Homeಕರ್ನಾಟಕಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

- Advertisement -
- Advertisement -

“ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಿ”- ಹೀಗೆ ಪ್ರಚೋದನಾತ್ಮಕವಾಗಿ ವ್ಯಕ್ತಿಯೊಬ್ಬರು ಪಬ್ಲಿಕ್‌ ಟಿ.ವಿ. ಜೊತೆ ಮಾತನಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇಬ್ಬರು ಧಾರ್ಮಿಕ ಮೂಲಭೂತವಾದಿಗಳು ರಾಜಸ್ಥಾನದಲ್ಲಿ ಹಿಂದೂ ಟೈಲರ್‌ ಒಬ್ಬರನ್ನು ಭೀಕರವಾಗಿ ಕೊಂದ ಘಟನೆಯ ಕುರಿತು, ಪಬ್ಲಿಕ್‌ ಟಿ.ವಿ. ನಡೆಸುತ್ತಿದ್ದ ಜನಾಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು ಹೀಗೆ ವಿಷಕಾರಿಯಾಗಿ ಮಾತನಾಡಿದ್ದಾರೆ. ಈ ಪ್ರಚೋದನೆಯನ್ನು ಕಟುವಾದ ಪದಗಳಿಂದ ಖಂಡಿಸಬೇಕಿದ್ದ ಪಬ್ಲಿಕ್‌ ಟಿ.ವಿ. ನಿರೂಪಕ ಅರುಣ್‌ ಬಡಿಗೇರ್‌ ನಗುನಗುತ್ತಾ ಪ್ರತಿಕ್ರಿಯೆ ನೀಡುತ್ತಾ, “ಹೀಗೆಲ್ಲ ಮಾತನಾಡಬಾರದು” ಎಂದು ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾವಣಗೆರೆಯಿಂದ ಪಬ್ಲಿಕ್ ಟಿ.ವಿ.ಗೆ ಕರೆ ಮಾಡಿದ್ದ ವೀರಣ್ಣ ಹಾಗೂ ನಿರೂಪಕ ಅರುಣ್‌ ಬಡಿಗೇರ್‌ ನಡುವಿನ ಸಂಭಾಷಣೆ ಹೀಗಿತ್ತು:

ವೀರಣ್ಣ: ಮುಸಲ್ಮಾನರಿಗೆ ಯಾವುದೇ ರೀತಿಯ ಬೆಂಬಲ ಕೊಡಬಾರದು. ಪಬ್ಲಿಕ್‌ ಟಿ.ವಿ.ಗೆ ಮುಸಲ್ಮಾರನ್ನು ಕರೆಸಿ ಇದು ಮಾಡುತ್ತೀರಲ್ಲ, ಅದನ್ನು ಬಿಡಬೇಕು.

ಅರುಣ್ ಬಡಿಗೇರ್‌: ಅವರನ್ನು ಕರೆಸಲೇಬಾರದು ಅಂತೀರಾ?

ಇದನ್ನೂ ಓದಿರಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ವೀರಣ್ಣ: ಕರೆಸಲೇಬಾರದು ಅವರನ್ನು. ಅವರೊಂದು ಇವರೊಂದು ಹೇಳುತ್ತಾರೆ. ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು. ಅವರಿಗೆ ಸ್ಥಾನ ಮಾನ ಕೊಡಬಾರದು.

ಬಡಿಗೇರ್:  ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು.

ವೀರಣ್ಣ: ಅವರನ್ನು ಕರೆಸಲೇಬಾರದು. ಅವರಿಗೆ ಭಾರತ ದೇಶದಲ್ಲಿ ಯಾವುದೇ ಸ್ಥಾನಮಾನ ಕೊಡಬಾರದು. ಅನ್ನ ನೀರು ಹಾಕಿರುವವರು ನಾವು. ನಮ್ಮಮೇಲೆಯೇ ಬಾಲ ಬಿಚ್ಚುತ್ತಿದ್ದಾರೆ. ಫಸ್ಟ್‌ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಗುಂಡಿಕ್ಕಿ ಹೊಡೆದರೆ ಇವರೆಲ್ಲ ಸುಮ್ಮನಾಗುತ್ತಾರೆ.

(ಈ ಮಾತಿಗೆ ನಗುತ್ತಾ ಬಡಿಗೇರ್‌ ಪ್ರತಿಕ್ರಿಯೆ ನೀಡುತ್ತಾರೆ)

ಬಡಿಗೇರ್‌: ಸಾರ್‌, ನಾಯಕರ ವಿಚಾರದಲ್ಲಿ ಹಾಗೆಲ್ಲ ಮಾತನಾಡಬಾರದು. ಅವರ ಮೇಲೆ ಕೋಪ ಇದೆ ಎಂದು ಹೀಗೆಲ್ಲ ಹೇಳಬಾರದು. ಹಂತಕರಿಗೂ ನಿಮಗೂ ವ್ಯತ್ಯಾಸ ಏನಿದೆ?

ವೀರಣ್ಣ: ನಿನ್ನೆಯಿಂದ ಇವರ್‍ಯಾಕೆ ಮಾತನಾಡಿಲ್ಲ?

ಬಡಿಗೇರ್‌: ಭಿನ್ನಾಭಿಪ್ರಾಯ ಇರಲಿ. ಆದರೆ ನಮಗೂ ಅವರಿಗೂ ವ್ಯತ್ಯಾಸ ಇರುತ್ತದೆಯೇ? ತಮ್ಮ ಪಕ್ಷದಲ್ಲಿರುವ ವೋಟುಗಳಿಗೆ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಗುಂಡು ಹೊಡೆದು ಸಾಯಿಸಿ ಎಂದರೆ? ಇದು ಒಳ್ಳೆಯದಲ್ಲ.

ವೀರಣ್ಣ: ಒಂದು ಕಲ್ಲಂಗಡಿಯನ್ನು ಹೊಡೆದಿದ್ದಕ್ಕೆ ದಂಡ ಕಟ್ಟಿಸಲಿಲ್ಲವೇ?

ಬಡಿಗೇರ್‌: ಹೂಂ ಹೂಂ, ಹಾ… ಹಾ.. ಓಕೆ.

ವೀರಣ್ಣ: ಅವರ ಬೆಂಬಲದಿಂದಾಗಿಯೇ ನಿಗುರುತ್ತಿದ್ದಾರೆ.

ಬಡಿಗೇರ್‌: ಅವರನ್ನು ಬೆಂಬಲಿಸುವುದಕ್ಕಾಗಿಯೇ ಹೀಗೆ ಮಾಡುತ್ತಿದ್ದಾರೆ ಅಂತಾನಾ?

ವೀರಣ್ಣ: ಕರೆಕ್ಟ್‌ ಸರ್‌‌.

ಬಡಿಗೇರ್‌: ಓಕೆ ಓಕೆ

ವೀರಣ್ಣ: ಅವರನ್ನು ಫಸ್ಟ್‌ ನಿರ್ನಾಮ ಮಾಡಿದರೆ ಇವರೆಲ್ಲ ಪ್ಲಾಪ್‌ ಆಗುತ್ತಾರೆ.

ಬಡಿಗೇರ್‌: ಧನ್ಯವಾದಗಳು ವೀರಣ್ಣನವರೇ ನಮ್ಮ ಜೊತೆ ಮಾತನಾಡಿದ್ದಕ್ಕೆ…

(ಮುಂದಿನ ಕರೆಗೆ ಹೋಗುತ್ತಾರೆ)

ವರದಿಗಳಲ್ಲಿ ಪೂರ್ವಗ್ರಹ

ಕೋಮುದ್ವೇಷ ಪ್ರಕರಣಗಳಲ್ಲಿ ಮಾಧ್ಯಮಗಳು ಪಕ್ಷಪಾತಿಯಾಗಿ, ಪೂರ್ವಗ್ರಹ ಪೀಡಿತವಾಗಿ ವರದಿ ಮಾಡುವುದು ಇದು ಮೊದಲೇನಲ್ಲ. ಸುಳ್ಳುಗಳನ್ನು ವರದಿ ಮಾಡುವುದು ನಿಂತು ಹೋಗುವುದೂ ಇಲ್ಲ. ಯಾರೋ ಒಬ್ಬಾತ ಮಾಡುವ ತಪ್ಪನ್ನು ಇಡೀ ಸಮುದಾಯದ ತಲೆಗೆ ಕಟ್ಟುವ ಕೆಲಸವನ್ನು ಯಾವುದೇ ಮುಜುಗರವಿಲ್ಲದೆ ಮಾಧ್ಯಮಗಳು ಮಾಡುತ್ತಲೇ ಬಂದಿವೆ. ಅದು ರಾಜಸ್ಥಾನದ ಘಟನೆಯಲ್ಲೂ ಸಾಬೀತಾಗಿದೆ.

ಈ ಘಟನೆಯನ್ನು ಮುಸ್ಲಿಂ ಸಮುದಾಯ ಬಲವಾಗಿ ಖಂಡಿಸಿದೆ, ಕೊಲೆಗೈದವರನ್ನು ಗಲ್ಲಿಗೆ ಹಾಕುವಂತೆ ಒತ್ತಾಯಿಸಿದೆ. ಇಸ್ಲಾಂ ಯಾವುದೇ ಕಾರಣಕ್ಕೂ ಇಂತಹ ಕೃತ್ಯಕ್ಕೆ ಆಸ್ಪದ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಘಟನೆಯನ್ನು ವಿರೋಧಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಆದಿಯಾಗಿ ಅನೇಕ ರಾಜಕಾರಣಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಎಡಪರ ಚಿಂತಕರು, ಬಲಪಂಥೀಯರು, ಪ್ರಗತಿಪರರು- ಎಲ್ಲರೂ ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಆದರೂ ಮಾಧ್ಯಮಗಳಲ್ಲಿ ಮುಸ್ಲಿಂ ಸಮುದಾಯದ ಮೇಲೆ, ಬಿಜೆಪಿ ಹಾಗೂ ಸಂಘಪರಿವಾರೇತರ ನಾಯಕರ ಮೇಲೆ ವಿನಾಕಾರಣ ವಿಷಕಾರಲಾಗುತ್ತಿದೆ.

ಎಲ್ಲ ಜಾತಿ, ಜನಾಂಗದ ಜನರು ನೀಡುವ ತೆರಿಗೆಯಲ್ಲಿ ಸರ್ಕಾರಗಳು ನಡೆಯುತ್ತಿವೆ. ಆದರೆ ಕನಿಷ್ಠ ಸಾಂವಿಧಾನಿಕ ಕಾಳಜಿ ಇಲ್ಲದ ಮಾಧ್ಯಮಗಳು ಏಕಿಷ್ಟು ದ್ವೇಷವನ್ನು ಕಾರುತ್ತಿವೆ? ಘಟನೆಯನ್ನು ಎಲ್ಲ ವರ್ಗದ ಜನರು ಖಂಡಿಸಿದ್ದರೂ ಅದನ್ನು ಇಂಥವರು ಖಂಡಿಸಿಯೇ ಇಲ್ಲ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿರುವುದು ಏತಕ್ಕೆ? ಮಾಧ್ಯಮಗಳು ಈ ಸಾವಿನಲ್ಲಿ ರಾಜಕೀಯ ಹಿತಾಸಕ್ತಿ ಮೆರೆಯುತ್ತಿವೆಯೇ? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ ವ್ಯಕ್ತಿಯ ಮಾತನ್ನು ಹೆಡ್‌ಲೈನ್‌ ಮಾಡಿ ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಪಬ್ಲಿಕ್ ಟಿ.ವಿ. ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ಫೇಸ್ಬುಕ್ ಪೇಜ್‌ಗಳಲ್ಲಿ ತಲೆಕೆಟ್ಟವರಂತೆ ಕಾಮೆಂಟ್ ಮಾಡುವವರ ಅಭಿಪ್ರಾಯಗಳನ್ನೇ ಹೆಡ್ಲೈನ್ ಮಾಡುವ ಹಿಂದಿನ ಉದ್ದೇಶ ಏನಿತ್ತು? ಅಂತಾ harmful ಅಲ್ಲದ ಸಣ್ಣಪುಟ್ಟ ಪೋಸ್ಟ್‌ಗಳಿಗೂ ನೋಟೀಸ್ ಕೊಟ್ಟು ಬ್ಲಾಕ್ ಮಾಡುವ Facebook ಸಂಸ್ಥೆ community standard ನ್ನು ಉಲ್ಲಂಘಿಸಿದ ಅಡಿಯಲ್ಲಿ ನೋಟಿಸ್ ಯಾಕೆ ಜಾರಿ ಮಾಡಿಲ್ಲ? ಹೋಗಲಿ ಕಾಂಗ್ರೆಸ್ ಪಕ್ಷದ ಲೀಗಲ್ ಸೆಲ್ ಮತ್ತು IT Cell ಗಳು ನಿಜವಾಗಿಯೂ ಜೀವಂತವಾಗಿದ್ದಾವಾ? ಯಾವುದೇ ಪಕ್ಷದ ಮುಖಂಡರಾದರೂ ಈ ರೀತಿಯ ಹೆಡ್ಲೈನ್ ಕೊಟ್ಟು ಸಾರ್ವಜನಿಕವಾಗಿ ಎಂತಹ ಅಭಿಪ್ರಾಯ ಮೂಡಿಸುತ್ತಿದ್ದರೆ? ಇದರಿಂದ ಮುಂದಾಗಬಹುದಾದ ಅಪಾಯಗಳೇನು ಎಂಬ ಕನಿಷ್ಟ ಅರಿವಾದರೂ ಇದೆಯೇ? ಈ ಮೂಲಕ ಪಬ್ಲಿಕ್ ಟಿವಿ ಸಮಾಜಕ್ಕೆ ಯಾವ ಸಂದೇಶ ಕೊಡ್ತಿದೆ?” ಎಂದು ಸಾಮಾಜಿಕ ಕಾರ್ಯಕರ್ತ ಪ್ರಗತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಾಧ್ಯಮದವರು ಇಂದು ಕಿರುಚುತ್ತಾ ಕೂಗುತ್ತಾ ಮತಾಂಧ ಶಕ್ತಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿರುವುದಕ್ಕೆ ಸ್ಪಷ್ಟ ಉದಾರಹಣೆ ಇದು. ಸಮಾಜದ ಶಾಂತಿ ಕೆಡಿಸಲೆಂದೇ ಕೆಲ ಮಾಧ್ಯಮಗಳು ಇಂದು ಕೆಲಸ ನಿರ್ವಹಿಸುತ್ತಿರುವಂತಿದೆ. ಜನರು ತಪ್ಪು ಮಾತನಾಡಿದಾಗ ತಿದ್ದಬೇಕಾದ ಮಾಧ್ಯಮದವರು ಇಂತಹ ತಲೆ ಬರಹ ಕೊಟ್ಟಿರುವುದು ಅವರ ಹಿಂಸಾ ವಿರೋಧಿ ಕೌರ್ಯ ಮನಸ್ಥಿತಿಯನ್ನು ತೋರಿಸಿದೆ. ನಿಸ್ಸಂಶಯವಾಗಿ ಇದು ಮಾಧ್ಯಮ ಭಯೋತ್ಪಾದಕತೆ” ಎಂದು ಲೇಖಕಿ ಚೈತ್ರಿಕಾ ಹರ್ಗಿ ಅಭಿಪ್ರಾಯಪಟ್ಟಿದ್ದಾರೆ.

“ಹಿಂದೂ ಮುಸ್ಲಿಂ ಸಂಘರ್ಷದ ಸೂಕ್ಷ್ಮತೆ ಅರಿವಿದ್ದ ಮಾಧ್ಯಮ ಇಂತಹ ವಿಚಾರದಲ್ಲಿ ಜನಾಭಿಪ್ರಾಯ ಕೇಳುವ ಕೆಲಸ ಮಾಡಲ್ಲ. ತಲೆಕೆಟ್ಟ ಒಬ್ಬ ಹೀಗೆ ವಿರೋಧ ಪಕ್ಷದ ನಾಯಕರನ್ನು ಕೊಲ್ಲಬೇಕು ಎಂದು ಹೇಳಿದಾಗ ಆ ಕರೆ ಮಾಡಿದ ವ್ಯಕ್ತಿಗೆ ನೋಡಪ್ಪ ಹೀಗೆ ಹೇಳೋದು ಕಾನೂನಿನ ಉಲ್ಲಂಘನೆ, ಅದು ಮತ್ತಷ್ಟು ಸಂಘರ್ಷಕ್ಕೆ ಪ್ರಚೋದನೆ ಕೊಟ್ಟಂತೆ ಎಂದು ಮನವರಿಗೆ ಮಾಡಬೇಕಿತ್ತು. ಆದರೆ ಆತನ‌ ಹೇಳಿಕೆಯನ್ನೇ ಹೆಡ್ಡಿಂಗ್ ಹಾಕಿ ಪ್ರಸಾರ ಮಾಡುವ ಮೂಲಕ ಚಾನೆಲ್ ಆತನ ಹೇಳಿಕೆಗೆ ಬೆಂಬಲ ಸೂಚಿಸಿದೆ. ಈಗ ಈ ಚಾನೆಲ್ ವಿರುದ್ಧ ಪೊಲೀಸ್ ಇಲಾಖೆಯೇ ಕೇಸು ದಾಖಲಿಸಬೇಕು. ಕಾಂಗ್ರೆಸ್ ಕೂಡಾ ದೂರು ಕೊಡಬೇಕು. ಈ ನಾಯಕರ ಕೊಲೆ ಆದರೆ ಅದರ ಹೊಣೆ ರಂಗನಾಥ ಮತ್ತು ಬಡಿಗೇರ ಹೊರುತ್ತಾರೆಯೇ? ಹಿಂದೆ ಕಲಬುರ್ಗಿಯವರ ವಿಚಾರದಲ್ಲಿ ಮಾಧ್ಯಮಗಳ ವರದಿ ಕೊಲೆಗೆ ಪ್ರೇರಣೆ ನೀಡಿದ್ದವು ಎಂಬ ಆರೋಪ ಕೇಳಿಬಂದಿತ್ತು” ಎಂದು ಹಿರಿಯ ಪತ್ರಕರ್ತೆ ಹೇಮಾ ವೆಂಕಟ್‌‌ ಎಚ್ಚರಿಸಿದ್ದಾರೆ.

“ಕೆಲ ತಿಂಗಳ ಹಿಂದೆ ಅರುಣ್ ಬಡಿಗೇರ ಮತ್ತು ರಂಗನಾಥರ ವಿರುದ್ಧ ಜಾಮೀನುರಹಿತ ಸೆಕ್ಷನ್ ಅಡಿ FIR ದಾಖಲಾಗಿತ್ತು. ಅದರ ಕತೆ ಏನಾಯ್ತು? ಮುಸ್ಲಿಂ ವ್ಯಕ್ತಿಗಳು ಹಿಂದೂಗಳನ್ನು ಕೊಂದಾಗ ಕೆರಳುವ ಹಿಂದೂ ಸಮಾಜ, ಹಿಂದೂಗಳು ಮುಸ್ಲಿಮರ ಕೊಲೆ ಮಾಡಿದಾಗ ಅವರಿಗೆ ಷಹಬ್ಬಾಸ್ ಹೇಳುವುದು, ಸನ್ಮಾನ ಮಾಡುವುದನ್ನು ಯಾಕೆ ವಿರೋಧಿಸಲ್ಲ? ನರಗುಂದರ ಮುಸ್ಲಿಂ ಯುವಕನನ್ನು ಬಜರಂಗಿಗಳು ಕೊಂದರಲ್ಲ, ಧರ್ಮಸ್ಥಳದ ದಲಿತ ದಿನೇಶನನ್ನು ಬಜರಂಗಿಯೊಬ್ಬ ಕೊಂದನಲ್ಲ, ಬಜರಂಗಿ ಶಂಭೂಲಾಲ್ ಕೇಸರಿಶಾಲು, ನಾಮ‌ ಹಾಕೊಂಡು ಮುಸ್ಲಿಂ ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಅದರ ವಿಡಿಯೋ ಮಾಡಿ ಸಂಭ್ರಮಿಸಿದನಲ್ಲ ಆಗ ಟಿವಿಯವರು ಜನಾಭಿಪ್ರಾಯ ಕೇಳಿದರೇ? ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕೊಲೆಯಾದರೆ ಯಾರು ಜವಾಬ್ದಾರರು?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳ್ಳಂಗಡಿ ಹೊಡೆದಾಗ ಬಾಯಿ ಬಡಿದುಕೊಂಡ ಬೋಳಿಮಕ್ಕಳು ,ಕನ್ಹಯ್ಯ ಕೊಲೆ ಆದಾಗ ಬಾಯಿ ಬಿಡದೇ ಇರೋ ಹಂದಿ ಮಕ್ಕಳನ್ನು ಇನ್ನೇನು ಮಾಡಬೇಕು ಬೇಸಡಿಕೆಗಳೇ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...