Homeಮುಖಪುಟಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ (ಡಿಯು) ಬಳಿಯ ಅಂಗಡಿಯವನ ಮೇಲೆ ಬಲಪಂಥೀಯ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಆತನ ದಿನಸಿ ಅಂಗಡಿಯಿಂದ ಮಾಂಸ ಖರೀದಿಸಿದ ಬಾಲಕನೊಬ್ಬ ಅದು ಗೋಮಾಂಸ ಎಂದು ಹೇಳಿಕೊಂಡ ನಂತರ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು

ಮೇ 28 ರ ಬುಧವಾರದಂದು ಡಿಯುನ ಉತ್ತರ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ. ವಿಜಯ್ ನಗರದ ನಾರ್ತ್ ಈಸ್ಟ್ ಸ್ಟೋರ್‌ನ ಮಾಲೀಕರಾದ ಚಮನ್ ಕುಮಾರ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಕಿರುಕುಳ ನೀಡಿ ಹಲ್ಲೆ ಮಾಡಲಾಗಿದೆ.

ಬಲಪಂಥೀಯ ಸಂಘಟನೆ ಬೆಂಬಲಿಗರು ಚಮನ್ ಕುಮಾರ್ ಅವರನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾಣಿಸಿಕೊಂಡಿವೆ. “ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿರಿ” ಎಂಬ ಘೋಷಣೆಗಳು ಸಹ ಕೇಳಿಬಂದಿವೆ.

ಹಲ್ಲೆ ಬಿಡಿಸಲು ಮಧ್ಯಪ್ರವೇಶಿಸಲು ಪ್ರಯತ್ನಿಸಿದವರನ್ನೂ ಥಳಿಸಲಾಯಿತು. ಕೋಪಗೊಂಡ ಗುಂಪು ಅವರ ಧರ್ಮವನ್ನು ಕೇಳಿ; ಅವರು ಮಾಂಸವನ್ನೂ ತಿನ್ನಬೇಕು ಎಂದು ಒತ್ತಾಯಿಸಿದೆ.

ಮಾಹಿತಿಯ ಮೇರೆಗೆ ಪೊಲೀಸರು ಆಗಮಿಸಿ ಚಮನ್ ಕುಮಾರ್ ಮತ್ತು ಅವರ ಕುಟುಂಬವನ್ನು ರಕ್ಷಿಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಡಿಸಿಪಿ (ವಾಯುವ್ಯ) ಭೀಷಮ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನದ ಮೇಲೆ, ಕೆಲವು ಸಾರ್ವಜನಿಕರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರಿಗೆ ವೈದ್ಯಕೀಯ ನೆರವು ನೀಡಲಾಗಿದೆ. ಗೋಮಾಂಸವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಮಾಂಸದ ಮಾದರಿಯನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ವಿಧಿವಿಜ್ಞಾನ ವರದಿ ಮತ್ತು ಪೂರ್ಣ ವಿಚಾರಣೆ ಪೂರ್ಣಗೊಂಡ ನಂತರ, ಕಾನೂನಿನ ನಿಬಂಧನೆಗಳ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಮರುದಿನ, ದೆಹಲಿಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಮಾಡೆಲ್ ಟೌನ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆಯನ್ನು ಆಯೋಜಿಸಿತು. “ಪೊಲೀಸರು ಸ್ಥಳಕ್ಕೆ ಬಂದ ನಂತರವೂ, ಗುಂಪಿನಲ್ಲಿದ್ದ ಪುರುಷರು ಮಹಿಳಾ ವಿದ್ಯಾರ್ಥಿನಿಯರಾದ ನಮ್ಮನ್ನು, ನಮ್ಮ ಮೇಲೆ ಕೂಗುತ್ತಾ, ನಮ್ಮನ್ನು ತಳ್ಳುತ್ತಾ ಮತ್ತು ಬೀದಿಗಳಲ್ಲಿ ನಮ್ಮನ್ನು ಹಿಂಬಾಲಿಸುವ ಮೂಲಕ ಕಿರುಕುಳ ನೀಡಿದರು. ಗುಂಪು ಮನೆ ತಲುಪವವರೆಗೂ ನಮ್ಮನ್ನು ಹಿಂಬಾಲಿಸಿತು” ಎಂದು ವಿದ್ಯಾರ್ಥಿಗಳು ಹೇಳಿದರು.

ದೆಹಲಿ ವಿಶ್ವವಿದ್ಯಾಲಯದ ಎಸ್‌ಎಫ್‌ಐ ಸಹ-ಸಂಚಾಲಕಿ ಸಿಮ್ರನ್ ಅವರ ಪ್ರಕಾರ, ಅಂಗಡಿ ಮಾಲೀಕರಿಗೆ ಸಹಾಯ ಮಾಡಲು ಪ್ರಯತ್ನಿಸಿದ ವಿದ್ಯಾರ್ಥಿಗಳನ್ನು ಬಲಪಂಥೀಯ ಬೆಂಬಲಿಗರು ಬಂಧಿಸಿ, ಹಲ್ಲೆ ನಡೆಸಿ ಹಿಂಬಾಲಿಸಿದ್ದಾರೆ. “ಕ್ಯಾಂಪಸ್ ಪ್ರದೇಶಗಳಲ್ಲಿ ಈಗಾಗಲೇ ಸಾಕಷ್ಟು ಅನ್ಯದ್ವೇಷವನ್ನು ಎದುರಿಸುತ್ತಿರುವ ವಲಸೆ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುವ ಅಪಾಯಕಾರಿ ಪ್ರಯತ್ನ ಇದು” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...