ್ದು ಅಲ್ಲ ಬದಲಿಗೆ ಕೇವಲ ಮಹರಾಷ್ಟ್ರ ರಾಜ್ಯದಲ್ಲಿ ಸಂಭವಿಸಿರುವ ರೈತರ ಆತ್ಮಹತ್ಯೆಗಳ ಕುರಿತದ್ದಾಗಿದೆ.

ಈ ಅಂಕಿಅಂಶಗಳನ್ನು ನ್ಯಾಷನಲ್ ಕ್ರೈಮ್ ರೆಕಾಡ್ರ್ಸ್ ಬ್ಯೂರೋ(NCRB) ನೀಡಿದ ವರದಿಯಾಧರಿಸಿ ದಿ ಹಿಂದೂಸ್ಥಾನ್ ಟೈಮ್ಸ್ ಮತ್ತು ಇತರ ವೆಬ್ ತಾಣಗಳು ಪ್ರಕಟಿಸಿವೆ. ಇದೆ NCRB ಯು 2010ರಿಂದ 2014ರ ವರೆಗೆ ಒಟ್ಟು 8009 ರೈತರು ದಿನಕ್ಕೆ 4 ಜನರಂತೆ ಆತ್ಮಹತ್ಯೆಗೆ ಶರಣಾಗಿದ್ದರೆಂದು ವರದಿ ನೀಡಿದೆ.

ಆದರೆ ಯಾವುದೇ ಮುಖ್ಯವಾಹಿನಿ ಮಾಧ್ಯಮಕ್ಕೂ ಸಹ ಈ ನಾಲ್ಕು ವರ್ಷಗಳಲ್ಲಿ ದಿನಕ್ಕೆ 8 ಜನ ರೈತರು ಕೊಲೆಯಾಗುತ್ತಿರುವುದು ಕಂಡುಬಂದಿಲ್ಲ ಏಕೆ? ಇದು ಏಕೆ ಅವರಿಗೆ ಶಾಕಿಂಗ್ ಅನ್ನಿಸಲಿಲ್ಲ?

ಆದರೆ ಒಂದು ಪಕ್ಷಕ್ಕೆ ಸೇರಿದ ಇಬ್ಬರು ಗೂಂಡಾಗಳು ಬಹುಶಃ ಬೇರೆ ಪಕ್ಷಕ್ಕೆ ಸೇರಿದ ಗೂಂಡಾಗಳಿಂದ ಮೂಲತಃ ಚುನಾವಣಾ ವೈಷಮ್ಯದಿಂದ ಕೊಲೆಯಾದರೆ ಈ ಮಾಧ್ಯಮಗಳಿಗೆ ಶಾಕಿಂಗ್ ನ್ಯೂಸ್ ಆಗುತ್ತದೆ ಮತ್ತು ಅದನ್ನವರು ಮುಖಪುಟದಲ್ಲಿ ಪ್ರಕಟಿಸುತ್ತಾರೆ…

ಈ ನಡುವೆ ಘನತೆಯ ಜೀವನಕ್ಕಾಗಿ ಹೋರಾಟವನ್ನೇ ಮಾರ್ಗವಾಗಿಸಿಕೊಂಡವರು, ಯಾರು ಬಡತನದ ವಿರುದ್ಧ ಯುದ್ದ ಮಾಡುತ್ತಿದ್ದಾರೋ ಅವರು ವಿಷಯಗಳು ಯಾವುದೇ ಆಕ್ರೋಶವಿಲ್ಲದೆ ಹಿಂದಕ್ಕೆ ತಳ್ಳಲ್ಪಡುತ್ತಿವೆ.

ಬಡತನದ ಕಾರಣಕ್ಕೆ ಸ್ವಯಂ ಕೊಲೆಯಾಗಲ್ಪಡುತ್ತಿರುವ ಜನರ ನೋವಿಗೆ ಬದಲಾಗಿ ಯಾರೋ ಇಬ್ಬರು ಗೂಂಡಾಗಳು ಪರಸ್ಪರ ಕೊಲೆಯಾಗುತ್ತಿರುವುದೇ ನಮ್ಮನ್ನು ಹೆಚ್ಚು ಬಾಧಿಸುತ್ತಿರುವ ದೇಶದಲ್ಲಿ ನಾವು ವಾಸಿಸುತ್ತಿರುವುದು ನಮ್ಮ ದುರ್ಧೈವವೇ ಸರಿ.

– ದರ್ಶನ್ ಮಂಡ್ಕರ್ ಫೇಸ್ ಬುಕ್ ಪುಟದಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...