Homeಅಂಕಣಗಳುಬಹುಸಂಖ್ಯಾತ ಪ್ರಬಲ ಜಾತಿಗಳ ಸುತ್ತಲೇ ಚುನಾವಣೆಗಳು ಸುತ್ತಬೇಕೇ?

ಬಹುಸಂಖ್ಯಾತ ಪ್ರಬಲ ಜಾತಿಗಳ ಸುತ್ತಲೇ ಚುನಾವಣೆಗಳು ಸುತ್ತಬೇಕೇ?

- Advertisement -
- Advertisement -

ಏಪ್ರಿಲ್ 24, 2023, ಬಸವ ಜಯಂತಿಯಂದು ಕರ್ನಾಟಕದಾದ್ಯಂತ 12ನೇ ಶತಮಾನದ ಸಮಾಜ ಸುಧಾರಕ ಕ್ರಾಂತಿಕಾರಿ ಬಸವೇಶ್ವರರನ್ನು ಕೆಲವರಾದರೂ ಒಳ್ಳೆಯ ರೀತಿಯಲ್ಲಿ ನೆನಪಿಸಿಕೊಂಡರು. ಆದರೆ ಚುನಾವಣೆ ಕಾವಿನಲ್ಲಿ ಬೆವರು ಸುರಿಸುತ್ತಿರುವ ರಾಜಕಾರಣಿಗಳು ಅದರಲ್ಲಿಯೂ ಬಿಜೆಪಿ ಪಕ್ಷದ ಮುಖಂಡರು ಕೆಲವು ದಿನಗಳಿಂದ ನಡೆಯುತ್ತಿರುವ ’ಲಿಂಗಾಯತ ಕೇಂದ್ರಿತ ರಾಜಕಾರಣ’ವನ್ನು ಚರ್ಚಿಸಿ ಆರೋಪ-ಪ್ರತ್ಯಾರೋಪಗಳನ್ನು ಮಾಡುವುದರಲ್ಲಿ ಮುಳುಗಿದ್ದರು. ತಾನು ಬಿಜ್ಜಳನ ಅಸ್ಥಾನದಲ್ಲಿ ಮಂತ್ರಿಯಾಗಿದ್ದಾಗ 800 ವರ್ಷಗಳ ಹಿಂದೆಯೇ ಅನುಭವ ಮಂಟಪದ ಮೂಲಕ, ಪ್ರಜಾಪ್ರಭುತ್ವದ ಲಕ್ಷಣಗಳಿಗೆ ಬುನಾದಿ ಹಾಕಿದವರು ಬಸವಣ್ಣ. ಜಾತಿಜಡ ಸಂಪ್ರದಾಯದ ಕೂಪದಲ್ಲಿ ಬಿದ್ದು ಒದ್ದಾಡುತ್ತಿದ್ದ ಸಮಾಜವನ್ನು ಸುಧಾರಿಸಿ, ಮೇಲುಕೀಳು ಮತ್ತು ಶ್ರೇಷ್ಠತೆಯನ್ನು ತಿರಸ್ಕರಿಸಿ ಸಮಸಮಾಜಕ್ಕೆ ಅಡಿಪಾಯ ಹಾಕಹೊರಟವರು ಅವರು. ದೇವಸ್ಥಾನಗಳಲ್ಲಿ ಇದ್ದ ತಾರತಮ್ಯವನ್ನು ವಿರೋಧಿಸಿ ತಮ್ಮದೇ ದೇವರನ್ನು ಸೃಷ್ಟಿಸಿಕೊಳ್ಳಲು ಕರೆಕೊಟ್ಟವರು. ಅನುಭವಮಂಟಪದಲ್ಲಿ ಸಮಾಜದ ಎಲ್ಲ ಬಗೆಯ ಜಾತಿಸಮುದಾಯಗಳು ಪಾಲ್ಗೊಂಡು ಸಂವಾದ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶವಿತ್ತು. ಅಂತರ್ಜಾತಿ ಮದುವೆಯನ್ನು ಪ್ರೋತ್ಸಾಹಿಸಿ, ಅದಕ್ಕೆ ಬಸವಣ್ಣ ಬೆಲೆ ತೆತ್ತೆಬೇಕಾಗಿ ಬಂತು. ಇಂತಹ ಕ್ರಾಂತಿಕಾರಿ ವ್ಯಕ್ತಿಯಿಂದ ಪ್ರಾರಂಭವಾಯಿತೆನ್ನಲಾಗುವ ಲಿಂಗಾಯತ ಧರ್ಮದ ಬಗೆಗಿನ ಇಂದಿನ ಚರ್ಚೆಯ ವಾದವಿವಾದಗಳು, ಪ್ರಜಾಪ್ರಭುತ್ವಕ್ಕೆ ಮಾರಕವಾದ ಬಹುಸಂಖ್ಯಾತವಾದದ ದನಿಯನ್ನು ಪಡೆದಿರುವುದು ಕುಸಿತದ ದ್ಯೋತಕವಾಗಿದೆ.

ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ | Naanu gauri

ಬಿಜೆಪಿಯ ಟಿಕೆಟ್ ಹಂಚಿಕೆಯಿಂದ ಪ್ರಾರಂಭವಾದ ಈ ಚರ್ಚೆ, ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ, ಲಿಂಗಾಯತ ಶಾಸಕನನ್ನು ಬಿಜೆಪಿ ಮುಂದಿನ ಬಾರಿಗೆ ಮುಖ್ಯಮಂತ್ರಿ ಮಾಡುವುದಿಲ್ಲ ಎಂಬ ಚರ್ಚೆಗಳಿಂದ ಪ್ರಾರಂಭವಾಗಿ, ಸಿದ್ದರಾಮಯ್ಯನವರು ಲಿಂಗಾಯತ ವಿರೋಧಿ, ಅವರು ಲಿಂಗಾಯತರನ್ನು ಭ್ರಷ್ಟರೆಂದು ಕರೆದಿದ್ದಾರೆ, ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲಾಗುವುದು ಎಂಬ ಅರ್ಥವಿಲ್ಲದ ಚರ್ಚೆ ಬೆಳೆದು ಇನ್ನೂ ರಾಡಿಯಾಗುತ್ತಲೇ ಇದೆ. ಒಂದು ಕಡೆ ಬಿಜೆಪಿ ರಾಷ್ಟ್ರಮಟ್ಟದಲ್ಲಿ ’ಹಿಂದೂ’-’ಹಿಂದುತ್ವ’ ಎನ್ನುವ ಮೆಜಾರಿಟೇರಿಯನಿಸಂ ಅಥವಾ ಬಹುಸಂಖ್ಯಾತವಾದದ ರಾಜಕಾರಣ ಮಾಡುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕದಲ್ಲಿ ಬಹುಸಂಖ್ಯಾತ ’ಲಿಂಗಾಯತ’ ಜಾತಿರಾಜಕಾರಣಕ್ಕೆ ಅಂಟಿಕೊಂಡಿದೆ. ಎರಡೂ ಕಡೆಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿ ಭಾವನೆಯನ್ನು ಉದ್ದೀಪಿಸುವುದು ಮಾತ್ರ ಬದಲಾಗಿಲ್ಲ. ಉದಾಹರಣೆಗೆ ಈ ಚುನಾವಣೆಯಲ್ಲಿಯೂ ಬಿಜೆಪಿ ಯಾವುದೇ ಮುಸ್ಲಿಂ ವ್ಯಕ್ತಿಗೆ ಟಿಕೆಟ್ ನೀಡದೆ ತನ್ನ ಸಂಪ್ರದಾಯವನ್ನು ಮುಂದುವರಿಸಿದೆ. ಇನ್ನು ಲಿಂಗಾಯತರಿಗೆ ಸುಮಾರು 65ಕ್ಕೂ ಹೆಚ್ಚು ಟಿಕೆಟ್ ಕೊಟ್ಟಿದೆ. ಅಂದರೆ ವಿಧಾನಸಭಾ ಒಟ್ಟು ಕ್ಷೇತ್ರಗಳ ಸುಮಾರು 30%. ಇವುಗಳಲ್ಲಿ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಹೇಳುವುದಾದರೆ 40% ಟಿಕೆಟ್ ಲಿಂಗಾಯತ ಸಮುದಾಯಕ್ಕೆ ಹೋಗಿವೆ. ಇನ್ನು ಲಿಂಗಾಯತ, ಒಕ್ಕಲಿಗ ಮತ್ತು ಬ್ರಾಹ್ಮಣ ಅಭ್ಯರ್ಥಿಗಳ ಸಂಖ್ಯೆಯನ್ನು ಒಟ್ಟಿಗೆ ತೆಗೆದುಕೊಂಡು, ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿದರೆ ಈ ಮೂರು ಜಾತಿಗಳಿಗೆ ಶೇ.70ಕ್ಕಿಂತಲೂ ಹೆಚ್ಚು ಪ್ರತಿನಿಧಿತ್ವ ಸಿಕ್ಕಿದೆ. ಅಂದರೆ ಶೇ.30 ಟಿಕೆಟ್‌ಗಳನ್ನು ಉಳಿದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ಹಂಚಿದಾಗ ಎಷ್ಟೋ ಸಮುದಾಯಗಳ ಹೆಸರು ಕೂಡ ಅಲ್ಲಿ ಕಾಣುವುದಿಲ್ಲ. (ಮಡಿವಾಳ, ಉಪ್ಪಾರ ಹೀಗೇ ನೂರಾರು ಜಾತಿ ಸಮುದಾಯಗಳಿಗೆ ಪ್ರತಿನಿಧಿತ್ವವೇ ಅಲ್ಲಿಲ್ಲ.) ಲಿಂಗಾಯತರನ್ನು ಯಾರು ಎಷ್ಟು ಅವಮಾನ ಮಾಡುತ್ತಿದ್ದಾರೆಂಬ ಅರ್ಥಹೀನ ಚರ್ಚೆಯಲ್ಲಿ ಈ ಎಲ್ಲ ಸಮುದಾಯಗಳ ಪ್ರತಿನಿಧಿತ್ವದ ಪ್ರಶ್ನೆ ಗೌಣವಾಗಿ ಹೋಗಿದೆ. ಈ ಸಮುದಾಯಗಳ ವ್ಯಕ್ತಿಗಳಿಗೆ ಕನಿಷ್ಠ ಚುನಾವಣೆಯನ್ನು ಎದುರಿಸುವ ಅವಕಾಶವನ್ನಾದರೂ ನೀಡಬೇಕೆಂಬ ಕಾಳಜಿಯೂ ಕಾಣೆಯಾಗಿದೆ. ಬಸವಣ್ಣನವರ ಆಶಯಗಳು ಅಲ್ಲಿಗೆ ಬಸವ ಜಯಂತಿಗಷ್ಟೇ ಮೀಸಲಾಗಿ ಹೋದವು.

ಇದನ್ನೂ ಓದಿ: ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

ಇನ್ನು ಚುನಾವಣೆಯಲ್ಲಿ ಅತಿಹೆಚ್ಚು ಅಭ್ಯರ್ಥಿಗಳನ್ನು ನಿಯೋಜಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಲಿಂಗಾಯತ ಮತ್ತು ಒಕ್ಕಲಿಗ ಅಭ್ಯರ್ಥಿಗಳಿಗೆ ಹೆಚ್ಚು ಮಣೆ ಹಾಕಿರುವುದು ಕ್ರೂರ ವಾಸ್ತವಕ್ಕೆ ಕನ್ನಡಿ ಹಿಡಿದಿದೆ. ಮುಸಲ್ಮಾನ ಸಮುದಾಯದ ವ್ಯಕ್ತಿಗಳನ್ನು ಈ ಎರಡೂ ಪಕ್ಷಗಳು ಒಂದು ಮಟ್ಟಕ್ಕೆ ಅಭ್ಯರ್ಥಿಯನ್ನಾಗಿಸಿವೆ ಎಂಬ ಅಂಶವನ್ನು ಹೊರತುಪಡಿಸಿದರೆ, ಟಿಕೆಟ್ ಹಂಚಿಕೆಯಲ್ಲಿ ಬಹುಸಂಖ್ಯಾತವಾದ ಮೂಗಿಗೆ ಬಡಿಯುತ್ತದೆ.

ಇಂತಹ ಸಂದರ್ಭದಲ್ಲಿ ಯಾವ ಪಕ್ಷ ಸರ್ಕಾರ ರಚಿಸಿದರೂ ಇವೇ ಪ್ರಬಲ ಸಮುದಾಯದ ಶಾಸಕರು ಹೆಚ್ಚೆಚ್ಚು ಸಚಿವ ಸ್ಥಾನಗಳನ್ನು ಕಬಳಿಸುವುದರಲ್ಲಿ ಅನುಮಾನವೇನೂ ಉಳಿದಿರುವುದಿಲ್ಲ. ಒಂದು ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸ್ ಅವರು ಅತಿ ಸಣ್ಣಸಣ್ಣ ಸಮುದಾಯದ ವ್ಯಕ್ತಿಗಳಿಗೆ ಟಿಕೆಟ್ ಕೊಡಿಸಿ ಗೆಲ್ಲಿಸಿ ಅವರನ್ನು ಸಚಿವರನ್ನಾಗಿ ಮಾಡುವ ವಿವೇಕದ ನಡೆಯನ್ನು ಕರ್ನಾಟಕಕ್ಕೆ ಹಾಕಿಕೊಟ್ಟಿದ್ದರು. ನಂತರ ಬಂದ ಸಾಲುಸಾಲು ಸರ್ಕಾರಗಳು ಅದನ್ನು ಮರೆಯುತ್ತಾ ಹೋದವು. ಇನ್ನು ಬಿಜೆಪಿ ಕರ್ನಾಟಕದ ರಾಜಕೀಯದ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಪ್ರವೇಶದ್ವಾರವನ್ನು ಕಲ್ಪಿಸಿಕೊಂಡ ನಂತರವಂತೂ, ಕೆಲವು ಸಮುದಾಯಗಳನ್ನು ಟಾರ್ಗೆಟ್ ಮಾಡಿ ತನ್ನ ವೋಟ್ ಬ್ಯಾಂಕ್ ಮಾಡಿಕೊಂಡಿತು. ಇದರರ್ಥ ಲಿಂಗಾಯತರೋ ಅಥವಾ ಮತ್ಯಾವುದೋ ಒಂದು ಸಮುದಾಯದ ಜನ ಸಾರಾಸಗಟಾಗಿ ಬಿಜೆಪಿಗೇ ಮತ ಚಲಾಯಿಸುತ್ತಾರೆಂದಲ್ಲ. ಆದರೆ ಮುಖ್ಯಮಂತ್ರಿ ತಮ್ಮ ಸಮುದಾಯದದಿನಾಗಬೇಕು ಎನ್ನುವುದನ್ನು ಭಾವನಾತ್ಮಕ ಅಸ್ತ್ರವನ್ನಾಗಿಸಿ, ಪಕ್ಷಗಳು ನಿರ್ದಿಷ್ಟ ಸಮುದಾಯದ ವೋಟುಗಳನ್ನು ತಮ್ಮೆಡೆಗೆ ಪೋಲರೈಸ್ ಮಾಡುವುದು ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ತೀವ್ರವಾಯಿತು. ಈ ಬೆಳವಣಿಗೆಯಿಂದ ಲಿಂಗಾಯತ ಸಮುದಾಯ ಹೆಚ್ಚು ಬಿಜೆಪಿ ಪರ ವಾಲುತ್ತದೆಂಬ ಹವಾ ಸೃಷ್ಟಿ ಮಾಡಲಾಯಿತು. ಇದು ನಿಜವಲ್ಲ ಎಂದು ಸಾಬೀತುಪಡಿಸುವ ಹತ್ತಾರು ಕ್ಷೇತ್ರಗಳು ಕರ್ನಾಟಕದಲ್ಲಿವೆ ಅನ್ನುವುದು ಕೂಡ ವಾಸ್ತವ.

ಇತ್ತೀಚಿಗೆ ಈದಿನ.ಕಾಂ ನಡೆಸಿದ ಸರ್ವೆಯೊಂದರಲ್ಲಿ ಕೂಡ ಒಂದು ಭರವಸೆಯ ಅಂಶ ಬೆಳಕಿಗೆ ಬಂದಿದೆ. ಬಹುತೇಕ ಎಲ್ಲ ಸಮುದಾಯಗಳಲ್ಲೂ ಸದರಿ ಸರ್ಕಾರ ಮರು ಆಯ್ಕೆಯಾಗಬಾರದು ಎಂದು ಹೇಳುವವರ ಸಂಖ್ಯೆ ದೊಡ್ಡದಿದ್ದರೆ, ಲಿಂಗಾಯತ ಸಮುದಾಯದಲ್ಲಿಯೂ 47% ಜನ ಸದರಿ ಸರ್ಕಾರದ ಮರುಆಯ್ಕೆ ಬೇಡವೆಂದಿದ್ದಾರೆ. ಯಾವ ಒಂದು ಸಮುದಾಯ ಬಿಜೆಪಿ ಪಕ್ಷದ ನಿಷ್ಠ ಮತದಾರರು ಎಂದು ನಂಬಲಾಗಿತ್ತೋ ಅವರು ಆ ಪಕ್ಷದಿಂದ ಬಹಳಷ್ಟು ದೂರ ಸರಿಯುತ್ತಿರುವ ಸೂಚನೆ ಅದು. ಯಾರೋ ಒಂದಿಬ್ಬರು ನಾಯಕರು ಬಿಜೆಪಿ ಪಕ್ಷ ತೊರೆದಿರುವುದರಿಂದ ಖಂಡಿತಾ ಇದು ಸಂಭವಿಸಿರುವುದಿಲ್ಲ. ಜನಸಾಮಾನ್ಯರ ವಿವೇಕ ಎಂದಿಗಾದರೂ ಜಾಗೃತವಾಗಬಹುದು. ಅದಕ್ಕೆ ಬಸವಣ್ಣನವರ ಪರಂಪರೆಯೂ ಸಹಕರಿಸಿರಬಹುದು. ಜನಪರ ಹೋರಾಟಗಳೂ! ಒಟ್ಟಿನಲ್ಲಿ ಇನ್ನು ಮುಂದಾದರೂ ಬಹುಸಂಖ್ಯಾತ ಜಾತಿಗಳ ರಾಜಕಾರಣವನ್ನು ಮೀರಿದ ರಾಜಕೀಯ ಕರ್ನಾಟಕದಲ್ಲಿ ಬೆಳೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...