Homeಸಾಹಿತ್ಯ-ಸಂಸ್ಕೃತಿಕಥೆಅವಕಾಶಗಳ ಬಾಲ ಕೈ ಬಿಟ್ಟಾಗ

ಅವಕಾಶಗಳ ಬಾಲ ಕೈ ಬಿಟ್ಟಾಗ

- Advertisement -
- Advertisement -

ಇಪ್ಪತ್ತೈದು ವಯಸ್ಸಿನ ಸ್ಫುರದ್ರೂಪಿ ಯುವಕ. ಪಕ್ಕದೂರಿನ ರೈತನೊಬ್ಬನ ಮಗಳ ಮೇಲೆ ಅವನಿಗೆ ಒಲವಾಯಿತು. ಆಕೆಯನ್ನೇ ಮದುವೆಯಾಗಬೇಕೆಂದು ನಿರ್ಧರಿಸಿಕೊಂಡ. ಸೀದಾ ಆ ಹುಡುಗಿಯ ಅಪ್ಪನ ಮುಂದೆ ಬಂದು ನಿಂತ.
`ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ಮದುವೆಯಾಗುತ್ತೇನೆ. ದಯವಿಟ್ಟು ಅಪ್ಪಣೆ ಕೊಡಿ’ ಹುಡುಗ ಪ್ರಾಮಾಣಿಕವಾಗಿ ತನ್ನ ಮನದಾಸೆಯನ್ನು ಹುಡುಗಿಯ ಅಪ್ಪನೆದುರು ಬಿಚ್ಚಿಟ್ಟ.
ರೈತ, ಹುಡುಗನನ್ನು ಒಮ್ಮೆ ದಿಟ್ಟಿಸಿ ನೋಡಿದ. ಸಿರಿವಂತಿಕೆಯ ಲಕ್ಷಣಗಳು ಅವನ ದೇಹದಿಂದ ಚಿಮ್ಮಿ ಬರುತ್ತಿದ್ದವು.
ಒಂದು ನಿರ್ಧಾರಿತ ಧ್ವನಿಯಲ್ಲಿ ರೈತ ನುಡಿದ, `ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ನನಗೆ ಯಾವ ಅಭ್ಯಂತರವೂ ಇಲ್ಲ. ಆದರೆ ನಾನು ಒಂದು ಸ್ಪರ್ಧೆ ಇಡುವೆ. ಅದರಲ್ಲಿ ನೀನು ಗೆದ್ದರೆ ಮಾತ್ರ ಮದುವೆಯ ಪ್ರಸ್ತಾಪ. ಇಲ್ಲದಿದ್ದರೆ ನೀನು ಖಾಲಿ ಕೈಯಲ್ಲಿ ವಾಪಾಸ್ ಹೋಗಬೇಕು’.
ವಯಸ್ಸಿನ ಹುಮ್ಮಸ್ಸು, ಪ್ರೀತಿಯ ನಶೆಯಲ್ಲಿದ್ದ ಹುಡುಗ `ಸರಿ, ನಾನು ಸಿದ್ಧ. ಏನು ನಿಮ್ಮ ಸ್ಪರ್ಧೆ?’ ಪ್ರಶ್ನಿಸಿಯೇಬಿಟ್ಟ.
`ಏನಿಲ್ಲ, ನೀನು ಆ ಮೈದಾನದ ಮಧ್ಯದಲ್ಲಿ ನಿಂತಿರು. ನಾನು ನನ್ನ ಬಳಿಯಿರುವ ಮೂರು ಗೂಳಿಗಳನ್ನು ಒಂದಾದ ಮೇಲೆ ಒಂದರಂತೆ ಮೈದಾನದೊಳಕ್ಕೆ ಬಿಡುತ್ತೇನೆ. ಮೂರರಲ್ಲಿ ಯಾವುದಾದರು ಒಂದು ಗೂಳಿಯ ಬಾಲವನ್ನು ನೀನು ಹಿಡಿದರೂ ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡ್ತೀನಿ.’
`ಅಷ್ಟೇ ತಾನೆ, ನಾನು ಸಿದ್ಧ!’ ಹುಡುಗ ಒಂದೇ ಉಸುರಿಗೆ ಸಮ್ಮತಿಯಿತ್ತ.
ಮೈದಾನದ ನಡುವೆ ಹುಡುಗ ಮೊದಲ ಗೂಳಿಗಾಗಿ ಕಾದು ನಿಂತ. ರೈತ ತನ್ನ ಕೊಟ್ಟಿಗೆಯಿಂದ ಒಂದು ಗೂಳಿಯನ್ನು ಮೈದಾನದತ್ತ ನುಗ್ಗಿಸಿದ. ಅದು ದಷ್ಟಪುಷ್ಟವಾಗಿದ್ದ ಗೂಳಿ. ಕಟ್ಟುಮಸ್ತಾದ ಐದಾರು ಪೈಲ್ವಾನರನ್ನು ಒಂದೇ ಏಟಿಗೆ ಎತ್ತಿ ಬಿಸಾಡಬಲ್ಲ ರೋಷದಿಂದ ನುಗ್ಗಿ ಬರುತ್ತಿತ್ತು.
ಹುಡುಗ ಯೋಚನೆ ಮಾಡಿದ, `ಈ ಗೂಳಿ ಭಯಂಕರ ತಾಕತ್ತಿನಲ್ಲಿದೆ. ಇದರ ಬಾಲ ಹಿಡಿಯಲು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಇದನ್ನು ಸುಮ್ಮನೇ ಬಿಟ್ಟುಬಿಡೋಣ. ಎರಡನೇ ಗೂಳಿಯ ಬಾಲ ಹಿಡಿದರಾಯ್ತು. ಹೇಗೂ ಒಂದು ಗೂಳಿಯ ಬಾಲವನ್ನು ತಾನೇ ನಾನು ಹಿಡಿಯಬೇಕಿರುವುದು. ಮನಸ್ಸಿನ ಆಲೋಚನೆಯನ್ನು ಪ್ರತಿಫಲಿಸುವಂತೆ ಆತ ಪಕ್ಕಕ್ಕೆ ಸರಿದು ಗೂಳಿ ಓಡಿಹೋಗಲು ಅನುವು ಮಾಡಿಕೊಟ್ಟ.
ಈಗಾತ ಎರಡನೇ ಗೂಳಿಯ ನಿರೀಕ್ಷೆಯಲ್ಲಿದ್ದಾನೆ. ಕೊಟ್ಟಿಗೆ ತೆರೆಯಿತು, ಎರಡನೇ ಗೂಳಿ ಮೈದಾನದತ್ತ ದೌಡಾಯಿಸಿತು. ಅದು ಮೊದಲನೆಯದ್ದಕ್ಕಿಂತ ಬಲಿಷ್ಠವಾಗಿದೆ. ಅದರ ಓಟಕ್ಕೆ ನೆಲವೇ ನಡುಗಿಹೋಗುತ್ತಿದೆ. ಹುಡುಗನ ಮನಸ್ಸು ಮತ್ತೆ ಆಲೋಚಿಸಿತು `ಈ ಗೂಳಿಯ ಸಹವಾಸವೂ ಬೇಡ. ಇದೂ ಹೋಗಲಿ. ಮೂರನೇ ಗೂಳಿಯ ಬಾಲವನ್ನು ಹಿಡಿದರಾಯಿತು.’
ಎರಡನೇ ಗೂಳಿಯೂ ಅನಾಯಾಸವಾಗಿ ಸಾಗಿಹೋಯಿತು. ಈಗ ಕಡೆಯ, ಮೂರನೇ ಗೂಳಿಯ ನಿರೀಕ್ಷೆಯಲ್ಲಿ ಹುಡುಗನಿದ್ದಾನೆ. ಇದು ಅವನ ಕೊನೆಯ ಅವಕಾಶ. ಕೊಟ್ಟಿಗೆಯ ಬಾಗಿಲು ತೆರೆಯಿತು. ಮೂರನೇ ಗೂಳಿಯೂ ಹೊರಬಂತು. ಅದನ್ನು ನೋಡುತ್ತಿದ್ದಂತೆ ಹುಡುಗನ ಮುಖದಲ್ಲಿ ಖುಷಿ ದಟ್ಟೈಸಿತು. ಯಾಕೆಂದರೆ ಅದು ಬಡಕಲು ದೇಹದ ನರಪೇತಲ ಗೂಳಿ! ಸುಲಭವಾಗಿ ಅದರ ಬಾಲ ಹಿಡಿಯಬಹುದೆಂದು ಹುಡುಗ ಲೆಕ್ಕಾಚಾರ ಹಾಕಿದ. ಗೂಳಿ ಹತ್ತಿರ ಬರುತ್ತಿದ್ದಂತೆಯೇ ಅದರ ಮೇಲೆ ನೆಗೆಯಲು ಸನ್ನದ್ಧನಾದ. ಬಾಲ ಹಿಡಿಯಬೇಕೆಂದರೆ ಗೂಳಿ ಕೊಂಚ ಮುಂದಕ್ಕೆ ಹೋಗಬೇಕು, ಆಗ ಹಿಂದಿನಿಂದ ನೆಗೆದು ಬಾಲ ಹಿಡಿಯಬಹುದೆಂಬ ತಂತ್ರ ರೂಪಿಸಿಕೊಂಡ. ಅದರಂತೆ ಆ ಗೂಳಿ ತನ್ನನ್ನು ಪಾರು ಮಾಡಿಕೊಂಡು ಹೋಗುತ್ತಿದ್ದಂತೆಯೇ ಎರಡೂ ತೋಳುಗಳಿಗೆ ಬಲತುಂಬಿಕೊಂಡು, ಅಂಗೈಗಳನ್ನು ಬಿಗಿತಕ್ಕೆ ಅಣಿಮಾಡಿಕೊಂಡು ಗೂಳಿಯ ಮೇಲೆ ಹಾರಿದ.
ಹುಡುಗನಿಗೆ ಅಚ್ಚರಿ… ಆ ಗೂಳಿಗೆ ಬಾಲವೇ ಇರಲಿಲ್ಲ! ಪ್ರಶ್ನಾರ್ಥಕ ಮೊಗದೊಂದಿಗೆ ರೈತನತ್ತ ನೋಡಿದ. ರೈತ ತನ್ನ ಮೊದಲೆರಡು ಗೂಳಿಗಳ ಕಡೆ ನೋಡಿ ಮುಗುಳ್ನಕ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...