Homeಕರ್ನಾಟಕಅಂಗಡಿಗಳು, ರೆಸ್ಟೋರೆಂಟ್‌ಗಳ ನಾಮಫಲಕಗಳಲ್ಲಿ 60% ಕನ್ನಡ ಬಳಕೆ ಕಡ್ಡಾಯ; ಗಡುವು ನಿಗದಿಪಡಿಸಿದ ಬಿಬಿಎಂಪಿ

ಅಂಗಡಿಗಳು, ರೆಸ್ಟೋರೆಂಟ್‌ಗಳ ನಾಮಫಲಕಗಳಲ್ಲಿ 60% ಕನ್ನಡ ಬಳಕೆ ಕಡ್ಡಾಯ; ಗಡುವು ನಿಗದಿಪಡಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ  ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್‌ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶೀಘ್ರದಲ್ಲೇ ಕನ್ನಡ ಅಳವಡಿಕೆ ಆದೇಶವನ್ನು ಅನುಸರಿಸದ ಸಂಸ್ಥೆಗಳನ್ನು, ಅಂಗಡಿಗಳನ್ನು, ರೆಸ್ಟೋರೆಂಟ್‌ಗಳನ್ನು ಗುರುತಿಸಲು ಪ್ರಾರಂಭಿಸುತ್ತದೆ ಮತ್ತು ಅವರಿಗೆ ನೋಟಿಸ್ ಕಳುಹಿಸುತ್ತದೆ. ನಿಯಮ ಪಾಲನೆ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಿದೆ.

ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆ ಮಲ್ಲೇಶ್ವರಂನಲ್ಲಿ ಕರೆದಿದ್ದ ಸಭೆಯಲ್ಲಿ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ,  ಬಿಬಿಎಂಪಿ ವ್ಯಾಪ್ತಿಯಲ್ಲಿನ ಅಂಗಡಿಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಕನ್ನಡ ನಾಮಫಲಕ ನಿಯಮವನ್ನು ಸಂಪೂರ್ಣವಾಗಿ ಅನುಸರಿಸಬೇಕು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ, ವಾಣಿಜ್ಯ ಸಂಸ್ಥೆಗಳು ತಮ್ಮ ಹೆಸರಿನ ನಾಮ ಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಬಳಸಬೇಕಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆಯಂತಹ ಕನ್ನಡ ಪರ ಸಂಘಟನೆಗಳು ಈ ಆದೇಶಗಳನ್ನು ಕಟ್ಟುನಿಟ್ಟಿನ ಪಾಲನೆಗೆ ಆಗ್ರಹಿಸುತ್ತಿದೆ.

ಬಿಬಿಎಂಪಿ ಹೇಳಿಕೆಯ ಪ್ರಕಾರ, ನಿಯಮವನ್ನು ಅನುಸರಿಸದ ಅಂಗಡಿಗಳನ್ನು ಗುರುತಿಸಲು ನಗರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನಿಯಮ ಪಾಲಿಸದ ಅಂಗಡಿಗಳಿಗೆ ಶೀಘ್ರದಲ್ಲೇ ನೋಟಿಸ್‌ಗಳನ್ನು ನೀಡಲಾಗುವುದು, ಫೆ.28, 2024ರ ಒಳಗೆ ನಿಯಮ ಪಾಲನೆಗೆ ಗಡುವು ನೀಡಲಾಗುವುದು. ಬಿಬಿಎಂಪಿಯ ವಲಯ ಅಧಿಕಾರಿಗಳು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದು, ನಿಯಮ ಜಾರಿಗೊಳಿಸಲು ವಿಫಲವಾದರೆ ಕ್ರಮ ಎದುರಿಸಬೇಕಾಗುತ್ತದೆ.

ಬಿಬಿಎಂಪಿ ನಗರ ವ್ಯಾಪ್ತಿಯಲ್ಲಿ ಮಾಲ್ ಮಾಲೀಕರೊಂದಿಗೆ ಸಭೆ ನಡೆಸಿ ನಿಯಮ ಪಾಲಿಸಲು 15-20 ದಿನಗಳ ಕಾಲಾವಕಾಶ ನೀಡಲಿದೆ. ಮಾಲ್‌ಗಳ ಆಡಳಿತ ತಮ್ಮ ಮಾಲ್‌ಗಳಲ್ಲಿರುವ ಎಲ್ಲಾ ಅಂಗಡಿಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಪ್ರದರ್ಶಿಸುವಂತೆ ಕೇಳಿಕೊಳ್ಳುತ್ತಿದ್ದು, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದೆ. ಬಿಬಿಎಂಪಿ ಈ ಬಗ್ಗೆ ಕಾನೂನು ಕ್ರಮವನ್ನು ನಿರ್ದಿಷ್ಟಪಡಿಸದಿದ್ದರೂ, ಇದು ದಂಡವನ್ನು ವಿಧಿಸುವ ಸಾಧ್ಯತೆ ಇದೆ.

ಈ ಬಗ್ಗೆ ಮಾತನಾಡಿದ ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ,  ಹೆಬ್ಬಾಳದಲ್ಲಿ ಹೊಸದಾಗಿ ತೆರೆದಿರುವ ಮಾಲ್‌ನ ಅಧಿಕಾರಿಗಳು ಬೋರ್ಡ್‌ನಲ್ಲಿ ಕನ್ನಡದ ಅಳವಡಿಕೆ ಕುರಿತು ನಿಯಮವನ್ನು ಪಾಲಿಸಲು ನಿರಾಕರಿಸಿದ ನಂತರ ನಾವು ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ನಂತರ ಈ ವಿಷಯವನ್ನು ಬಿಬಿಎಂಪಿ ಮುಖ್ಯಸ್ಥರ ಗಮನಕ್ಕೆ ತಂದಿದ್ದೇವೆ. ವಾಣಿಜ್ಯ ಸಂಸ್ಥೆಗಳು ತಮ್ಮ ಹೆಸರಿನ ಫಲಕಗಳಲ್ಲಿ ಕನ್ನಡವನ್ನು ಬಳಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್‌ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು  ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ  ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿಲ್ಲ.

ಇದನ್ನು ಓದಿ: ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...