Homeಮುಖಪುಟಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

ಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿ ಕಾರ್ಯಕರ್ತನೊಬ್ಬನ ಮೇಲೆ ನವೆಂಬರ್ 5, 2025 ರ ಸಂಜೆ ಗ್ರಂಥಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಏಳು ಜನರ ಗುಂಪು ದಾಳಿ ನಡೆಸಿದೆ ಎಂದು ವರದಿಯಾಗಿದೆ. ‘ದಾಳಿಕೋರರು ತನ್ನ ಮೇಲೆ ಗುಂಡು ಹಾರಿಸಿ ಅಪಹರಿಸಲು ಪ್ರಯತ್ನಿಸಿದ್ದಾರೆ’ ಎಂದು ಅಂಬೇಡ್ಕರ್ ಹಾಲ್ ನಿವಾಸಿ ಮತ್ತು ಎರಡನೇ ವರ್ಷದ ಕಾನೂನು ವಿದ್ಯಾರ್ಥಿ ಅಮ್ಜಾದ್ ಅಲಿ ಆರೋಪಿಸಿದ್ದಾರೆ.

ಅಮ್ಜಾದ್ ಅವರ ದೂರಿನ ಪ್ರಕಾರ, ಸಂಜೆ 5 ಗಂಟೆ ಸುಮಾರಿಗೆ ತನ್ನ ಸ್ಕೂಟರ್ ನಿಲ್ಲಿಸಿ ಗ್ರಂಥಾಲಯದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪರಿಚಿತ ಮೂವರು ವಿದ್ಯಾರ್ಥಿಗಳೊಂದಿಗೆ ಪರಿಚಿತ ನಾಲ್ವರು ವಿದ್ಯಾರ್ಥಿಗಳು ತನ್ನನ್ನು ಎದುರಿಸಿ, ಮಾತಿನ ಚಕಮಕಿ ನಡೆಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ದಾಳಿಕೋರರಲ್ಲಿ ಒಬ್ಬರು ದೇಶೀಯ ಪಿಸ್ತೂಲ್ ಅನ್ನು ತೋರಿಸಿ ಗುಂಡು ಹಾರಿಸಿದರು, ಅದು ಸ್ವಲ್ಪದರಲ್ಲೇ ತಪ್ಪಿತು. ಗಲಾಟೆಯ ಸಮಯದಲ್ಲಿ, ನನ್ನ ಕೈಗಡಿಯಾರವನ್ನು ಕಸಿದುಕೊಳ್ಳಲಾಗಿದೆ ಎಂದು ಅವರು ದೂರು ನೀಡಿದ್ದಾರೆ.

ವಿದ್ಯಾರ್ಥಿ ಚಟುವಟಿಕೆಯಲ್ಲಿ, ವಿಶೇಷವಾಗಿ ಹಿಂದಿನ ಧರಣಿ ಪ್ರತಿಭಟನೆಯ ಸಮಯದಲ್ಲಿ, ತೊಡಗಿಸಿಕೊಂಡಿದ್ದರಿಂದ ತಿಂಗಳುಗಟ್ಟಲೆ ಅದೇ ಗುಂಪಿನಿಂದ ತನಗೆ ಬೆದರಿಕೆ ಇತ್ತು ಎಂದು ಅಮ್ಜಾದ್ ಹೇಳಿದ್ದಾರೆ. “ಅವರು ನನ್ನ ಹಾಸ್ಟೆಲ್ ಬಳಿ ಶಸ್ತ್ರಾಸ್ತ್ರಗಳೊಂದಿಗೆ ಸುತ್ತಾಡುತ್ತಿದ್ದರು, ಕೊಲೆ ಬೆದರಿಕೆ ಹಾಕುತ್ತಿದ್ದರು. ನನ್ನನ್ನು ಕೊಲ್ಲಲು ಯೋಜಿಸುತ್ತಿದ್ದರು” ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. ದೂರಿನಲ್ಲಿ ಹೆಸರಿಸಲಾದ ನಾಲ್ವರು ವಿದ್ಯಾರ್ಥಿಗಳು, ಮೂವರು ಅಪರಿಚಿತ ಸಹಚರರ ವಿರುದ್ಧ ದೂರು ದಾಖಲಿಸಲಾಗಿದೆ. ಈ ವಿಷಯ ತನಿಖೆಯಲ್ಲಿದೆ ಎಂದು ಇನ್ಸ್‌ಪೆಕ್ಟರ್ ಪಂಕಜ್ ಮಿಶ್ರಾ ದೃಢಪಡಿಸಿದ್ದಾರೆ.

ಆದರೆ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡ ಮತ್ತು ಪೊಲೀಸ್ ತನಿಖೆಯು ಗುಂಡು ಹಾರಿಸುವುದು ಅಥವಾ ಅಪಹರಣಕ್ಕೆ ಯತ್ನಿಸಿದ ಆರೋಪಗಳನ್ನು ದೃಢಪಡಿಸಿಲ್ಲ. ವಿದ್ಯಾರ್ಥಿಗಳ ನಡುವಿನ ವಿವಾದದಿಂದ ಈ ಘಟನೆ ಉದ್ಭವಿಸಿದೆ. ಎರಡೂ ಕಡೆಯವರು ದೂರು ದಾಖಲಿಸಿದ್ದಾರೆ ಎಂದು ಡೆಪ್ಯೂಟಿ ಪ್ರೊಕ್ಟರ್ ಪ್ರೊ. ಹಶ್ಮತ್ ಅಲಿ ಹೇಳಿದರು.

ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...