Homeಕರ್ನಾಟಕಅಂಗಡಿಗಳು, ರೆಸ್ಟೋರೆಂಟ್‌ಗಳ ನಾಮಫಲಕಗಳಲ್ಲಿ 60% ಕನ್ನಡ ಬಳಕೆ ಕಡ್ಡಾಯ; ಗಡುವು ನಿಗದಿಪಡಿಸಿದ ಬಿಬಿಎಂಪಿ

ಅಂಗಡಿಗಳು, ರೆಸ್ಟೋರೆಂಟ್‌ಗಳ ನಾಮಫಲಕಗಳಲ್ಲಿ 60% ಕನ್ನಡ ಬಳಕೆ ಕಡ್ಡಾಯ; ಗಡುವು ನಿಗದಿಪಡಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ  ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್‌ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶೀಘ್ರದಲ್ಲೇ ಕನ್ನಡ ಅಳವಡಿಕೆ ಆದೇಶವನ್ನು ಅನುಸರಿಸದ ಸಂಸ್ಥೆಗಳನ್ನು, ಅಂಗಡಿಗಳನ್ನು, ರೆಸ್ಟೋರೆಂಟ್‌ಗಳನ್ನು ಗುರುತಿಸಲು ಪ್ರಾರಂಭಿಸುತ್ತದೆ ಮತ್ತು ಅವರಿಗೆ ನೋಟಿಸ್ ಕಳುಹಿಸುತ್ತದೆ. ನಿಯಮ ಪಾಲನೆ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಿದೆ.

ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆ ಮಲ್ಲೇಶ್ವರಂನಲ್ಲಿ ಕರೆದಿದ್ದ ಸಭೆಯಲ್ಲಿ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ,  ಬಿಬಿಎಂಪಿ ವ್ಯಾಪ್ತಿಯಲ್ಲಿನ ಅಂಗಡಿಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಕನ್ನಡ ನಾಮಫಲಕ ನಿಯಮವನ್ನು ಸಂಪೂರ್ಣವಾಗಿ ಅನುಸರಿಸಬೇಕು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ, ವಾಣಿಜ್ಯ ಸಂಸ್ಥೆಗಳು ತಮ್ಮ ಹೆಸರಿನ ನಾಮ ಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಬಳಸಬೇಕಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆಯಂತಹ ಕನ್ನಡ ಪರ ಸಂಘಟನೆಗಳು ಈ ಆದೇಶಗಳನ್ನು ಕಟ್ಟುನಿಟ್ಟಿನ ಪಾಲನೆಗೆ ಆಗ್ರಹಿಸುತ್ತಿದೆ.

ಬಿಬಿಎಂಪಿ ಹೇಳಿಕೆಯ ಪ್ರಕಾರ, ನಿಯಮವನ್ನು ಅನುಸರಿಸದ ಅಂಗಡಿಗಳನ್ನು ಗುರುತಿಸಲು ನಗರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನಿಯಮ ಪಾಲಿಸದ ಅಂಗಡಿಗಳಿಗೆ ಶೀಘ್ರದಲ್ಲೇ ನೋಟಿಸ್‌ಗಳನ್ನು ನೀಡಲಾಗುವುದು, ಫೆ.28, 2024ರ ಒಳಗೆ ನಿಯಮ ಪಾಲನೆಗೆ ಗಡುವು ನೀಡಲಾಗುವುದು. ಬಿಬಿಎಂಪಿಯ ವಲಯ ಅಧಿಕಾರಿಗಳು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದು, ನಿಯಮ ಜಾರಿಗೊಳಿಸಲು ವಿಫಲವಾದರೆ ಕ್ರಮ ಎದುರಿಸಬೇಕಾಗುತ್ತದೆ.

ಬಿಬಿಎಂಪಿ ನಗರ ವ್ಯಾಪ್ತಿಯಲ್ಲಿ ಮಾಲ್ ಮಾಲೀಕರೊಂದಿಗೆ ಸಭೆ ನಡೆಸಿ ನಿಯಮ ಪಾಲಿಸಲು 15-20 ದಿನಗಳ ಕಾಲಾವಕಾಶ ನೀಡಲಿದೆ. ಮಾಲ್‌ಗಳ ಆಡಳಿತ ತಮ್ಮ ಮಾಲ್‌ಗಳಲ್ಲಿರುವ ಎಲ್ಲಾ ಅಂಗಡಿಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಪ್ರದರ್ಶಿಸುವಂತೆ ಕೇಳಿಕೊಳ್ಳುತ್ತಿದ್ದು, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದೆ. ಬಿಬಿಎಂಪಿ ಈ ಬಗ್ಗೆ ಕಾನೂನು ಕ್ರಮವನ್ನು ನಿರ್ದಿಷ್ಟಪಡಿಸದಿದ್ದರೂ, ಇದು ದಂಡವನ್ನು ವಿಧಿಸುವ ಸಾಧ್ಯತೆ ಇದೆ.

ಈ ಬಗ್ಗೆ ಮಾತನಾಡಿದ ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ,  ಹೆಬ್ಬಾಳದಲ್ಲಿ ಹೊಸದಾಗಿ ತೆರೆದಿರುವ ಮಾಲ್‌ನ ಅಧಿಕಾರಿಗಳು ಬೋರ್ಡ್‌ನಲ್ಲಿ ಕನ್ನಡದ ಅಳವಡಿಕೆ ಕುರಿತು ನಿಯಮವನ್ನು ಪಾಲಿಸಲು ನಿರಾಕರಿಸಿದ ನಂತರ ನಾವು ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ನಂತರ ಈ ವಿಷಯವನ್ನು ಬಿಬಿಎಂಪಿ ಮುಖ್ಯಸ್ಥರ ಗಮನಕ್ಕೆ ತಂದಿದ್ದೇವೆ. ವಾಣಿಜ್ಯ ಸಂಸ್ಥೆಗಳು ತಮ್ಮ ಹೆಸರಿನ ಫಲಕಗಳಲ್ಲಿ ಕನ್ನಡವನ್ನು ಬಳಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್‌ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು  ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ  ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿಲ್ಲ.

ಇದನ್ನು ಓದಿ: ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...