Homeಮುಖಪುಟರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾ ಅಲ್ಪ ಸಂಖ್ಯಾತರ ವಿರುದ್ದ ಮ್ಯಾನ್ಮಾರ್‌ ಸೇನೆ ಮಾಡಿದ ಅನ್ಯಾಯ ಬಿಚ್ಚಿಟ್ಟ ಸೈನಿಕರು

- Advertisement -
- Advertisement -

ಸೈನ್ಯದಿಂದ ಹೊರಬಂದಿರುವ ಇಬ್ಬರು ಸೈನಿಕರು ‘ರೋಹಿಂಗ್ಯಾ ಅಲ್ಪಸಂಖ್ಯಾತರ’ ವಿರುದ್ದ ಮ್ಯಾನ್ಮಾರ್‌ ಸೈನ್ಯ ಎಸಗಿರುವ ಅಮಾನವೀಯ ಘಟನೆಗಳ ಬಗ್ಗೆ ಮಾತನಾಡಿದ್ದು, ಅಲ್ಪಸಂಖ್ಯಾತರು ವಾಸಿಸುತ್ತಿದ್ದ ಹಳ್ಳಿಗಳಲ್ಲಿ ನೀವು ಏನನ್ನು ನೋಡುತ್ತೀರೋ, ಕೇಳುತ್ತೀರೋ ಎಲ್ಲವನ್ನೂ ಶೂಟ್ ಮಾಡಿ ಎಂದು ಅಧಿಕಾರಿಗಳು ಆದೇಶಿಸಿದ್ದರು ಎಂದು ಮಾನವ ಹಕ್ಕುಗಳ ಗುಂಪು ಹೇಳಿದ್ದಾಗಿ ಎಪಿ ನ್ಯೂಸ್ ವರದಿ ಮಾಡಿದೆ.

ಬೌದ್ಧ- ಬಹುಸಂಖ್ಯಾತ ದೇಶವಾದ ಮ್ಯಾನ್ಮಾರ್‌ನಲ್ಲಿ ಸೈನ್ಯದಿಂದಲೇ ನಡೆದ ಹತ್ಯಾಕಾಂಡಗಳು, ಅತ್ಯಾಚಾರಗಳು ಮತ್ತು ಹಿಂಸಾಚಾರಗಳ ಬಗ್ಗೆ ಸೈನಿಕರು ಮಾಡಿರುವ ಮೊದಲ ಸಾರ್ವಜನಿಕ ತಪ್ಪೊಪ್ಪಿಗೆ ಇದಾಗಿದೆ ಎಂದು ಎಪಿ ನ್ಯೂಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಫೋರ್ಟಿಫೈ ರೈಟ್ಸ್ ಎಂಬ ಮಾನವ ಹಕ್ಕುಗಳ ಗುಂಪು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಕೋರ್ಟ್ ತನಿಖೆಗೆ ಪ್ರಮುಖ ಪುರಾವೆಯಾಗಿ ಇದನ್ನು ಒದಗಿಸಬಹುದೆಂದು ಸೂಚಿಸಿದೆ. ಇಬ್ಬರು ಸೈನಿಕರು ಮ್ಯಾನ್ಮಾರ್‌‌ನ ರಾಖೈನ್‌ನಲ್ಲಿ ಜನರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಗಿ ಫ್ರೋರ್ಟಿಫೈ ಹೇಳಿದೆ.

ರೋಹಿಂಗ್ಯಾಗಳ ವಿರುದ್ಧದ ಹಿಂಸಾಚಾರದ ವಿಚಾರಣೆಯನ್ನು ನೆದರ್‌ಲ್ಯಾಂಡ್ಸ್‌ನಲ್ಲಿರುವ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನಡೆಸುತ್ತಿದೆ. ಇಬ್ಬರು ಸೈನಿಕರು ಕಳೆದ ತಿಂಗಳು ತಮ್ಮ ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹತ್ಯಾಕಾಂಡದಲ್ಲಿ ನೇರವಾಗಿ ಭಾಗವಹಿಸಿದ 19 ಸೈನಿಕರು ಹಾಗೂ ಆದೇಶಗಳನ್ನು ನೀಡಿದ 6 ಹಿರಿಯ ಕಮಾಂಡರ್‌ಗಳ ಹೆಸರುಗಳು ಮತ್ತು ಅವರ ಹುದ್ದೆಗಳ ವಿವರಗಳನ್ನು ಈ ಸೈನಿಕರು ನೀಡಿದ್ದಾರೆ.

‘‘ನನಗೆ 2017 ರಲ್ಲಿ ಸ್ಫಷ್ಟ ಆದೇಶ ನೀಡಲಾಗಿತ್ತು, ನಿಮಗೆ ಏನು ಕಾಣುತ್ತದೋ ಮತ್ತು ಏನು ಕೇಳುತ್ತದೋ ಅಲ್ಲಿಗೆ ಗುಂಡು ಹೊಡೆಯಿರಿ, ನಾವು ಮಹಿಳೆಯರು ಮತ್ತ ಮಕ್ಕಳು ಸೇರಿದಂತೆ 30 ಜನರನ್ನು ಕೊಂದು ಸಾಮೂಹಿಕ ಸಮಾಧಿ ಮಾಡಿದ್ದೇವೆ” ಎಂದು ಎಂದು ಮ್ಯ ವಿನ್ ಟುನ್ ಎಂಬ ಸೈನಿಕ ವೀಡಿಯೊ ಸಂದೇಶದಲ್ಲಿ ಹೇಳಿದ್ದು, “ಮಹಿಳೆಯರನ್ನು ಕೊಲ್ಲುವ ಮೊದಲು ಅತ್ಯಾಚಾರ ಮಾಡಲಾಗಿತ್ತು” ಎಂದಿದ್ದಾರೆ.

ಇದನ್ನೂಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ.

ಮತ್ತೊಬ್ಬ ಸೈನಿಕ ಝಾವ್‌ ನೈಂಗ್‌ ಟುನ್ ತನ್ನ ಘಟಕವು 20 ರೋಹಿಂಗ್ಯಾ ಗ್ರಾಮಗಳನ್ನು ಹೇಗೆ ಅಳಿಸಿಹಾಕಿತು ಎಂಬುದನ್ನು ವಿವರಿಸಿದ್ದಾರೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಸೇರಿದಂತೆ ಸುಮಾರು 80 ಜನರ ಹತ್ಯೆಗಳನ್ನು ಅವರ ಬೆಟಾಲಿಯನ್ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಆಗಸ್ಟ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆಯು ‘ಜನಾಂಗೀಯ ಶುದ್ಧೀಕರಣ’ ಎಂಬ ಕಾರ್ಯಾಚರಣೆಯನ್ನು ಆರಂಭಿಸಿದ ಬಳಿಕ ಆ ದೇಶದಿಂದ 7 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ. ಸೇನೆ ನಡೆಸಿರುವ ಈ ಹತ್ಯಾಕಾಂಡದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಇದು ಜನಾಂಗೀಯ ಹತ್ಯೆಗೆ ಪರಿಪೂರ್ಣ ಉದಾಹರಣೆ ಎಂಬುದಾಗಿ ಬಣ್ಣಿಸಿದೆ.

ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು ಮ್ಯಾನ್ಮಾರ್ ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಿದೆ. ಅವರ ಕುಟುಂಬಗಳು ಮ್ಯಾನ್ಮಾರ್‌ನಲ್ಲಿ ತಲೆಮಾರುಗಳಿಂದ ವಾಸಿಸುತ್ತಿದ್ದರೂ ಸಹ 1982 ರಿಂದ ಬಹುತೇಕ ಎಲ್ಲರಿಗೂ ಪೌರತ್ವ ನಿರಾಕರಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ಸಹ ನಿರಾಕರಿಸಲಾಗಿದೆ.


ಓದಿ: ಪೌರತ್ವ ತಿದ್ದುಪಡಿ ಕಾಯ್ದೆ: ಮತ್ತೊಂದು ದೇಶವಿಭಜನೆಯ ಹೊಸ್ತಿಲಿನಲ್ಲಿ? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...