Homeಸಾಹಿತ್ಯ-ಸಂಸ್ಕೃತಿಕಥೆಅವಕಾಶಗಳ ಬಾಲ ಕೈ ಬಿಟ್ಟಾಗ

ಅವಕಾಶಗಳ ಬಾಲ ಕೈ ಬಿಟ್ಟಾಗ

- Advertisement -
- Advertisement -

ಇಪ್ಪತ್ತೈದು ವಯಸ್ಸಿನ ಸ್ಫುರದ್ರೂಪಿ ಯುವಕ. ಪಕ್ಕದೂರಿನ ರೈತನೊಬ್ಬನ ಮಗಳ ಮೇಲೆ ಅವನಿಗೆ ಒಲವಾಯಿತು. ಆಕೆಯನ್ನೇ ಮದುವೆಯಾಗಬೇಕೆಂದು ನಿರ್ಧರಿಸಿಕೊಂಡ. ಸೀದಾ ಆ ಹುಡುಗಿಯ ಅಪ್ಪನ ಮುಂದೆ ಬಂದು ನಿಂತ.
`ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ಮದುವೆಯಾಗುತ್ತೇನೆ. ದಯವಿಟ್ಟು ಅಪ್ಪಣೆ ಕೊಡಿ’ ಹುಡುಗ ಪ್ರಾಮಾಣಿಕವಾಗಿ ತನ್ನ ಮನದಾಸೆಯನ್ನು ಹುಡುಗಿಯ ಅಪ್ಪನೆದುರು ಬಿಚ್ಚಿಟ್ಟ.
ರೈತ, ಹುಡುಗನನ್ನು ಒಮ್ಮೆ ದಿಟ್ಟಿಸಿ ನೋಡಿದ. ಸಿರಿವಂತಿಕೆಯ ಲಕ್ಷಣಗಳು ಅವನ ದೇಹದಿಂದ ಚಿಮ್ಮಿ ಬರುತ್ತಿದ್ದವು.
ಒಂದು ನಿರ್ಧಾರಿತ ಧ್ವನಿಯಲ್ಲಿ ರೈತ ನುಡಿದ, `ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ನನಗೆ ಯಾವ ಅಭ್ಯಂತರವೂ ಇಲ್ಲ. ಆದರೆ ನಾನು ಒಂದು ಸ್ಪರ್ಧೆ ಇಡುವೆ. ಅದರಲ್ಲಿ ನೀನು ಗೆದ್ದರೆ ಮಾತ್ರ ಮದುವೆಯ ಪ್ರಸ್ತಾಪ. ಇಲ್ಲದಿದ್ದರೆ ನೀನು ಖಾಲಿ ಕೈಯಲ್ಲಿ ವಾಪಾಸ್ ಹೋಗಬೇಕು’.
ವಯಸ್ಸಿನ ಹುಮ್ಮಸ್ಸು, ಪ್ರೀತಿಯ ನಶೆಯಲ್ಲಿದ್ದ ಹುಡುಗ `ಸರಿ, ನಾನು ಸಿದ್ಧ. ಏನು ನಿಮ್ಮ ಸ್ಪರ್ಧೆ?’ ಪ್ರಶ್ನಿಸಿಯೇಬಿಟ್ಟ.
`ಏನಿಲ್ಲ, ನೀನು ಆ ಮೈದಾನದ ಮಧ್ಯದಲ್ಲಿ ನಿಂತಿರು. ನಾನು ನನ್ನ ಬಳಿಯಿರುವ ಮೂರು ಗೂಳಿಗಳನ್ನು ಒಂದಾದ ಮೇಲೆ ಒಂದರಂತೆ ಮೈದಾನದೊಳಕ್ಕೆ ಬಿಡುತ್ತೇನೆ. ಮೂರರಲ್ಲಿ ಯಾವುದಾದರು ಒಂದು ಗೂಳಿಯ ಬಾಲವನ್ನು ನೀನು ಹಿಡಿದರೂ ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡ್ತೀನಿ.’
`ಅಷ್ಟೇ ತಾನೆ, ನಾನು ಸಿದ್ಧ!’ ಹುಡುಗ ಒಂದೇ ಉಸುರಿಗೆ ಸಮ್ಮತಿಯಿತ್ತ.
ಮೈದಾನದ ನಡುವೆ ಹುಡುಗ ಮೊದಲ ಗೂಳಿಗಾಗಿ ಕಾದು ನಿಂತ. ರೈತ ತನ್ನ ಕೊಟ್ಟಿಗೆಯಿಂದ ಒಂದು ಗೂಳಿಯನ್ನು ಮೈದಾನದತ್ತ ನುಗ್ಗಿಸಿದ. ಅದು ದಷ್ಟಪುಷ್ಟವಾಗಿದ್ದ ಗೂಳಿ. ಕಟ್ಟುಮಸ್ತಾದ ಐದಾರು ಪೈಲ್ವಾನರನ್ನು ಒಂದೇ ಏಟಿಗೆ ಎತ್ತಿ ಬಿಸಾಡಬಲ್ಲ ರೋಷದಿಂದ ನುಗ್ಗಿ ಬರುತ್ತಿತ್ತು.
ಹುಡುಗ ಯೋಚನೆ ಮಾಡಿದ, `ಈ ಗೂಳಿ ಭಯಂಕರ ತಾಕತ್ತಿನಲ್ಲಿದೆ. ಇದರ ಬಾಲ ಹಿಡಿಯಲು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಇದನ್ನು ಸುಮ್ಮನೇ ಬಿಟ್ಟುಬಿಡೋಣ. ಎರಡನೇ ಗೂಳಿಯ ಬಾಲ ಹಿಡಿದರಾಯ್ತು. ಹೇಗೂ ಒಂದು ಗೂಳಿಯ ಬಾಲವನ್ನು ತಾನೇ ನಾನು ಹಿಡಿಯಬೇಕಿರುವುದು. ಮನಸ್ಸಿನ ಆಲೋಚನೆಯನ್ನು ಪ್ರತಿಫಲಿಸುವಂತೆ ಆತ ಪಕ್ಕಕ್ಕೆ ಸರಿದು ಗೂಳಿ ಓಡಿಹೋಗಲು ಅನುವು ಮಾಡಿಕೊಟ್ಟ.
ಈಗಾತ ಎರಡನೇ ಗೂಳಿಯ ನಿರೀಕ್ಷೆಯಲ್ಲಿದ್ದಾನೆ. ಕೊಟ್ಟಿಗೆ ತೆರೆಯಿತು, ಎರಡನೇ ಗೂಳಿ ಮೈದಾನದತ್ತ ದೌಡಾಯಿಸಿತು. ಅದು ಮೊದಲನೆಯದ್ದಕ್ಕಿಂತ ಬಲಿಷ್ಠವಾಗಿದೆ. ಅದರ ಓಟಕ್ಕೆ ನೆಲವೇ ನಡುಗಿಹೋಗುತ್ತಿದೆ. ಹುಡುಗನ ಮನಸ್ಸು ಮತ್ತೆ ಆಲೋಚಿಸಿತು `ಈ ಗೂಳಿಯ ಸಹವಾಸವೂ ಬೇಡ. ಇದೂ ಹೋಗಲಿ. ಮೂರನೇ ಗೂಳಿಯ ಬಾಲವನ್ನು ಹಿಡಿದರಾಯಿತು.’
ಎರಡನೇ ಗೂಳಿಯೂ ಅನಾಯಾಸವಾಗಿ ಸಾಗಿಹೋಯಿತು. ಈಗ ಕಡೆಯ, ಮೂರನೇ ಗೂಳಿಯ ನಿರೀಕ್ಷೆಯಲ್ಲಿ ಹುಡುಗನಿದ್ದಾನೆ. ಇದು ಅವನ ಕೊನೆಯ ಅವಕಾಶ. ಕೊಟ್ಟಿಗೆಯ ಬಾಗಿಲು ತೆರೆಯಿತು. ಮೂರನೇ ಗೂಳಿಯೂ ಹೊರಬಂತು. ಅದನ್ನು ನೋಡುತ್ತಿದ್ದಂತೆ ಹುಡುಗನ ಮುಖದಲ್ಲಿ ಖುಷಿ ದಟ್ಟೈಸಿತು. ಯಾಕೆಂದರೆ ಅದು ಬಡಕಲು ದೇಹದ ನರಪೇತಲ ಗೂಳಿ! ಸುಲಭವಾಗಿ ಅದರ ಬಾಲ ಹಿಡಿಯಬಹುದೆಂದು ಹುಡುಗ ಲೆಕ್ಕಾಚಾರ ಹಾಕಿದ. ಗೂಳಿ ಹತ್ತಿರ ಬರುತ್ತಿದ್ದಂತೆಯೇ ಅದರ ಮೇಲೆ ನೆಗೆಯಲು ಸನ್ನದ್ಧನಾದ. ಬಾಲ ಹಿಡಿಯಬೇಕೆಂದರೆ ಗೂಳಿ ಕೊಂಚ ಮುಂದಕ್ಕೆ ಹೋಗಬೇಕು, ಆಗ ಹಿಂದಿನಿಂದ ನೆಗೆದು ಬಾಲ ಹಿಡಿಯಬಹುದೆಂಬ ತಂತ್ರ ರೂಪಿಸಿಕೊಂಡ. ಅದರಂತೆ ಆ ಗೂಳಿ ತನ್ನನ್ನು ಪಾರು ಮಾಡಿಕೊಂಡು ಹೋಗುತ್ತಿದ್ದಂತೆಯೇ ಎರಡೂ ತೋಳುಗಳಿಗೆ ಬಲತುಂಬಿಕೊಂಡು, ಅಂಗೈಗಳನ್ನು ಬಿಗಿತಕ್ಕೆ ಅಣಿಮಾಡಿಕೊಂಡು ಗೂಳಿಯ ಮೇಲೆ ಹಾರಿದ.
ಹುಡುಗನಿಗೆ ಅಚ್ಚರಿ… ಆ ಗೂಳಿಗೆ ಬಾಲವೇ ಇರಲಿಲ್ಲ! ಪ್ರಶ್ನಾರ್ಥಕ ಮೊಗದೊಂದಿಗೆ ರೈತನತ್ತ ನೋಡಿದ. ರೈತ ತನ್ನ ಮೊದಲೆರಡು ಗೂಳಿಗಳ ಕಡೆ ನೋಡಿ ಮುಗುಳ್ನಕ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...