Homeಮುಖಪುಟರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾ ಅಲ್ಪ ಸಂಖ್ಯಾತರ ವಿರುದ್ದ ಮ್ಯಾನ್ಮಾರ್‌ ಸೇನೆ ಮಾಡಿದ ಅನ್ಯಾಯ ಬಿಚ್ಚಿಟ್ಟ ಸೈನಿಕರು

- Advertisement -
- Advertisement -

ಸೈನ್ಯದಿಂದ ಹೊರಬಂದಿರುವ ಇಬ್ಬರು ಸೈನಿಕರು ‘ರೋಹಿಂಗ್ಯಾ ಅಲ್ಪಸಂಖ್ಯಾತರ’ ವಿರುದ್ದ ಮ್ಯಾನ್ಮಾರ್‌ ಸೈನ್ಯ ಎಸಗಿರುವ ಅಮಾನವೀಯ ಘಟನೆಗಳ ಬಗ್ಗೆ ಮಾತನಾಡಿದ್ದು, ಅಲ್ಪಸಂಖ್ಯಾತರು ವಾಸಿಸುತ್ತಿದ್ದ ಹಳ್ಳಿಗಳಲ್ಲಿ ನೀವು ಏನನ್ನು ನೋಡುತ್ತೀರೋ, ಕೇಳುತ್ತೀರೋ ಎಲ್ಲವನ್ನೂ ಶೂಟ್ ಮಾಡಿ ಎಂದು ಅಧಿಕಾರಿಗಳು ಆದೇಶಿಸಿದ್ದರು ಎಂದು ಮಾನವ ಹಕ್ಕುಗಳ ಗುಂಪು ಹೇಳಿದ್ದಾಗಿ ಎಪಿ ನ್ಯೂಸ್ ವರದಿ ಮಾಡಿದೆ.

ಬೌದ್ಧ- ಬಹುಸಂಖ್ಯಾತ ದೇಶವಾದ ಮ್ಯಾನ್ಮಾರ್‌ನಲ್ಲಿ ಸೈನ್ಯದಿಂದಲೇ ನಡೆದ ಹತ್ಯಾಕಾಂಡಗಳು, ಅತ್ಯಾಚಾರಗಳು ಮತ್ತು ಹಿಂಸಾಚಾರಗಳ ಬಗ್ಗೆ ಸೈನಿಕರು ಮಾಡಿರುವ ಮೊದಲ ಸಾರ್ವಜನಿಕ ತಪ್ಪೊಪ್ಪಿಗೆ ಇದಾಗಿದೆ ಎಂದು ಎಪಿ ನ್ಯೂಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಫೋರ್ಟಿಫೈ ರೈಟ್ಸ್ ಎಂಬ ಮಾನವ ಹಕ್ಕುಗಳ ಗುಂಪು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಕೋರ್ಟ್ ತನಿಖೆಗೆ ಪ್ರಮುಖ ಪುರಾವೆಯಾಗಿ ಇದನ್ನು ಒದಗಿಸಬಹುದೆಂದು ಸೂಚಿಸಿದೆ. ಇಬ್ಬರು ಸೈನಿಕರು ಮ್ಯಾನ್ಮಾರ್‌‌ನ ರಾಖೈನ್‌ನಲ್ಲಿ ಜನರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಗಿ ಫ್ರೋರ್ಟಿಫೈ ಹೇಳಿದೆ.

ರೋಹಿಂಗ್ಯಾಗಳ ವಿರುದ್ಧದ ಹಿಂಸಾಚಾರದ ವಿಚಾರಣೆಯನ್ನು ನೆದರ್‌ಲ್ಯಾಂಡ್ಸ್‌ನಲ್ಲಿರುವ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನಡೆಸುತ್ತಿದೆ. ಇಬ್ಬರು ಸೈನಿಕರು ಕಳೆದ ತಿಂಗಳು ತಮ್ಮ ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹತ್ಯಾಕಾಂಡದಲ್ಲಿ ನೇರವಾಗಿ ಭಾಗವಹಿಸಿದ 19 ಸೈನಿಕರು ಹಾಗೂ ಆದೇಶಗಳನ್ನು ನೀಡಿದ 6 ಹಿರಿಯ ಕಮಾಂಡರ್‌ಗಳ ಹೆಸರುಗಳು ಮತ್ತು ಅವರ ಹುದ್ದೆಗಳ ವಿವರಗಳನ್ನು ಈ ಸೈನಿಕರು ನೀಡಿದ್ದಾರೆ.

‘‘ನನಗೆ 2017 ರಲ್ಲಿ ಸ್ಫಷ್ಟ ಆದೇಶ ನೀಡಲಾಗಿತ್ತು, ನಿಮಗೆ ಏನು ಕಾಣುತ್ತದೋ ಮತ್ತು ಏನು ಕೇಳುತ್ತದೋ ಅಲ್ಲಿಗೆ ಗುಂಡು ಹೊಡೆಯಿರಿ, ನಾವು ಮಹಿಳೆಯರು ಮತ್ತ ಮಕ್ಕಳು ಸೇರಿದಂತೆ 30 ಜನರನ್ನು ಕೊಂದು ಸಾಮೂಹಿಕ ಸಮಾಧಿ ಮಾಡಿದ್ದೇವೆ” ಎಂದು ಎಂದು ಮ್ಯ ವಿನ್ ಟುನ್ ಎಂಬ ಸೈನಿಕ ವೀಡಿಯೊ ಸಂದೇಶದಲ್ಲಿ ಹೇಳಿದ್ದು, “ಮಹಿಳೆಯರನ್ನು ಕೊಲ್ಲುವ ಮೊದಲು ಅತ್ಯಾಚಾರ ಮಾಡಲಾಗಿತ್ತು” ಎಂದಿದ್ದಾರೆ.

ಇದನ್ನೂಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ.

ಮತ್ತೊಬ್ಬ ಸೈನಿಕ ಝಾವ್‌ ನೈಂಗ್‌ ಟುನ್ ತನ್ನ ಘಟಕವು 20 ರೋಹಿಂಗ್ಯಾ ಗ್ರಾಮಗಳನ್ನು ಹೇಗೆ ಅಳಿಸಿಹಾಕಿತು ಎಂಬುದನ್ನು ವಿವರಿಸಿದ್ದಾರೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಸೇರಿದಂತೆ ಸುಮಾರು 80 ಜನರ ಹತ್ಯೆಗಳನ್ನು ಅವರ ಬೆಟಾಲಿಯನ್ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಆಗಸ್ಟ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆಯು ‘ಜನಾಂಗೀಯ ಶುದ್ಧೀಕರಣ’ ಎಂಬ ಕಾರ್ಯಾಚರಣೆಯನ್ನು ಆರಂಭಿಸಿದ ಬಳಿಕ ಆ ದೇಶದಿಂದ 7 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ. ಸೇನೆ ನಡೆಸಿರುವ ಈ ಹತ್ಯಾಕಾಂಡದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಇದು ಜನಾಂಗೀಯ ಹತ್ಯೆಗೆ ಪರಿಪೂರ್ಣ ಉದಾಹರಣೆ ಎಂಬುದಾಗಿ ಬಣ್ಣಿಸಿದೆ.

ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು ಮ್ಯಾನ್ಮಾರ್ ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಿದೆ. ಅವರ ಕುಟುಂಬಗಳು ಮ್ಯಾನ್ಮಾರ್‌ನಲ್ಲಿ ತಲೆಮಾರುಗಳಿಂದ ವಾಸಿಸುತ್ತಿದ್ದರೂ ಸಹ 1982 ರಿಂದ ಬಹುತೇಕ ಎಲ್ಲರಿಗೂ ಪೌರತ್ವ ನಿರಾಕರಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ಸಹ ನಿರಾಕರಿಸಲಾಗಿದೆ.


ಓದಿ: ಪೌರತ್ವ ತಿದ್ದುಪಡಿ ಕಾಯ್ದೆ: ಮತ್ತೊಂದು ದೇಶವಿಭಜನೆಯ ಹೊಸ್ತಿಲಿನಲ್ಲಿ? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...