Homeಸಾಹಿತ್ಯ-ಸಂಸ್ಕೃತಿಕಥೆಅವಕಾಶಗಳ ಬಾಲ ಕೈ ಬಿಟ್ಟಾಗ

ಅವಕಾಶಗಳ ಬಾಲ ಕೈ ಬಿಟ್ಟಾಗ

- Advertisement -
- Advertisement -

ಇಪ್ಪತ್ತೈದು ವಯಸ್ಸಿನ ಸ್ಫುರದ್ರೂಪಿ ಯುವಕ. ಪಕ್ಕದೂರಿನ ರೈತನೊಬ್ಬನ ಮಗಳ ಮೇಲೆ ಅವನಿಗೆ ಒಲವಾಯಿತು. ಆಕೆಯನ್ನೇ ಮದುವೆಯಾಗಬೇಕೆಂದು ನಿರ್ಧರಿಸಿಕೊಂಡ. ಸೀದಾ ಆ ಹುಡುಗಿಯ ಅಪ್ಪನ ಮುಂದೆ ಬಂದು ನಿಂತ.
`ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ಮದುವೆಯಾಗುತ್ತೇನೆ. ದಯವಿಟ್ಟು ಅಪ್ಪಣೆ ಕೊಡಿ’ ಹುಡುಗ ಪ್ರಾಮಾಣಿಕವಾಗಿ ತನ್ನ ಮನದಾಸೆಯನ್ನು ಹುಡುಗಿಯ ಅಪ್ಪನೆದುರು ಬಿಚ್ಚಿಟ್ಟ.
ರೈತ, ಹುಡುಗನನ್ನು ಒಮ್ಮೆ ದಿಟ್ಟಿಸಿ ನೋಡಿದ. ಸಿರಿವಂತಿಕೆಯ ಲಕ್ಷಣಗಳು ಅವನ ದೇಹದಿಂದ ಚಿಮ್ಮಿ ಬರುತ್ತಿದ್ದವು.
ಒಂದು ನಿರ್ಧಾರಿತ ಧ್ವನಿಯಲ್ಲಿ ರೈತ ನುಡಿದ, `ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ನನಗೆ ಯಾವ ಅಭ್ಯಂತರವೂ ಇಲ್ಲ. ಆದರೆ ನಾನು ಒಂದು ಸ್ಪರ್ಧೆ ಇಡುವೆ. ಅದರಲ್ಲಿ ನೀನು ಗೆದ್ದರೆ ಮಾತ್ರ ಮದುವೆಯ ಪ್ರಸ್ತಾಪ. ಇಲ್ಲದಿದ್ದರೆ ನೀನು ಖಾಲಿ ಕೈಯಲ್ಲಿ ವಾಪಾಸ್ ಹೋಗಬೇಕು’.
ವಯಸ್ಸಿನ ಹುಮ್ಮಸ್ಸು, ಪ್ರೀತಿಯ ನಶೆಯಲ್ಲಿದ್ದ ಹುಡುಗ `ಸರಿ, ನಾನು ಸಿದ್ಧ. ಏನು ನಿಮ್ಮ ಸ್ಪರ್ಧೆ?’ ಪ್ರಶ್ನಿಸಿಯೇಬಿಟ್ಟ.
`ಏನಿಲ್ಲ, ನೀನು ಆ ಮೈದಾನದ ಮಧ್ಯದಲ್ಲಿ ನಿಂತಿರು. ನಾನು ನನ್ನ ಬಳಿಯಿರುವ ಮೂರು ಗೂಳಿಗಳನ್ನು ಒಂದಾದ ಮೇಲೆ ಒಂದರಂತೆ ಮೈದಾನದೊಳಕ್ಕೆ ಬಿಡುತ್ತೇನೆ. ಮೂರರಲ್ಲಿ ಯಾವುದಾದರು ಒಂದು ಗೂಳಿಯ ಬಾಲವನ್ನು ನೀನು ಹಿಡಿದರೂ ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡ್ತೀನಿ.’
`ಅಷ್ಟೇ ತಾನೆ, ನಾನು ಸಿದ್ಧ!’ ಹುಡುಗ ಒಂದೇ ಉಸುರಿಗೆ ಸಮ್ಮತಿಯಿತ್ತ.
ಮೈದಾನದ ನಡುವೆ ಹುಡುಗ ಮೊದಲ ಗೂಳಿಗಾಗಿ ಕಾದು ನಿಂತ. ರೈತ ತನ್ನ ಕೊಟ್ಟಿಗೆಯಿಂದ ಒಂದು ಗೂಳಿಯನ್ನು ಮೈದಾನದತ್ತ ನುಗ್ಗಿಸಿದ. ಅದು ದಷ್ಟಪುಷ್ಟವಾಗಿದ್ದ ಗೂಳಿ. ಕಟ್ಟುಮಸ್ತಾದ ಐದಾರು ಪೈಲ್ವಾನರನ್ನು ಒಂದೇ ಏಟಿಗೆ ಎತ್ತಿ ಬಿಸಾಡಬಲ್ಲ ರೋಷದಿಂದ ನುಗ್ಗಿ ಬರುತ್ತಿತ್ತು.
ಹುಡುಗ ಯೋಚನೆ ಮಾಡಿದ, `ಈ ಗೂಳಿ ಭಯಂಕರ ತಾಕತ್ತಿನಲ್ಲಿದೆ. ಇದರ ಬಾಲ ಹಿಡಿಯಲು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಇದನ್ನು ಸುಮ್ಮನೇ ಬಿಟ್ಟುಬಿಡೋಣ. ಎರಡನೇ ಗೂಳಿಯ ಬಾಲ ಹಿಡಿದರಾಯ್ತು. ಹೇಗೂ ಒಂದು ಗೂಳಿಯ ಬಾಲವನ್ನು ತಾನೇ ನಾನು ಹಿಡಿಯಬೇಕಿರುವುದು. ಮನಸ್ಸಿನ ಆಲೋಚನೆಯನ್ನು ಪ್ರತಿಫಲಿಸುವಂತೆ ಆತ ಪಕ್ಕಕ್ಕೆ ಸರಿದು ಗೂಳಿ ಓಡಿಹೋಗಲು ಅನುವು ಮಾಡಿಕೊಟ್ಟ.
ಈಗಾತ ಎರಡನೇ ಗೂಳಿಯ ನಿರೀಕ್ಷೆಯಲ್ಲಿದ್ದಾನೆ. ಕೊಟ್ಟಿಗೆ ತೆರೆಯಿತು, ಎರಡನೇ ಗೂಳಿ ಮೈದಾನದತ್ತ ದೌಡಾಯಿಸಿತು. ಅದು ಮೊದಲನೆಯದ್ದಕ್ಕಿಂತ ಬಲಿಷ್ಠವಾಗಿದೆ. ಅದರ ಓಟಕ್ಕೆ ನೆಲವೇ ನಡುಗಿಹೋಗುತ್ತಿದೆ. ಹುಡುಗನ ಮನಸ್ಸು ಮತ್ತೆ ಆಲೋಚಿಸಿತು `ಈ ಗೂಳಿಯ ಸಹವಾಸವೂ ಬೇಡ. ಇದೂ ಹೋಗಲಿ. ಮೂರನೇ ಗೂಳಿಯ ಬಾಲವನ್ನು ಹಿಡಿದರಾಯಿತು.’
ಎರಡನೇ ಗೂಳಿಯೂ ಅನಾಯಾಸವಾಗಿ ಸಾಗಿಹೋಯಿತು. ಈಗ ಕಡೆಯ, ಮೂರನೇ ಗೂಳಿಯ ನಿರೀಕ್ಷೆಯಲ್ಲಿ ಹುಡುಗನಿದ್ದಾನೆ. ಇದು ಅವನ ಕೊನೆಯ ಅವಕಾಶ. ಕೊಟ್ಟಿಗೆಯ ಬಾಗಿಲು ತೆರೆಯಿತು. ಮೂರನೇ ಗೂಳಿಯೂ ಹೊರಬಂತು. ಅದನ್ನು ನೋಡುತ್ತಿದ್ದಂತೆ ಹುಡುಗನ ಮುಖದಲ್ಲಿ ಖುಷಿ ದಟ್ಟೈಸಿತು. ಯಾಕೆಂದರೆ ಅದು ಬಡಕಲು ದೇಹದ ನರಪೇತಲ ಗೂಳಿ! ಸುಲಭವಾಗಿ ಅದರ ಬಾಲ ಹಿಡಿಯಬಹುದೆಂದು ಹುಡುಗ ಲೆಕ್ಕಾಚಾರ ಹಾಕಿದ. ಗೂಳಿ ಹತ್ತಿರ ಬರುತ್ತಿದ್ದಂತೆಯೇ ಅದರ ಮೇಲೆ ನೆಗೆಯಲು ಸನ್ನದ್ಧನಾದ. ಬಾಲ ಹಿಡಿಯಬೇಕೆಂದರೆ ಗೂಳಿ ಕೊಂಚ ಮುಂದಕ್ಕೆ ಹೋಗಬೇಕು, ಆಗ ಹಿಂದಿನಿಂದ ನೆಗೆದು ಬಾಲ ಹಿಡಿಯಬಹುದೆಂಬ ತಂತ್ರ ರೂಪಿಸಿಕೊಂಡ. ಅದರಂತೆ ಆ ಗೂಳಿ ತನ್ನನ್ನು ಪಾರು ಮಾಡಿಕೊಂಡು ಹೋಗುತ್ತಿದ್ದಂತೆಯೇ ಎರಡೂ ತೋಳುಗಳಿಗೆ ಬಲತುಂಬಿಕೊಂಡು, ಅಂಗೈಗಳನ್ನು ಬಿಗಿತಕ್ಕೆ ಅಣಿಮಾಡಿಕೊಂಡು ಗೂಳಿಯ ಮೇಲೆ ಹಾರಿದ.
ಹುಡುಗನಿಗೆ ಅಚ್ಚರಿ… ಆ ಗೂಳಿಗೆ ಬಾಲವೇ ಇರಲಿಲ್ಲ! ಪ್ರಶ್ನಾರ್ಥಕ ಮೊಗದೊಂದಿಗೆ ರೈತನತ್ತ ನೋಡಿದ. ರೈತ ತನ್ನ ಮೊದಲೆರಡು ಗೂಳಿಗಳ ಕಡೆ ನೋಡಿ ಮುಗುಳ್ನಕ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...