Homeಸಾಹಿತ್ಯ-ಸಂಸ್ಕೃತಿಕಥೆಅವಕಾಶಗಳ ಬಾಲ ಕೈ ಬಿಟ್ಟಾಗ

ಅವಕಾಶಗಳ ಬಾಲ ಕೈ ಬಿಟ್ಟಾಗ

- Advertisement -
- Advertisement -

ಇಪ್ಪತ್ತೈದು ವಯಸ್ಸಿನ ಸ್ಫುರದ್ರೂಪಿ ಯುವಕ. ಪಕ್ಕದೂರಿನ ರೈತನೊಬ್ಬನ ಮಗಳ ಮೇಲೆ ಅವನಿಗೆ ಒಲವಾಯಿತು. ಆಕೆಯನ್ನೇ ಮದುವೆಯಾಗಬೇಕೆಂದು ನಿರ್ಧರಿಸಿಕೊಂಡ. ಸೀದಾ ಆ ಹುಡುಗಿಯ ಅಪ್ಪನ ಮುಂದೆ ಬಂದು ನಿಂತ.
`ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ. ಅವಳನ್ನು ಮದುವೆಯಾಗುತ್ತೇನೆ. ದಯವಿಟ್ಟು ಅಪ್ಪಣೆ ಕೊಡಿ’ ಹುಡುಗ ಪ್ರಾಮಾಣಿಕವಾಗಿ ತನ್ನ ಮನದಾಸೆಯನ್ನು ಹುಡುಗಿಯ ಅಪ್ಪನೆದುರು ಬಿಚ್ಚಿಟ್ಟ.
ರೈತ, ಹುಡುಗನನ್ನು ಒಮ್ಮೆ ದಿಟ್ಟಿಸಿ ನೋಡಿದ. ಸಿರಿವಂತಿಕೆಯ ಲಕ್ಷಣಗಳು ಅವನ ದೇಹದಿಂದ ಚಿಮ್ಮಿ ಬರುತ್ತಿದ್ದವು.
ಒಂದು ನಿರ್ಧಾರಿತ ಧ್ವನಿಯಲ್ಲಿ ರೈತ ನುಡಿದ, `ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ನನಗೆ ಯಾವ ಅಭ್ಯಂತರವೂ ಇಲ್ಲ. ಆದರೆ ನಾನು ಒಂದು ಸ್ಪರ್ಧೆ ಇಡುವೆ. ಅದರಲ್ಲಿ ನೀನು ಗೆದ್ದರೆ ಮಾತ್ರ ಮದುವೆಯ ಪ್ರಸ್ತಾಪ. ಇಲ್ಲದಿದ್ದರೆ ನೀನು ಖಾಲಿ ಕೈಯಲ್ಲಿ ವಾಪಾಸ್ ಹೋಗಬೇಕು’.
ವಯಸ್ಸಿನ ಹುಮ್ಮಸ್ಸು, ಪ್ರೀತಿಯ ನಶೆಯಲ್ಲಿದ್ದ ಹುಡುಗ `ಸರಿ, ನಾನು ಸಿದ್ಧ. ಏನು ನಿಮ್ಮ ಸ್ಪರ್ಧೆ?’ ಪ್ರಶ್ನಿಸಿಯೇಬಿಟ್ಟ.
`ಏನಿಲ್ಲ, ನೀನು ಆ ಮೈದಾನದ ಮಧ್ಯದಲ್ಲಿ ನಿಂತಿರು. ನಾನು ನನ್ನ ಬಳಿಯಿರುವ ಮೂರು ಗೂಳಿಗಳನ್ನು ಒಂದಾದ ಮೇಲೆ ಒಂದರಂತೆ ಮೈದಾನದೊಳಕ್ಕೆ ಬಿಡುತ್ತೇನೆ. ಮೂರರಲ್ಲಿ ಯಾವುದಾದರು ಒಂದು ಗೂಳಿಯ ಬಾಲವನ್ನು ನೀನು ಹಿಡಿದರೂ ನಿನಗೆ ನನ್ನ ಮಗಳನ್ನು ಕೊಟ್ಟು ಮದುವೆ ಮಾಡ್ತೀನಿ.’
`ಅಷ್ಟೇ ತಾನೆ, ನಾನು ಸಿದ್ಧ!’ ಹುಡುಗ ಒಂದೇ ಉಸುರಿಗೆ ಸಮ್ಮತಿಯಿತ್ತ.
ಮೈದಾನದ ನಡುವೆ ಹುಡುಗ ಮೊದಲ ಗೂಳಿಗಾಗಿ ಕಾದು ನಿಂತ. ರೈತ ತನ್ನ ಕೊಟ್ಟಿಗೆಯಿಂದ ಒಂದು ಗೂಳಿಯನ್ನು ಮೈದಾನದತ್ತ ನುಗ್ಗಿಸಿದ. ಅದು ದಷ್ಟಪುಷ್ಟವಾಗಿದ್ದ ಗೂಳಿ. ಕಟ್ಟುಮಸ್ತಾದ ಐದಾರು ಪೈಲ್ವಾನರನ್ನು ಒಂದೇ ಏಟಿಗೆ ಎತ್ತಿ ಬಿಸಾಡಬಲ್ಲ ರೋಷದಿಂದ ನುಗ್ಗಿ ಬರುತ್ತಿತ್ತು.
ಹುಡುಗ ಯೋಚನೆ ಮಾಡಿದ, `ಈ ಗೂಳಿ ಭಯಂಕರ ತಾಕತ್ತಿನಲ್ಲಿದೆ. ಇದರ ಬಾಲ ಹಿಡಿಯಲು ಹೋದರೆ ಅಪಾಯ ಕಟ್ಟಿಟ್ಟಬುತ್ತಿ. ಇದನ್ನು ಸುಮ್ಮನೇ ಬಿಟ್ಟುಬಿಡೋಣ. ಎರಡನೇ ಗೂಳಿಯ ಬಾಲ ಹಿಡಿದರಾಯ್ತು. ಹೇಗೂ ಒಂದು ಗೂಳಿಯ ಬಾಲವನ್ನು ತಾನೇ ನಾನು ಹಿಡಿಯಬೇಕಿರುವುದು. ಮನಸ್ಸಿನ ಆಲೋಚನೆಯನ್ನು ಪ್ರತಿಫಲಿಸುವಂತೆ ಆತ ಪಕ್ಕಕ್ಕೆ ಸರಿದು ಗೂಳಿ ಓಡಿಹೋಗಲು ಅನುವು ಮಾಡಿಕೊಟ್ಟ.
ಈಗಾತ ಎರಡನೇ ಗೂಳಿಯ ನಿರೀಕ್ಷೆಯಲ್ಲಿದ್ದಾನೆ. ಕೊಟ್ಟಿಗೆ ತೆರೆಯಿತು, ಎರಡನೇ ಗೂಳಿ ಮೈದಾನದತ್ತ ದೌಡಾಯಿಸಿತು. ಅದು ಮೊದಲನೆಯದ್ದಕ್ಕಿಂತ ಬಲಿಷ್ಠವಾಗಿದೆ. ಅದರ ಓಟಕ್ಕೆ ನೆಲವೇ ನಡುಗಿಹೋಗುತ್ತಿದೆ. ಹುಡುಗನ ಮನಸ್ಸು ಮತ್ತೆ ಆಲೋಚಿಸಿತು `ಈ ಗೂಳಿಯ ಸಹವಾಸವೂ ಬೇಡ. ಇದೂ ಹೋಗಲಿ. ಮೂರನೇ ಗೂಳಿಯ ಬಾಲವನ್ನು ಹಿಡಿದರಾಯಿತು.’
ಎರಡನೇ ಗೂಳಿಯೂ ಅನಾಯಾಸವಾಗಿ ಸಾಗಿಹೋಯಿತು. ಈಗ ಕಡೆಯ, ಮೂರನೇ ಗೂಳಿಯ ನಿರೀಕ್ಷೆಯಲ್ಲಿ ಹುಡುಗನಿದ್ದಾನೆ. ಇದು ಅವನ ಕೊನೆಯ ಅವಕಾಶ. ಕೊಟ್ಟಿಗೆಯ ಬಾಗಿಲು ತೆರೆಯಿತು. ಮೂರನೇ ಗೂಳಿಯೂ ಹೊರಬಂತು. ಅದನ್ನು ನೋಡುತ್ತಿದ್ದಂತೆ ಹುಡುಗನ ಮುಖದಲ್ಲಿ ಖುಷಿ ದಟ್ಟೈಸಿತು. ಯಾಕೆಂದರೆ ಅದು ಬಡಕಲು ದೇಹದ ನರಪೇತಲ ಗೂಳಿ! ಸುಲಭವಾಗಿ ಅದರ ಬಾಲ ಹಿಡಿಯಬಹುದೆಂದು ಹುಡುಗ ಲೆಕ್ಕಾಚಾರ ಹಾಕಿದ. ಗೂಳಿ ಹತ್ತಿರ ಬರುತ್ತಿದ್ದಂತೆಯೇ ಅದರ ಮೇಲೆ ನೆಗೆಯಲು ಸನ್ನದ್ಧನಾದ. ಬಾಲ ಹಿಡಿಯಬೇಕೆಂದರೆ ಗೂಳಿ ಕೊಂಚ ಮುಂದಕ್ಕೆ ಹೋಗಬೇಕು, ಆಗ ಹಿಂದಿನಿಂದ ನೆಗೆದು ಬಾಲ ಹಿಡಿಯಬಹುದೆಂಬ ತಂತ್ರ ರೂಪಿಸಿಕೊಂಡ. ಅದರಂತೆ ಆ ಗೂಳಿ ತನ್ನನ್ನು ಪಾರು ಮಾಡಿಕೊಂಡು ಹೋಗುತ್ತಿದ್ದಂತೆಯೇ ಎರಡೂ ತೋಳುಗಳಿಗೆ ಬಲತುಂಬಿಕೊಂಡು, ಅಂಗೈಗಳನ್ನು ಬಿಗಿತಕ್ಕೆ ಅಣಿಮಾಡಿಕೊಂಡು ಗೂಳಿಯ ಮೇಲೆ ಹಾರಿದ.
ಹುಡುಗನಿಗೆ ಅಚ್ಚರಿ… ಆ ಗೂಳಿಗೆ ಬಾಲವೇ ಇರಲಿಲ್ಲ! ಪ್ರಶ್ನಾರ್ಥಕ ಮೊಗದೊಂದಿಗೆ ರೈತನತ್ತ ನೋಡಿದ. ರೈತ ತನ್ನ ಮೊದಲೆರಡು ಗೂಳಿಗಳ ಕಡೆ ನೋಡಿ ಮುಗುಳ್ನಕ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...