Homeಮುಖಪುಟರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾ ಅಲ್ಪ ಸಂಖ್ಯಾತರ ವಿರುದ್ದ ಮ್ಯಾನ್ಮಾರ್‌ ಸೇನೆ ಮಾಡಿದ ಅನ್ಯಾಯ ಬಿಚ್ಚಿಟ್ಟ ಸೈನಿಕರು

- Advertisement -
- Advertisement -

ಸೈನ್ಯದಿಂದ ಹೊರಬಂದಿರುವ ಇಬ್ಬರು ಸೈನಿಕರು ‘ರೋಹಿಂಗ್ಯಾ ಅಲ್ಪಸಂಖ್ಯಾತರ’ ವಿರುದ್ದ ಮ್ಯಾನ್ಮಾರ್‌ ಸೈನ್ಯ ಎಸಗಿರುವ ಅಮಾನವೀಯ ಘಟನೆಗಳ ಬಗ್ಗೆ ಮಾತನಾಡಿದ್ದು, ಅಲ್ಪಸಂಖ್ಯಾತರು ವಾಸಿಸುತ್ತಿದ್ದ ಹಳ್ಳಿಗಳಲ್ಲಿ ನೀವು ಏನನ್ನು ನೋಡುತ್ತೀರೋ, ಕೇಳುತ್ತೀರೋ ಎಲ್ಲವನ್ನೂ ಶೂಟ್ ಮಾಡಿ ಎಂದು ಅಧಿಕಾರಿಗಳು ಆದೇಶಿಸಿದ್ದರು ಎಂದು ಮಾನವ ಹಕ್ಕುಗಳ ಗುಂಪು ಹೇಳಿದ್ದಾಗಿ ಎಪಿ ನ್ಯೂಸ್ ವರದಿ ಮಾಡಿದೆ.

ಬೌದ್ಧ- ಬಹುಸಂಖ್ಯಾತ ದೇಶವಾದ ಮ್ಯಾನ್ಮಾರ್‌ನಲ್ಲಿ ಸೈನ್ಯದಿಂದಲೇ ನಡೆದ ಹತ್ಯಾಕಾಂಡಗಳು, ಅತ್ಯಾಚಾರಗಳು ಮತ್ತು ಹಿಂಸಾಚಾರಗಳ ಬಗ್ಗೆ ಸೈನಿಕರು ಮಾಡಿರುವ ಮೊದಲ ಸಾರ್ವಜನಿಕ ತಪ್ಪೊಪ್ಪಿಗೆ ಇದಾಗಿದೆ ಎಂದು ಎಪಿ ನ್ಯೂಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಫೋರ್ಟಿಫೈ ರೈಟ್ಸ್ ಎಂಬ ಮಾನವ ಹಕ್ಕುಗಳ ಗುಂಪು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಕೋರ್ಟ್ ತನಿಖೆಗೆ ಪ್ರಮುಖ ಪುರಾವೆಯಾಗಿ ಇದನ್ನು ಒದಗಿಸಬಹುದೆಂದು ಸೂಚಿಸಿದೆ. ಇಬ್ಬರು ಸೈನಿಕರು ಮ್ಯಾನ್ಮಾರ್‌‌ನ ರಾಖೈನ್‌ನಲ್ಲಿ ಜನರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಗಿ ಫ್ರೋರ್ಟಿಫೈ ಹೇಳಿದೆ.

ರೋಹಿಂಗ್ಯಾಗಳ ವಿರುದ್ಧದ ಹಿಂಸಾಚಾರದ ವಿಚಾರಣೆಯನ್ನು ನೆದರ್‌ಲ್ಯಾಂಡ್ಸ್‌ನಲ್ಲಿರುವ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನಡೆಸುತ್ತಿದೆ. ಇಬ್ಬರು ಸೈನಿಕರು ಕಳೆದ ತಿಂಗಳು ತಮ್ಮ ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹತ್ಯಾಕಾಂಡದಲ್ಲಿ ನೇರವಾಗಿ ಭಾಗವಹಿಸಿದ 19 ಸೈನಿಕರು ಹಾಗೂ ಆದೇಶಗಳನ್ನು ನೀಡಿದ 6 ಹಿರಿಯ ಕಮಾಂಡರ್‌ಗಳ ಹೆಸರುಗಳು ಮತ್ತು ಅವರ ಹುದ್ದೆಗಳ ವಿವರಗಳನ್ನು ಈ ಸೈನಿಕರು ನೀಡಿದ್ದಾರೆ.

‘‘ನನಗೆ 2017 ರಲ್ಲಿ ಸ್ಫಷ್ಟ ಆದೇಶ ನೀಡಲಾಗಿತ್ತು, ನಿಮಗೆ ಏನು ಕಾಣುತ್ತದೋ ಮತ್ತು ಏನು ಕೇಳುತ್ತದೋ ಅಲ್ಲಿಗೆ ಗುಂಡು ಹೊಡೆಯಿರಿ, ನಾವು ಮಹಿಳೆಯರು ಮತ್ತ ಮಕ್ಕಳು ಸೇರಿದಂತೆ 30 ಜನರನ್ನು ಕೊಂದು ಸಾಮೂಹಿಕ ಸಮಾಧಿ ಮಾಡಿದ್ದೇವೆ” ಎಂದು ಎಂದು ಮ್ಯ ವಿನ್ ಟುನ್ ಎಂಬ ಸೈನಿಕ ವೀಡಿಯೊ ಸಂದೇಶದಲ್ಲಿ ಹೇಳಿದ್ದು, “ಮಹಿಳೆಯರನ್ನು ಕೊಲ್ಲುವ ಮೊದಲು ಅತ್ಯಾಚಾರ ಮಾಡಲಾಗಿತ್ತು” ಎಂದಿದ್ದಾರೆ.

ಇದನ್ನೂಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ.

ಮತ್ತೊಬ್ಬ ಸೈನಿಕ ಝಾವ್‌ ನೈಂಗ್‌ ಟುನ್ ತನ್ನ ಘಟಕವು 20 ರೋಹಿಂಗ್ಯಾ ಗ್ರಾಮಗಳನ್ನು ಹೇಗೆ ಅಳಿಸಿಹಾಕಿತು ಎಂಬುದನ್ನು ವಿವರಿಸಿದ್ದಾರೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಸೇರಿದಂತೆ ಸುಮಾರು 80 ಜನರ ಹತ್ಯೆಗಳನ್ನು ಅವರ ಬೆಟಾಲಿಯನ್ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಆಗಸ್ಟ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆಯು ‘ಜನಾಂಗೀಯ ಶುದ್ಧೀಕರಣ’ ಎಂಬ ಕಾರ್ಯಾಚರಣೆಯನ್ನು ಆರಂಭಿಸಿದ ಬಳಿಕ ಆ ದೇಶದಿಂದ 7 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ. ಸೇನೆ ನಡೆಸಿರುವ ಈ ಹತ್ಯಾಕಾಂಡದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಇದು ಜನಾಂಗೀಯ ಹತ್ಯೆಗೆ ಪರಿಪೂರ್ಣ ಉದಾಹರಣೆ ಎಂಬುದಾಗಿ ಬಣ್ಣಿಸಿದೆ.

ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು ಮ್ಯಾನ್ಮಾರ್ ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಿದೆ. ಅವರ ಕುಟುಂಬಗಳು ಮ್ಯಾನ್ಮಾರ್‌ನಲ್ಲಿ ತಲೆಮಾರುಗಳಿಂದ ವಾಸಿಸುತ್ತಿದ್ದರೂ ಸಹ 1982 ರಿಂದ ಬಹುತೇಕ ಎಲ್ಲರಿಗೂ ಪೌರತ್ವ ನಿರಾಕರಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ಸಹ ನಿರಾಕರಿಸಲಾಗಿದೆ.


ಓದಿ: ಪೌರತ್ವ ತಿದ್ದುಪಡಿ ಕಾಯ್ದೆ: ಮತ್ತೊಂದು ದೇಶವಿಭಜನೆಯ ಹೊಸ್ತಿಲಿನಲ್ಲಿ? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...