Homeಮುಖಪುಟರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾ ಅಲ್ಪ ಸಂಖ್ಯಾತರ ವಿರುದ್ದ ಮ್ಯಾನ್ಮಾರ್‌ ಸೇನೆ ಮಾಡಿದ ಅನ್ಯಾಯ ಬಿಚ್ಚಿಟ್ಟ ಸೈನಿಕರು

- Advertisement -
- Advertisement -

ಸೈನ್ಯದಿಂದ ಹೊರಬಂದಿರುವ ಇಬ್ಬರು ಸೈನಿಕರು ‘ರೋಹಿಂಗ್ಯಾ ಅಲ್ಪಸಂಖ್ಯಾತರ’ ವಿರುದ್ದ ಮ್ಯಾನ್ಮಾರ್‌ ಸೈನ್ಯ ಎಸಗಿರುವ ಅಮಾನವೀಯ ಘಟನೆಗಳ ಬಗ್ಗೆ ಮಾತನಾಡಿದ್ದು, ಅಲ್ಪಸಂಖ್ಯಾತರು ವಾಸಿಸುತ್ತಿದ್ದ ಹಳ್ಳಿಗಳಲ್ಲಿ ನೀವು ಏನನ್ನು ನೋಡುತ್ತೀರೋ, ಕೇಳುತ್ತೀರೋ ಎಲ್ಲವನ್ನೂ ಶೂಟ್ ಮಾಡಿ ಎಂದು ಅಧಿಕಾರಿಗಳು ಆದೇಶಿಸಿದ್ದರು ಎಂದು ಮಾನವ ಹಕ್ಕುಗಳ ಗುಂಪು ಹೇಳಿದ್ದಾಗಿ ಎಪಿ ನ್ಯೂಸ್ ವರದಿ ಮಾಡಿದೆ.

ಬೌದ್ಧ- ಬಹುಸಂಖ್ಯಾತ ದೇಶವಾದ ಮ್ಯಾನ್ಮಾರ್‌ನಲ್ಲಿ ಸೈನ್ಯದಿಂದಲೇ ನಡೆದ ಹತ್ಯಾಕಾಂಡಗಳು, ಅತ್ಯಾಚಾರಗಳು ಮತ್ತು ಹಿಂಸಾಚಾರಗಳ ಬಗ್ಗೆ ಸೈನಿಕರು ಮಾಡಿರುವ ಮೊದಲ ಸಾರ್ವಜನಿಕ ತಪ್ಪೊಪ್ಪಿಗೆ ಇದಾಗಿದೆ ಎಂದು ಎಪಿ ನ್ಯೂಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಫೋರ್ಟಿಫೈ ರೈಟ್ಸ್ ಎಂಬ ಮಾನವ ಹಕ್ಕುಗಳ ಗುಂಪು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಕೋರ್ಟ್ ತನಿಖೆಗೆ ಪ್ರಮುಖ ಪುರಾವೆಯಾಗಿ ಇದನ್ನು ಒದಗಿಸಬಹುದೆಂದು ಸೂಚಿಸಿದೆ. ಇಬ್ಬರು ಸೈನಿಕರು ಮ್ಯಾನ್ಮಾರ್‌‌ನ ರಾಖೈನ್‌ನಲ್ಲಿ ಜನರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಗಿ ಫ್ರೋರ್ಟಿಫೈ ಹೇಳಿದೆ.

ರೋಹಿಂಗ್ಯಾಗಳ ವಿರುದ್ಧದ ಹಿಂಸಾಚಾರದ ವಿಚಾರಣೆಯನ್ನು ನೆದರ್‌ಲ್ಯಾಂಡ್ಸ್‌ನಲ್ಲಿರುವ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನಡೆಸುತ್ತಿದೆ. ಇಬ್ಬರು ಸೈನಿಕರು ಕಳೆದ ತಿಂಗಳು ತಮ್ಮ ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹತ್ಯಾಕಾಂಡದಲ್ಲಿ ನೇರವಾಗಿ ಭಾಗವಹಿಸಿದ 19 ಸೈನಿಕರು ಹಾಗೂ ಆದೇಶಗಳನ್ನು ನೀಡಿದ 6 ಹಿರಿಯ ಕಮಾಂಡರ್‌ಗಳ ಹೆಸರುಗಳು ಮತ್ತು ಅವರ ಹುದ್ದೆಗಳ ವಿವರಗಳನ್ನು ಈ ಸೈನಿಕರು ನೀಡಿದ್ದಾರೆ.

‘‘ನನಗೆ 2017 ರಲ್ಲಿ ಸ್ಫಷ್ಟ ಆದೇಶ ನೀಡಲಾಗಿತ್ತು, ನಿಮಗೆ ಏನು ಕಾಣುತ್ತದೋ ಮತ್ತು ಏನು ಕೇಳುತ್ತದೋ ಅಲ್ಲಿಗೆ ಗುಂಡು ಹೊಡೆಯಿರಿ, ನಾವು ಮಹಿಳೆಯರು ಮತ್ತ ಮಕ್ಕಳು ಸೇರಿದಂತೆ 30 ಜನರನ್ನು ಕೊಂದು ಸಾಮೂಹಿಕ ಸಮಾಧಿ ಮಾಡಿದ್ದೇವೆ” ಎಂದು ಎಂದು ಮ್ಯ ವಿನ್ ಟುನ್ ಎಂಬ ಸೈನಿಕ ವೀಡಿಯೊ ಸಂದೇಶದಲ್ಲಿ ಹೇಳಿದ್ದು, “ಮಹಿಳೆಯರನ್ನು ಕೊಲ್ಲುವ ಮೊದಲು ಅತ್ಯಾಚಾರ ಮಾಡಲಾಗಿತ್ತು” ಎಂದಿದ್ದಾರೆ.

ಇದನ್ನೂಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ.

ಮತ್ತೊಬ್ಬ ಸೈನಿಕ ಝಾವ್‌ ನೈಂಗ್‌ ಟುನ್ ತನ್ನ ಘಟಕವು 20 ರೋಹಿಂಗ್ಯಾ ಗ್ರಾಮಗಳನ್ನು ಹೇಗೆ ಅಳಿಸಿಹಾಕಿತು ಎಂಬುದನ್ನು ವಿವರಿಸಿದ್ದಾರೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಸೇರಿದಂತೆ ಸುಮಾರು 80 ಜನರ ಹತ್ಯೆಗಳನ್ನು ಅವರ ಬೆಟಾಲಿಯನ್ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಆಗಸ್ಟ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆಯು ‘ಜನಾಂಗೀಯ ಶುದ್ಧೀಕರಣ’ ಎಂಬ ಕಾರ್ಯಾಚರಣೆಯನ್ನು ಆರಂಭಿಸಿದ ಬಳಿಕ ಆ ದೇಶದಿಂದ 7 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ. ಸೇನೆ ನಡೆಸಿರುವ ಈ ಹತ್ಯಾಕಾಂಡದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಇದು ಜನಾಂಗೀಯ ಹತ್ಯೆಗೆ ಪರಿಪೂರ್ಣ ಉದಾಹರಣೆ ಎಂಬುದಾಗಿ ಬಣ್ಣಿಸಿದೆ.

ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು ಮ್ಯಾನ್ಮಾರ್ ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಿದೆ. ಅವರ ಕುಟುಂಬಗಳು ಮ್ಯಾನ್ಮಾರ್‌ನಲ್ಲಿ ತಲೆಮಾರುಗಳಿಂದ ವಾಸಿಸುತ್ತಿದ್ದರೂ ಸಹ 1982 ರಿಂದ ಬಹುತೇಕ ಎಲ್ಲರಿಗೂ ಪೌರತ್ವ ನಿರಾಕರಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ಸಹ ನಿರಾಕರಿಸಲಾಗಿದೆ.


ಓದಿ: ಪೌರತ್ವ ತಿದ್ದುಪಡಿ ಕಾಯ್ದೆ: ಮತ್ತೊಂದು ದೇಶವಿಭಜನೆಯ ಹೊಸ್ತಿಲಿನಲ್ಲಿ? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...