Homeಮುಖಪುಟಭೂಮಾಫಿಯಾ ನಡೆಸುತ್ತಿರುವವರಿಂದ ಜೀವ ಬೆದರಿಕೆ ಇದೆ ಎಂದಿದ್ದ ಪತ್ರಕರ್ತನ ಮೇಲೆ ಗುಂಡಿನ ದಾಳಿ

ಭೂಮಾಫಿಯಾ ನಡೆಸುತ್ತಿರುವವರಿಂದ ಜೀವ ಬೆದರಿಕೆ ಇದೆ ಎಂದಿದ್ದ ಪತ್ರಕರ್ತನ ಮೇಲೆ ಗುಂಡಿನ ದಾಳಿ

- Advertisement -
- Advertisement -

ಭೂಮಾಫಿಯಾ ನಡೆಸುತ್ತಿರುವವರಿಂದ ತನಗೆ ಜೀವ ಬೆದರಿಕೆ ಇದೆ ಎಂದು ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರು ಹೇಳಿದ್ದರು. ಈ ಬಗ್ಗೆ ದೂರು ನೀಡಿದ ತಿಂಗಳ ನಂತರ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

24ವರ್ಷದ ಮನ್ನು ಅವಸ್ತಿ ಎನ್ನುವ ಪತ್ರಕರ್ತರ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ಜೂನ್ 24, ಶನಿವಾರ ರಾತ್ರಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದರಿಂದ ಬಲ ಭುಜಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದೀಗ ಅವರ ಸ್ಥಿತಿ ಸ್ಥಿರವಾಗಿದ್ದು, ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಮದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿದ ಉನ್ನಾವೊ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶಶಿ ಶೇಖರ್ ಸಿಂಗ್ ಅವರು, ”ಘಟನಾ ಸ್ಥಳದಿಂದ ಗುಂಡಿನ ದಾಳಿಯ ವೇಳೆ ಬಳಸಿದ ಮತ್ತು ಕೆಲವು ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಉನ್ನಾವೋ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಶಂಕರ್ ಮೀನಾ ಅವರು ಅವಸ್ತಿ ಮೇಲೆ ಗುಂಡು ಹಾರಿಸಿದ್ದಾರೆಯೇ ಎಂದು ಭಾನುವಾರ ಮಧ್ಯಾಹ್ನದ ವೇಳೆಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಅವರು ಪೊಲೀಸರಿಗೆ ಮಾಹಿತಿ ನೀಡಲಿಲ್ಲ. ಉನ್ನಾವೋ ಆಸ್ಪತ್ರೆಯ ವೈದ್ಯರು ಇದು ಗುಂಡಿನ ಗಾಯ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ವಶಪಡಿಸಿಕೊಂಡ ಕಾರ್ಟ್ರಿಡ್ಜ್ ಗಾಯಕ್ಕೆ ಹೊಂದಿಕೆಯಾಗಲಿಲ್ಲ ಎಂದು ಮೀನಾ ಹೇಳಿದ್ದಾರೆ.

ಮಾರ್ಚ್‌ನಲ್ಲಿ ಪತ್ರಕರ್ತ ಮನ್ನು ಅವಸ್ತಿ ಅವರು, ಉನ್ನಾವೊ ಎಸ್‌ಪಿ ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ಔಪಚಾರಿಕ ದೂರು ಸಲ್ಲಿಸಿದ್ದರು. ದೂರಿನಲ್ಲಿ, ”ಭೂಮಾಫಿಯಾ ನಡೆಸುವ ನಾಲ್ವರಿಂದ ತನಗೆ ಜೀವ ಬೆದರಿಕೆ ಇದೆ. ನೋಂದಣಿ ಸಂಖ್ಯೆ ಇಲ್ಲದ ಕಾರುಗಳು ತನ್ನನ್ನು ಹಿಂಬಾಲಿಸುತ್ತಿವೆ. ನಾನು ಭೂಮಾಫಿಯಾ ಸುದ್ದಿಗಳನ್ನು ಬರೆದಿದ್ದೇನೆ ಹಾಗಾಗಿ ನನ್ನ ಮೇಲೆ ಹಾಲಿ ಶಾಸಕರೊಬ್ಬರು ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ವೀಡಿಯೊಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದರು.

ಈ ಮಧ್ಯೆ ಉನ್ನಾವೋ ಎಸ್‌ಪಿ ಅವರು ತನಗೆ ಒದಗಿಸಿದ ಭದ್ರತಾ ಪೊಲೀಸರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದೆ. ಆದ್ದರಿಂದ ಭದ್ರತಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಅವಸ್ಥಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...