Homeಕರ್ನಾಟಕಅಂಗಡಿಗಳು, ರೆಸ್ಟೋರೆಂಟ್‌ಗಳ ನಾಮಫಲಕಗಳಲ್ಲಿ 60% ಕನ್ನಡ ಬಳಕೆ ಕಡ್ಡಾಯ; ಗಡುವು ನಿಗದಿಪಡಿಸಿದ ಬಿಬಿಎಂಪಿ

ಅಂಗಡಿಗಳು, ರೆಸ್ಟೋರೆಂಟ್‌ಗಳ ನಾಮಫಲಕಗಳಲ್ಲಿ 60% ಕನ್ನಡ ಬಳಕೆ ಕಡ್ಡಾಯ; ಗಡುವು ನಿಗದಿಪಡಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ  ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್‌ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶೀಘ್ರದಲ್ಲೇ ಕನ್ನಡ ಅಳವಡಿಕೆ ಆದೇಶವನ್ನು ಅನುಸರಿಸದ ಸಂಸ್ಥೆಗಳನ್ನು, ಅಂಗಡಿಗಳನ್ನು, ರೆಸ್ಟೋರೆಂಟ್‌ಗಳನ್ನು ಗುರುತಿಸಲು ಪ್ರಾರಂಭಿಸುತ್ತದೆ ಮತ್ತು ಅವರಿಗೆ ನೋಟಿಸ್ ಕಳುಹಿಸುತ್ತದೆ. ನಿಯಮ ಪಾಲನೆ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಿದೆ.

ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆ ಮಲ್ಲೇಶ್ವರಂನಲ್ಲಿ ಕರೆದಿದ್ದ ಸಭೆಯಲ್ಲಿ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ,  ಬಿಬಿಎಂಪಿ ವ್ಯಾಪ್ತಿಯಲ್ಲಿನ ಅಂಗಡಿಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಕನ್ನಡ ನಾಮಫಲಕ ನಿಯಮವನ್ನು ಸಂಪೂರ್ಣವಾಗಿ ಅನುಸರಿಸಬೇಕು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ, ವಾಣಿಜ್ಯ ಸಂಸ್ಥೆಗಳು ತಮ್ಮ ಹೆಸರಿನ ನಾಮ ಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಬಳಸಬೇಕಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆಯಂತಹ ಕನ್ನಡ ಪರ ಸಂಘಟನೆಗಳು ಈ ಆದೇಶಗಳನ್ನು ಕಟ್ಟುನಿಟ್ಟಿನ ಪಾಲನೆಗೆ ಆಗ್ರಹಿಸುತ್ತಿದೆ.

ಬಿಬಿಎಂಪಿ ಹೇಳಿಕೆಯ ಪ್ರಕಾರ, ನಿಯಮವನ್ನು ಅನುಸರಿಸದ ಅಂಗಡಿಗಳನ್ನು ಗುರುತಿಸಲು ನಗರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನಿಯಮ ಪಾಲಿಸದ ಅಂಗಡಿಗಳಿಗೆ ಶೀಘ್ರದಲ್ಲೇ ನೋಟಿಸ್‌ಗಳನ್ನು ನೀಡಲಾಗುವುದು, ಫೆ.28, 2024ರ ಒಳಗೆ ನಿಯಮ ಪಾಲನೆಗೆ ಗಡುವು ನೀಡಲಾಗುವುದು. ಬಿಬಿಎಂಪಿಯ ವಲಯ ಅಧಿಕಾರಿಗಳು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದು, ನಿಯಮ ಜಾರಿಗೊಳಿಸಲು ವಿಫಲವಾದರೆ ಕ್ರಮ ಎದುರಿಸಬೇಕಾಗುತ್ತದೆ.

ಬಿಬಿಎಂಪಿ ನಗರ ವ್ಯಾಪ್ತಿಯಲ್ಲಿ ಮಾಲ್ ಮಾಲೀಕರೊಂದಿಗೆ ಸಭೆ ನಡೆಸಿ ನಿಯಮ ಪಾಲಿಸಲು 15-20 ದಿನಗಳ ಕಾಲಾವಕಾಶ ನೀಡಲಿದೆ. ಮಾಲ್‌ಗಳ ಆಡಳಿತ ತಮ್ಮ ಮಾಲ್‌ಗಳಲ್ಲಿರುವ ಎಲ್ಲಾ ಅಂಗಡಿಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಪ್ರದರ್ಶಿಸುವಂತೆ ಕೇಳಿಕೊಳ್ಳುತ್ತಿದ್ದು, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದೆ. ಬಿಬಿಎಂಪಿ ಈ ಬಗ್ಗೆ ಕಾನೂನು ಕ್ರಮವನ್ನು ನಿರ್ದಿಷ್ಟಪಡಿಸದಿದ್ದರೂ, ಇದು ದಂಡವನ್ನು ವಿಧಿಸುವ ಸಾಧ್ಯತೆ ಇದೆ.

ಈ ಬಗ್ಗೆ ಮಾತನಾಡಿದ ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ,  ಹೆಬ್ಬಾಳದಲ್ಲಿ ಹೊಸದಾಗಿ ತೆರೆದಿರುವ ಮಾಲ್‌ನ ಅಧಿಕಾರಿಗಳು ಬೋರ್ಡ್‌ನಲ್ಲಿ ಕನ್ನಡದ ಅಳವಡಿಕೆ ಕುರಿತು ನಿಯಮವನ್ನು ಪಾಲಿಸಲು ನಿರಾಕರಿಸಿದ ನಂತರ ನಾವು ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ನಂತರ ಈ ವಿಷಯವನ್ನು ಬಿಬಿಎಂಪಿ ಮುಖ್ಯಸ್ಥರ ಗಮನಕ್ಕೆ ತಂದಿದ್ದೇವೆ. ವಾಣಿಜ್ಯ ಸಂಸ್ಥೆಗಳು ತಮ್ಮ ಹೆಸರಿನ ಫಲಕಗಳಲ್ಲಿ ಕನ್ನಡವನ್ನು ಬಳಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್‌ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು  ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ  ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿಲ್ಲ.

ಇದನ್ನು ಓದಿ: ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...