Homeಸಾಹಿತ್ಯ-ಸಂಸ್ಕೃತಿಕಥೆಅವಕಾಶಗಳ ಬಾಲ ಕೈ ಬಿಟ್ಟಾಗ

ಅವಕಾಶಗಳ ಬಾಲ ಕೈ ಬಿಟ್ಟಾಗ

- Advertisement -
- Advertisement -

ಇಪ್ಪತ್ತೈದು ವಯಸ್ಸಿನ ಸ್ಫುರದ್ರೂಪಿ ಯುವಕ. ಪಕ್ಕದೂರಿನ ರೈತನೊಬ್ಬನ ಮಗಳ ಮೇಲೆ ಅವನಿಗೆ ಒಲವಾಯಿತು. ಆಕೆಯನ್ನೇ ಮದುವೆಯಾಗಬೇಕೆಂದು ನಿರ್ಧರಿಸಿಕೊಂಡ. ಸೀದಾ ಆ ಹುಡುಗಿಯ ಅಪ್ಪನ ಮುಂದೆ ಬಂದು ನಿಂತ.
`ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ಮದುವೆಯಾಗುತ್ತೇನೆ. ದಯವಿಟ್ಟು ಅಪ್ಪಣೆ ಕೊಡಿ’ ಹುಡುಗ ಪ್ರಾಮಾಣಿಕವಾಗಿ ತನ್ನ ಮನದಾಸೆಯನ್ನು ಹುಡುಗಿಯ ಅಪ್ಪನೆದುರು ಬಿಚ್ಚಿಟ್ಟ.
ರೈತ, ಹುಡುಗನನ್ನು ಒಮ್ಮೆ ದಿಟ್ಟಿಸಿ ನೋಡಿದ. ಸಿರಿವಂತಿಕೆಯ ಲಕ್ಷಣಗಳು ಅವನ ದೇಹದಿಂದ ಚಿಮ್ಮಿ ಬರುತ್ತಿದ್ದವು.
ಒಂದು ನಿರ್ಧಾರಿತ ಧ್ವನಿಯಲ್ಲಿ ರೈತ ನುಡಿದ, `ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ನನಗೆ ಯಾವ ಅಭ್ಯಂತರವೂ ಇಲ್ಲ. ಆದರೆ ನಾನು ಒಂದು ಸ್ಪರ್ಧೆ ಇಡುವೆ. ಅದರಲ್ಲಿ ನೀನು ಗೆದ್ದರೆ ಮಾತ್ರ ಮದುವೆಯ ಪ್ರಸ್ತಾಪ. ಇಲ್ಲದಿದ್ದರೆ ನೀನು ಖಾಲಿ ಕೈಯಲ್ಲಿ ವಾಪಾಸ್ ಹೋಗಬೇಕು’.
ವಯಸ್ಸಿನ ಹುಮ್ಮಸ್ಸು, ಪ್ರೀತಿಯ ನಶೆಯಲ್ಲಿದ್ದ ಹುಡುಗ `ಸರಿ, ನಾನು ಸಿದ್ಧ. ಏನು ನಿಮ್ಮ ಸ್ಪರ್ಧೆ?’ ಪ್ರಶ್ನಿಸಿಯೇಬಿಟ್ಟ.
`ಏನಿಲ್ಲ, ನೀನು ಆ ಮೈದಾನದ ಮಧ್ಯದಲ್ಲಿ ನಿಂತಿರು. ನಾನು ನನ್ನ ಬಳಿಯಿರುವ ಮೂರು ಗೂಳಿಗಳನ್ನು ಒಂದಾದ ಮೇಲೆ ಒಂದರಂತೆ ಮೈದಾನದೊಳಕ್ಕೆ ಬಿಡುತ್ತೇನೆ. ಮೂರರಲ್ಲಿ ಯಾವುದಾದರು ಒಂದು ಗೂಳಿಯ ಬಾಲವನ್ನು ನೀನು ಹಿಡಿದರೂ ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡ್ತೀನಿ.’
`ಅಷ್ಟೇ ತಾನೆ, ನಾನು ಸಿದ್ಧ!’ ಹುಡುಗ ಒಂದೇ ಉಸುರಿಗೆ ಸಮ್ಮತಿಯಿತ್ತ.
ಮೈದಾನದ ನಡುವೆ ಹುಡುಗ ಮೊದಲ ಗೂಳಿಗಾಗಿ ಕಾದು ನಿಂತ. ರೈತ ತನ್ನ ಕೊಟ್ಟಿಗೆಯಿಂದ ಒಂದು ಗೂಳಿಯನ್ನು ಮೈದಾನದತ್ತ ನುಗ್ಗಿಸಿದ. ಅದು ದಷ್ಟಪುಷ್ಟವಾಗಿದ್ದ ಗೂಳಿ. ಕಟ್ಟುಮಸ್ತಾದ ಐದಾರು ಪೈಲ್ವಾನರನ್ನು ಒಂದೇ ಏಟಿಗೆ ಎತ್ತಿ ಬಿಸಾಡಬಲ್ಲ ರೋಷದಿಂದ ನುಗ್ಗಿ ಬರುತ್ತಿತ್ತು.
ಹುಡುಗ ಯೋಚನೆ ಮಾಡಿದ, `ಈ ಗೂಳಿ ಭಯಂಕರ ತಾಕತ್ತಿನಲ್ಲಿದೆ. ಇದರ ಬಾಲ ಹಿಡಿಯಲು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಇದನ್ನು ಸುಮ್ಮನೇ ಬಿಟ್ಟುಬಿಡೋಣ. ಎರಡನೇ ಗೂಳಿಯ ಬಾಲ ಹಿಡಿದರಾಯ್ತು. ಹೇಗೂ ಒಂದು ಗೂಳಿಯ ಬಾಲವನ್ನು ತಾನೇ ನಾನು ಹಿಡಿಯಬೇಕಿರುವುದು. ಮನಸ್ಸಿನ ಆಲೋಚನೆಯನ್ನು ಪ್ರತಿಫಲಿಸುವಂತೆ ಆತ ಪಕ್ಕಕ್ಕೆ ಸರಿದು ಗೂಳಿ ಓಡಿಹೋಗಲು ಅನುವು ಮಾಡಿಕೊಟ್ಟ.
ಈಗಾತ ಎರಡನೇ ಗೂಳಿಯ ನಿರೀಕ್ಷೆಯಲ್ಲಿದ್ದಾನೆ. ಕೊಟ್ಟಿಗೆ ತೆರೆಯಿತು, ಎರಡನೇ ಗೂಳಿ ಮೈದಾನದತ್ತ ದೌಡಾಯಿಸಿತು. ಅದು ಮೊದಲನೆಯದ್ದಕ್ಕಿಂತ ಬಲಿಷ್ಠವಾಗಿದೆ. ಅದರ ಓಟಕ್ಕೆ ನೆಲವೇ ನಡುಗಿಹೋಗುತ್ತಿದೆ. ಹುಡುಗನ ಮನಸ್ಸು ಮತ್ತೆ ಆಲೋಚಿಸಿತು `ಈ ಗೂಳಿಯ ಸಹವಾಸವೂ ಬೇಡ. ಇದೂ ಹೋಗಲಿ. ಮೂರನೇ ಗೂಳಿಯ ಬಾಲವನ್ನು ಹಿಡಿದರಾಯಿತು.’
ಎರಡನೇ ಗೂಳಿಯೂ ಅನಾಯಾಸವಾಗಿ ಸಾಗಿಹೋಯಿತು. ಈಗ ಕಡೆಯ, ಮೂರನೇ ಗೂಳಿಯ ನಿರೀಕ್ಷೆಯಲ್ಲಿ ಹುಡುಗನಿದ್ದಾನೆ. ಇದು ಅವನ ಕೊನೆಯ ಅವಕಾಶ. ಕೊಟ್ಟಿಗೆಯ ಬಾಗಿಲು ತೆರೆಯಿತು. ಮೂರನೇ ಗೂಳಿಯೂ ಹೊರಬಂತು. ಅದನ್ನು ನೋಡುತ್ತಿದ್ದಂತೆ ಹುಡುಗನ ಮುಖದಲ್ಲಿ ಖುಷಿ ದಟ್ಟೈಸಿತು. ಯಾಕೆಂದರೆ ಅದು ಬಡಕಲು ದೇಹದ ನರಪೇತಲ ಗೂಳಿ! ಸುಲಭವಾಗಿ ಅದರ ಬಾಲ ಹಿಡಿಯಬಹುದೆಂದು ಹುಡುಗ ಲೆಕ್ಕಾಚಾರ ಹಾಕಿದ. ಗೂಳಿ ಹತ್ತಿರ ಬರುತ್ತಿದ್ದಂತೆಯೇ ಅದರ ಮೇಲೆ ನೆಗೆಯಲು ಸನ್ನದ್ಧನಾದ. ಬಾಲ ಹಿಡಿಯಬೇಕೆಂದರೆ ಗೂಳಿ ಕೊಂಚ ಮುಂದಕ್ಕೆ ಹೋಗಬೇಕು, ಆಗ ಹಿಂದಿನಿಂದ ನೆಗೆದು ಬಾಲ ಹಿಡಿಯಬಹುದೆಂಬ ತಂತ್ರ ರೂಪಿಸಿಕೊಂಡ. ಅದರಂತೆ ಆ ಗೂಳಿ ತನ್ನನ್ನು ಪಾರು ಮಾಡಿಕೊಂಡು ಹೋಗುತ್ತಿದ್ದಂತೆಯೇ ಎರಡೂ ತೋಳುಗಳಿಗೆ ಬಲತುಂಬಿಕೊಂಡು, ಅಂಗೈಗಳನ್ನು ಬಿಗಿತಕ್ಕೆ ಅಣಿಮಾಡಿಕೊಂಡು ಗೂಳಿಯ ಮೇಲೆ ಹಾರಿದ.
ಹುಡುಗನಿಗೆ ಅಚ್ಚರಿ… ಆ ಗೂಳಿಗೆ ಬಾಲವೇ ಇರಲಿಲ್ಲ! ಪ್ರಶ್ನಾರ್ಥಕ ಮೊಗದೊಂದಿಗೆ ರೈತನತ್ತ ನೋಡಿದ. ರೈತ ತನ್ನ ಮೊದಲೆರಡು ಗೂಳಿಗಳ ಕಡೆ ನೋಡಿ ಮುಗುಳ್ನಕ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...