Homeಮುಖಪುಟಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

ಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿ ಕಾರ್ಯಕರ್ತನೊಬ್ಬನ ಮೇಲೆ ನವೆಂಬರ್ 5, 2025 ರ ಸಂಜೆ ಗ್ರಂಥಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಏಳು ಜನರ ಗುಂಪು ದಾಳಿ ನಡೆಸಿದೆ ಎಂದು ವರದಿಯಾಗಿದೆ. ‘ದಾಳಿಕೋರರು ತನ್ನ ಮೇಲೆ ಗುಂಡು ಹಾರಿಸಿ ಅಪಹರಿಸಲು ಪ್ರಯತ್ನಿಸಿದ್ದಾರೆ’ ಎಂದು ಅಂಬೇಡ್ಕರ್ ಹಾಲ್ ನಿವಾಸಿ ಮತ್ತು ಎರಡನೇ ವರ್ಷದ ಕಾನೂನು ವಿದ್ಯಾರ್ಥಿ ಅಮ್ಜಾದ್ ಅಲಿ ಆರೋಪಿಸಿದ್ದಾರೆ.

ಅಮ್ಜಾದ್ ಅವರ ದೂರಿನ ಪ್ರಕಾರ, ಸಂಜೆ 5 ಗಂಟೆ ಸುಮಾರಿಗೆ ತನ್ನ ಸ್ಕೂಟರ್ ನಿಲ್ಲಿಸಿ ಗ್ರಂಥಾಲಯದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪರಿಚಿತ ಮೂವರು ವಿದ್ಯಾರ್ಥಿಗಳೊಂದಿಗೆ ಪರಿಚಿತ ನಾಲ್ವರು ವಿದ್ಯಾರ್ಥಿಗಳು ತನ್ನನ್ನು ಎದುರಿಸಿ, ಮಾತಿನ ಚಕಮಕಿ ನಡೆಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ದಾಳಿಕೋರರಲ್ಲಿ ಒಬ್ಬರು ದೇಶೀಯ ಪಿಸ್ತೂಲ್ ಅನ್ನು ತೋರಿಸಿ ಗುಂಡು ಹಾರಿಸಿದರು, ಅದು ಸ್ವಲ್ಪದರಲ್ಲೇ ತಪ್ಪಿತು. ಗಲಾಟೆಯ ಸಮಯದಲ್ಲಿ, ನನ್ನ ಕೈಗಡಿಯಾರವನ್ನು ಕಸಿದುಕೊಳ್ಳಲಾಗಿದೆ ಎಂದು ಅವರು ದೂರು ನೀಡಿದ್ದಾರೆ.

ವಿದ್ಯಾರ್ಥಿ ಚಟುವಟಿಕೆಯಲ್ಲಿ, ವಿಶೇಷವಾಗಿ ಹಿಂದಿನ ಧರಣಿ ಪ್ರತಿಭಟನೆಯ ಸಮಯದಲ್ಲಿ, ತೊಡಗಿಸಿಕೊಂಡಿದ್ದರಿಂದ ತಿಂಗಳುಗಟ್ಟಲೆ ಅದೇ ಗುಂಪಿನಿಂದ ತನಗೆ ಬೆದರಿಕೆ ಇತ್ತು ಎಂದು ಅಮ್ಜಾದ್ ಹೇಳಿದ್ದಾರೆ. “ಅವರು ನನ್ನ ಹಾಸ್ಟೆಲ್ ಬಳಿ ಶಸ್ತ್ರಾಸ್ತ್ರಗಳೊಂದಿಗೆ ಸುತ್ತಾಡುತ್ತಿದ್ದರು, ಕೊಲೆ ಬೆದರಿಕೆ ಹಾಕುತ್ತಿದ್ದರು. ನನ್ನನ್ನು ಕೊಲ್ಲಲು ಯೋಜಿಸುತ್ತಿದ್ದರು” ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. ದೂರಿನಲ್ಲಿ ಹೆಸರಿಸಲಾದ ನಾಲ್ವರು ವಿದ್ಯಾರ್ಥಿಗಳು, ಮೂವರು ಅಪರಿಚಿತ ಸಹಚರರ ವಿರುದ್ಧ ದೂರು ದಾಖಲಿಸಲಾಗಿದೆ. ಈ ವಿಷಯ ತನಿಖೆಯಲ್ಲಿದೆ ಎಂದು ಇನ್ಸ್‌ಪೆಕ್ಟರ್ ಪಂಕಜ್ ಮಿಶ್ರಾ ದೃಢಪಡಿಸಿದ್ದಾರೆ.

ಆದರೆ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡ ಮತ್ತು ಪೊಲೀಸ್ ತನಿಖೆಯು ಗುಂಡು ಹಾರಿಸುವುದು ಅಥವಾ ಅಪಹರಣಕ್ಕೆ ಯತ್ನಿಸಿದ ಆರೋಪಗಳನ್ನು ದೃಢಪಡಿಸಿಲ್ಲ. ವಿದ್ಯಾರ್ಥಿಗಳ ನಡುವಿನ ವಿವಾದದಿಂದ ಈ ಘಟನೆ ಉದ್ಭವಿಸಿದೆ. ಎರಡೂ ಕಡೆಯವರು ದೂರು ದಾಖಲಿಸಿದ್ದಾರೆ ಎಂದು ಡೆಪ್ಯೂಟಿ ಪ್ರೊಕ್ಟರ್ ಪ್ರೊ. ಹಶ್ಮತ್ ಅಲಿ ಹೇಳಿದರು.

ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...