Homeಸಾಹಿತ್ಯ-ಸಂಸ್ಕೃತಿಕಥೆಅವಕಾಶಗಳ ಬಾಲ ಕೈ ಬಿಟ್ಟಾಗ

ಅವಕಾಶಗಳ ಬಾಲ ಕೈ ಬಿಟ್ಟಾಗ

- Advertisement -
- Advertisement -

ಇಪ್ಪತ್ತೈದು ವಯಸ್ಸಿನ ಸ್ಫುರದ್ರೂಪಿ ಯುವಕ. ಪಕ್ಕದೂರಿನ ರೈತನೊಬ್ಬನ ಮಗಳ ಮೇಲೆ ಅವನಿಗೆ ಒಲವಾಯಿತು. ಆಕೆಯನ್ನೇ ಮದುವೆಯಾಗಬೇಕೆಂದು ನಿರ್ಧರಿಸಿಕೊಂಡ. ಸೀದಾ ಆ ಹುಡುಗಿಯ ಅಪ್ಪನ ಮುಂದೆ ಬಂದು ನಿಂತ.
`ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ಮದುವೆಯಾಗುತ್ತೇನೆ. ದಯವಿಟ್ಟು ಅಪ್ಪಣೆ ಕೊಡಿ’ ಹುಡುಗ ಪ್ರಾಮಾಣಿಕವಾಗಿ ತನ್ನ ಮನದಾಸೆಯನ್ನು ಹುಡುಗಿಯ ಅಪ್ಪನೆದುರು ಬಿಚ್ಚಿಟ್ಟ.
ರೈತ, ಹುಡುಗನನ್ನು ಒಮ್ಮೆ ದಿಟ್ಟಿಸಿ ನೋಡಿದ. ಸಿರಿವಂತಿಕೆಯ ಲಕ್ಷಣಗಳು ಅವನ ದೇಹದಿಂದ ಚಿಮ್ಮಿ ಬರುತ್ತಿದ್ದವು.
ಒಂದು ನಿರ್ಧಾರಿತ ಧ್ವನಿಯಲ್ಲಿ ರೈತ ನುಡಿದ, `ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ನನಗೆ ಯಾವ ಅಭ್ಯಂತರವೂ ಇಲ್ಲ. ಆದರೆ ನಾನು ಒಂದು ಸ್ಪರ್ಧೆ ಇಡುವೆ. ಅದರಲ್ಲಿ ನೀನು ಗೆದ್ದರೆ ಮಾತ್ರ ಮದುವೆಯ ಪ್ರಸ್ತಾಪ. ಇಲ್ಲದಿದ್ದರೆ ನೀನು ಖಾಲಿ ಕೈಯಲ್ಲಿ ವಾಪಾಸ್ ಹೋಗಬೇಕು’.
ವಯಸ್ಸಿನ ಹುಮ್ಮಸ್ಸು, ಪ್ರೀತಿಯ ನಶೆಯಲ್ಲಿದ್ದ ಹುಡುಗ `ಸರಿ, ನಾನು ಸಿದ್ಧ. ಏನು ನಿಮ್ಮ ಸ್ಪರ್ಧೆ?’ ಪ್ರಶ್ನಿಸಿಯೇಬಿಟ್ಟ.
`ಏನಿಲ್ಲ, ನೀನು ಆ ಮೈದಾನದ ಮಧ್ಯದಲ್ಲಿ ನಿಂತಿರು. ನಾನು ನನ್ನ ಬಳಿಯಿರುವ ಮೂರು ಗೂಳಿಗಳನ್ನು ಒಂದಾದ ಮೇಲೆ ಒಂದರಂತೆ ಮೈದಾನದೊಳಕ್ಕೆ ಬಿಡುತ್ತೇನೆ. ಮೂರರಲ್ಲಿ ಯಾವುದಾದರು ಒಂದು ಗೂಳಿಯ ಬಾಲವನ್ನು ನೀನು ಹಿಡಿದರೂ ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡ್ತೀನಿ.’
`ಅಷ್ಟೇ ತಾನೆ, ನಾನು ಸಿದ್ಧ!’ ಹುಡುಗ ಒಂದೇ ಉಸುರಿಗೆ ಸಮ್ಮತಿಯಿತ್ತ.
ಮೈದಾನದ ನಡುವೆ ಹುಡುಗ ಮೊದಲ ಗೂಳಿಗಾಗಿ ಕಾದು ನಿಂತ. ರೈತ ತನ್ನ ಕೊಟ್ಟಿಗೆಯಿಂದ ಒಂದು ಗೂಳಿಯನ್ನು ಮೈದಾನದತ್ತ ನುಗ್ಗಿಸಿದ. ಅದು ದಷ್ಟಪುಷ್ಟವಾಗಿದ್ದ ಗೂಳಿ. ಕಟ್ಟುಮಸ್ತಾದ ಐದಾರು ಪೈಲ್ವಾನರನ್ನು ಒಂದೇ ಏಟಿಗೆ ಎತ್ತಿ ಬಿಸಾಡಬಲ್ಲ ರೋಷದಿಂದ ನುಗ್ಗಿ ಬರುತ್ತಿತ್ತು.
ಹುಡುಗ ಯೋಚನೆ ಮಾಡಿದ, `ಈ ಗೂಳಿ ಭಯಂಕರ ತಾಕತ್ತಿನಲ್ಲಿದೆ. ಇದರ ಬಾಲ ಹಿಡಿಯಲು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಇದನ್ನು ಸುಮ್ಮನೇ ಬಿಟ್ಟುಬಿಡೋಣ. ಎರಡನೇ ಗೂಳಿಯ ಬಾಲ ಹಿಡಿದರಾಯ್ತು. ಹೇಗೂ ಒಂದು ಗೂಳಿಯ ಬಾಲವನ್ನು ತಾನೇ ನಾನು ಹಿಡಿಯಬೇಕಿರುವುದು. ಮನಸ್ಸಿನ ಆಲೋಚನೆಯನ್ನು ಪ್ರತಿಫಲಿಸುವಂತೆ ಆತ ಪಕ್ಕಕ್ಕೆ ಸರಿದು ಗೂಳಿ ಓಡಿಹೋಗಲು ಅನುವು ಮಾಡಿಕೊಟ್ಟ.
ಈಗಾತ ಎರಡನೇ ಗೂಳಿಯ ನಿರೀಕ್ಷೆಯಲ್ಲಿದ್ದಾನೆ. ಕೊಟ್ಟಿಗೆ ತೆರೆಯಿತು, ಎರಡನೇ ಗೂಳಿ ಮೈದಾನದತ್ತ ದೌಡಾಯಿಸಿತು. ಅದು ಮೊದಲನೆಯದ್ದಕ್ಕಿಂತ ಬಲಿಷ್ಠವಾಗಿದೆ. ಅದರ ಓಟಕ್ಕೆ ನೆಲವೇ ನಡುಗಿಹೋಗುತ್ತಿದೆ. ಹುಡುಗನ ಮನಸ್ಸು ಮತ್ತೆ ಆಲೋಚಿಸಿತು `ಈ ಗೂಳಿಯ ಸಹವಾಸವೂ ಬೇಡ. ಇದೂ ಹೋಗಲಿ. ಮೂರನೇ ಗೂಳಿಯ ಬಾಲವನ್ನು ಹಿಡಿದರಾಯಿತು.’
ಎರಡನೇ ಗೂಳಿಯೂ ಅನಾಯಾಸವಾಗಿ ಸಾಗಿಹೋಯಿತು. ಈಗ ಕಡೆಯ, ಮೂರನೇ ಗೂಳಿಯ ನಿರೀಕ್ಷೆಯಲ್ಲಿ ಹುಡುಗನಿದ್ದಾನೆ. ಇದು ಅವನ ಕೊನೆಯ ಅವಕಾಶ. ಕೊಟ್ಟಿಗೆಯ ಬಾಗಿಲು ತೆರೆಯಿತು. ಮೂರನೇ ಗೂಳಿಯೂ ಹೊರಬಂತು. ಅದನ್ನು ನೋಡುತ್ತಿದ್ದಂತೆ ಹುಡುಗನ ಮುಖದಲ್ಲಿ ಖುಷಿ ದಟ್ಟೈಸಿತು. ಯಾಕೆಂದರೆ ಅದು ಬಡಕಲು ದೇಹದ ನರಪೇತಲ ಗೂಳಿ! ಸುಲಭವಾಗಿ ಅದರ ಬಾಲ ಹಿಡಿಯಬಹುದೆಂದು ಹುಡುಗ ಲೆಕ್ಕಾಚಾರ ಹಾಕಿದ. ಗೂಳಿ ಹತ್ತಿರ ಬರುತ್ತಿದ್ದಂತೆಯೇ ಅದರ ಮೇಲೆ ನೆಗೆಯಲು ಸನ್ನದ್ಧನಾದ. ಬಾಲ ಹಿಡಿಯಬೇಕೆಂದರೆ ಗೂಳಿ ಕೊಂಚ ಮುಂದಕ್ಕೆ ಹೋಗಬೇಕು, ಆಗ ಹಿಂದಿನಿಂದ ನೆಗೆದು ಬಾಲ ಹಿಡಿಯಬಹುದೆಂಬ ತಂತ್ರ ರೂಪಿಸಿಕೊಂಡ. ಅದರಂತೆ ಆ ಗೂಳಿ ತನ್ನನ್ನು ಪಾರು ಮಾಡಿಕೊಂಡು ಹೋಗುತ್ತಿದ್ದಂತೆಯೇ ಎರಡೂ ತೋಳುಗಳಿಗೆ ಬಲತುಂಬಿಕೊಂಡು, ಅಂಗೈಗಳನ್ನು ಬಿಗಿತಕ್ಕೆ ಅಣಿಮಾಡಿಕೊಂಡು ಗೂಳಿಯ ಮೇಲೆ ಹಾರಿದ.
ಹುಡುಗನಿಗೆ ಅಚ್ಚರಿ… ಆ ಗೂಳಿಗೆ ಬಾಲವೇ ಇರಲಿಲ್ಲ! ಪ್ರಶ್ನಾರ್ಥಕ ಮೊಗದೊಂದಿಗೆ ರೈತನತ್ತ ನೋಡಿದ. ರೈತ ತನ್ನ ಮೊದಲೆರಡು ಗೂಳಿಗಳ ಕಡೆ ನೋಡಿ ಮುಗುಳ್ನಕ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...