Homeಮುಖಪುಟರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾ ಅಲ್ಪ ಸಂಖ್ಯಾತರ ವಿರುದ್ದ ಮ್ಯಾನ್ಮಾರ್‌ ಸೇನೆ ಮಾಡಿದ ಅನ್ಯಾಯ ಬಿಚ್ಚಿಟ್ಟ ಸೈನಿಕರು

- Advertisement -
- Advertisement -

ಸೈನ್ಯದಿಂದ ಹೊರಬಂದಿರುವ ಇಬ್ಬರು ಸೈನಿಕರು ‘ರೋಹಿಂಗ್ಯಾ ಅಲ್ಪಸಂಖ್ಯಾತರ’ ವಿರುದ್ದ ಮ್ಯಾನ್ಮಾರ್‌ ಸೈನ್ಯ ಎಸಗಿರುವ ಅಮಾನವೀಯ ಘಟನೆಗಳ ಬಗ್ಗೆ ಮಾತನಾಡಿದ್ದು, ಅಲ್ಪಸಂಖ್ಯಾತರು ವಾಸಿಸುತ್ತಿದ್ದ ಹಳ್ಳಿಗಳಲ್ಲಿ ನೀವು ಏನನ್ನು ನೋಡುತ್ತೀರೋ, ಕೇಳುತ್ತೀರೋ ಎಲ್ಲವನ್ನೂ ಶೂಟ್ ಮಾಡಿ ಎಂದು ಅಧಿಕಾರಿಗಳು ಆದೇಶಿಸಿದ್ದರು ಎಂದು ಮಾನವ ಹಕ್ಕುಗಳ ಗುಂಪು ಹೇಳಿದ್ದಾಗಿ ಎಪಿ ನ್ಯೂಸ್ ವರದಿ ಮಾಡಿದೆ.

ಬೌದ್ಧ- ಬಹುಸಂಖ್ಯಾತ ದೇಶವಾದ ಮ್ಯಾನ್ಮಾರ್‌ನಲ್ಲಿ ಸೈನ್ಯದಿಂದಲೇ ನಡೆದ ಹತ್ಯಾಕಾಂಡಗಳು, ಅತ್ಯಾಚಾರಗಳು ಮತ್ತು ಹಿಂಸಾಚಾರಗಳ ಬಗ್ಗೆ ಸೈನಿಕರು ಮಾಡಿರುವ ಮೊದಲ ಸಾರ್ವಜನಿಕ ತಪ್ಪೊಪ್ಪಿಗೆ ಇದಾಗಿದೆ ಎಂದು ಎಪಿ ನ್ಯೂಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಫೋರ್ಟಿಫೈ ರೈಟ್ಸ್ ಎಂಬ ಮಾನವ ಹಕ್ಕುಗಳ ಗುಂಪು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಕೋರ್ಟ್ ತನಿಖೆಗೆ ಪ್ರಮುಖ ಪುರಾವೆಯಾಗಿ ಇದನ್ನು ಒದಗಿಸಬಹುದೆಂದು ಸೂಚಿಸಿದೆ. ಇಬ್ಬರು ಸೈನಿಕರು ಮ್ಯಾನ್ಮಾರ್‌‌ನ ರಾಖೈನ್‌ನಲ್ಲಿ ಜನರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಗಿ ಫ್ರೋರ್ಟಿಫೈ ಹೇಳಿದೆ.

ರೋಹಿಂಗ್ಯಾಗಳ ವಿರುದ್ಧದ ಹಿಂಸಾಚಾರದ ವಿಚಾರಣೆಯನ್ನು ನೆದರ್‌ಲ್ಯಾಂಡ್ಸ್‌ನಲ್ಲಿರುವ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನಡೆಸುತ್ತಿದೆ. ಇಬ್ಬರು ಸೈನಿಕರು ಕಳೆದ ತಿಂಗಳು ತಮ್ಮ ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹತ್ಯಾಕಾಂಡದಲ್ಲಿ ನೇರವಾಗಿ ಭಾಗವಹಿಸಿದ 19 ಸೈನಿಕರು ಹಾಗೂ ಆದೇಶಗಳನ್ನು ನೀಡಿದ 6 ಹಿರಿಯ ಕಮಾಂಡರ್‌ಗಳ ಹೆಸರುಗಳು ಮತ್ತು ಅವರ ಹುದ್ದೆಗಳ ವಿವರಗಳನ್ನು ಈ ಸೈನಿಕರು ನೀಡಿದ್ದಾರೆ.

‘‘ನನಗೆ 2017 ರಲ್ಲಿ ಸ್ಫಷ್ಟ ಆದೇಶ ನೀಡಲಾಗಿತ್ತು, ನಿಮಗೆ ಏನು ಕಾಣುತ್ತದೋ ಮತ್ತು ಏನು ಕೇಳುತ್ತದೋ ಅಲ್ಲಿಗೆ ಗುಂಡು ಹೊಡೆಯಿರಿ, ನಾವು ಮಹಿಳೆಯರು ಮತ್ತ ಮಕ್ಕಳು ಸೇರಿದಂತೆ 30 ಜನರನ್ನು ಕೊಂದು ಸಾಮೂಹಿಕ ಸಮಾಧಿ ಮಾಡಿದ್ದೇವೆ” ಎಂದು ಎಂದು ಮ್ಯ ವಿನ್ ಟುನ್ ಎಂಬ ಸೈನಿಕ ವೀಡಿಯೊ ಸಂದೇಶದಲ್ಲಿ ಹೇಳಿದ್ದು, “ಮಹಿಳೆಯರನ್ನು ಕೊಲ್ಲುವ ಮೊದಲು ಅತ್ಯಾಚಾರ ಮಾಡಲಾಗಿತ್ತು” ಎಂದಿದ್ದಾರೆ.

ಇದನ್ನೂಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ.

ಮತ್ತೊಬ್ಬ ಸೈನಿಕ ಝಾವ್‌ ನೈಂಗ್‌ ಟುನ್ ತನ್ನ ಘಟಕವು 20 ರೋಹಿಂಗ್ಯಾ ಗ್ರಾಮಗಳನ್ನು ಹೇಗೆ ಅಳಿಸಿಹಾಕಿತು ಎಂಬುದನ್ನು ವಿವರಿಸಿದ್ದಾರೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಸೇರಿದಂತೆ ಸುಮಾರು 80 ಜನರ ಹತ್ಯೆಗಳನ್ನು ಅವರ ಬೆಟಾಲಿಯನ್ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಆಗಸ್ಟ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆಯು ‘ಜನಾಂಗೀಯ ಶುದ್ಧೀಕರಣ’ ಎಂಬ ಕಾರ್ಯಾಚರಣೆಯನ್ನು ಆರಂಭಿಸಿದ ಬಳಿಕ ಆ ದೇಶದಿಂದ 7 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ. ಸೇನೆ ನಡೆಸಿರುವ ಈ ಹತ್ಯಾಕಾಂಡದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಇದು ಜನಾಂಗೀಯ ಹತ್ಯೆಗೆ ಪರಿಪೂರ್ಣ ಉದಾಹರಣೆ ಎಂಬುದಾಗಿ ಬಣ್ಣಿಸಿದೆ.

ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು ಮ್ಯಾನ್ಮಾರ್ ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಿದೆ. ಅವರ ಕುಟುಂಬಗಳು ಮ್ಯಾನ್ಮಾರ್‌ನಲ್ಲಿ ತಲೆಮಾರುಗಳಿಂದ ವಾಸಿಸುತ್ತಿದ್ದರೂ ಸಹ 1982 ರಿಂದ ಬಹುತೇಕ ಎಲ್ಲರಿಗೂ ಪೌರತ್ವ ನಿರಾಕರಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ಸಹ ನಿರಾಕರಿಸಲಾಗಿದೆ.


ಓದಿ: ಪೌರತ್ವ ತಿದ್ದುಪಡಿ ಕಾಯ್ದೆ: ಮತ್ತೊಂದು ದೇಶವಿಭಜನೆಯ ಹೊಸ್ತಿಲಿನಲ್ಲಿ? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...