Homeಅಂಕಣಗಳುಬಹುಸಂಖ್ಯಾತ ಪ್ರಬಲ ಜಾತಿಗಳ ಸುತ್ತಲೇ ಚುನಾವಣೆಗಳು ಸುತ್ತಬೇಕೇ?

ಬಹುಸಂಖ್ಯಾತ ಪ್ರಬಲ ಜಾತಿಗಳ ಸುತ್ತಲೇ ಚುನಾವಣೆಗಳು ಸುತ್ತಬೇಕೇ?

- Advertisement -
- Advertisement -

ಏಪ್ರಿಲ್ 24, 2023, ಬಸವ ಜಯಂತಿಯಂದು ಕರ್ನಾಟಕದಾದ್ಯಂತ 12ನೇ ಶತಮಾನದ ಸಮಾಜ ಸುಧಾರಕ ಕ್ರಾಂತಿಕಾರಿ ಬಸವೇಶ್ವರರನ್ನು ಕೆಲವರಾದರೂ ಒಳ್ಳೆಯ ರೀತಿಯಲ್ಲಿ ನೆನಪಿಸಿಕೊಂಡರು. ಆದರೆ ಚುನಾವಣೆ ಕಾವಿನಲ್ಲಿ ಬೆವರು ಸುರಿಸುತ್ತಿರುವ ರಾಜಕಾರಣಿಗಳು ಅದರಲ್ಲಿಯೂ ಬಿಜೆಪಿ ಪಕ್ಷದ ಮುಖಂಡರು ಕೆಲವು ದಿನಗಳಿಂದ ನಡೆಯುತ್ತಿರುವ ’ಲಿಂಗಾಯತ ಕೇಂದ್ರಿತ ರಾಜಕಾರಣ’ವನ್ನು ಚರ್ಚಿಸಿ ಆರೋಪ-ಪ್ರತ್ಯಾರೋಪಗಳನ್ನು ಮಾಡುವುದರಲ್ಲಿ ಮುಳುಗಿದ್ದರು. ತಾನು ಬಿಜ್ಜಳನ ಅಸ್ಥಾನದಲ್ಲಿ ಮಂತ್ರಿಯಾಗಿದ್ದಾಗ 800 ವರ್ಷಗಳ ಹಿಂದೆಯೇ ಅನುಭವ ಮಂಟಪದ ಮೂಲಕ, ಪ್ರಜಾಪ್ರಭುತ್ವದ ಲಕ್ಷಣಗಳಿಗೆ ಬುನಾದಿ ಹಾಕಿದವರು ಬಸವಣ್ಣ. ಜಾತಿಜಡ ಸಂಪ್ರದಾಯದ ಕೂಪದಲ್ಲಿ ಬಿದ್ದು ಒದ್ದಾಡುತ್ತಿದ್ದ ಸಮಾಜವನ್ನು ಸುಧಾರಿಸಿ, ಮೇಲುಕೀಳು ಮತ್ತು ಶ್ರೇಷ್ಠತೆಯನ್ನು ತಿರಸ್ಕರಿಸಿ ಸಮಸಮಾಜಕ್ಕೆ ಅಡಿಪಾಯ ಹಾಕಹೊರಟವರು ಅವರು. ದೇವಸ್ಥಾನಗಳಲ್ಲಿ ಇದ್ದ ತಾರತಮ್ಯವನ್ನು ವಿರೋಧಿಸಿ ತಮ್ಮದೇ ದೇವರನ್ನು ಸೃಷ್ಟಿಸಿಕೊಳ್ಳಲು ಕರೆಕೊಟ್ಟವರು. ಅನುಭವಮಂಟಪದಲ್ಲಿ ಸಮಾಜದ ಎಲ್ಲ ಬಗೆಯ ಜಾತಿಸಮುದಾಯಗಳು ಪಾಲ್ಗೊಂಡು ಸಂವಾದ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶವಿತ್ತು. ಅಂತರ್ಜಾತಿ ಮದುವೆಯನ್ನು ಪ್ರೋತ್ಸಾಹಿಸಿ, ಅದಕ್ಕೆ ಬಸವಣ್ಣ ಬೆಲೆ ತೆತ್ತೆಬೇಕಾಗಿ ಬಂತು. ಇಂತಹ ಕ್ರಾಂತಿಕಾರಿ ವ್ಯಕ್ತಿಯಿಂದ ಪ್ರಾರಂಭವಾಯಿತೆನ್ನಲಾಗುವ ಲಿಂಗಾಯತ ಧರ್ಮದ ಬಗೆಗಿನ ಇಂದಿನ ಚರ್ಚೆಯ ವಾದವಿವಾದಗಳು, ಪ್ರಜಾಪ್ರಭುತ್ವಕ್ಕೆ ಮಾರಕವಾದ ಬಹುಸಂಖ್ಯಾತವಾದದ ದನಿಯನ್ನು ಪಡೆದಿರುವುದು ಕುಸಿತದ ದ್ಯೋತಕವಾಗಿದೆ.

ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ | Naanu gauri

ಬಿಜೆಪಿಯ ಟಿಕೆಟ್ ಹಂಚಿಕೆಯಿಂದ ಪ್ರಾರಂಭವಾದ ಈ ಚರ್ಚೆ, ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ, ಲಿಂಗಾಯತ ಶಾಸಕನನ್ನು ಬಿಜೆಪಿ ಮುಂದಿನ ಬಾರಿಗೆ ಮುಖ್ಯಮಂತ್ರಿ ಮಾಡುವುದಿಲ್ಲ ಎಂಬ ಚರ್ಚೆಗಳಿಂದ ಪ್ರಾರಂಭವಾಗಿ, ಸಿದ್ದರಾಮಯ್ಯನವರು ಲಿಂಗಾಯತ ವಿರೋಧಿ, ಅವರು ಲಿಂಗಾಯತರನ್ನು ಭ್ರಷ್ಟರೆಂದು ಕರೆದಿದ್ದಾರೆ, ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲಾಗುವುದು ಎಂಬ ಅರ್ಥವಿಲ್ಲದ ಚರ್ಚೆ ಬೆಳೆದು ಇನ್ನೂ ರಾಡಿಯಾಗುತ್ತಲೇ ಇದೆ. ಒಂದು ಕಡೆ ಬಿಜೆಪಿ ರಾಷ್ಟ್ರಮಟ್ಟದಲ್ಲಿ ’ಹಿಂದೂ’-’ಹಿಂದುತ್ವ’ ಎನ್ನುವ ಮೆಜಾರಿಟೇರಿಯನಿಸಂ ಅಥವಾ ಬಹುಸಂಖ್ಯಾತವಾದದ ರಾಜಕಾರಣ ಮಾಡುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕದಲ್ಲಿ ಬಹುಸಂಖ್ಯಾತ ’ಲಿಂಗಾಯತ’ ಜಾತಿರಾಜಕಾರಣಕ್ಕೆ ಅಂಟಿಕೊಂಡಿದೆ. ಎರಡೂ ಕಡೆಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿ ಭಾವನೆಯನ್ನು ಉದ್ದೀಪಿಸುವುದು ಮಾತ್ರ ಬದಲಾಗಿಲ್ಲ. ಉದಾಹರಣೆಗೆ ಈ ಚುನಾವಣೆಯಲ್ಲಿಯೂ ಬಿಜೆಪಿ ಯಾವುದೇ ಮುಸ್ಲಿಂ ವ್ಯಕ್ತಿಗೆ ಟಿಕೆಟ್ ನೀಡದೆ ತನ್ನ ಸಂಪ್ರದಾಯವನ್ನು ಮುಂದುವರಿಸಿದೆ. ಇನ್ನು ಲಿಂಗಾಯತರಿಗೆ ಸುಮಾರು 65ಕ್ಕೂ ಹೆಚ್ಚು ಟಿಕೆಟ್ ಕೊಟ್ಟಿದೆ. ಅಂದರೆ ವಿಧಾನಸಭಾ ಒಟ್ಟು ಕ್ಷೇತ್ರಗಳ ಸುಮಾರು 30%. ಇವುಗಳಲ್ಲಿ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಹೇಳುವುದಾದರೆ 40% ಟಿಕೆಟ್ ಲಿಂಗಾಯತ ಸಮುದಾಯಕ್ಕೆ ಹೋಗಿವೆ. ಇನ್ನು ಲಿಂಗಾಯತ, ಒಕ್ಕಲಿಗ ಮತ್ತು ಬ್ರಾಹ್ಮಣ ಅಭ್ಯರ್ಥಿಗಳ ಸಂಖ್ಯೆಯನ್ನು ಒಟ್ಟಿಗೆ ತೆಗೆದುಕೊಂಡು, ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿದರೆ ಈ ಮೂರು ಜಾತಿಗಳಿಗೆ ಶೇ.70ಕ್ಕಿಂತಲೂ ಹೆಚ್ಚು ಪ್ರತಿನಿಧಿತ್ವ ಸಿಕ್ಕಿದೆ. ಅಂದರೆ ಶೇ.30 ಟಿಕೆಟ್‌ಗಳನ್ನು ಉಳಿದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ಹಂಚಿದಾಗ ಎಷ್ಟೋ ಸಮುದಾಯಗಳ ಹೆಸರು ಕೂಡ ಅಲ್ಲಿ ಕಾಣುವುದಿಲ್ಲ. (ಮಡಿವಾಳ, ಉಪ್ಪಾರ ಹೀಗೇ ನೂರಾರು ಜಾತಿ ಸಮುದಾಯಗಳಿಗೆ ಪ್ರತಿನಿಧಿತ್ವವೇ ಅಲ್ಲಿಲ್ಲ.) ಲಿಂಗಾಯತರನ್ನು ಯಾರು ಎಷ್ಟು ಅವಮಾನ ಮಾಡುತ್ತಿದ್ದಾರೆಂಬ ಅರ್ಥಹೀನ ಚರ್ಚೆಯಲ್ಲಿ ಈ ಎಲ್ಲ ಸಮುದಾಯಗಳ ಪ್ರತಿನಿಧಿತ್ವದ ಪ್ರಶ್ನೆ ಗೌಣವಾಗಿ ಹೋಗಿದೆ. ಈ ಸಮುದಾಯಗಳ ವ್ಯಕ್ತಿಗಳಿಗೆ ಕನಿಷ್ಠ ಚುನಾವಣೆಯನ್ನು ಎದುರಿಸುವ ಅವಕಾಶವನ್ನಾದರೂ ನೀಡಬೇಕೆಂಬ ಕಾಳಜಿಯೂ ಕಾಣೆಯಾಗಿದೆ. ಬಸವಣ್ಣನವರ ಆಶಯಗಳು ಅಲ್ಲಿಗೆ ಬಸವ ಜಯಂತಿಗಷ್ಟೇ ಮೀಸಲಾಗಿ ಹೋದವು.

ಇದನ್ನೂ ಓದಿ: ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

ಇನ್ನು ಚುನಾವಣೆಯಲ್ಲಿ ಅತಿಹೆಚ್ಚು ಅಭ್ಯರ್ಥಿಗಳನ್ನು ನಿಯೋಜಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಲಿಂಗಾಯತ ಮತ್ತು ಒಕ್ಕಲಿಗ ಅಭ್ಯರ್ಥಿಗಳಿಗೆ ಹೆಚ್ಚು ಮಣೆ ಹಾಕಿರುವುದು ಕ್ರೂರ ವಾಸ್ತವಕ್ಕೆ ಕನ್ನಡಿ ಹಿಡಿದಿದೆ. ಮುಸಲ್ಮಾನ ಸಮುದಾಯದ ವ್ಯಕ್ತಿಗಳನ್ನು ಈ ಎರಡೂ ಪಕ್ಷಗಳು ಒಂದು ಮಟ್ಟಕ್ಕೆ ಅಭ್ಯರ್ಥಿಯನ್ನಾಗಿಸಿವೆ ಎಂಬ ಅಂಶವನ್ನು ಹೊರತುಪಡಿಸಿದರೆ, ಟಿಕೆಟ್ ಹಂಚಿಕೆಯಲ್ಲಿ ಬಹುಸಂಖ್ಯಾತವಾದ ಮೂಗಿಗೆ ಬಡಿಯುತ್ತದೆ.

ಇಂತಹ ಸಂದರ್ಭದಲ್ಲಿ ಯಾವ ಪಕ್ಷ ಸರ್ಕಾರ ರಚಿಸಿದರೂ ಇವೇ ಪ್ರಬಲ ಸಮುದಾಯದ ಶಾಸಕರು ಹೆಚ್ಚೆಚ್ಚು ಸಚಿವ ಸ್ಥಾನಗಳನ್ನು ಕಬಳಿಸುವುದರಲ್ಲಿ ಅನುಮಾನವೇನೂ ಉಳಿದಿರುವುದಿಲ್ಲ. ಒಂದು ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸ್ ಅವರು ಅತಿ ಸಣ್ಣಸಣ್ಣ ಸಮುದಾಯದ ವ್ಯಕ್ತಿಗಳಿಗೆ ಟಿಕೆಟ್ ಕೊಡಿಸಿ ಗೆಲ್ಲಿಸಿ ಅವರನ್ನು ಸಚಿವರನ್ನಾಗಿ ಮಾಡುವ ವಿವೇಕದ ನಡೆಯನ್ನು ಕರ್ನಾಟಕಕ್ಕೆ ಹಾಕಿಕೊಟ್ಟಿದ್ದರು. ನಂತರ ಬಂದ ಸಾಲುಸಾಲು ಸರ್ಕಾರಗಳು ಅದನ್ನು ಮರೆಯುತ್ತಾ ಹೋದವು. ಇನ್ನು ಬಿಜೆಪಿ ಕರ್ನಾಟಕದ ರಾಜಕೀಯದ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಪ್ರವೇಶದ್ವಾರವನ್ನು ಕಲ್ಪಿಸಿಕೊಂಡ ನಂತರವಂತೂ, ಕೆಲವು ಸಮುದಾಯಗಳನ್ನು ಟಾರ್ಗೆಟ್ ಮಾಡಿ ತನ್ನ ವೋಟ್ ಬ್ಯಾಂಕ್ ಮಾಡಿಕೊಂಡಿತು. ಇದರರ್ಥ ಲಿಂಗಾಯತರೋ ಅಥವಾ ಮತ್ಯಾವುದೋ ಒಂದು ಸಮುದಾಯದ ಜನ ಸಾರಾಸಗಟಾಗಿ ಬಿಜೆಪಿಗೇ ಮತ ಚಲಾಯಿಸುತ್ತಾರೆಂದಲ್ಲ. ಆದರೆ ಮುಖ್ಯಮಂತ್ರಿ ತಮ್ಮ ಸಮುದಾಯದದಿನಾಗಬೇಕು ಎನ್ನುವುದನ್ನು ಭಾವನಾತ್ಮಕ ಅಸ್ತ್ರವನ್ನಾಗಿಸಿ, ಪಕ್ಷಗಳು ನಿರ್ದಿಷ್ಟ ಸಮುದಾಯದ ವೋಟುಗಳನ್ನು ತಮ್ಮೆಡೆಗೆ ಪೋಲರೈಸ್ ಮಾಡುವುದು ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ತೀವ್ರವಾಯಿತು. ಈ ಬೆಳವಣಿಗೆಯಿಂದ ಲಿಂಗಾಯತ ಸಮುದಾಯ ಹೆಚ್ಚು ಬಿಜೆಪಿ ಪರ ವಾಲುತ್ತದೆಂಬ ಹವಾ ಸೃಷ್ಟಿ ಮಾಡಲಾಯಿತು. ಇದು ನಿಜವಲ್ಲ ಎಂದು ಸಾಬೀತುಪಡಿಸುವ ಹತ್ತಾರು ಕ್ಷೇತ್ರಗಳು ಕರ್ನಾಟಕದಲ್ಲಿವೆ ಅನ್ನುವುದು ಕೂಡ ವಾಸ್ತವ.

ಇತ್ತೀಚಿಗೆ ಈದಿನ.ಕಾಂ ನಡೆಸಿದ ಸರ್ವೆಯೊಂದರಲ್ಲಿ ಕೂಡ ಒಂದು ಭರವಸೆಯ ಅಂಶ ಬೆಳಕಿಗೆ ಬಂದಿದೆ. ಬಹುತೇಕ ಎಲ್ಲ ಸಮುದಾಯಗಳಲ್ಲೂ ಸದರಿ ಸರ್ಕಾರ ಮರು ಆಯ್ಕೆಯಾಗಬಾರದು ಎಂದು ಹೇಳುವವರ ಸಂಖ್ಯೆ ದೊಡ್ಡದಿದ್ದರೆ, ಲಿಂಗಾಯತ ಸಮುದಾಯದಲ್ಲಿಯೂ 47% ಜನ ಸದರಿ ಸರ್ಕಾರದ ಮರುಆಯ್ಕೆ ಬೇಡವೆಂದಿದ್ದಾರೆ. ಯಾವ ಒಂದು ಸಮುದಾಯ ಬಿಜೆಪಿ ಪಕ್ಷದ ನಿಷ್ಠ ಮತದಾರರು ಎಂದು ನಂಬಲಾಗಿತ್ತೋ ಅವರು ಆ ಪಕ್ಷದಿಂದ ಬಹಳಷ್ಟು ದೂರ ಸರಿಯುತ್ತಿರುವ ಸೂಚನೆ ಅದು. ಯಾರೋ ಒಂದಿಬ್ಬರು ನಾಯಕರು ಬಿಜೆಪಿ ಪಕ್ಷ ತೊರೆದಿರುವುದರಿಂದ ಖಂಡಿತಾ ಇದು ಸಂಭವಿಸಿರುವುದಿಲ್ಲ. ಜನಸಾಮಾನ್ಯರ ವಿವೇಕ ಎಂದಿಗಾದರೂ ಜಾಗೃತವಾಗಬಹುದು. ಅದಕ್ಕೆ ಬಸವಣ್ಣನವರ ಪರಂಪರೆಯೂ ಸಹಕರಿಸಿರಬಹುದು. ಜನಪರ ಹೋರಾಟಗಳೂ! ಒಟ್ಟಿನಲ್ಲಿ ಇನ್ನು ಮುಂದಾದರೂ ಬಹುಸಂಖ್ಯಾತ ಜಾತಿಗಳ ರಾಜಕಾರಣವನ್ನು ಮೀರಿದ ರಾಜಕೀಯ ಕರ್ನಾಟಕದಲ್ಲಿ ಬೆಳೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...