Homeಕರ್ನಾಟಕಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಿ”- ಹೀಗೆ ಪ್ರಚೋದನಾತ್ಮಕವಾಗಿ ವ್ಯಕ್ತಿಯೊಬ್ಬರು ಪಬ್ಲಿಕ್‌ ಟಿ.ವಿ. ಜೊತೆ ಮಾತನಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇಬ್ಬರು ಧಾರ್ಮಿಕ ಮೂಲಭೂತವಾದಿಗಳು ರಾಜಸ್ಥಾನದಲ್ಲಿ ಹಿಂದೂ ಟೈಲರ್‌ ಒಬ್ಬರನ್ನು ಭೀಕರವಾಗಿ ಕೊಂದ ಘಟನೆಯ ಕುರಿತು, ಪಬ್ಲಿಕ್‌ ಟಿ.ವಿ. ನಡೆಸುತ್ತಿದ್ದ ಜನಾಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು ಹೀಗೆ ವಿಷಕಾರಿಯಾಗಿ ಮಾತನಾಡಿದ್ದಾರೆ. ಈ ಪ್ರಚೋದನೆಯನ್ನು ಕಟುವಾದ ಪದಗಳಿಂದ ಖಂಡಿಸಬೇಕಿದ್ದ ಪಬ್ಲಿಕ್‌ ಟಿ.ವಿ. ನಿರೂಪಕ ಅರುಣ್‌ ಬಡಿಗೇರ್‌ ನಗುನಗುತ್ತಾ ಪ್ರತಿಕ್ರಿಯೆ ನೀಡುತ್ತಾ, “ಹೀಗೆಲ್ಲ ಮಾತನಾಡಬಾರದು” ಎಂದು ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾವಣಗೆರೆಯಿಂದ ಪಬ್ಲಿಕ್ ಟಿ.ವಿ.ಗೆ ಕರೆ ಮಾಡಿದ್ದ ವೀರಣ್ಣ ಹಾಗೂ ನಿರೂಪಕ ಅರುಣ್‌ ಬಡಿಗೇರ್‌ ನಡುವಿನ ಸಂಭಾಷಣೆ ಹೀಗಿತ್ತು:

ವೀರಣ್ಣ: ಮುಸಲ್ಮಾನರಿಗೆ ಯಾವುದೇ ರೀತಿಯ ಬೆಂಬಲ ಕೊಡಬಾರದು. ಪಬ್ಲಿಕ್‌ ಟಿ.ವಿ.ಗೆ ಮುಸಲ್ಮಾರನ್ನು ಕರೆಸಿ ಇದು ಮಾಡುತ್ತೀರಲ್ಲ, ಅದನ್ನು ಬಿಡಬೇಕು.

ಅರುಣ್ ಬಡಿಗೇರ್‌: ಅವರನ್ನು ಕರೆಸಲೇಬಾರದು ಅಂತೀರಾ?

ಇದನ್ನೂ ಓದಿರಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ವೀರಣ್ಣ: ಕರೆಸಲೇಬಾರದು ಅವರನ್ನು. ಅವರೊಂದು ಇವರೊಂದು ಹೇಳುತ್ತಾರೆ. ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು. ಅವರಿಗೆ ಸ್ಥಾನ ಮಾನ ಕೊಡಬಾರದು.

ಬಡಿಗೇರ್:  ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು.

ವೀರಣ್ಣ: ಅವರನ್ನು ಕರೆಸಲೇಬಾರದು. ಅವರಿಗೆ ಭಾರತ ದೇಶದಲ್ಲಿ ಯಾವುದೇ ಸ್ಥಾನಮಾನ ಕೊಡಬಾರದು. ಅನ್ನ ನೀರು ಹಾಕಿರುವವರು ನಾವು. ನಮ್ಮಮೇಲೆಯೇ ಬಾಲ ಬಿಚ್ಚುತ್ತಿದ್ದಾರೆ. ಫಸ್ಟ್‌ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಗುಂಡಿಕ್ಕಿ ಹೊಡೆದರೆ ಇವರೆಲ್ಲ ಸುಮ್ಮನಾಗುತ್ತಾರೆ.

(ಈ ಮಾತಿಗೆ ನಗುತ್ತಾ ಬಡಿಗೇರ್‌ ಪ್ರತಿಕ್ರಿಯೆ ನೀಡುತ್ತಾರೆ)

ಬಡಿಗೇರ್‌: ಸಾರ್‌, ನಾಯಕರ ವಿಚಾರದಲ್ಲಿ ಹಾಗೆಲ್ಲ ಮಾತನಾಡಬಾರದು. ಅವರ ಮೇಲೆ ಕೋಪ ಇದೆ ಎಂದು ಹೀಗೆಲ್ಲ ಹೇಳಬಾರದು. ಹಂತಕರಿಗೂ ನಿಮಗೂ ವ್ಯತ್ಯಾಸ ಏನಿದೆ?

ವೀರಣ್ಣ: ನಿನ್ನೆಯಿಂದ ಇವರ್‍ಯಾಕೆ ಮಾತನಾಡಿಲ್ಲ?

ಬಡಿಗೇರ್‌: ಭಿನ್ನಾಭಿಪ್ರಾಯ ಇರಲಿ. ಆದರೆ ನಮಗೂ ಅವರಿಗೂ ವ್ಯತ್ಯಾಸ ಇರುತ್ತದೆಯೇ? ತಮ್ಮ ಪಕ್ಷದಲ್ಲಿರುವ ವೋಟುಗಳಿಗೆ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಗುಂಡು ಹೊಡೆದು ಸಾಯಿಸಿ ಎಂದರೆ? ಇದು ಒಳ್ಳೆಯದಲ್ಲ.

ವೀರಣ್ಣ: ಒಂದು ಕಲ್ಲಂಗಡಿಯನ್ನು ಹೊಡೆದಿದ್ದಕ್ಕೆ ದಂಡ ಕಟ್ಟಿಸಲಿಲ್ಲವೇ?

ಬಡಿಗೇರ್‌: ಹೂಂ ಹೂಂ, ಹಾ… ಹಾ.. ಓಕೆ.

ವೀರಣ್ಣ: ಅವರ ಬೆಂಬಲದಿಂದಾಗಿಯೇ ನಿಗುರುತ್ತಿದ್ದಾರೆ.

ಬಡಿಗೇರ್‌: ಅವರನ್ನು ಬೆಂಬಲಿಸುವುದಕ್ಕಾಗಿಯೇ ಹೀಗೆ ಮಾಡುತ್ತಿದ್ದಾರೆ ಅಂತಾನಾ?

ವೀರಣ್ಣ: ಕರೆಕ್ಟ್‌ ಸರ್‌‌.

ಬಡಿಗೇರ್‌: ಓಕೆ ಓಕೆ

ವೀರಣ್ಣ: ಅವರನ್ನು ಫಸ್ಟ್‌ ನಿರ್ನಾಮ ಮಾಡಿದರೆ ಇವರೆಲ್ಲ ಪ್ಲಾಪ್‌ ಆಗುತ್ತಾರೆ.

ಬಡಿಗೇರ್‌: ಧನ್ಯವಾದಗಳು ವೀರಣ್ಣನವರೇ ನಮ್ಮ ಜೊತೆ ಮಾತನಾಡಿದ್ದಕ್ಕೆ…

(ಮುಂದಿನ ಕರೆಗೆ ಹೋಗುತ್ತಾರೆ)

ವರದಿಗಳಲ್ಲಿ ಪೂರ್ವಗ್ರಹ

ಕೋಮುದ್ವೇಷ ಪ್ರಕರಣಗಳಲ್ಲಿ ಮಾಧ್ಯಮಗಳು ಪಕ್ಷಪಾತಿಯಾಗಿ, ಪೂರ್ವಗ್ರಹ ಪೀಡಿತವಾಗಿ ವರದಿ ಮಾಡುವುದು ಇದು ಮೊದಲೇನಲ್ಲ. ಸುಳ್ಳುಗಳನ್ನು ವರದಿ ಮಾಡುವುದು ನಿಂತು ಹೋಗುವುದೂ ಇಲ್ಲ. ಯಾರೋ ಒಬ್ಬಾತ ಮಾಡುವ ತಪ್ಪನ್ನು ಇಡೀ ಸಮುದಾಯದ ತಲೆಗೆ ಕಟ್ಟುವ ಕೆಲಸವನ್ನು ಯಾವುದೇ ಮುಜುಗರವಿಲ್ಲದೆ ಮಾಧ್ಯಮಗಳು ಮಾಡುತ್ತಲೇ ಬಂದಿವೆ. ಅದು ರಾಜಸ್ಥಾನದ ಘಟನೆಯಲ್ಲೂ ಸಾಬೀತಾಗಿದೆ.

ಈ ಘಟನೆಯನ್ನು ಮುಸ್ಲಿಂ ಸಮುದಾಯ ಬಲವಾಗಿ ಖಂಡಿಸಿದೆ, ಕೊಲೆಗೈದವರನ್ನು ಗಲ್ಲಿಗೆ ಹಾಕುವಂತೆ ಒತ್ತಾಯಿಸಿದೆ. ಇಸ್ಲಾಂ ಯಾವುದೇ ಕಾರಣಕ್ಕೂ ಇಂತಹ ಕೃತ್ಯಕ್ಕೆ ಆಸ್ಪದ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಘಟನೆಯನ್ನು ವಿರೋಧಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಆದಿಯಾಗಿ ಅನೇಕ ರಾಜಕಾರಣಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಎಡಪರ ಚಿಂತಕರು, ಬಲಪಂಥೀಯರು, ಪ್ರಗತಿಪರರು- ಎಲ್ಲರೂ ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಆದರೂ ಮಾಧ್ಯಮಗಳಲ್ಲಿ ಮುಸ್ಲಿಂ ಸಮುದಾಯದ ಮೇಲೆ, ಬಿಜೆಪಿ ಹಾಗೂ ಸಂಘಪರಿವಾರೇತರ ನಾಯಕರ ಮೇಲೆ ವಿನಾಕಾರಣ ವಿಷಕಾರಲಾಗುತ್ತಿದೆ.

ಎಲ್ಲ ಜಾತಿ, ಜನಾಂಗದ ಜನರು ನೀಡುವ ತೆರಿಗೆಯಲ್ಲಿ ಸರ್ಕಾರಗಳು ನಡೆಯುತ್ತಿವೆ. ಆದರೆ ಕನಿಷ್ಠ ಸಾಂವಿಧಾನಿಕ ಕಾಳಜಿ ಇಲ್ಲದ ಮಾಧ್ಯಮಗಳು ಏಕಿಷ್ಟು ದ್ವೇಷವನ್ನು ಕಾರುತ್ತಿವೆ? ಘಟನೆಯನ್ನು ಎಲ್ಲ ವರ್ಗದ ಜನರು ಖಂಡಿಸಿದ್ದರೂ ಅದನ್ನು ಇಂಥವರು ಖಂಡಿಸಿಯೇ ಇಲ್ಲ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿರುವುದು ಏತಕ್ಕೆ? ಮಾಧ್ಯಮಗಳು ಈ ಸಾವಿನಲ್ಲಿ ರಾಜಕೀಯ ಹಿತಾಸಕ್ತಿ ಮೆರೆಯುತ್ತಿವೆಯೇ? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ ವ್ಯಕ್ತಿಯ ಮಾತನ್ನು ಹೆಡ್‌ಲೈನ್‌ ಮಾಡಿ ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಪಬ್ಲಿಕ್ ಟಿ.ವಿ. ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ಫೇಸ್ಬುಕ್ ಪೇಜ್‌ಗಳಲ್ಲಿ ತಲೆಕೆಟ್ಟವರಂತೆ ಕಾಮೆಂಟ್ ಮಾಡುವವರ ಅಭಿಪ್ರಾಯಗಳನ್ನೇ ಹೆಡ್ಲೈನ್ ಮಾಡುವ ಹಿಂದಿನ ಉದ್ದೇಶ ಏನಿತ್ತು? ಅಂತಾ harmful ಅಲ್ಲದ ಸಣ್ಣಪುಟ್ಟ ಪೋಸ್ಟ್‌ಗಳಿಗೂ ನೋಟೀಸ್ ಕೊಟ್ಟು ಬ್ಲಾಕ್ ಮಾಡುವ Facebook ಸಂಸ್ಥೆ community standard ನ್ನು ಉಲ್ಲಂಘಿಸಿದ ಅಡಿಯಲ್ಲಿ ನೋಟಿಸ್ ಯಾಕೆ ಜಾರಿ ಮಾಡಿಲ್ಲ? ಹೋಗಲಿ ಕಾಂಗ್ರೆಸ್ ಪಕ್ಷದ ಲೀಗಲ್ ಸೆಲ್ ಮತ್ತು IT Cell ಗಳು ನಿಜವಾಗಿಯೂ ಜೀವಂತವಾಗಿದ್ದಾವಾ? ಯಾವುದೇ ಪಕ್ಷದ ಮುಖಂಡರಾದರೂ ಈ ರೀತಿಯ ಹೆಡ್ಲೈನ್ ಕೊಟ್ಟು ಸಾರ್ವಜನಿಕವಾಗಿ ಎಂತಹ ಅಭಿಪ್ರಾಯ ಮೂಡಿಸುತ್ತಿದ್ದರೆ? ಇದರಿಂದ ಮುಂದಾಗಬಹುದಾದ ಅಪಾಯಗಳೇನು ಎಂಬ ಕನಿಷ್ಟ ಅರಿವಾದರೂ ಇದೆಯೇ? ಈ ಮೂಲಕ ಪಬ್ಲಿಕ್ ಟಿವಿ ಸಮಾಜಕ್ಕೆ ಯಾವ ಸಂದೇಶ ಕೊಡ್ತಿದೆ?” ಎಂದು ಸಾಮಾಜಿಕ ಕಾರ್ಯಕರ್ತ ಪ್ರಗತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಾಧ್ಯಮದವರು ಇಂದು ಕಿರುಚುತ್ತಾ ಕೂಗುತ್ತಾ ಮತಾಂಧ ಶಕ್ತಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿರುವುದಕ್ಕೆ ಸ್ಪಷ್ಟ ಉದಾರಹಣೆ ಇದು. ಸಮಾಜದ ಶಾಂತಿ ಕೆಡಿಸಲೆಂದೇ ಕೆಲ ಮಾಧ್ಯಮಗಳು ಇಂದು ಕೆಲಸ ನಿರ್ವಹಿಸುತ್ತಿರುವಂತಿದೆ. ಜನರು ತಪ್ಪು ಮಾತನಾಡಿದಾಗ ತಿದ್ದಬೇಕಾದ ಮಾಧ್ಯಮದವರು ಇಂತಹ ತಲೆ ಬರಹ ಕೊಟ್ಟಿರುವುದು ಅವರ ಹಿಂಸಾ ವಿರೋಧಿ ಕೌರ್ಯ ಮನಸ್ಥಿತಿಯನ್ನು ತೋರಿಸಿದೆ. ನಿಸ್ಸಂಶಯವಾಗಿ ಇದು ಮಾಧ್ಯಮ ಭಯೋತ್ಪಾದಕತೆ” ಎಂದು ಲೇಖಕಿ ಚೈತ್ರಿಕಾ ಹರ್ಗಿ ಅಭಿಪ್ರಾಯಪಟ್ಟಿದ್ದಾರೆ.

“ಹಿಂದೂ ಮುಸ್ಲಿಂ ಸಂಘರ್ಷದ ಸೂಕ್ಷ್ಮತೆ ಅರಿವಿದ್ದ ಮಾಧ್ಯಮ ಇಂತಹ ವಿಚಾರದಲ್ಲಿ ಜನಾಭಿಪ್ರಾಯ ಕೇಳುವ ಕೆಲಸ ಮಾಡಲ್ಲ. ತಲೆಕೆಟ್ಟ ಒಬ್ಬ ಹೀಗೆ ವಿರೋಧ ಪಕ್ಷದ ನಾಯಕರನ್ನು ಕೊಲ್ಲಬೇಕು ಎಂದು ಹೇಳಿದಾಗ ಆ ಕರೆ ಮಾಡಿದ ವ್ಯಕ್ತಿಗೆ ನೋಡಪ್ಪ ಹೀಗೆ ಹೇಳೋದು ಕಾನೂನಿನ ಉಲ್ಲಂಘನೆ, ಅದು ಮತ್ತಷ್ಟು ಸಂಘರ್ಷಕ್ಕೆ ಪ್ರಚೋದನೆ ಕೊಟ್ಟಂತೆ ಎಂದು ಮನವರಿಗೆ ಮಾಡಬೇಕಿತ್ತು. ಆದರೆ ಆತನ‌ ಹೇಳಿಕೆಯನ್ನೇ ಹೆಡ್ಡಿಂಗ್ ಹಾಕಿ ಪ್ರಸಾರ ಮಾಡುವ ಮೂಲಕ ಚಾನೆಲ್ ಆತನ ಹೇಳಿಕೆಗೆ ಬೆಂಬಲ ಸೂಚಿಸಿದೆ. ಈಗ ಈ ಚಾನೆಲ್ ವಿರುದ್ಧ ಪೊಲೀಸ್ ಇಲಾಖೆಯೇ ಕೇಸು ದಾಖಲಿಸಬೇಕು. ಕಾಂಗ್ರೆಸ್ ಕೂಡಾ ದೂರು ಕೊಡಬೇಕು. ಈ ನಾಯಕರ ಕೊಲೆ ಆದರೆ ಅದರ ಹೊಣೆ ರಂಗನಾಥ ಮತ್ತು ಬಡಿಗೇರ ಹೊರುತ್ತಾರೆಯೇ? ಹಿಂದೆ ಕಲಬುರ್ಗಿಯವರ ವಿಚಾರದಲ್ಲಿ ಮಾಧ್ಯಮಗಳ ವರದಿ ಕೊಲೆಗೆ ಪ್ರೇರಣೆ ನೀಡಿದ್ದವು ಎಂಬ ಆರೋಪ ಕೇಳಿಬಂದಿತ್ತು” ಎಂದು ಹಿರಿಯ ಪತ್ರಕರ್ತೆ ಹೇಮಾ ವೆಂಕಟ್‌‌ ಎಚ್ಚರಿಸಿದ್ದಾರೆ.

“ಕೆಲ ತಿಂಗಳ ಹಿಂದೆ ಅರುಣ್ ಬಡಿಗೇರ ಮತ್ತು ರಂಗನಾಥರ ವಿರುದ್ಧ ಜಾಮೀನುರಹಿತ ಸೆಕ್ಷನ್ ಅಡಿ FIR ದಾಖಲಾಗಿತ್ತು. ಅದರ ಕತೆ ಏನಾಯ್ತು? ಮುಸ್ಲಿಂ ವ್ಯಕ್ತಿಗಳು ಹಿಂದೂಗಳನ್ನು ಕೊಂದಾಗ ಕೆರಳುವ ಹಿಂದೂ ಸಮಾಜ, ಹಿಂದೂಗಳು ಮುಸ್ಲಿಮರ ಕೊಲೆ ಮಾಡಿದಾಗ ಅವರಿಗೆ ಷಹಬ್ಬಾಸ್ ಹೇಳುವುದು, ಸನ್ಮಾನ ಮಾಡುವುದನ್ನು ಯಾಕೆ ವಿರೋಧಿಸಲ್ಲ? ನರಗುಂದರ ಮುಸ್ಲಿಂ ಯುವಕನನ್ನು ಬಜರಂಗಿಗಳು ಕೊಂದರಲ್ಲ, ಧರ್ಮಸ್ಥಳದ ದಲಿತ ದಿನೇಶನನ್ನು ಬಜರಂಗಿಯೊಬ್ಬ ಕೊಂದನಲ್ಲ, ಬಜರಂಗಿ ಶಂಭೂಲಾಲ್ ಕೇಸರಿಶಾಲು, ನಾಮ‌ ಹಾಕೊಂಡು ಮುಸ್ಲಿಂ ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಅದರ ವಿಡಿಯೋ ಮಾಡಿ ಸಂಭ್ರಮಿಸಿದನಲ್ಲ ಆಗ ಟಿವಿಯವರು ಜನಾಭಿಪ್ರಾಯ ಕೇಳಿದರೇ? ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕೊಲೆಯಾದರೆ ಯಾರು ಜವಾಬ್ದಾರರು?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳ್ಳಂಗಡಿ ಹೊಡೆದಾಗ ಬಾಯಿ ಬಡಿದುಕೊಂಡ ಬೋಳಿಮಕ್ಕಳು ,ಕನ್ಹಯ್ಯ ಕೊಲೆ ಆದಾಗ ಬಾಯಿ ಬಿಡದೇ ಇರೋ ಹಂದಿ ಮಕ್ಕಳನ್ನು ಇನ್ನೇನು ಮಾಡಬೇಕು ಬೇಸಡಿಕೆಗಳೇ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...